Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಪಡಿತರ ವಿತರಣೆ ಹಗರಣ ಪ್ರಕರಣದಲ್ಲಿ ಬಂಗಾಳದ ಅರಣ್ಯ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಬಂಧನ. ಜ್ಯೋತಿಪ್ರಿಯಾ ಮಲ್ಲಿಕ್ ಅವರ ಮನೆಯಲ್ಲಿ ಒಂದು ಗಂಟೆಗಳ ಕಾಲ ದಾಳಿ ನಡೆಸಿ ಇಡಿ ಅವರನ್ನು ಬಂಧಿಸಿದೆ. ಆದರೆ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ ಎಂದು ಸಚಿವರು ಬಂಧನಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಮಮತಾ ಸಂಪುಟದಲ್ಲಿ ಜ್ಯೋತಿಪ್ರಿಯಾ ಮಲ್ಲಿಕ್ ಅವರು ಆಹಾರ ಸಚಿವರಾಗಿದ್ದಾಗ ಅವರ ಮನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ನ್ಯಾಯಬೆಲೆ ಅಂಗಡಿಗಳ ಮೂಲಕ ಪೂರೈಕೆಯಾಗಬೇಕಿದ್ದ ಗೋಧಿಯನ್ನು ಹೆಚ್ಚಿನ ಆಫ್ ನೆಟ್ ಮಾರುಕಟ್ಟೆಗೆ ತಿರುಗಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೋಲ್ಕತ್ತಾದ ಸಾಲ್ಟ್ ಲೇಕ್ ನಲ್ಲಿರುವ ಮಲ್ಲಿಕ್ ಅವರ ಎರಡು ಫ್ಲಾಟ್ಗಳು ಸೇರಿದಂತೆ ಎಂಟು ಸ್ಥಳಗಳಲ್ಲಿ ನಿನ್ನೆ ಬೆಳಿಗ್ಗೆ ಎಂಟು ಗಂಟೆಗೆ ಹುಡುಕಾಟ ಪ್ರಾರಂಭವಾಯಿತು. ಪಡಿತರ ಹಗರಣದ ಆರೋಪಿ ಬಾಕಿಬುರ್ ರೆಹಮಾನ್ ವಿಚಾರಣೆ ವೇಳೆ ಜ್ಯೋತಿಪ್ರಿಯಾ ಮಲ್ಲಿಕ್ ಪಾತ್ರ ಬೆಳಕಿಗೆ ಬಂದಿದೆ. ನಗರಬಜಾರ್ ನಲ್ಲಿರುವ ಅಮಿತ್ ಡೇ ಅವರ ಎರಡೂ ನಿವಾಸಗಳಲ್ಲಿ ಸಚಿವರ ಆಪ್ತ ಸಿಬ್ಬಂದಿ ಶೋಧ ನಡೆಸಿದ್ದಾರೆ. ಇಡಿಯಿಂದ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಸತ್ಯ ಶನೇಶ್ವರಸ್ವಾಮಿ ದೇವಾಲಯದ ಧರ್ಮದರ್ಶಿ ಧನಂಜಯ್ ಗುರೂಜಿ ಹುಲಿ ಉಗುರು ಧರಿಸಿದ್ದಾರೆ ಎಂಬ ದೂರಿನ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಯಾವುದೇ ರೀತಿಯ ಹುಲಿ ಉಗುರು ಪತ್ತೆಯಾಗಿಲ್ಲ. ನಾಗರಾಜು ಎಂಬುವರು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಧನಂಜಯ ಅವರಿಗೆ ಸೇರಿಗೆ ಸ್ಥಳಗಳಲ್ಲಿ ತಪಾಸಣೆ ನಡೆಸಿ ಹುಲಿ ಉಗುರು ಧರಿಸಿದ್ದ ಬಗ್ಗೆ ಮಾಹಿತಿ ಪಡೆದುಕೊಂಡರು. ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಧನಂಜಯ ಗುರೂಜಿ ಅವರ ಬಳಿ ಇರುವ ಒಡವೆಗಳನ್ನು ಪರಿಶೀಲಿಸಿದರು. ಯಾವುದೇ ಹುಲಿ ಉಗುರಿನ ಪೆಂಡೆಂಟ್ ಸಿಗಲಿಲ್ಲ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಧನಂಜಯ್ ಗುರೂಜಿ, ನನಗೆ ಈ ಹಿಂದೆ 2019 ರಲ್ಲಿ ಕ್ಷೇತ್ರದಲ್ಲಿ ನಡೆದ ಜಾತ್ರಾ ಮಹೋತ್ಸವದ ವೇಳೆ ಅಪರಿಚಿತರೊಬ್ಬರು ಇದನ್ನು ನನಗೆ ಉಡುಗೊರೆಯಾಗಿ ನೀಡಿದ್ದರು. ನಂತರ ಅದನ್ನು ನಾನು ಕೆಲ ದಿನಗಳ ಕಾಲ ಧರಿಸಿದ್ದೆ ಆನಂತರ ಹುಲಿಯೂರು ಮಾದರಿಯಾಗಿರುವ ಅದು ಕಂದು ಬಣ್ಣಕ್ಕೆ ತಿರುಗಿದ…
ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರೋ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳಾಗಿದ್ದಾರೆ. ಅನೇಕ ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 1.5 ಕೆ.ಜಿ. ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು,ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನ ವಿಧಿ ವಿಜ್ಞಾನ ಪ್ರಯೋಗಾಲಾಯಕ್ಕೆ ಕಳುಹಿಸಿದ್ದು ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ನವಿಲು ಬೇಟೆಯಾಡುವ ಪ್ರಕರಣಗಳು ಕಂಡುಬರುತ್ತಿದ್ದವು. ಕಳೆದ ನಾಲ್ಕು ಐದು ವರ್ಷಗಳಿಂದ ನವಿಲುಗಳ ಸಂತತಿ…
ಬೀದರ್: ಜಿಲ್ಲೆಯ ಐದು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದರೋಡೆ, ಮನೆ ಕಳ್ಳತನ, ಅಕ್ರಮ ಗಾಂಜಾ ಪ್ರಕರಣಗಳನ್ನು ಕಳೆದ 10 ದಿನಗಳಲ್ಲಿ ಪತ್ತೆ ಪೊಲೀಸರು ಪತ್ತೆ ಮಾಡಿದ್ದು, 94 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಹುಮನಾಬಾದ ಡಿ.ಎಸ್ಪಿ ನ್ಯಾಮೆಗೌಡ, ಶಿವನಗೌಡ ಪಾಟೀಲ್, ಶಿವಾನಂದ ಪವಾಡಶೆಟ್ಟಿ ರವರ ನೇತೃತ್ವದಲ್ಲಿ ತಮ್ಮ ತಮ್ಮ ಉಪ-ಭಾಗದ ವೃತ್ತ ನಿರೀಕ್ಷಕರಾದ ಮಹೇಶ ಗೌಡ ಪಾಟೀಲ್, ಫುಲಯ್ಯಾ ರಾಠೋಡ್, ರಘುವೀರಸಿಂಗ್ ಠಾಕೂರ್, ಹನುಮರೆಡ್ಡೆಪ್ಪಾ ಪಿ.ಐ ರವರ ತಂಡವನ್ನು ಈ ಕಾರ್ಯಾಚರಣೆ ನಡೆಸಿದೆ. ಬೇಮಳಖೇಡಾ ಠಾಣೆಯ ದರೋಡೆ ಪ್ರಕರಣದಲ್ಲಿ ಕೇವಲ 48 ಗಂಟೆಗಳಲ್ಲಿ ಕಳುವಾದ 694 ಜಿ.ಎಮ್ ಕಂಪನಿಯ ಫ್ಯಾನ ಬಾಕ್ಸ್, ಒಂದು ಕಂಟೆನರ್ ಅಃಕಿಃ 50,76,156=00 ರೂಪಾಯ ಮೌಲ್ಯದವುಗಳನ್ನು ವಶಪಡಿಸಿಕೊಳ್ಳಲಾಯಿತು. ಬೀದರ ನಗರ ಠಾಣೆಯ ದರೋಡೆ, ಕೊಲೆ ಯತ್ನ, ಆಮ್ಸ್ ಪ್ರಕರಣದಲ್ಲಿ ನಗದು ಹಣ, ಒಂದು ಕಾರ್, ಮೊಬೈಲ್, (ಮಹಾರಾಷ್ಟ್ರ ಪೊಲೀಸರು ವಶ ಪಡಿಸಿಕೊಂಡ ನಾಡ ಪಿಸ್ತೂಲ್, 2 ಜೀವಂತ ಗುಂಡುಗಳು) ಅ:ಕಿ 5,00,000 ರೂಪಾಯಿ…
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಭವಾನಿ ದೇವಿಮೂತಿ೯ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯ ಕೊನೆಯ ದಿನ ಗ್ರಾಮದ ಕೊಲಾಟಾ ಮಾದಿಗ ಓಣಿಯಿಂದ ಬಸವೇಶ್ವರ ವೃತ್ತ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ದೇವಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಚಿಕ್ಕ ಮಕ್ಕಳ ಕೋಲಾಟಾ ನೃತ್ಯ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರಾದ ದೇವಿದಾಸ ಧೆೋಳೆ ಹಾಗೂ ಮಾಜಿ ಉಪಾಧ್ಯಕ್ಷರಾದ ಬಂಡೆಪ್ಪಾ ಮತ್ತಿತರರಿದ್ದರು. ವರದಿ: ಅರವಿಂದ ಮಲ್ಲಿಗೆ
ಬೆಂಗಳೂರು: ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿರುವ ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ನಾವು ವರ್ಗಾವಣೆಯಲ್ಲಿ ಕಳೆದ 5 ತಿಂಗಳ ಸರ್ಕಾರದಲ್ಲಿ ಹಣ ತೆಗೆದುಕೊಂಡಿಲ್ಲ ಅಂತ ಆಣೆ ಮಾಡಲಿ ಎಂದು ಆಹ್ವಾನ ನೀಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿದರು. ಶಾಸಕ ಬಾಲಕೃಷ್ಣ ಅವರ ಸವಾಲ್ ನಾನು ಸ್ವೀಕಾರ ಮಾಡುತ್ತೇನೆ. ಅದರಂತೆ ನನ್ನ ಸವಾಲನ್ನು ಅವರು ಸ್ವೀಕಾರ ಮಾಡಲಿ. ನಾನು, ನನ್ನ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಅಧಿಕಾರಿಗಳ ನಿಯೋಜನೆಯಲ್ಲಿ ಹಣಕ್ಕೆ ಅವಕಾಶ ನೀಡಿಲ್ಲ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ, ತಾಯಿ ಚಾಮುಂಡೇಶ್ವರಿ ಸನ್ನಿದಿ ಎಲ್ಲೇ ಆದರೂ ನಾನು ಆಣೆ ಮಾಡಲು ಸಿದ್ಧ ಎಂದರು ಅವರು. ಚುನಾವಣೆ ವೇಳೆ ನಮ್ಮ ಮನೆ ಹಣ ಖರ್ಚು ಮಾಡಿಲ್ಲ ಎಂದು ಅನೇಕ ಸಲ ಹೇಳಿದ್ದೇನೆ. ಸದನದಲ್ಲಿಯೇ ಈ ಮಾತನ್ನು…
ವರದಿಗಳ ಪ್ರಕಾರ ಕೇವಲ ಹುಲಿ ಉಗುರಲ್ಲದೇ ಆನೆ ಬಾಲದ ಕೂದಲನ್ನ ಸಂಗ್ರಹ ಮಾಡಿರುವ ಬಗ್ಗೆಯೂ ಶೋಧಕ್ಕೆ ಮುಂದಾಗಿದ್ದಾರೆ. ಸ್ಮಗ್ಲಿಂಗ್ ಮೂಲಕ ಹುಲಿ ಉಗುರು ಹಾಗೂ ಆನೆ ಬಾಲದ ಕೂದಲನ್ನು ಸಂಗ್ರಹ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಆಭರಣದ ಶೋ ರೂಂ ಗಳ ಮೇಲೆ ದಾಳಿ ನಡೆಸಲು ಅರಣ್ಯಾಧಿಕಾರಿಗಳು ಪ್ಲಾನ್ ಮಾಡಿದ್ದಾರೆ. ಹುಲಿ ಉಗುರಿನ ಲಾಕೆಟ್ ಧರಿಸಿದ್ದರಿಂದ ಹಳ್ಳಿಕಾರ್ ಸಂತೋಷ್ ಬಂಧನವಾದ ನಂತರ ಅರಣ್ಯಾಧಿಕಾರಿಗಳು ಹುಲಿ ಉಗುರು ಲಾಕೆಟ್ ಧರಿಸಿದ ಸೆಲೆಬ್ರೆಟಿಗಳಿಗೆ ನೋಟಿಸ್ ಜಾರಿ ಮಾಡಿದರು. ಇದೀಗ ಅರಣ್ಯಾಧಿಕಾರಿಗಳು ಮತ್ತೊಂದು ರೇಡ್ ಗೆ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹುಲಿ ಉಗುರಿಗೆ ಪೆಂಡೆಂಟ್ ಮಾಡಿಕೊಡುವ ಆಭರಣ ಅಂಗಡಿಗಳ ಮಾಲೀಕರು ಎಲ್ಲಿಂದ ಹುಲಿ ಉಗುರು ತರ್ತಾರೆ ಎಂಬ ಮಾಹಿತಿ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ಸಿಐಡಿ, ಬಿಬಿಎಂಪಿ ಫಾರೆಸ್ಟ್ ಸೆಲ್ ಅಧಿಕಾರಿಗಳು ಹುಲಿ ಉಗುರು ಮಾರಾಟದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ. ಸಿಮ್ರಾನ್ ವಾಟ್ಸ್ ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಮಹಿಳೆಯರ 200m T12 ಫೈನಲ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದರು. ಅವರು ಪೋಡಿಯಂ ಫಿನಿಶ್ ಮಾಡಲು 26.12 ಸೆಕೆಂಡ್ಗಳಲ್ಲಿ ಸಮಯವನ್ನು ಗಳಿಸಿದರು. ಇದು ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಆಕೆಯ ಎರಡನೇ ಪದಕವಾಗಿದೆ. ಮಹಿಳೆಯರ 100 ಮೀಟರ್ ಟಿ 12 ಸ್ಪರ್ಧೆಯಲ್ಲಿ ಮೊದಲನೆಯದು.
ಅಹ್ಮದನಗರ: ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿ ಅವರು ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ನೀಲವಾಂಡೆ ಅಣೆಕಟ್ಟಿನ “ಜಲಪೂಜೆ” ನೆರವೇರಿಸಿದರು ಮತ್ತು ಅಣೆಕಟ್ಟಿನ ಕಾಲುವೆ ಜಾಲವನ್ನು ದೇಶಕ್ಕೆ ಸಮರ್ಪಿಸಿದರು, ನಂತರ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸುಮಾರು 7,500 ಕೋಟಿ ರೂಪಾಯಿಗಳ ಆರೋಗ್ಯದಂತಹ ಕ್ಷೇತ್ರಗಳಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರ ಸೇರಿದಂತೆ ಸುಮಾರು ₹7,500 ಕೋಟಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ನವದೆಹಲಿ: ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಅಕ್ಟೋಬರ್ 31ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಸಭೆಯ ನೀತಿ ನಿಯಮ ಸಮಿತಿ ಸೂಚಿಸಿದೆ. ಸಮಿತಿಯ ಸಭೆ ಇಂದು ನಡೆದಿದೆ. ಸಮಿತಿಯು ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ವಿನೋದ್ ಕುಮಾರ್ ಸೊಂಕರ್ ಅವರು, ತನಿಖೆಗೆ ನೆರವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಐಟಿ ಸಚಿವಾಲಯವನ್ನು ಕೋರಿದ್ದಾರೆ. ಅಕ್ಟೋಬರ್ 31ರಂದು ವಿಚಾರಣೆಗೆ ಹಾಜರಾಗುವಂತೆ ಮೋಯಿತ್ರಾ ಅವರಿಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೇ ಅವರು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ತನಿಖಾ ಸಮಿತಿ ರಚನೆ ಮಾಡಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದರು.