Author: admin

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸಲು ಕರೆ ನೀಡುವ ನಿರ್ಣಯವನ್ನು ಅಂಗೀಕರಿಸಿತು. ಗಾಜಾದಲ್ಲಿ ತಕ್ಷಣದ ಕದನ ವಿರಾಮದ ಬೇಡಿಕೆಯನ್ನು ಒಳಗೊಂಡಿರುವ ನಿರ್ಣಯವನ್ನು ಹೆಚ್ಚಿನ ಬಹುಮತದಿಂದ ಅಂಗೀಕರಿಸಲಾಯಿತು. ಜೋರ್ಡಾನ್ ತಂದ ನಿರ್ಣಯವನ್ನು 120 ದೇಶಗಳು ಬೆಂಬಲಿಸಿದವು. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಸೇರಿದಂತೆ 14 ದೇಶಗಳು ನಿರ್ಣಯವನ್ನು ಒಪ್ಪಲಿಲ್ಲ. ಭಾರತ ಸೇರಿದಂತೆ 45 ದೇಶಗಳು ಮತದಾನದಿಂದ ದೂರ ಉಳಿದಿವೆ. ಗಾಜಾಕ್ಕೆ ನೆರವು ತಲುಪಿಸಲು ಇರುವ ಅಡೆತಡೆಯನ್ನು ತಕ್ಷಣ ತೆಗೆದುಹಾಕಬೇಕೆಂದು ನಿರ್ಣಯವು ಕರೆ ನೀಡುತ್ತದೆ. ಆದರೆ ಹಮಾಸ್ ದಾಳಿಯನ್ನು ಖಂಡಿಸುವ ಕೆನಡಾದ ತಿದ್ದುಪಡಿಯು ಅಂಗೀಕಾರವಾಗಲಿಲ್ಲ. USA, ಆಸ್ಟ್ರಿಯಾ, ಕ್ರೊಯೇಷಿಯಾ, ಫಿಜಿ, ಹಂಗೇರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಪಪುವಾ ನ್ಯೂ ಗಿನಿಯಾ ಭಾರತ, ಆಸ್ಟ್ರೇಲಿಯಾ, ಕೆನಡಾ, ಫಿನ್ಲೆಂಡ್, ಗ್ರೀಸ್, ಇರಾಕ್, ಇಟಲಿ, ಜಪಾನ್, ನೆದರ್ಲ್ಯಾಂಡ್ಸ್, ದಕ್ಷಿಣ ಕೊರಿಯಾ, ಸ್ವೀಡನ್, ಟುನೀಶಿಯಾ, ಉಕ್ರೇನ್, ಯುಕೆ ಸೇರಿದಂತೆ ದೇಶಗಳು ಮತದಾನದಿಂದ ದೂರ ಉಳಿದಿವೆ. ನಿರ್ಣಯದ ಪ್ರಮುಖ ಬೇಡಿಕೆಗಳು ಗಾಜಾಕ್ಕೆ ನಿರಂತರ ಸೇವೆ ಮತ್ತು ಗಾಜಾದ ಜನರ ರಕ್ಷಣೆ.…

Read More

ಇಡೀ ವಿಶ್ವಕ್ಕೆ ಅನುಭವ ಮಂಟಪದ ಮೂಲಕ ಸಂಸತ್ ‌ನ ಪರಿಕಲ್ಪನೆ ನೀಡಿದವರು ಬಸವಣ್ಣ. ಕರ್ನಾಟಕ ರಾಜ್ಯಕ್ಕೆ ಬಸವಣ್ಣನ ನಾಡು ಎಂಬ ಹೆಸರಿಡುವ ಬೇಡಿಕೆ ಸ್ವಾಭಾವಿಕ, ಇದರಲ್ಲಿ ತಪ್ಪೇನೂ ಇಲ್ಲ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನು ಇಡೀ ಮೆಟ್ರೋ ಸಂಪರ್ಕ ಜಾಲಕ್ಕೂ ಬಸವಣ್ಣ ಎಂದು ಹೆಸರಿಡುವ ಬೇಡಿಕೆ ಇದೆ. ವಿಜಯಪುರ ವಿಮಾನ ನಿಲ್ದಾಣಕ್ಕೂ ಬಸವಣ್ಣನ ಹೆಸರಿಡಬೇಕು ಎಂಬ ವಾದವಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದರು.

Read More

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಕಿರುತೆರೆ ರಿಯಾಲಿಟಿ ಶೋ ಬಿಗ್‌ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಸಾಲು ಸಾಲು ಜನರಿಗೆ ಕಂಟಕ ಶುರುವಾಗಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಧರಿಸಿದ್ದ ಸಾಲು ಸಾಲು ಜನರ ಬಂಧನವಾಗ್ತಿದೆ. ಖಾಂಡ್ಯಾದ ಇತಿಹಾಸ ಪ್ರಸಿದ್ಧ ಮಾರ್ಕಂಡೇಯ ದೇವಸ್ಥಾನದ ಇಬ್ಬರು ಅರ್ಚಕರು ಬಂಧನವಾಗಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದ್ದು. ಈ ಪ್ರಕರಣದಲ್ಲಿ ಸ್ವತಃ ಅರಣ್ಯ ಇಲಾಖೆಯ  ಅಧಿಕಾರಿಯೇ ಹುಲಿ ಉಗುರು ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ. ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಡಿ.ಆರ್.ಎಫ್.ಓ ದರ್ಶನ್ ಎನ್ನುವವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರಿನ ಹುರುಳಲ್ಲಿ ಸಿಲುಕಿದ್ದ ಕಳಸದ ಅರಣ್ಯ ಅಧಿಕಾರಿ ದರ್ಶನ್ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಕೊಪ್ಪ ಡಿಎಫ್ ಓ ನಂದೀಶ್ ಆದೇಶ ಹೊಡಿಸಿದ್ದರು. ಅಮಾನತು ಮಾಡಿದ ಮೇಲೂ ವಿಚಾರಣೆಗೆ ಹಾಜರಾಗದ ದರ್ಶನ್‌ಅನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

Read More

ಮಗ ಮೃತಪಟ್ಟರೆ ಅವನ ಆಸ್ತಿಯಲ್ಲಿ ತಾಯಿಗೂ ಪಾಲಿದೆ ಎಂದು ರಾಜ್ಯ ಹೈಕೋರ್ಟ್‌ ಹೇಳಿದೆ. ಆದರೆ, ಅದು ಮಗನಿಗೆ ಸಿಕ್ಕಿದ ಪಿತ್ರಾರ್ಜಿತ ಆಸ್ತಿಯಾಗಿರಬೇಕು ಮತ್ತು ತಾಯಿ ಮೊದಲನೇ ವರ್ಗದ ವಾರೀಸುದಾರರಾಗಿಬೇಕು. ಹಿಂದೂ ಉತ್ತರಾಧಿಕಾರಿ ಕಾಯಿದೆ ಅಡಿ ಮೃತ ಪುತ್ರನ ಆಸ್ತಿಗೆ ತಾಯಿಯೂ ಪಾಲುದಾರರಾಗಲಿದ್ದಾರೆ. ಒಂದು ವೇಳೆ ಗಂಡ ಜೀವಂತವಾಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರನಿಗೆ ಸೇರಬೇಕಿರುವ ಆಸ್ತಿಯಲ್ಲಿ ತಾಯಿ ತನ್ನ ಪಾಲು ಪಡೆಯಬಹುದು ಎಂದು ತಿಳಿಸಿದೆ.

Read More

ಕತಾರ್ ನಲ್ಲಿ ಒಬ್ಬ ಮಲಯಾಳಿ ಸೇರಿದಂತೆ ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಲಾಯಿತು. ವ್ಯಾಪಾರ ಉದ್ದೇಶಕ್ಕಾಗಿ ಕತಾರ್‌ ಗೆ ಬಂದಿದ್ದ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಜನವರಿ 14 ರಂದು ಅವರನ್ನು ಬಂಧಿಸಲಾಯಿತು ಮತ್ತು ಇಲ್ಲಿಯವರೆಗೆ ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿತ್ತು. ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಅವರ ಬಂಧನದ ಬಗ್ಗೆ ತಿಳಿಯಿತು. ತಮ್ಮ ವಿರುದ್ಧದ ಅಪರಾಧವನ್ನು ಕತಾರ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಸಿಡಿಆರ್ ಅಮಿತ್ ನಾಗ್ಪಾಲ್, ಸಿಡಿಆರ್ ಪೂರ್ಣೇಂದು ತಿವಾರಿ, ಸಿಡಿಆರ್ ಸುಗುಣಾಕರ್ ಪಕಾಲ ಮತ್ತು ಸಿಡಿಆರ್ ಸಂಜೀವ್ ಗುಪ್ತಾ ಜೊತೆಗೆ ನಾವಿಕ ರಾಕೇಶ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಅವರು ಕತಾರ್‌ ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಸಂಬಂಧಿತ ಸೇವೆಗಳನ್ನು ಒದಗಿಸುವ ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದರು. ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಮಾಹಿತಿಯನ್ನು ಇಸ್ರೇಲ್‌ಗೆ…

Read More

ಬೆಂಗಳೂರು: ಅರಣ್ಯ ಕಾಯ್ದೆ ಹಾಗೂ ವನ್ಯಜೀವಿ ಕಾಯ್ದೆ ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಇತರೆ ಕಾನೂನುಗಳ ಕುರಿತು  ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರಣ್ಯ ಇಲಾಖೆಯಿಂದ   ಕ್ರಮವಹಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಕಾಸ ಸೌಧದ ಕೊಠಡಿ ಸಂಖ್ಯೆ 422 ರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು  ಅರಣ್ಯ ಇಲಾಖೆಯ ಕಾನೂನಿನ ಬಗ್ಗೆ ಮಾಹಿತಿಯ ಕೊರತೆ ಇರುವ ಕಾರಣ, ಕಾಯ್ದೆ ಸೇರಿದಂತೆ ಇತರೆ ಕಾನೂನಿನ ಉಲ್ಲಂಘನೆ ಸಾರ್ವಜನಿಕ ವಲಯದಲ್ಲಿ ಕಂಡುಬರುತ್ತಿದೆ ಎಂದರು. ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾದ ವರ್ತೂರು ಸಂತೋಷ ಅವರ ಹುಲಿ ಉಗುರು ಧಾರಣೆಯ ಪ್ರಕರಣದ ನಂತರ ಇಲ್ಲಿಯವರೆಗೆ 8 ದೂರುಗಳು ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಕ್ರಮವಹಿಸಲಾಗುವುದು  ಎಂದರು. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ…

Read More

ಬೆಂಗಳೂರು: “ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ, ಅವರ ಸವಾಲು ಸ್ವೀಕರಿಸಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸ ಹಾಗೂ ಸಿಎಂ ಗೃಹಕಚೇರಿ ಕೃಷ್ಣಾ ಬಳಿ, ಕುಮಾರಸ್ವಾಮಿ ಅವರು ತಮ್ಮ ಸವಾಲು ಸ್ವೀಕರಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. “ಕುಮಾರಸ್ವಾಮಿ ನನ್ನ ಸವಾಲು ಸ್ವೀಕಾರ ಮಾಡಿರುವುದು ಬಹಳ ಸಂತೋಷ. ಅವರ ಪ್ರತಿ ಸವಾಲನ್ನು ನಾನು ಸ್ವೀಕರಿಸುವೆ. ನಮ್ಮ ಚರ್ಚೆ ಯಾವೊದೋ ಒಂದು ಚಾನೆಲ್ ನಲ್ಲಿ ಆಗೋದು ಬೇಡ. ಎಲ್ಲಾ ಸುದ್ದಿ ವಾಹಿನಿಗಳಿಗೂ ಸಿಗುವಂತೆ ಅಧಿವೇಶನದಲ್ಲೇ ಚರ್ಚೆ ಮಾಡೋಣ. ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡೋಣ. ಅವರ ಬಳಿ ಇರುವ ಸರಕುಗಳನ್ನು ತಂದು ಅವರು ಮಾತನಾಡಲಿ. ನನ್ನ ಬಳಿ ಇರುವ ದಾಖಲೆಗಳನ್ನು ಮುಂದಿಟ್ಟು ನಾನು ಮಾತನಾಡುತ್ತೇನೆ. ಈ ಹಿಂದೆಯೂ ನಾನು ಇಂತಹ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿ,…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ,ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ? #AnswerMadiMod ಎಂದು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದಾರೆ.

Read More

ಬೆಂಗಳೂರು: 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಹುಲಿ ಉಗುರು ಲಾಕೆಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್‌ಗೆ 2ನೇ ಎಸಿಜೆಎಂ ನ್ಯಾಯಾಲಯ ಜಮೀನು ಮಂಜೂರು ಮಾಡಿದೆ. ಹಳ್ಳಿಕಾರ್‌ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್‌ ಅವರು 10ನೇ ಅವೃತ್ತಿಯ ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು. ಕುತ್ತಿಗೆಯಲ್ಲಿ ಸಂತೋಷ್‌ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್‌ ಅವರನ್ನು ಬಂಧಿಸಿದ್ದರು. ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದು, ಹಳ್ಳಿಕಾರ್ ರಾಸು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್‌ ಇಂದು ಸಂಜೆ 7 ಗಂಟೆ ಬಳಿಕ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Read More

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಂತರಾಷ್ಟ್ರೀಯ ಡ್ರಗ್‌ಪ್ಲಡ್ಜರ್‌ಗಳನ್ನು ಒಳಗೊಂಡಂತೆ ಒಟ್ಟು 10 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5,04,30,000/-ರೂ ಮೌಲ್ಯದ ವಿವಿಧ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರ ಸಿಸಿಬಿ ಮಾದಕ ದವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡಗ್ ಪೆಡ್ಲರ್‌ ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಹೆಚ್.ಎಸ್‌.ಆರ್ ಲೇಔಟ್, ವೈಟ್‌ ಫೀಲ್ಡ್, ಬಾಣಸವಾಡಿ, ಪರಪನ್ನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ ದಾಖಲು ಮಾಡಿರುವ 7 ಪ್ರಕರಣಗಳಲ್ಲಿ 8 ಜನ ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 10 ಜನ ಡ್ರಗ್‌ ಪೆಡ್ಲರ್‌ ಗಳನ್ನು ಬಂಧಿಸಿದ್ದು, ಇವರುಗಳ ವಶದಿಂದ ಅಂದಾಜು 5,04,30,000/-ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕಿಸೆಲ್ 3.806 ಕೆಜಿ, ಕೋಕೇನ್-50 ಗ್ರಾಂ, ಎಕ್ಸ್‌ ಟಿಸಿ ಪಿಲ್ಸ್ 25, ಎಲ್.ಎಸ್‌.ಡಿ ಸಿಪ್ಸ್-50, 5.100 8.…

Read More