Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ತಿರುಪತಿ ತಿರುಮಲ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಕಾಲು ದಾರಿಯಲ್ಲಿ ಮತ್ತೆ ಚಿರತೆ ಕರಡಿ ಪ್ರತ್ಯಕ್ಷವಾಗಿದೆ. ಇದರಿಂದಾಗಿ ಜನರಿಗೆ ಓಡಾಡುವಾಗ ಅತಿ ಎಚ್ಚರಿಕೆಯಿಂದ ಇರಲು ಟಿಟಿಡಿ ತಿಳಿಸಿದೆ. ನಾರಾಯಣಸ್ವಾಮಿ ದೇಗುಲ ರಸ್ತೆಯಲ್ಲಿ ಕರಡಿ ಸಂಚರಿಸಿದ್ದು ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲದಿನಗಳ ಹಿಂದಷ್ಟೇ ಚಿರತೆಯೊಂದು ಬಾಲಕಿಯನ್ನು ಕೊಂದು ಹಾಕಿದ್ದ ಕಾರಣ ಈ ಬಾರಿ ಭಕ್ತಾದಿಗಳಿಗೆ ಸಂಚರಿಸುವಾಗ ಬಡಿಗೆ ಹಿಡಿದು, ಮಕ್ಕಳನ್ನು ಒಂಟಿಯಾಗಿ ಬಿಟ್ಟು ತೆರಳದಂತೆ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಮನ್ಸ್ ಕಳುಹಿಸಲಾಗಿದೆ. ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ. ಏತನ್ಮಧ್ಯೆ, ದೆಹಲಿ ಮದ್ಯ ನೀತಿ ಹಗರಣದಲ್ಲಿ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮತ್ತೊಂದು ಹೊಡೆತ ಬಿದ್ದಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಇದರೊಂದಿಗೆ 6-8 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ವಿಎನ್ ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ವಿಚಾರಣೆ ವಿಳಂಬವಾದರೆ ಸಿಸೋಡಿಯಾ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ದ್ವಿಸದಸ್ಯ ಪೀಠ ಹೇಳಿದೆ. ಈ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಅವರ ವಿರುದ್ಧ ಸಿಬಿಐ ಮತ್ತು ಇಡಿ ಎರಡು ಪ್ರಕರಣಗಳಿವೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ. ವಲಸೆ ಕಾರ್ಮಿಕನೊಬ್ಬ ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ. ಯುಪಿ ಮೂಲದ ಮುಖೇಶ್ ಮೃತರು. ಪುಲ್ವಾಮಾದ ತುಮ್ಚಿ ನೌಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ. ಭಾನುವಾರ ಈದ್ಗಾ ಪ್ರದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಉಗ್ರರ ಗುಂಡಿಗೆ ಬಲಿಯಾಗಿದ್ದರು. ದಾಳಿಯ ನಂತರ, ಭದ್ರತಾ ಪಡೆಗಳು ಪುಲ್ವಾಮಾ ಮತ್ತು ಜಮ್ಮು ಮತ್ತು ಕಾಶ್ಮೀರದ ಇತರ ಭಾಗಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ.
ರಾಜಕೀಯ ಪಕ್ಷಗಳ ಸಂಪತ್ತಿನ ಮೂಲಗಳನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ನ ಐವರು ಸದಸ್ಯರ ಸಾಂವಿಧಾನಿಕ ಪೀಠದ ಮುಂದೆ ಕೇಂದ್ರವು ಈ ವಿಷಯವನ್ನು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಇದ್ದರು. ಪಕ್ಷಗಳಿಗೆ ಕೊಡುಗೆ ನೀಡುವವರ ಹೆಸರನ್ನು ಗೌಪ್ಯವಾಗಿಡುವ ಎಲೆಕ್ಟೋರಲ್ ಬಾಂಡ್ಗಳ ವಿರುದ್ಧದ ಪ್ರಕರಣದಲ್ಲಿ ಅಟಾರ್ನಿ ಜನರಲ್ ಆರ್. ವೆಂಕಿಟ್ಟ ರಮಣಿ ಅವರು ಕೇಂದ್ರ ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸಿದರು. ರಾಜಕೀಯ ಪಕ್ಷಗಳಿಗೆ ಶುದ್ಧ ಹಣವನ್ನು ದೇಣಿಗೆ ನೀಡುವುದಕ್ಕಾಗಿ ದಾನಿಗಳ ಹೆಸರನ್ನು ರಹಸ್ಯವಾಗಿಡಲಾಗಿದೆ ಮತ್ತು ತೆರಿಗೆ ನಿಬಂಧನೆಗಳಿಗೆ ಒಳಪಟ್ಟಿರುವುದರಿಂದ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರವು ವಾದಿಸಿತು. 2017 ರಲ್ಲಿ ಮೋದಿ ಸರ್ಕಾರವು ‘ಎಲೆಕ್ಟ್ರೋರಲ್ ಬಾಂಡ್’ ವ್ಯವಸ್ಥೆಯನ್ನು ಪ್ರಾರಂಭಿಸಿತು. ಈ ಸಂಬಂಧ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ಪರಿಗಣಿಸಿದೆ. ರಾಜಕೀಯ ಪಕ್ಷಗಳ ಸಂಪತ್ತಿನ ಮೂಲವನ್ನು ತಿಳಿದುಕೊಳ್ಳುವ…
ಗುಜರಾತ್ ನ ಭರೂಚ್ ಜಿಲ್ಲೆಯ ಅಂಕಲೇಶ್ವರದ ಅತುಲ್ ಗಿರಿ ಎಂಬ ವ್ಯಕ್ತಿ ಐದು ವರ್ಷಗಳ ಹಿಂದೆ ಚಾಕು ಇರಿತಕ್ಕೊಳಗಾಗಿದ್ದು, ಸ್ಥಳೀಯ ಭರೂಚ್ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅಲ್ಲಿನ ವೈದ್ಯರು ಅತುಲ್ ಗಿರಿ ಸರಿಯಾಗಿ ಪರೀಕ್ಷಿಸದೆ ಮಾತ್ರೆಗಳನ್ನು ನೀಡಿ ಕಳುಹಿಸಿದ್ದರು. ಕ್ರಮೇಣ ಹೊಟ್ಟೆ ನೋವು ಕಾಣಿಸಿಕೊಂಡಿತು. 5 ವರ್ಷಗಳ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೊಟ್ಟೆನೋವು ಎಂದು ವೈದ್ಯರಿಗೆ ತಿಳಿಸಿ ಎಕ್ಸ್ ರೇ ತೆಗೆಸಿದಾಗ ಹೊಟ್ಟೆಯಲ್ಲಿ ಚಾಕು ಪತ್ತೆಯಾಗಿದೆ.
ನವೆಂಬರ್ ನಲ್ಲಿ ವಾರಾಂತ್ಯ ಸೇರಿದಂತೆ ಒಟ್ಟು 15 ದಿನ ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ. ನವೆಂಬರ್ 1: ಕನ್ನಡ ರಾಜ್ಯೋತ್ಸವ/ಕುತ್/ಕರ್ವಾ ಚೌತ್ ನವೆಂಬರ್: ಭಾನುವಾರ ನವೆಂಬರ್ 10: ವಂಗಲಾ ಹಬ್ಬ ನವೆಂಬರ್ 11: ಎರಡನೇ ಶನಿವಾರ ನವೆಂಬರ್ 12: ಭಾನುವಾರ ನವೆಂಬರ್ 13: ಗೋವರ್ಧನ ಪೂಜೆ ನವೆಂಬರ್ 14: ದೀಪಾವಳಿ ಅಥವಾ ಲಕ್ಷ್ಮಿ ಪೂಜೆ ನವೆಂಬರ್ 15: ಬೈದೂಜ್/ಲಕ್ಷ್ಮಿ ಪೂಜೆ/ ದೀಪಾವಳಿ ನವೆಂಬರ್ 19: ಭಾನುವಾರ ನವೆಂಬರ್ 20: ಛತ್ ಪೂಜೆ ನವೆಂಬರ್ 23: ಸೆಂಗ್ ಕುತ್ಸನೆಮ್, ಇಗಾಸ್ ಬಾಗವಾಲ್ ಹಬ್ಬ ನವೆಂಬರ್ 25: ನಾಲ್ಕನೇ ಶನಿವಾರ ನವೆಂಬರ್ 26: ಭಾನುವಾರ ನವೆಂಬರ್ 27: ಗುರುನಾನಕ್ ಜಯಂತಿ ನವೆಂಬರ್ 30: ಕನಕದಾಸ ಜಯಂತಿ
ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳನ್ನು ಅಮಾನತು ಮಾಡಿ ಡಿಸಿ ಡಾ.ಸುಶೀಲಾ.ಬಿ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತು ಮಾಡಲಾಗಿದೆ. ಶ್ರೀಮಂತ, ಬಸವರಾಜ್, ಇಮ್ಯಾನುವೆಲ್, ಸಿದ್ದಲಿಂಗಪ್ಪ, ಗಿರೀಶ್ ರಾಯಕೋಟಿ, ಬಸವರಾಜ್, ಎಸ್ಡಿಎ ಸೂಗುರೇಶ್ ಹಾಗೂ ಎಫ್ಡಿಎ ಮಹೇಶ್ ಅಮಾನತು ಆದ ಅಧಿಕಾರಿಗಳು.
ಬೆಂಗಳೂರಿನಲ್ಲಿ ಭಾರೀ ಬೆಂಕಿ ವೀರಭದ್ರನಗರ ಬಳಿಯ ಬಸ್ ಡಿಪೋದಲ್ಲಿ 40ಕ್ಕೂ ಹೆಚ್ಚು ಬಸ್ ಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿ ಅವಘಡದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಲೋಕಸಭೆ ಸಂಸದನಿಗೆ ಚಾಕು ಇರಿತ. ಬಿಆರ್ ಎಸ್ ಸಂಸದ ಕೋಠಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ. ಸಿದ್ದಿಪೇಟೆಯಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಸಂಸದರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ಕ್ಷೇತ್ರದ ಸೂರಂಪಲ್ಲಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಹೊಟ್ಟೆಗೆ ಚಾಕುವಿನಿಂದ ಇರಿದ ಮೇದಕ್ ಲೋಕಸಭಾ ಕ್ಷೇತ್ರದ ಸಂಸದರನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಿತಿ ತೃಪ್ತಿಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಸದರಲ್ಲದೆ ದುಬ್ಬಾಕ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೂ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಕಾರ್ಮಿಕರು ದಾಳಿಕೋರನನ್ನು ಸುತ್ತುವರಿದು ಥಳಿಸಿದ್ದಾರೆ. ದಾಳಿಕೋರನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಿದ್ದಿಪೇಟೆ ಪೊಲೀಸ್ ಆಯುಕ್ತ ಎನ್ ಶ್ವೇತಾ ಪಿಟಿಐಗೆ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್ ಮೈಂಡ್. ಸಿಡಿನೇ ಡಿಕೆಶಿ ಶಕ್ತಿಯಾಗಿದ್ದು ಆತ ಒಬ್ಬ ಪುಕ್ಕಲ, ಮೋಸಗಾರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಡೇಂಜರ್ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ. ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ಫೇಲ್ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು. ಶಿವಕುಮಾರ್ ಅಷ್ಟೇ ಯಾಕೆ ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. ಅನಿವಾರ್ಯವಾಗಿ…