Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ಹಾರ್ನ್ ಮಾಡಿದ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಯಲಹಂಕದಲ್ಲಿ ನಡೆದಿದೆ. ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪನ ಪುತ್ರ ಆಡಂ ಬಿದ್ದಪ್ಪ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದು,ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆಡಂ ವಾಗ್ವಾದ ಮಾಡಿದ್ದಾನೆ. ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇಳಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್, ಆಡಂ ಕುಡಿದ ಮತ್ತಿನಲ್ಲಿ ಪೊಲೀಸರು ಹಾಗೂ ವ್ಯಕ್ತಿಯೊಬ್ಬರ ಜೊತೆ ಗಲಾಟೆ ಮಾಡಿದ್ದಾನೆ. ನಾನು ಪ್ರಭಾವಿ ಆಗಿದ್ದೇನೆ ನನ್ನನ್ನೇ ಪ್ರಶ್ನೆ ಮಾಡುತ್ತೀರಾ ಎಂದು ಬೆದರಿಕೆ ಹಾಕಿದ್ದಾನೆ. ಯಲಹಂಕ ಸಂಚಾರಿ ಪೊಲೀಸರು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ರಾಹುಲ್, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಕೈಗಾರಿಕೆಗಳು ವಿದ್ಯಾರ್ಥಿಗಳ ಪಠ್ಯಪುಸ್ತಕದ ಪಾಂಡಿತ್ಯಕ್ಕಿಂತ ಕೌಶಲ್ಯ ಶಿಕ್ಷಣ ಕಲಿತವರನ್ನು ಎದುರು ನೋಡುತ್ತಿರುವುದರಿಂದ ಕಾಲೇಜುಗಳು ವಿದ್ಯಾರ್ಥಿಗಳಿಗೆ `ಇಂಡಸ್ಟ್ರಿ ರೆಡಿನೆಸ್’ ನಂತಹ ಶಿಕ್ಷಣ ಪದ್ಧತಿಯನ್ನು ಕಲಿಸಬೇಕೆಂದು ಇನ್ಫೋಸಿಸ್ನ L & D ವಿಭಾಗದ ಜಾಗತಿಕ ಮುಖ್ಯಸ್ಥ ಶರತ್ ಚಂದ್ರ ಹೇಳಿದರು. ಬನ್ನೇರುಘಟ್ಟದಲ್ಲಿರುವ ಎಎಂಸಿ ಕಾಲೇಜು ಆಯೋಜಿಸಿದ್ದ `ಅಮೃತ ಮಹೋತ್ಸವದ ವಿಕಸಿತ್ ಭಾರತ್ @2047′ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪ್ರಧಾನ ಮಂತ್ರಿಗಳ ಯೋಜನೆಯಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಕೈಗಾರಿಕೆಗಳ ನಡುವಿನ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸ್ವಾಂತಂತ್ರ್ಯ ಬಂದು 75 ವರ್ಷ ಕಳೆದಿದೆ. ಮುಂದಿನ 25 ವರ್ಷಕ್ಕೆ ಶತಮಾನೋತ್ಸವಕ್ಕೆ ನಾವು ಹೆಜ್ಜೆಹಿಡಲಿದ್ದು, ಸಾಕಷ್ಟು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳು ಕಲಿಕಾ ವೇದಿಕೆಗಳಾದ ಎಐ, ಎಂಎಲ್ಗಳನ್ನು ಬಳಕೆ ಮಾಡಿಕೊಂಡು ಉತ್ಕೃಷ್ಟವಾಗಿ ಕಲಿಯಬೇಕು ಎಂದರು. ಎಎಂಸಿ ಶಿಕ್ಷಣ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷ ರಾಹುಲ್ ಕಲ್ಲೂರಿ ಮಾತನಾಡಿ, ಭಾರತವು ಆರ್ಥಿಕವಾಗಿ ಮತ್ತಷ್ಟು ಸಧೃಡವಾಗಲು ಮುಂದಿನ 25 ವರ್ಷ ಬಹಳ ಮಹತ್ವವಾಗಿದೆ. ನಾವು ಬೆಳೆಯಬೇಕಾದಲ್ಲಿ, ಕೈಗಾರಿಕೆ ಮತ್ತು…
ಬೆಂಗಳೂರು: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು. ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ. ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ: ನನ್ನ…
ಬೆಂಗಳೂರು: ನೈತಿಕತೆ ಇಲ್ಲದ ಯಶಸ್ಸು,ದುಡಿಮೆ ಇಲ್ಲದ ಸಂಪತ್ತು ಹಾಗೂ ಚಾರಿತ್ರ್ಯ ಇಲ್ಲದ ಜ್ಞಾನ ನಿಷ್ಪ್ರಯೋಜಕ ಅವುಗಳಿಂದ ಮನುಕುಲಕ್ಕೆ ಒಳಿತು ಮಾಡಲು ಸಾಧ್ಯವಿಲ್ಲ.ಮಹಾತ್ಮ ಗಾಂಧೀಜಿಯವರು ಬೋಧಿಸಿದ ನೈತಿಕತೆಗಳು ನಮ್ಮ ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕು ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು. ಇಲ್ಲಿನ ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಸಂಸ್ಥಾಪನಾ ಸಪ್ತಾಹ(Foundation Week )ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹಾಗೂ ಯುವಸಮುದಾಯ ಜಗತ್ತಿನ ಕುರಿತು ನೇತ್ಯಾತ್ಮಕ ಭಾವನೆಗಳನ್ನಿಟ್ಟುಕೊಂಡು ಆರೋಪಿಸುವ ಮನಸ್ಥಿತಿ ಬೆಳೆಸಿಕೊಳ್ಳಬಾರದು.ಪರಸ್ಪರ ಸೌಹಾರ್ದತೆ,ಸದಾಶಯಗಳಿಂದ ದೇಶವನ್ನು ಕಟ್ಟಬೇಕು. ಭವಿಷ್ಯದ ಸಂಪತ್ತನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿರುವ ಐಐಎಂ ನಂತಹ ರಾಷ್ಟ್ರೀಯ ಮಹತ್ವದ ಉನ್ನತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅಕಾಡೆಮಿಕ್ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳ ಪಾಲನೆಯನ್ನೂ ರೂಢಿಸಿಕೊಳ್ಳಬೇಕು.ಮಹಾತ್ಮ ಗಾಂಧೀಜಿಯವರ ಆಶಯಗಳನ್ನು ಅಳವಡಿಸಿಕೊಳ್ಳಬೇಕು. ನೀತಿಯಿಲ್ಲದ ವ್ಯಾಪಾರ,ಮಾನವೀಯತೆಯಿಲ್ಲದ ವಿಜ್ಞಾನ ಬೇಕಿಲ್ಲ.ಅಪಾರವಾದ ಬುದ್ಧಿಮತ್ತೆ,ಜ್ಞಾನ,ಪ್ರತಿಭೆ ಹೊಂದಿರುವ ಈ ಪೀಳಿಗೆಯ ವಿದ್ಯಾರ್ಥಿಗಳು ದೇಶದ ಮುಂದಿನ ದಾರಿಗೆ ಬೆಳಕಾಗಬೇಕು. ಬೆಂಗಳೂರಿನ ಐಐಎಂ ಸಂಸ್ಥೆಯು 50…
ಕೊಳಚೆ ನೀರು ಬಳಸಿ ಬೆಳೆಯಲಾಗುತ್ತಿರುವ ತರಕಾರಿಗಳಲ್ಲಿ ಭಾರ ಲೋಹದ ಸಾಂದ್ರತೆ ಹೆಚ್ಚಾಗಿದ್ದು, ಇಂಥ ತರಕಾರಿ ತಿನ್ನುವುದರಿಂದ ಮಾನವನ ದೇಹಕ್ಕೆ ವಿಷಕಾರಿ ಅಂಶ ಸೇರ್ಪಡೆಯಾಗುವ ಅಪಾಯವನ್ನು ಹೆಚ್ಚಿಸಿದೆ ಎಂದು ಅರಣ್ಯ ಇಲಾಖೆಯ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಅಧ್ಯಯನ ತಿಳಿಸಿದೆ. ವಿವಿಧ ಭಾಗಗಳಲ್ಲಿರುವ ಮಾರುಕಟ್ಟೆ, ಸೂಪರ್ ಮಾರುಕಟ್ಟೆ ಮಳಿಗೆಗಳು, ಹಾಪ್ ಕಾಮ್ಸ್, ಸಾವಯವ ಮಳಿಗೆಗಳಿಂದ 10 ತರಕಾರಿಗಳ 400 ಮಾದರಿಗಳನ್ನು ಸಂಗ್ರಹಿಸಿ ಎಂಪ್ರಿ ಅಧ್ಯಯನ ನಡೆಸಿದೆ. ಬೆಂಗಳೂರು ನಗರದ ಮಾರುಕಟ್ಟೆಗಳಲ್ಲಿ ಲಭ್ಯವಿರುವ ತರಕಾರಿಗಳಲ್ಲಿ ಭಾರ ಲೋಹಗಳ ಸಾಂದ್ರತೆ ಅಧ್ಯಯನ’ ಎಂಬ ವರದಿಯನ್ನು ಎಂಪ್ರಿ 2022ರ ನವೆಂಬರ್ನಲ್ಲಿ ಪ್ರಕಟಿಸಿದೆ. ಡಾ. ಎನ್. ಹೇಮಾ, ಪಿ.ಬಿ. ಐಶ್ವರ್ಯ, ಡಿ.ಆರ್. ದಿವ್ಯಾ ಅವರು ಈ ಅಧ್ಯಯನದ ನೇತೃತ್ವ ವಹಿಸಿದ್ದರು. ಬದನೆಕಾಯಿ, ಟೊಮೆಟೊ, ದೊಡ್ಡ ಮೆಣಸಿನಕಾಯಿ, ಬೀನ್ಸ್, ಕ್ಯಾರಟ್, ಹಸಿ ಮೆಣಸಿನಕಾಯಿ, ಈರುಳ್ಳಿ, ಆಲೂಗಡ್ಡೆ, ಪಾಲಕ್ ಮತ್ತು ಕೊತ್ತಂಬರಿ ಸೊಪ್ಪುಗಳನ್ನು ಮಾರುಕಟ್ಟೆಗಳಿಂದ ಸಂಗ್ರಹಿಸಲಾಗಿದೆ. ನುವಾನ್- ಅಲ್ಪಾ ಮೈಕ್ರೋವೇವ್ ಡೈಜೆಷನ್ ಎಕ್ಸ್ ಟ್ರಾಕ್ಷನ್ ಸಿಸ್ಟಮ್ ನಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನ ಆದರ್ಶನಗರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಪಟು ಮೃತದೇಹ ಪತ್ತೆಯಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ನಿವಾಸಿ 25 ವರ್ಷದ ಧನಲಕ್ಷ್ಮೀ ಶವ ಪತ್ತೆಯಾಗಿದೆ. ಕಳೆದ 5 ವರ್ಷಗಳಿಂದ ಆದರ್ಶನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಧನಲಕ್ಷ್ಮೀ, ಮಂಗಳವಾರ ಮೈಸೂರು ದಸರಾ ನೋಡಿಕೊಂಡು ಬಂದಿದ್ದರು. 3 ಬಾರಿ ಅಂತಾರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ತಂದೆ, ತಮ್ಮ ಮನೆಯಲ್ಲಿರುವಾಗಲೇ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರು: ಹುಲಿ ಉಗುರು ಧರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಅರಣ್ಯ ಭವನ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಹುಲಿ ಚರ್ಮ ಬಣ್ಣದ ಶಾಲು ಧರಿಸಿ ವಾಟಾಳ್ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ವಿಫಲವಾಗುತ್ತಿದೆ. ವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು: ನಾಯಿ ಕಚ್ಚಿದಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಾಯಿ ಮಾಲೀಕನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ನಂಜುಂಡಬಾಬು ಬಂಧಿತ ಆರೋಪಿ. ಕೊತ್ತನೂರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದ ರಸ್ತೆಯ ಮನೆಯಲ್ಲಿ ಘಟನೆ ನಡೆದಿದೆ. ಇದೇ ತಿಂಗಳ 23ರಂದು ಘಟನೆ ನಡೆದಿತ್ತು. ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ನಾಯಿ ಕಚ್ಚಿತ್ತು. ಈ ಸಂಬಂಧ ಮಹಿಳೆ, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಕೊಟ್ಟವರ ಸುಮ್ಮನೆ ಬಿಡುವುದಿಲ್ಲ ಎಂದು ನಾಯಿ ಮಾಲೀಕ ಬೆದರಿಕೆ ಹಾಕಿದ್ದನಂತೆ.
ಬೆಂಗಳೂರು: ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ವಿಭೂತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರದ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಈಜಲು ಹೋಗುವುದಾಗಿ ಮನೆಯವರಿಗೆ ತಿಳಿಸಿ ಹೊರಟ ಸ್ಯಾಮ್ಯುಯೆಲ್ ಮದ್ಯ ಸೇವಿಸಿದರು ಎಂಬುದು ತಿಳಿದುಬಂದಿದೆ. ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ದಾರಿಹೋಕರು ರಕ್ಷಣೆಗೆ ಬಂದರೂ ಅವರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.