Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ದೂರಿನ ಹಿನ್ನಲೆಯಲ್ಲಿ ಸ್ವಯಂ ಘೋಷಿತ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಧನಂಜಯ ಗುರೂಜಿ ಅವರನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದಾಗ ಹುಲಿ ಹೋಗಲು ಪತ್ತೆಯಾಗಿಲ್ಲ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ಶನಿಮಹಾತ್ಮ ದೇವಾಲಯದಲ್ಲಿ ಧನಂಜಯ್ ಗುರೂಜಿ ಅಧ್ಯಕ್ಷರಾಗಿದ್ದಾರೆ. ದೇವಾಲಯದ ಬಳಿ ಬಸವೇಶ್ವರ ಮಠ ಸ್ಥಾಪಿಸಿ ಗೂರುಜಿಯಾಗಿದ್ದು, ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸಿ ಕಾಣಿಸಿಕೊಂಡಿದ್ದಾರೆ. ಒಡವೆಗಳ ಜೊತೆ ಹುಲಿ ಉಗುರಿನ ಪೆಂಡೆಂಟ್ ಅನ್ನು ಧರಿಸಿ ಸಾಕಷ್ಟು ಸುದ್ದಿಯಾಗಿದ್ದರು. ಈ ರೀತಿ ಹುಲಿ ಉಗುರು ಧರಿಸಿರುವ ಕುರಿತು ಸಾಮಾಜಿಕ ಕಾರ್ಯಕರ್ತ ನಾಗರಾಜ್ ರಿಂದ ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಇಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಧನಂಜಯ್ಯ ಗುರುಜಿ ವಿಚಾರಣೆ ನಡೆಸಲಾಗಿದೆ. ಧನಂಜಯ್ಯ ಗುರೂಜಿಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಚಾರಣೆ ಮಾಡಿದ್ದಾರೆ. ಕುಣಿಗಲ್ ವಲಯ ಅರಣ್ಯಾಧಿಕಾರಿಗಳಿಂದ ನಡೆದ ವಿಚಾರಣೆ ವೇಳೆ ಹುಲಿ ಉಗುರು ಧರಿಸಿಲ್ಲ ಎಂಬ ಮಾಹಿತಿಯನ್ನು ಧನಂಜಯ್ಯ ನೀಡಿದ್ದಾರೆ.
ಬಾಗಲಕೋಟೆ: ಮೀಸಲಾತಿ ಬಗ್ಗೆ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್ ಆಗಿದೆ. ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ “ಕುಲಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ‘ ಕುಲಕುಲವೆಂದು ಬಡಿದಾಡದಿರಿ, ಕುಲದ ನೆಲೆಯನ್ನೇನಾದ್ರೂ ಬಲ್ಲಿರಾ? ಹಾಗೇ ನೋಡಿದರೆ ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದರು ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೀತಿದೆ. ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್ ನಲ್ಲಿ ಬಂದುಬಿಡುತ್ತೀರಾ” ಎಂದು ಹೇಳಿದ್ದಾರೆ. ಶಾಸಕ ಜಗದೀಶ್ ಹೇಳಿಕೆಯನ್ನು ದಲಿತಪರ ಸಂಘಟನೆ ಖಂಡಿಸಿದೆ. ಸಂಘಟನೆ ಕಾರ್ಯಕರ್ತರು ರಾತ್ರೋರಾತ್ರಿ ಬಿಜೆಪಿ ಶಾಸಕ ಜಗದೀಶ್ ಮನೆಗೆ ಮುತ್ತಿಗೆಗೆ ಯತ್ನಿಸಿದರು. ಜಮಖಂಡಿಯಲ್ಲಿ ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ನಿಮ್ಮ ಆಹಾರದಲ್ಲಿ ಅಶ್ವಗಂಧವನ್ನು ಸೇರಿಸಿದರೆ ತೂಕ ಬೇಗನೆ ಕಡಿಮೆಯಾಗುತ್ತದೆ. ಇದು ಚಯಾಪಚಯ ಕ್ರಿಯೆ ಹೆಚ್ಚಾಗುವಂತೆ ಮಾಡುತ್ತದೆ. ಆಮ್ಲಾ: ಪ್ರತಿದಿನ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ತೂಕ ತ್ವರಿತವಾಗಿ ಇಳಿಯುತ್ತದೆ. ಜಾಯಿಕಾಯಿ: ಇದನ್ನು ಪ್ರತಿದಿನ ಸೇವಿಸುವುದರಿಂದ ತೂಕ ನಷ್ಟವಾಗುತ್ತದೆ, ಚೆನ್ನಾಗಿ ನಿದ್ರೆ ಬರುತ್ತದೆ. ಇದರಿಂದ ಒತ್ತಡ ಕಡಿಮೆಯಾಗುತ್ತದೆ. ಶತಾವರಿ: ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಿ, ತೂಕ ಇಳಿಸುವುದು.
ಪಕ್ಷದ ಹೈಕಮಾಂಡ್ ನಡೆ ಕುರಿತು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಬುಧವಾರ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಲಿದ್ದಾರೆ. ಪಕ್ಷದ ವಿದ್ಯಮಾನಗಳ ಕುರಿತಂತೆ ಚರ್ಚಿಸಲು ತಮ್ಮನ್ನು ಭೇಟಿ ಆಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಬುಧವಾರ ದೆಹಲಿಗೆ ಹೋಗಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬಈಜಲು ಹೋಗಿ ಭದ್ರಾ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಲಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ಮಂಗಳವಾರ ವದಿಯಾಗಿದೆ. ಮೃತ ಯುವಕನನ್ನು ಬೆಂಗಳೂರಿನ ಶ್ರೀನಗರದ ನಿವಾಸಿ ಗೋಕುಲ್(25) ಎಂದು ಗುರುತಿಸಲಾಗಿದ್ದು, ಕಳಸ ಪೊಲೀಸರು, ಮುಳುಗು ತಜ್ಞರ ಸಹಾಯದಿಂದ ಯುವಕನ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ ಮತ್ತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಕೇರಳದ ಕೊಚ್ಚಿಯಲ್ಲಿ ಜೈಲರ್ ಸಿನಿಮಾ ನಟ ವಿನಾಯಗನ್ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾರೆ. ಹೀಗಾಗಿ ಕೊಚ್ಚಿ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಜೈಲರ್ ನಟ ವಿನಾಯಗನ್ ಬಂಧನ ಬಗ್ಗೆ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅ.24ರಂದು ನಟನನ್ನು ಬಂಧಿಸಲಾಗಿದೆ. ನಟ ವಿನಾಯಗನ್ ತನ್ನ ಅಪಾರ್ಟೆಂಟ್ ನಲ್ಲಿ ಕುಡಿದು ಗಲಾಟೆ ಮಾಡಿದ ಹಿನ್ನೆಲೆ ಆತನ ವಿರುದ್ಧ ದೂರು ದಾಖಲಿಸಲಾಗಿತ್ತು. ಹಾಗಾಗಿ ವಿನಾಯಗನ್ ಅವರನ್ನು ಬಂಧಿಸಲಾಗಿದೆ ಎಂದು ಕೇರಳದ ಪೊಲೀಸ್ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಏರ್ ಇಂಡಿಯಾ ಬೆಂಗಳೂರು ಮತ್ತು ಸಿಂಗಾಪುರ ನಡುವೆ ತಡೆರಹಿತ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. ಹೊಸ ಸೇವೆಯು ಬೆಂಗಳೂರು ಹಾಗೂ ಸಿಂಗಾಪುರ ನಡುವೆ ನೇರ ಸಂಪರ್ಕ ಹೊಂದಿದೆ. ಏ ಇಂಡಿಯಾದ AI392 ವಿಮಾನವು ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಹಾರಾಟ ಆರಂಭಿಸಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರಿಟರ್ನ್ ಫೈಟ್ AI393 ವಿಮಾನ ಸಿಂಗಾಪುರದಿಂದ ಬೆಳಿಗ್ಗೆ 6.40 ಕ್ಕೆ ಹೊರಟು ರಾತ್ರಿ 8.35 ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದೆ.
ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ ಒಂದು ಕೋಟಿ ರೂ. ವಂಚಿಸಿರುವ ಅತಿದೊಡ್ಡ ಹಗರಣವನ್ನು ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಬಯಲಿಗೆಳಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವರಾಜ್ ವಟಗಲ್ ಮತ್ತು ಆತನ ಪತ್ನಿ ಭೀಮವ್ವ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬಂಧಿತರಿಂದ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿಗೆ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾಜಿ ಸಚಿವ ಹೆಚ್. ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ್ ಗೌಡನ ಅಪಹರಣ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇನ್ಸ್ ಪೆಕ್ಟರ್ ಅಶೋಕ್, ಭೂಗತ ಪಾತಕಿ ಬಾಂಬೆ ರವಿ ಜೊತೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಹಫ್ತಾ ವಸೂಲಿ, ಬಡ್ಡಿ ವ್ಯವಹಾರ, ಬೆದರಿಕೆ ಹಾಕಿರುವ ಆರೋಪ ಕೂಡ ಇನ್ಸ್ ಪೆಕ್ಟರ್ ಅಶೋಕ್ ವಿರುದ್ಧ ಕೇಳಿ ಬಂದಿದೆ. ರೇವಣ್ಣ ಆಪ್ತನ ಅಪಹರಣ ಯತ್ನ ಪ್ರಕರಣದಲ್ಲಿ ಲೊಕೇಷನ್ ಸೇರಿದಂತೆ ಪ್ರತಿ ವಿಚಾರದಲ್ಲೂ ಆರೋಪಿಗಳಿಗೆ ಇನ್ಸ್ ಪೆಕ್ಟರ್ ಸಹಾಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು 8 ವಿದೇಶಿಗರು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ. ಆರ್. ಪುರ, ಸೋಲದೇವನಹಳ್ಳಿ, ಎಚ್ ಎಸ್ ಆರ್ ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 10 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ.