Author: admin

ಹಾವೇರಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರದ ಒಳಗೂ ಮತ್ತು ಹೊರಗು ನಾನು ಹೋರಾಟ ಮಾಡುತ್ತೇನೆ. ಬಿಜೆಪಿ ಸರ್ಕಾರ ಇದ್ದಾಗ ಬೇರೆ, ಈಗ ಬೇರೆ ಎಂದು ಏನು ಇಲ್ಲ. ಅಂದು ಇಂದು ನಾನು ಪಂಚಮಸಾಲಿ ಪರವಾಗಿದ್ದೇನೆ. ಇವತ್ತಿಗೂ ನಾನು ಪಂಚಮಸಾಲಿ ಹೋರಾಟದ ಪರವಾಗಿದ್ದೇನೆ ಎಂದರು.

Read More

ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ಪೊಲೀಸರು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ಹಹಿಸಬೇಕು ಎಂದು ಮಂಗಳೂರಿನ ಪಿಲಿಕುಳದಲ್ಲಿ ನಡೆಯುತ್ತಿರುವ ಪೊಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಹೇಳಿದರು. ಪೊಲೀಸ್ ಇಲಾಖೆಯಲ್ಲಿ ಶೇ.90ರಷ್ಟು ಒಳ್ಳೆಯ ಪೊಲೀಸರಿದ್ದಾರೆ. ಶೇಕಡಾ 10ರಷ್ಟು ಮಾತ್ರ ಕೆಟ್ಟ ಪೊಲೀಸರಿದ್ದಾರೆ. ಅಂತಹ ಸಿಬ್ಬಂದಿಯಿಂದ ಒಳ್ಳೆಯ ಪೊಲೀಸರಿಗೆ ಕೆಟ್ಟ ಹೆಸರು ಬರುತ್ತಿದೆ ಎಂದರು.

Read More

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಧ್ವಜ ಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ. ರಾಜ್ಯೋತ್ಸವದ ಹಿನ್ನೆಲೆ ಬಸ್ ನಿಲ್ದಾಣದ ಮುಂದೆ ಧ್ವಜಸ್ಥಂಬ ನೆಡುವ ವೇಳೆ ದುರ್ಘಟನೆ ಸಂಭವಿಸಿದೆ. ಪ್ರಜ್ವಲ್ ಚನ್ನಗೌಡ ಮುನೇಪ್ಪನವರ(18) ಮೃತ ದುರ್ದೈವಿ.

Read More

ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ರಾಜ್ಯೋತ್ಸವ  ವದಂದು ವಿರೋಧದ ನಡುವೆಯೂ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ. ಅದರಂತೆ ಈ ವರ್ಷವೂ ನವೆಂಬರ್​ 1 ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಎಂಇಎಸ್​ ಸಿದ್ಧತೆ ನಡೆಸುತ್ತಿದೆ. ಈ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬೆಂಬಲ ವ್ಯಕ್ತಪಡಿಸುವ ಮೂಲಕ ಗಡಿ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹೌದು ನವೆಂಬರ್​​​ 1ರಂದು ಎಂಇಎಸ್ ​​ನ ಕರಾಳ ದಿನಾಚರಣೆಗೆ ಮಹಾರಾಷ್ಟ್ರದ ಪ್ರತಿನಿಧಿ ಕಳಿಸುವುದಾಗಿ ಸಿಎಂ ಶಿಂಧೆ ಹೇಳಿದ್ದಾರೆ.

Read More

ತುಮಕೂರು: ತುಮಕೂರಿನಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು,ಶಿರಾ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯಕ ಅಭಿಯಂತರ ನಾಗೇಂದ್ರಪ್ಪ ಮನೆ ಮೇಲೆ ದಾಳಿ ಮಾಡಿರೋ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಸುಮಾರು 4 ವಾಹನಗಳಲ್ಲಿ ಬಂದಂತಹ ಅಧಿಕಾರಿಗಳ ತಂಡ ತುಮಕೂರಿನಲ್ಲಿರುವ ಮನೆ ಹಾಗೂ ಶಿರಾ ನಗರದಲ್ಲಿರೋ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ನಾಗೇಂದ್ರಪ್ಪ ಅವರಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಕಚೇರಿ, ಮನೆ ಹಾಗೂ ಪಾರ್ಮಹೌಸ್ ಮೇಲೂ ದಾಳಿ ಮಾಡಿ ಅಪಾರ ಪ್ರಮಾಣದ ದಾಖಲೆ ವಶಕ್ಕೆ ತೆಗೆದುಕೊಂಡಿದ್ದಾರೆ. ಅನೇಕ ದಿನಗಳಿಂದ ಇವರ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ.

Read More

ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಖದೀಮರು ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನು ಗಮನಿಸಿದ್ದಾರೆ. ಕೂಡಲೇ ಅಲರ್ಟ್ ಆದ ಅವರು ಕೈಗೆ ಗೌಸ್ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ಕಾರಿನೊಳಗೆ ಕುಳಿತು ವಾಚ್ ಮಾಡುತ್ತಿದ್ದರು. ಆದರೆ ಈ ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದನ್ನು ಕಂಡು ಮನೆಯ ಹೊರಗೆ ಕಾರಿನಲ್ಲಿ ಕುಳಿತಿದ್ದ ಇಬ್ಬರು ಖದೀಮರು ಪರಾರಿ ಆಗಿದ್ದಾರೆ. ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು…

Read More

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿಲಾ ತಾಲ್ಲೂಕಿನಲ್ಲಿ ಸಂಭವಿಸಿದೆ. ಮೃತರನ್ನು ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ.ಶಿರಾ ತಾಲ್ಲೂಕು ವೀರಾಪುರ ಗ್ರಾಮದ ಒಂದೇ ಕುಟುಂಬದ ಸದಸ್ಯರು ವೀರಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬುಕ್ಕಾಪಟ್ಟದ ರಾಮಲಿಂಗಾಪುರ ಕೆರೆ ಸಮೀಪ ಬರುತ್ತಿದ್ದಂತೆಯೇ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಕಾರು ಕೆರೆಗೆ ಬಿದ್ದ ನಂತರ ಕಾರಿನಲ್ಲಿದ್ದ ಪ್ರವೀಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ ಅತ್ತೆ ಸಣ್ಣಮ್ಮ ಮೃತರಾಗಿದ್ದಾರೆ. ಮೃತರು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ವೀರಾಪುರ ಗ್ರಾಮದವರು. ಇಂದು ಬೆಳಗಿನ ಜಾವ ವೀರಾಪುರದಿಂದ ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು   ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ  ನಂತರ  ಮಾಧ್ಯಮದವರೊಂದಿಗೆ  ಮಾತನಾಡಿದರು. ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ  ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ  ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯ ಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು. ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Read More

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ವಸತಿ ಸಂಕೀರ್ಣದಲ್ಲಿ ಮಹಿಳೆಯ ಮನೆಗೆ ದಿನಸಿ ವಿತರಿಸಲು ಹೋದಾಗ 23 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 27 ಶುಕ್ರವಾರದಂದು ಈ ಘಟನೆ ನಡೆದಿದೆ. ಬಂಧಿತ ಆರೋಪಿ ಸುಮಿತ್ ಸಿಂಗ್, ಮಹಿಳೆ ತನ್ನ ಆರ್ಡರ್ ಮಾಡಲು ಬಳಸಿದ ದಿನಸಿ-ವಿತರಣಾ ಮೊಬೈಲ್ ಅಪ್ಲಿಕೇಶನ್‌ನಿಂದ ಡೆಲಿವರಿ ಮಾಡಲು ನಿಯೋಜಿಸಲಾಗಿದೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಸುಮಿತ್ ಅರಿತುಕೊಂಡನು, ನಂತರ ಅವನು ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಅದೇ ದಿನ ಮಹಿಳೆ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಹಲವು ತಂಡಗಳನ್ನು ರಚಿಸಿದರು, ಅಂತಿಮವಾಗಿ ಗ್ರೇಟರ್ ನೋಯ್ಡಾದ ವಸತಿ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ಸುಮಿತ್ ಬಳಿಗೆ ಬಂದಾಗ, ಅವರು ಒಬ್ಬ ಕಾನ್‌ ಸ್ಟೆಬಲ್‌ನಿಂದ ಪಿಸ್ತೂಲ್ ಕಿತ್ತುಕೊಂಡು ಓಡಿಹೋದರು. ಈ ಪ್ರದೇಶದಲ್ಲಿ ಶೋಧ ನಡೆಸಿ ಸುಮಿತ್‌ ನನ್ನು ಹಿಡಿಯಲು…

Read More

ನವದೆಹಲಿ: ಕೇರಳದಲ್ಲಿ ಬಾಂಬ್ ಸ್ಪೋಟ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೇರಳದ ಎರ್ನಾಕುಲಂನಲ್ಲಿರುವ ಕಲಮಸರಿಯಲ್ಲಿರುವ ಬೃಹತ್ ಸಮಾವೇಶ ಭವನದಲ್ಲಿ ಬಾಂಬ್ ಸ್ಪೋಟಗೊಂಡು ಒಬ್ಬ ಮಹಿಳೆ ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮುಂದುವರೆದ ಭಾಗವಾಗಿ ಈಗ ಬಾಂಬ್ ಸೋಟದ ಬಳಿಕ ಮತಷ್ಟು ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.

Read More