Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ರಾಜ್ಯದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿರುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ನಗರದಲ್ಲಿಂದು ಮಾತನಾಡಿದ ರೇಣುಕಾಚಾರ್ಯ, ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ. ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು. ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳುತ್ತಿದ್ಧಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ…
ಬೆಂಗಳೂರು: ಹುತಾತ್ಮರ ಗೌರವಾರ್ಥ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಅಮೃತ ಕಳಸವನ್ನು ದೆಹಲಿಗೆ ಇದೇ 30ಕ್ಕೆ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಪ್ರತಿ ಮನೆ, ಧಾರ್ಮಿಕ ಕೇಂದ್ರಗಳು, ವೀರ ಯೋಧರ ಮನೆ, ಸ್ವಾತಂತ್ರ್ಯ ಹೋರಾಟಗಾರರ ಮನೆ, ಮಹಾಪುರುಷರ ಸ್ಮಾರಕ ಸ್ಥಳ, ಸಾಧು ಸಂತರ ಮಠಗಳಿಂದ ಪುಣ್ಯ ಮಣ್ಣನ್ನು ಸಂಗ್ರಹಿಸಲಾಗಿದೆ. ಏಕ್ ಭಾರತ್, ಶ್ರೇಷ್ಠ್ ಭಾರತ್ ಕಲ್ಪನೆಯೊಂದಿಗೆ ಅಮೃತ್ ವನದಲ್ಲಿ ಮಣ್ಣನ್ನು ವಿಲೀನಗೊಳಿಸಲಾಗುವುದು ಎಂದು ತಿಳಿಸಿದರು. ದೇಶವು ಸ್ವಾತಂತ್ರ್ಯ ಪಡೆದು 75 ವರ್ಷಗಳಾಗಿವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆದರಣೀಯ ಪ್ರಧಾನಿ ನರೇಂದ್ರ ಮೋದಿಜಿ ಅವರ ಮುಂದಾಲೋಚನೆಯೊಂದಿಗೆ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನವನ್ನು ಸೆಪ್ಟೆಂಬರ್ 3ರಿಂದ ಪ್ರಾರಂಭಿಸಲಾಗಿದೆ. ಇದೇ 31ರವರೆಗೆ ಅಭಿಯಾನ…
ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಎನ್. ಡಿ.ಎ ಒಕ್ಕೂಟಕ್ಕೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಸೇರಿದ್ದು, ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ದೆಹಲಿಯಲ್ಲಿಂದು ಭೇಟಿಯಾಗಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ (JDS_ BJP) ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ನಿಖಿಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.
ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಕೋಟಿ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರ ಕೋಟಿಯಿಂದ 30 ಸಾವಿರ ಕೋಟಿಗೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ…
ಬೆಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ನಡೆದಿದೆ. ಆನಂದ್ ದಯಾಳ್ ದಾದು, ಚಾಲಕ ಶ್ಯಾಮ್ ಸುಂದರ್ ಪಿಳ್ಳೆ ಕಾರು ನಿಲ್ಲಿಸದೆ, ರಸ್ತೆ ಬದಿಯಿಂದಲೇ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದರು. ಇದರಿಂದ ಕುಪಿತಗೊಂಡ ಕೆಲವರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.
ಬೆಂಗಳೂರು: ದುಬಾರಿ ಮೌಲ್ಯದ ಮೊಬೈಲ್ ಕಳವು ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧನಕ್ಕಳಪಡಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಮಹ್ಮದ್ ಪಾಷಾ ಅಲಿಯಾಸ್ ಆರೀಫ್ ಪಾಷಾ ಹಾಗೂ ಈತನ ಸಹಚರರಾದ ಮೊಹಮದ್ ಉಮರ್, ಐಯಾನ್ ಅಲಿಯಾಸ್ ಅಲೀಂ ಪಾಷ ಮತ್ತು ಮೊಹಮದ್ ಸಲೀಂ ಎಂದು ಗುರ್ತಿಸಲಾಗಿದೆ. ಆರೋಪಿಗಳಿಂದ ರೂ. 2 ಕೋಟಿ ಮೌಲ್ಯದ 1037 ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು: ಡ್ರಗ್ ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕಾರ್ಯಾಚರಣೆಯಲ್ಲಿ, ಸಿಸಿಬಿ ಅಧಿಕಾರಿಗಳು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಸೋಲದೇವನಹಳ್ಳಿ, ಎಚ್ಎಸ್ಆರ್ ಲೇಔಟ್, ವೈಟ್ ಫೀಲ್ಡ್, ಪರಪ್ಪನ ಅಗ್ರಹಾರ, ಕೆಆರ್ ಪುರಂ, ಕಾಡುಗೋಡಿ ಮತ್ತು ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಬಂಧಿತರ ವಿರುದ್ಧ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಹೈದರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಇದು ಕಾಂಗ್ರೆಸ್ ನ ಶಾಸಕರಿಗೆ ಕೊನೆಯ ಖಡಕ್ ಎಚ್ಚರಿಕೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಯಾವುದೇ ಹೇಳಿಕೆಗಳನ್ನು ನೀಡಬಾರದು. ಇದು ಅವರಿಗೆ ಕಡೆಯ ಎಚ್ಚರಿಕೆ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಮುಂದೆ ಬರಬಾರದು. ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ಪಕ್ಷದ ವತಿಯಿಂದ ಇದಕ್ಕೆ ಬೇಕಾದ ಸೂಚನೆ ನೀಡಿದ್ದು, ಇದು ಮುಂದುವರೆದ್ರೆ, ಕ್ರಮ ನಿಶ್ಚಿತ ಎಂದಿದ್ದಾರೆ.
ಕರ್ನಾಟಕದ ಬಿಜೆಪಿಯಲ್ಲಿ ಕೆಲ ನಾಯಕರಿಗೆ ಅಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋತ ನಾಯಕರನ್ನು ಕರೆದು ಮಾತನಾಡಿಸಬೇಕಿತ್ತು ಎಂದರು. ಈ ಹಿಂದೆ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಆ ಕೆಲಸವನ್ನು ಮಾಡುತ್ತಿದ್ದರು ಎಂದು ಎಂ. ಪಿ ರೇಣುಕಾಚಾರ್ಯಗೆ ಉಲ್ಲೇಖಿಸಿದರು. ಆದರೆ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಇರುವ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಹೀಗಿರುವಾಗ ನಾಯಕರು ಪಕ್ಷ ತೊರೆದು ಹೋಗಬಹುದಾದ ಆತಂಕ ಇದೆ ಎಂದು ಹೇಳಿದರು. ರಾಜ್ಯದಲ್ಲಿ ಅಭದ್ರತೆ ಹಿನ್ನೆಲೆ ಯಾರಾದರೂ ಬಿಜೆಪಿ ತೊರೆದು ಹೋಗಬಹುದು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬಿವೈ ವಿಜಯೇಂದ್ರ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷ ಸಂಘಟನೆ ಆಗಬೇಕಾದರೆ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.
ಬೆಂಗಳೂರು: ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಗಾಗಿ ಅಳವಡಿಸಲು ಉದ್ದೇಶಿಸಲಾಗಿರುವ ಎರಡು ಮೊಬೈಲ್ ಆಕ್ಸಿಜನ್ ವಾಹನಗಳ ಕಾರ್ಯನಿರ್ವಹಣೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿದರು. 500 ಎಲ್ ಪಿಎಂ ಮತ್ತು 250 ಎಲ್ ಪಿ ಎಂ ಶಕ್ತಿಯುಳ್ಳ ಮೊಬೈಲ್ ಆಕ್ಸಿಜನ್ ವಾಹನಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು 500 ಎಲ್ ಪಿ ಎಂನಿಂದ 22 ಆಕ್ಸಿಜನ್ ಸಿಲಿಂಡರ್ ಹಾಗೂ 250 ಎಲ ಪಿ ಎಂನಿಂದ 11 ಸಿಲಿಂಡರ್ ಗಳನ್ನು ಒಮ್ಮೆಲೇ ಭರ್ತಿ ಮಾಡಬಹುದಾಗಿದೆ ಎಂದರು.