Author: admin

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್‌ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ವಿಜಯನಗರ (Vijayanagara) ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಮಾರ್ (45) ಬಿಎಂಟಿಸಿ ಬಸ್‌ ಗೆ ಬಲಿಯಾದ ಬೈಕ್ ಸವಾರ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೋವಿಂದರಾಜನಗರ ಬೈಟು ಕಾಫಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಆಗ್ನೆಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಪಾಟೀಲ್ ಅವರನ್ನು ಅಭ್ಯರ್ಥಿಯಾಗಿ ಪರಿಷತ್ ಚುನಾವಣೆಯ ಕಣಕ್ಕಿಳಿಸಲು ಎಐಸಿಸಿ ನಿರ್ಧರಿಸಿದೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆತ್ಮೀಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೆಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಜೂನ್ 21, 2024ಕ್ಕೆ ನಿವೃತ್ತಿಯಾಗಲಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ಆಯನೂರು ಮಂಜುನಾಥ್ ರಾಜೀನಾಮೆಯಿಂದ ಏಪ್ರಿಲ್ 19ರಿಂದ ತೆರವಾಗಿದ್ದು, ಈ ಸ್ಥಾನದ ಅವಧಿ 21-06-2024 ತನಕ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ 16ಕ್ಕೆ ತೆರವಾದ ಸ್ಥಾನದ ಅವಧಿ 2026 ರ ನವೆಂಬರ್‌ ತನಕವಿದೆ.…

Read More

ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು. ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು. ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ…

Read More

ಬೆಂಗಳೂರು: ಕೃಷಿ ಮತ್ತಿತರ ಕ್ಷೇತ್ರದಲ್ಲಿ ಹೊಸ ಪ್ರಯೋಗದ ಕೆಟ್ಟ ಪರಿಣಾಮಗಳು ಕೂಡಲೇ ಗೊತ್ತಾಗುವುದಿಲ್ಲ. ಅಂಥ ದುಷ್ಪರಿಣಾಮಗಳÀನ್ನು ತಪ್ಪಿಸಲು ಸಾವಯವ- ನೈಸರ್ಗಿಕ ಕೃಷಿ ಪದ್ಧತಿ ಅನಿವಾರ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದರು. ಬಿಜೆಪಿ ರಾಜ್ಯ ರೈತ ಮೋರ್ಚಾದ ವತಿಯಿಂದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಿದ್ದ ‘ನೈಸರ್ಗಿಕ ಕೃಷಿ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾವಯವ ಕೃಷಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಹೆಚ್ಚಿನ ಪ್ರೋತ್ಸಾಹ ಕೊಡುತ್ತಿದೆ ಎಂದು ವಿವರಿಸಿದರು. ರೈತ ಮೋರ್ಚಾ ಅತ್ಯಂತ ಸಕ್ರಿಯವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರಸ್ತುತ 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದ 10 ಜನರಲ್ಲಿ 6 ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಕನಿಷ್ಠ 5-6 ಜನರಿಗೆ ರಕ್ತದೊತ್ತಡ ಇದೆ. ಈ ವಯೋಮಾನದವರಲ್ಲಿ ಯಾವುದಾದರೂ ರೋಗಕ್ಕೆ ಕಾಯಿಲೆಗೆ ಔಷಧಿ ಸೇವಿಸದವರು ಅತ್ಯಂತ ವಿರಳ ಎಂದು ನುಡಿದರು. ಸಾವಯವ- ನೈಸರ್ಗಿಕ ಕೃಷಿ ಮೂಲಕ ಹಲವಾರು ರೋಗಗಳು ಬರದಂತೆ ತಡೆಯಬಹುದೆಂದು…

Read More

ಬೆಂಗಳೂರು: ಮಾಧ್ಯಮಗಳಲ್ಲಿ ಗರ್ವದಿಂದ ಏನೇ ಚರ್ಚೆಗಳಾದರೂ ವಾಕ್ ಸ್ವಾತಂತ್ರ್ಯ ಇಂದು ಅಪಾಯದಲ್ಲಿದೆ. ದೊಡ್ಡ ಜಾತಿ, ಶ್ರೀಮಂತ ವ್ಯಕ್ತಿಗಳು, ಕೈಗಾರಿಕಾ ವಲಯಗಳ ವಿರುದ್ಧ ಬರೆಯಲು ಮಾಧ್ಯಮಗಳಿಗೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು. ನಗರದ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಹೊನಕೆರೆ ನಂಜುಂಡೇಗೌಡ ಅವರಿಗೆ 2023ನೇ ಸಾಲಿನ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಅವರು, ಮಾಧ್ಯಮಗಳು ಇಂದು ರಾಜಕೀಯ ಶಕ್ತಿ ಕೇಂದ್ರದಲ್ಲಿರುವವರ ವಿರುದ್ಧ ಬರೆಯುವುದನ್ನು ಕಡಿಮೆ ಮಾಡಿವೆ. ಮಾಲೀಕರಿಂದ ಮಾಧ್ಯಮ ಮಿತ್ರರಿಗೆ ಲಗಾಮು ಬಿದ್ದಿದ್ದು, ತನ್ನ ತನವನ್ನು ಪತ್ರಿಕೋದ್ಯಮ ಮಂದಿ ಕಳೆದುಕೊಂಡಿದ್ದಾರೆ. ಇಷ್ಟೊಂದು ಗಂಭೀರ ಸನ್ನಿವೇಶ ಇದ್ದರೂ ಸಹ ವಾಕ್ ಸ್ವಾತಂತ್ರ್ಯದ ಬಗ್ಗೆ ಪತ್ರಿಕೋದ್ಯಮಿಗಳ ಧ್ವನಿಯೇ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ನಮ್ಮ ದೇಶದಲ್ಲಿ ಶೇ 50 ರಷ್ಟು ಮಾತ್ರ ವಾಕ್ ಸ್ವಾತಂತ್ರ್ಯ ಉಳಿದಿದ್ದು, ಇದರ ಅನುಭವ ಪ್ರತಿಯೊಬ್ಬರಿಗೂ ಆಗುತ್ತಿದೆ. ಇವೆಲ್ಲವೂ ಗೊತ್ತಿದ್ದರೂ ಸಹ ನಾವೆಲ್ಲರೂ ಮೌನಕ್ಕೆ ಶರಣಾಗಿದ್ದೇವೆ.…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ರಾತ್ರಿ ಸಮಯ ಚಿರತೆ ಓಡಾಟವು ಹೆಚ್ಚಾಗಿದ್ದು, ಜೀವ ಭಯವನ್ನು ಹುಟ್ಟುಹಾಕಿದೆ. ವೈಟ್ ಫೀಲ್ಡ್ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದೆ. ಬ್ರೂಕ್ ಫೀಲ್ಡ್‌ ನ ಎಇಸಿಎಸ್ ಲೇಔಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ ವೇಳೆ ಕಾರಿಗೆ ಅಡ್ಡಲಾಗಿ ಚಿರತೆಯೊಂದು ಓಡಿದೆ. ಇದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಇಸಿಎಸ್ ಲೇಔಟ್ ‌ನಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ತಿಳಿಸಿದ್ದಾರೆ.

Read More

ಬೆಳಗಾವಿ: ಜಿಲ್ಲೆಯಲ್ಲಿ ಠಾಣಾಸರಹದ್ದಿಯಲ್ಲಿ ನಮ್ಮ ಅಧಿಕಾರಿ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಪ್ರಾರಂಭ ಮಾಡಿದ್ದೇವೆ. ಫೇಸ್ಬುಕ್ ಟ್ಯೂಟರ್ ವಾಟ್ಸಾಪ್ ಅಥವಾ ಮತ್ತೆ ಯಾವುದೇ ಸೋಶಿಯಲ್ ಮೀಡಿಯಾ ದಲ್ಲೇ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲಿ ನಮ್ಮ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ತಂಡ ತಕ್ಷಣವೇ ಕಾರ್ಯ ನಿರ್ವಹಿಸಲಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಎಸ್. ಎನ್. ಸಿದ್ದರಾಮಪ್ಪ ಹೇಳಿದರು. ಮಾದ್ಯಮದೊಂದಿಗೆ ಮಾತನಾಡಿದ ಅವರು ಸಮಾಜದ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ಪೋಸ್ಟ್ಗಳು ಹಾಕಿದರೆ ಅವರ ಮೇಲೆ ಸ್ವಯಂವಾಗಿ ಕೇಸ್ ದಾಖಲು ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜರ ಧರ್ಮ ನಾಯಕರಗಳ, ಜಾತಿ ಈ ವಿಷಯಗಳ ಕುರಿತು ಹೇಳಣಕಾರಿ ಪೋಸ್ಟ್ ಮಾಡಿದ್ದಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಬಜಾರ್ ಮತ್ತು ಶಹಪುರ್ ಠಾಣೆಗಳಲ್ಲಿ ವ್ಯಾಪ್ತಿಯಲ್ಲಿ ಎರಡು ಕೇಸುಗಳು ಪತ್ತೆಯಾಗಿದ್ದು  ಎರಡು ವ್ಯಕ್ತಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ .  ಸೋಶಿಯಲ್ ಮೀಡಿಯಾ ಕುರಿತಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ರೂಪಿಸಲಾಗುತ್ತಿದೆ. ಹಾಗೂ…

Read More

ಬೆಂಗಳೂರು: ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಕಾಣುವಂತೆ, ಸಿಸಿ ಕ್ಯಾಮೆರಾ ಅಳವಡಿಸಬೇಕು. ಅವುಗಳು ಹೆಚ್ಚು ಕ್ವಾಲಿಟಿ ಇರಬೇಕು, ಕ್ಯಾಮೆರಾ ಯಾವಕಡೆ ಇರಬೇಕು, ನಿರ್ವಹಣೆ ಬಗ್ಗೆ ಪೋಲೀಸರು ಸಲಹೆ ನೀಡುತ್ತಾರೆ. ಒಂದು ಸಿಸಿ ಟಿವಿ, ಒಬ್ಬರು ಪೋಲೀಸ್ ಸಮ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ರಸ್ತೆಗಳಲ್ಲಿ ವಾಹನ ನಿಲುಗಡೆ, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ದೂರು ಹೇಳಿದರು. ನಗರ ವ್ಯಾಪ್ತಿಯ ಎಲ್ಲಾ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಿರಬೇಕು. ಸಿಸಿ ಕ್ಯಾಮೆರಾ ಅಳವಡಿಸದ ಮಾಲೀಕರಿಗೆ ದಂಡ ವಿಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಂಗಡಿಗಳಲ್ಲಿ ಪೋಲೀಸರ ಮಾರ್ಗದರ್ಶನದಲ್ಲಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು. ವರದಿ: ಆಂಟೋನಿ…

Read More

ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಎರಡು ವರ್ಷ ಆಗ್ತಿದೆ. ಎರಡನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸ್ಮಾರಕ ರೆಡಿಯಾಗಿದೆ. ಅನ್ನದಾನ, ರಕ್ತದಾನ, ನೇತ್ರದಾನದ ಕ್ಯಾಂಪ್ ಮಾಡುತ್ತಿದ್ದಾರೆ ಅಭಿಮಾನಿಗಳು. ದೂರದ ಊರುಗಳಿಂದ ಅಭಿಮಾನಿ ದೇವರುಗಳು ಅಪ್ಪುನ ನೋಡಲು ಈಗಾಗ್ಲೇ ಹೊರಟಿದ್ದಾರೆ. ಅಪ್ಪು ನಮನ ಮತ್ತು ಪ್ರೀತಿಯ ಧ್ಯಾನ ಮಾಡಲು ಮಧ್ಯರಾತ್ರಿಯಿಂದ ಶುರುವಾಗಿದೆ. ದೊಡ್ಮನೆ ಸದಸ್ಯರು ಅಪ್ಪು ಸ್ಮಾರಕಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಕುಟುಂಬದವರ ಪೂಜೆ ಬಳಿಕ ಅಭಿಮಾನಿ ದೇವರುಗಳು ಅಪ್ಪುಗೆ ನಮಿಸಲಿದ್ದಾರೆ. ಕೈ ಮುಗಿದು ಸ್ಮರಿಸಲಿದ್ದಾರೆ. ಹಬ್ಬದಂತೆ ಜನ ಆ ಜಾಗದಲ್ಲಿ ಸೇರುತ್ತಾರೆ. ಹೂವು ಹಾಕಿ ಅಲಂಕಾರ ಮಾಡಿ ಕಣ್ಣುತುಂಬಿಕೊಳ್ತಾರೆ. ಅಪ್ಪು ನೀನು ನಮ್ಮನ್ನ ಬಿಟ್ಟು ಹೋಗಿದ್ದು ಮೋಸ ಮೋಸ ಮೋಸ ಅಂತ ಜನ ಇಂದಿಗೂ ಕೊರಗ್ತಾರೆ. ಅಪ್ಪು ಅಮರ ಅವರ ನೆನಪು ಅಜರಾಮರ. ವರದಿ: ಆಂಟೋನಿ ಬೇಗೂರು

Read More

ಉತ್ತರ ಪ್ರದೇಶದಲ್ಲಿ ಶನಿವಾರದಂದು ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಡಿಸಿಪಿ ರಾಕೇಶ್ ಬರೋಟ್ ಮಾಹಿತಿ ನೀಡಿದ್ದು, ‘ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಸೂಸೈಡ್ ನೋಟ್ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮುಂದಿನ ತನಿಖೆಯನ್ನು ಮುಂದುವರಿಸುತ್ತಿದ್ದೇವೆ’ ಎಂಡಿದ್ದಾರೆ. ಮೃತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Read More