Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಹರಿಯಾಣದ ಕೈತಾಲ್ ನಲ್ಲಿ ಪೊಲೀಸರು ಮತ್ತು ಪುಂಡರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ಕೌಂಟರ್ ವೇಳೆ, ದಾಳಿಕೋರರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ವರದಿ ಪ್ರಕಾರ ಕೈತಾಲ್ನಲ್ಲಿ ನಾಲ್ವರು ದುಷ್ಕರ್ಮಿಗಳು ಇದ್ದಾರೆ ಎಂದು ಮಾಹಿತಿ ಬಂದ ಹಿನ್ನಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಅಪರಾಧಿಯನ್ನು ಬಂಧಿಸಲಾಗಿದೆ.
ತಮಿಳುನಾಡು: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದೇಶಾದ್ಯಂತ ಭಾರೀ ಫ್ಯಾನ್ ಫಾಲೋಯಿಂಗ್ ಇದೆ. ಇದೀಗ ಅವರ ಅಭಿಮಾನಿಯೊಬ್ಬರು ಅವರಿಗಾಗಿ ದೇಗುಲವನ್ನು ನಿರ್ಮಿಸಿದ್ದಾರೆ. ಮಧುರೈನ ಕಾರ್ತಿಕ್ ಎಂಬ ರಜನಿಕಾಂತ್ ಅಭಿಮಾನಿ ಅವರಿಗಾಗಿ ದೇವಾಲಯವನ್ನು ನಿರ್ಮಿಸಿದರು. ಆ ದೇವಸ್ಥಾನದಲ್ಲಿ 250 ಕೆಜಿ ತೂಕದ ರಜನಿಕಾಂತ್ ವಿಗ್ರಹವನ್ನು ಸ್ಥಾಪಿಸಲಾಗಿದೆ. ಆ ಪ್ರತಿಮೆಯ ಕೆಳಗೆ, ಅಭಿಮಾನಿ ತನ್ನ ಹೆತ್ತವರ ಫೋಟೋ ಮತ್ತು ಗಣೇಶನ ಫೋಟೋವನ್ನು ಇರಿಸಿದ್ದು, ಪ್ರತಿ ದಿನ ರಜನಿಕಾಂತ್ ವಿಗ್ರಹಕ್ಕೆ ಆರತಿ, ಅಭಿಷೇಕ ಮತ್ತು ಪೂಜೆ ಸಲ್ಲಿಸುತ್ತಾನೆ.
ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಪ್ಲಿನ ಮೇಲೆ ನಿರ್ಬಂಧ ಹೇರುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ. ಈರುಳ್ಳಿಯ ಕನಿಷ್ಠ ರಫ್ತು ಬೆಲೆಯನ್ನು ಪ್ರತಿ ಟನ್ ಗೆ 800 ಡಾಲರ್ಗೆ ನಿಗದಿಪಡಿಸಲಾಗಿದೆ. ಈ ಬೆಲೆಯು ಡಿಸೆಂಬರ್ 31 ರವರೆಗೆ ಮಾನ್ಯವಾಗಿರುತ್ತದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯವು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಬೆಲೆ ನಿಯಂತ್ರಣದ ಜತೆಗೆ ಈರುಳ್ಳಿ ದೇಶೀಯವಾಗಿ ಲಭ್ಯವಾಗುವಂತೆ ಮಾಡಲು ಕೇಂದ್ರ ಈ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಈರುಳ್ಳಿ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಕಳೆದ ವಾರದಲ್ಲಿ ಬೆಲೆಗಳು ದುಪ್ಪಟ್ಟಾಗಿದೆ. ಇದರಿಂದ ಜನಸಾಮಾನ್ಯರ ಸ್ಥಿತಿ ಚಿಂತಾಜನಕವಾಗಿದೆ. ಇತ್ತೀಚಿನವರೆಗೂ ಒಂದು ಕಿಲೋ ಈರುಳ್ಳಿ ಬೆಲೆ 20 ರೂ.ಯಿಂದ 30 ರೂ.ಇತ್ತು. ಈಗ ಈರುಳ್ಳಿ ಬೆಲೆ ಕೆಜಿಗೆ 40ರಿಂದ 50 ರೂಪಾಯಿಗೆ ತಲುಪಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗಲಿದೆ ಎಂದು ಮಾರುಕಟ್ಟೆಯ ಮೂಲಗಳು ವಿಶ್ಲೇಷಿಸುತ್ತಿವೆ. ಮುಂಗಾರು ತಡವಾಗಿ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರಿಕೆ ಆಗುತ್ತಿದೆ…
ಪ್ರಪಂಚದ ಪ್ರತಿಯೊಂದು ಧರ್ಮವು ತನ್ನದೇ ಆದ ವಿಶಿಷ್ಟ ಸಂಪ್ರದಾಯವನ್ನು ಹೊಂದಿದೆ ಮತ್ತು ಅಂತ್ಯಕ್ರಿಯೆಯ ವಿಧಿಗಳನ್ನು ವಿಭಿನ್ನವಾಗಿ ನಡೆಸಲಾಗುತ್ತದೆ. ಹಿಂದೂಗಳು ಶವಸಂಸ್ಕಾರ ಮಾಡುತ್ತಾರೆ, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಮಾಧಿ ಕಟ್ಟುತ್ತಾರೆ. ಆದರೆ ಪಾರ್ಸಿಗಳ ಅಂತ್ಯಕ್ರಿಯೆಯ ವಿಧಾನ ವಿಭಿನ್ನವಾಗಿದೆ. ಅವರಲ್ಲಿ ಯಾರಾದರೂ ಸತ್ತರೆ ಅದನ್ನು ರಣಹದ್ದುಗಳಿಗೆ ಆಹಾರವಾಗಿ ಬಿಡುತ್ತಾರೆ. ಅವರ ದೃಷ್ಟಿಯಲ್ಲಿ, ದೇಹವು ಪ್ರಕೃತಿಯ ವರವಾಗಿದೆ ಮತ್ತು ಅದನ್ನು ಪ್ರಕೃತಿಗೆ ಅರ್ಪಿಸುವುದು ಅವರ ಉದ್ದೇಶವಾಗಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಕರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಘೋಷಣೆ ಮಾಡಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. 2021ರ ಜುಲೈ 22 ರಂದು ಈ ಯೋಜನೆ ಜಾರಿ ಆಗಿದೆ. ಈ ಯೋಜನೆಯಡಿ ಚಿಕಿತ್ಸೆಯ ವೆಚ್ಚವನ್ನು ಪೂರ್ಣವಾಗಿ ರಾಜ್ಯ ಸರ್ಕಾರವು ಭರಿಸಲಿದೆ. ಈ ಮೂಲಕ ಜೀವನ ಮತ್ತು ಆರೋಗ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. https:// dpar.karnataka.gov.in/servicerules/public/info-2 The+Karnataka+Arogya+Sanjeevini+Scheme+(KASS)/kn ವೆಬ್ ಸೈಟ್ ಗೆ ಭೇಟಿ ನೀಡಿ.
ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ನ. 1ರಿಂದ 2024ರ ನ. 30ರ ವರೆಗೆ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿ, ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.
ನೀವು ಬಂಗಾರವನ್ನು ಖರೀದಿಸಲು ಹೊರಟಿದ್ದರೆ, ಇಲ್ಲಿದೆ ನಿಮಗೆ ತುಂಬಾ ಉಪಯುಕ್ತ ಮಾಹಿತಿ, ಹೌದು, ನೀವು ಖರೀದಿಸುವ ಆಭರಣವು ಶುದ್ಧವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ಗುರುತಿಸಬಹುದು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ನ ಹೆಸರು BIS ಕೇರ್ ಆ್ಯಪ್ ಆಗಿದೆ. ಹಾಲ್ ಮಾರ್ಕ್ ಮತ್ತು ISI ಪ್ರಮಾಣೀಕೃತ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ಟ್ರ್ಯಾಕ್ ಮಾಡಲು ಈ ಆ್ಯಪ್ ನಿಮಗೆ ಸಹಾಯ ಮಾಡುತ್ತದೆ. ಆಂಡ್ರಾಯ್ಡ್ ಫೋನ್ ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಐಫೋನ್ ನಲ್ಲಿ ಆ್ಯಪ್ ಸ್ಟೋರ್ನಿಂದ BIS ಕೇರ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ದೇಶಕಿ ಸ್ನೇಹಲ್. ಆರ್. ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿ ಶ್ರೀವಿದ್ಯಾ ಪಿ. ಐ. , ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ರಾಷ್ಟ್ರೀಯ ಜೀವನೋಪಾಯ ಮಿಷನ್ ಮಿಷನ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ. 6 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುನೀಶ್ ಮುದ್ದಿಲ್, ಐಎಎಸ್, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ವಿಶೇಷ ಆಯುಕ್ತ ಆಗಿ ನೇಮಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್ ಪ್ರಿಯಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಉಡುಪಿ: ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವರು, ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದವರನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಸ್ಮರಿಸಿದರು. ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನ ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದರು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ.…
ಬೆಂಗಳೂರು: ಹುಲಿ ಉಗುರು ಫೆಂಡೆಂಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಆಗ್ರಹಿಸಿದ್ದಾಾರೆ. ಪ್ರೆಸ್ ಕ್ಲಬ್ನಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಲಿ ಉಗುರು ಫೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯ ಭೀತರಾಗಿದ್ದು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಸರ್ಕಾರ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾವೇರಿ ವಿಚಾರ ದ್ವನಿಸುತ್ತಿದೆ.ನಾಡಿನ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆ ಹುಲಿಉಗುರಿನ ಫೆಂಡೆಂಟ್ ವಿಚಾರವನ್ನು ಕೆದುಕಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಆರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್…