Author: admin

ಕಾರವಾರ: ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ ಮಾಡುವ ಕುರಿತಂತೆ ಈ ಬಾರಿಯ ಬಜೆಟ್ ನಲ್ಲಿ ಮಂಜೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ರೂ.198.27 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಮತ್ತು ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪಾ ರಾಜ್ಯ ಹೆದ್ದಾರಿ–93 ರಲ್ಲಿ ರೂ. 720.81 ಲಕ್ಷ ರೂ ವೆಚ್ಚದ ಸೇತುವೆ ಕಾಮಗಾರಿ, ಯಲ್ಲಾಪುರ ಪಟ್ಟಣದಲ್ಲಿ ರೂ.202.89 ಲಕ್ಷ ವೆಚ್ಚದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲ್ಲೂಕಿನಲ್ಲಿ ರೂ.248.18 ಲಕ್ಷ ಮೊತ್ತದ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು. ಕಾರವಾರಕ್ಕೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆಗಬೇಕು ಎಂದು ಕಾರವಾರ–ಅಂಕೋಲಾ ಕ್ಷೇತ್ರದ ಶಾಸಕರು ಹಲವು ಬಾರಿ ಬೇಡಿಕೆ ಸಲ್ಲಿಸಿದ್ದಾರೆ ಹಾಗೂ ಒತ್ತಾಯಿಸಿದ್ದಾರೆ ಮತ್ತು ಇದು ಈ ಭಾಗದ ಜನರ ಪ್ರಮುಖ ಬೇಡಿಕೆ ಕೂಡ ಆಗಿದ್ದು, ಈ ಬಾರಿಯ…

Read More

ತಿಪಟೂರು: ಮಾರ್ಚ್ 2ರಂದು ಸೋಮವಾರ ತಿಪಟೂರು ನಗರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು, ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶದ ಮೂಲಕ ಬೆಳ್ಳಿ ಹಬ್ಬಆಚರಿಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು ತಿಪಟೂರಿನ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸೋಮವಾರ ಮಾರ್ಚ್ 2ರಂದು ನಗರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು ಕೊಡಿ ಸರ್ಕಲ್ ನಿಂದ ಬೈಕ್ ರ‍್ಯಾಲಿ ಮೂಲಕ ಸ್ವಾಗತಿಸಲಾಗುವುದು ಮತ್ತು ನಗರದ ಪ್ರಮುಖ ಮುಖ್ಯ ರಸ್ತೆಯಲ್ಲಿ ಸಮಾರಂಭ ನಡೆಯುವ ಕಂಚೇಘಟ್ಟ ರಸ್ತೆವರೆಗೆ ಜಿ.ಕೆ.ಬಾಬು ಲೇಔಟ್ ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿರುವ ವೇದಿಕೆಗೆ ಕರೆತರಲಾಗುವುದು ಎಂದರು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಒಂದಿಗೆ ಎನ್ ಡಿ ಎ ಅಭ್ಯರ್ಥಿ ಗಳು ರಾಜ್ಯದಲ್ಲಿ 140 ಸೀಟುಗಳನ್ನು ಗೆಲುವು ಸಾಧಿಸುವ ವಿಶ್ವಾಸವಿದೆಯೆಂದು ತಿಪಟೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಬಂದರೆ ಎನ್ ಡಿಎ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿದು ಗೆದ್ದು…

Read More

ಮಂಡ್ಯ: ಅದ್ದೂರಿ ಆಡಂಬರವಿಲ್ಲ, ಕೇಕ್ ಕತ್ತರಿಸಿ ಪಟಾಕಿ ಸಿಡಿಸಲಿಲ್ಲ, ಕಟೌಟ್ ಪ್ಲೆಕ್ಸ್ ಹಾಕಲಿಲ್ಲ, ಅಚ್ಚಹಸಿರಿನ ಸುಂದರ ವಾತಾವರಣದಲ್ಲಿ ಸುಮಧುರ ವಚನಗಾಯನದೊಂದಿಗೆ ಹಿರಿಯ ನಾಗರಿಕರು ವಾಯುವಿಹಾರಿಗಳ ಜೊತೆಗೂಡಿ ಸಸಿನೆಟ್ಟು ಪುಸ್ತಕ ವಿತರಿಸಿ ಸರಳವಾಗಿ ಮಾದರಿ ಜನ್ಮದಿನ ಆಚರಣೆ ಮಾಡಲಾಯಿತು. ಈ ಅಪರೂಪದ ಜನ್ಮದಿನಕ್ಕೆ ಮಂಡ್ಯ ನಗರದ ಪರಮಪೂಜ್ಯ ಡಾ.ಶ್ರೀಶಿವಕುಮಾರ ಮಹಾಸ್ವಾಮೀಜಿಯವರ ಭಾನುವಾರ ಸಂಜೆ ದೇವರವನ ಸಾಕ್ಷಿಯಾಯಿತು. ಕಾಯಕಯೋಗಿ ಫೌಂಡೇಶನ್ ಹಾಗೂ ಸಿದ್ದಗಂಗಾ ಶ್ರೀ ಸೇವಾಸಮಿತಿ ಆಯೋಜಿಸಿದ್ದ ಎಲ್ಲರೊಳಗೆ ಒಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜಮುಖಿ ಚಿಂತಕ ವಿನಯ್ ಅವರ 36ನೇ ಜನ್ಮದಿನಾಚರಣೆ ಪ್ರಯುಕ್ತದ ‘ ದಾಸೋಹ’  ಕಾರ್ಯಕ್ರಮ ವಿನೂತನವಾಗಿತ್ತು. ಉದ್ಯಾನವನದಲ್ಲಿ ಸಸಿನೆಟ್ಟು ಅಮೂಲ್ಯವಾದ ಪುಸ್ತಕಗಳನ್ನು ನಾಗರೀಕರಿಗೆ ವಿತರಿಸಿ ದಾಸೋಹಕ್ಕೆ ಚಾಲನೆ ನೀಡಿ ವಿನಯ್ ಮಾತನಾಡಿದರು. ಸಿದ್ದಗಂಗಾ ಶ್ರೀಗಳ ಅನ್ನ, ಅರಿವು, ಆಸರೆಯಂತಹ ತ್ರಿವಿಧ ದಾಸೋಹ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂತಹ ಶತಾಯುಷಿ ಸಂತರ ಸೇವಾ ಮಾರ್ಗ ನನಗೆ ಸ್ಪೂರ್ತಿದಾಯಕ ಎಂದರು. ಹಸಿದವರಿಗೆ ಅನ್ನ ನೀಡುವುದೇ ಧರ್ಮ ಎಂಬ ಸತ್ಯ ಸಂದೇಶವನ್ನು ಸಾರಿದ…

Read More

ಬಳ್ಳಾರಿ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಶಾರೀರಿಕ, ಮಾನಸಿಕವಾಗಿ ಸದೃಢರಾಗುವ ಮೂಲಕ ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಜೀವನದಲ್ಲಿ ಸಮಯ ಅಮೂಲ್ಯವಾಗಿದ್ದು, ಶಾಲಾ-ಕಾಲೇಜು ಮುಗಿದ ನಂತರವೇ ನಿಜವಾದ ಜೀವನ ಆರಂಭಗೊಳ್ಳುತ್ತದೆ. ಸಾಧಕರ ಜೀವನ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಸರಣಿ ಟ್ವೀಟ್ ಹಾಗೂ ಹೇಳಿಕೆಗಳ ಕುರಿತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅಧಿಕಾರಕ್ಕಾಗಿ ಕುರುಬ ಸಮಾಜವನ್ನು ಎಳೆದು ತರುವುದು ನ್ಯಾಯವಲ್ಲ, ಸಿದ್ದರಾಮಯ್ಯ ಅವರಿಗೆ ಕುರ್ಚಿ ಬಿಟ್ಟುಕೊಡುವ ಜಾಯಮಾನವೇ ಇಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ. ಜಾತಿ ರಾಜಕಾರಣದ ಆರೋಪ: ಸಿದ್ದರಾಮಯ್ಯ ಅವರು ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವಾಗ ಕುರುಬ ಸಮುದಾಯದ ಹೆಸರನ್ನು ಬಳಸುತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿದ್ದರಾಮಯ್ಯ ಬೆಳೆಯಲು ಕೇವಲ ಒಂದು ಸಮುದಾಯವಲ್ಲ, ಎಲ್ಲಾ ಸಮುದಾಯಗಳ ಬೆಂಬಲವಿದೆ. ಈಗ ಅಧಿಕಾರ ಉಳಿಸಿಕೊಳ್ಳಲು ಜಾತಿ ಕಾರ್ಡ್ ಬಳಸುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು ಈ ಸಂದೇಶವನ್ನು ವಿರೋಧ ಪಕ್ಷಗಳಿಗಿಂತ ಹೆಚ್ಚಾಗಿ, ತಮ್ಮನ್ನು ಸಿಎಂ ಸ್ಥಾನದಿಂದ ಇಳಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರಿಗೇ ನೀಡಿದಂತಿದೆ. ಅವರು ಈಗ ಕಾಂಗ್ರೆಸ್‌ನ ಹಳೆಯ ನಾಯಕರನ್ನೇ ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಅಧಿಕಾರ ದಾಹ: “ನಾನು ಸಿದ್ದರಾಮಯ್ಯ ಅವರ ನಡವಳಿಕೆಯನ್ನು ಜೆಡಿಎಸ್‌ನಲ್ಲಿದ್ದ ಕಾಲದಿಂದಲೂ…

Read More

ಇತ್ತೀಚಿನ ದಿನಗಳಲ್ಲಿ ಭಾರತೀಯರಲ್ಲಿ ಇನ್ಸುಲಿನ್ ಪ್ರತಿರೋಧ (Insulin Resistance) ಮತ್ತು ಫ್ಯಾಟಿ ಲಿವರ್ (ಕೊಬ್ಬಿನ ಪಿತ್ತಜನಕಾಂಗ) ಸಮಸ್ಯೆಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಹೊಟ್ಟೆಯ ಬೊಜ್ಜು, ವಿಪರೀತ ಸುಸ್ತು ಮತ್ತು ಸಿಹಿ ತಿನ್ನುವ ಹಂಬಲ ಇದರ ಆರಂಭಿಕ ಲಕ್ಷಣಗಳಾಗಿರಬಹುದು. ಇತ್ತೀಚೆಗೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ತಜ್ಞರು, ಭಾರತೀಯರ ಮೂರು ಪ್ರಮುಖ ತಪ್ಪು ಅಭ್ಯಾಸಗಳು ಲಿವರ್ ಆರೋಗ್ಯವನ್ನು ಹೇಗೆ ಹಾಳುಮಾಡುತ್ತಿವೆ ಎಂಬುದನ್ನು ವಿವರಿಸಿದ್ದಾರೆ. ಲಿವರ್ ಆರೋಗ್ಯವನ್ನು ಹಾಳುಮಾಡುವ ಆ 3 ತಪ್ಪುಗಳು: ತಡರಾತ್ರಿ ಊಟ ಮಾಡುವುದು:  ರಾತ್ರಿ ತಡವಾಗಿ ಊಟ ಮಾಡುವುದರಿಂದ ದೇಹದ ನೈಸರ್ಗಿಕ ಲಯ (Circadian Rhythm) ತಪ್ಪುತ್ತದೆ. ರಾತ್ರಿಯ ಸಮಯದಲ್ಲಿ ಇನ್ಸುಲಿನ್ ಸೂಕ್ಷ್ಮತೆ ಕಡಿಮೆಯಿರುತ್ತದೆ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ಕಾರ್ಟಿಸೋಲ್ ಮಟ್ಟ ಹೆಚ್ಚಾಗುತ್ತದೆ. ಇದು ಕಾಲಕ್ರಮೇಣ ಲಿವರ್‌ನಲ್ಲಿ ಕೊಬ್ಬು ಶೇಖರಣೆಯಾಗಲು ಕಾರಣವಾಗುತ್ತದೆ. ಆದ್ದರಿಂದ ರಾತ್ರಿ ಬೇಗ ಊಟ ಮಾಡುವ ಅಭ್ಯಾಸ ಮಾಡಿಕೊಳ್ಳಿ. ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಕೊರತೆ: ಅನೇಕ ಭಾರತೀಯರು ಬೆಳಗಿನ ಉಪಹಾರದಲ್ಲಿ ಕೇವಲ ಕಾರ್ಬೋಹೈಡ್ರೇಟ್ ಇರುವ ಆಹಾರವನ್ನೇ ಸೇವಿಸುತ್ತಾರೆ.…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ 15 ನೇ ಹಣಕಾಸು ಯೋಜನೆಯಲ್ಲಿ ಅನುಮೋದನೆ ಮಾಡಿದ್ದರು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಮತ್ತು ಜನರ ಆರೋಗ್ಯದ ಹಿತ ದೃಷ್ಟಿಯಿಂದ ಶೀಘ್ರವೇ ಕಟ್ಟಡ ಕಾಮಗಾರಿ ಆರಂಭ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಮಾರ್ಗದರ್ಶನ ನೀಡಿದ್ದರು. ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸದರಿ ಕಾಮಗಾರಿ ನಿರ್ವಹಿಸಲು ಗುತ್ತಿಗೆ ಕರಾರಿನಂತೆ ಟೆಂಡರ್ ಮುಖಾಂತರ ಗುತ್ತಿಗೆದಾರರಾದ ಶ್ರೀನಿವಾಸ್ ಮೂರ್ತಿಗೆ ಕಾರ್ಯದೇಶ ಸಹ ನೀಡಲಾಗಿದೆ. ಆರೋಗ್ಯ ಇಲಾಖೆಯಿಂದ ಅನುಮೋದನೆಯಾಗಿರುವ ನಕ್ಷೆಯಂತೆ ಕಟ್ಟಡವನ್ನು ನಿರ್ಮಿಸಲು ಕನಿಷ್ಠ 2400.00 ಚ.ಅಡಿಗಳಷ್ಟು ನಿವೇಶನ ಅವಶ್ಯಕತೆ ಇದ್ದ ಕಾರಣ ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ರವರ ಆದೇಶದಂತೆ ಸದರಿ ಗ್ರಾಮದ ಗ್ರಾಮಠಾಣಾದಲ್ಲಿ ಗ್ರಾಮಸ್ಥರ ಮತ್ತು ಸಾರ್ವಜನಿಕರ ಒಪ್ಪಿಗೆಯಂತೆ ಗ್ರಾಮದ ಅಭಿವೃದ್ಧಿಗೆ  ಆರೋಗ್ಯ ಮತ್ತು ಕುಟುಂಬ…

Read More

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತಿಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಸಂತ ಶ್ರೀ ಸೇವಾಲಾಲ್ ಮಹಾರಾಜರ ವೃತ್ತವನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ದುಂಗಾವತಿ ತಾಂಡದ ಶ್ರೀ ಬಾಲಬ್ರಹ್ಮಚಾರಿ ಚಂದ್ರು ಮಹಾರಾಜ ಸ್ವಾಮೀಜಿ ಹಾಗೂ ಹಂಪಸಾಗರದ ಶ್ರೀ ಷ.ಬ್ರ. ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರು ವಹಿಸಿದ್ದರು. ಪೂಜ್ಯ ಸ್ವಾಮೀಜಿಗಳು ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು. ಸಾಂಸ್ಕೃತಿಕ ವೈಭವದ ಮೆರವಣಿಗೆ: ನೂತನವಾಗಿ ಉದ್ಘಾಟನೆಗೊಂಡ ವೃತ್ತದಿಂದ ಆರಂಭವಾದ ಮೆರವಣಿಗೆಯು ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿತು. ಮೆರವಣಿಗೆಯ ಉದ್ದಕ್ಕೂ ವಿವಿಧ ವಾದ್ಯವೃಂದಗಳು ಮತ್ತು ಬಂಜಾರ ಸಮುದಾಯದ ಸಾಂಪ್ರದಾಯಿಕ ಕಲೆಗಳು ಮೆರುಗು ನೀಡಿದವು. ಹರಾವತ್ ತಾಂಡ, ರಾಮವತ್ ತಾಂಡ, ನಾಗಲಾಪುರ ತಾಂಡ, ದುಂಗಾವತಿ ತಾಂಡ ಮತ್ತು ದಿತ್ಯ ತಾಂಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರ ವಿರುದ್ಧ ಮಾಡಲಾಗಿದ್ದ ಲಂಚದ ಆರೋಪಗಳು ಸುಳ್ಳು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಒಪ್ಪಿಕೊಂಡಿದ್ದು, ಈ ಪ್ರಕರಣದಲ್ಲಿ ದಿಢೀರ್ ‘ಯೂಟರ್ನ್’ ಹೊಡೆದಿದ್ದಾರೆ. ತಪ್ಪೊಪ್ಪಿಗೆ: ಶಾಲಿನಿ ರಜನೀಶ್ ಅವರ ಮೇಲೆ ತಾನು ಮಾಡಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಯಾವುದೇ ಆಧಾರವಿಲ್ಲ ಮತ್ತು ಅವು ಸತ್ಯಕ್ಕೆ ದೂರವಾಗಿವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಲ್ಲಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಸಿಸಿಬಿ ವಿಚಾರಣೆ: ಸಿಸಿಬಿ ಪೊಲೀಸರು ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಈ ಹೇಳಿಕೆ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಎಂಬ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ವರ್ಗಾವಣೆ ಅಥವಾ ಇತರ ಕೆಲಸಗಳಿಗಾಗಿ ಲಂಚದ ಬೇಡಿಕೆ ಇಡಲಾಗಿದೆ ಎಂಬ ಗಂಭೀರ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದರು.…

Read More

ತುಮಕೂರು: ಮುಂದೆ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈಗಿನಿಂದಲೇ ತಳಮಟ್ಟದಿಂದ ಪಕ್ಷ ಸಂಘಟಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ 11 ವಿಧಾನಸಭಾ ಕ್ಷೇತ್ರಗಳಲ್ಲಿ 9 ಸ್ಥಾನಗಳನ್ನು ಗೆಲ್ಲಿಸಿ ತುಮಕೂರು ಜಿಲ್ಲೆ ಕೊಡುಗೆ ನೀಡಿದೆ ಅಂತಹ ಸುವರ್ಣ ಕಾಲ 2028ಕ್ಕೆ ಮರುಕಳಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು. ತಾಲ್ಲೂಕಿನ ನಾಗವಲ್ಲಿಯಲ್ಲಿ ಶನಿವಾರ ನಡೆದ ತುಮಕೂರು ಗ್ರಾಮಾಂತರ ಕ್ಷೇತ್ರದ ಜನರೊಂದಿಗೆ ಜನತಾದಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕಟ್ಟಿದ ಜೆಡಿಎಸ್ 25 ವರ್ಷ ಪೂರೈಸಿದೆ. ಇದರ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕು. ಎಂತಹ ಕಷ್ಟಕಾಲದಲ್ಲೂ ಕಾರ್ಯಕರ್ತರು ಪಕ್ಷವನ್ನು ಬಿಡದೆ ಬೆಂಬಲಿಸಿದ್ದಾರೆ. ಆದರೆ ಇಲ್ಲಿ ಬೆಳೆದು ಉನ್ನತ ಸ್ಥಾನಕ್ಕೆ ಏರಿದವರು ಪಕ್ಷ ಬಿಟ್ಟುಹೋಗಿದ್ದಾರೆ. ಆದರೆ ಪಕ್ಷದ ತತ್ವದಡಿ ಕಾರ್ಯಕರ್ತರಿಗೆ ರಾಜಕೀಯ ಅಧಿಕಾರ ಸಿಗಬೇಕು. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕು ಎಂದು ಸಲಹೆ…

Read More