Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು. ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ…
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ ಎನ್ ಐಎ ತಂಡವು ಭಾನುವಾರ ಬಂಧಿಸಿರುವುದಾಗಿ ಮಾಹಿತಿ ನೀಡಿದೆ. ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತ ಆರೋಪಿ ತಮಿಳುನಾಡು ರಾಜ್ಯದ ರಾಮನಾಥಪುರಂ ಮೂಲದ ನಿವಾಸಿ ಮೊಹಮ್ಮದ್ ಇಮ್ರಾನ್ ಖಾನ್ (39) ಎಂದು ತಿಳಿಸಿದೆ. ಇದೇ ಪ್ರಕರಣದಲ್ಲಿ ಈತ ಜೂನ್ 2021 ರಿಂದಲೇ ಅಧಿಕಾರಿಗಳ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾನೆ ಎಂದು ಎನ್ಐಎ ತಿಳಿಸಿದೆ.
ಗೃಹ ಸಚಿವ ಜಿ ಪರಮೇಶ್ವರ್ ಆಪ್ತ, ಕಾಂಗ್ರೆಸ್ ಮುಖಂಡ ಎಂ. ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್ ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿ ಮಂಜುನಾಥ್, ನಾಗೇಶ್ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ.
ಭಾರತೀಯರು ಈಗ ವೀಸಾ ಇಲ್ಲದೆ ಶ್ರೀಲಂಕಾಕ್ಕೆ ಭೇಟಿ ನೀಡಬಹುದು! ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಶ್ರೀಲಂಕಾವು ಪೈಲಟ್ ಯೋಜನೆಯಡಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಅನುಮತಿಸುತ್ತದೆ ಎಂದು ದೇಶದ ವಿದೇಶಾಂಗ ವ್ಯವಹಾರಗಳ ಸಚಿವರು ಮಂಗಳವಾರ ಹೇಳಿದ್ದಾರೆ. ಈ ನಿರ್ಧಾರವನ್ನು ಶ್ರೀಲಂಕಾ ಕ್ಯಾಬಿನೆಟ್ ಅನುಮೋದಿಸಿದೆ ಎಂದು ಸಚಿವ ಅಲಿ ಸಬ್ರಿ ಹೇಳಿದ್ದಾರೆ. ತಕ್ಷಣದಿಂದ ಜಾರಿಗೆ ಬಂದಿರುವ ಪ್ರಾಯೋಗಿಕ ಯೋಜನೆಯು ಮಾರ್ಚ್ 31, 2024 ರವರೆಗೆ ಮುಂದುವರಿಯುತ್ತದೆ ಎಂದು ಸಚಿವರು ಹೇಳಿದರು. ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯದ ಪ್ರಕಾರ, ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದು ಈ ಕ್ರಮದ ಉದ್ದೇಶವಾಗಿದೆ. “ಮುಂಬರುವ ವರ್ಷಗಳಲ್ಲಿ ಪ್ರವಾಸಿಗರ ಆಗಮನವನ್ನು ಐದು ಮಿಲಿಯನ್ ಗೆ ಹೆಚ್ಚಿಸುವ ನಿರೀಕ್ಷೆಯಿದೆ” ಎಂದು ಸಚಿವಾಲಯವು ತಿಳಿಸಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರವಾಗಿದೆ. ಚಳಿಗಾಲ ಆರಂಭವಾಗುತ್ತಿದ್ದಂತೆ ವಾಯು ಮಾಲಿನ್ಯ ತೀವ್ರಗೊಂಡಿದೆ. ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗಿದೆ ಎಂದು ವರದಿಯಾಗಿದೆ. ವಾಯು ಗುಣಮಟ್ಟ ಸೂಚ್ಯಂಕ 266ಕ್ಕಿಂತ ಹೆಚ್ಚಿದೆ. ಸಾರ್ವಜನಿಕ ಸ್ಥಳಗಳಲ್ಲಿ ನೀರು ಸಿಂಪಡಿಸುವಂತೆ ದೆಹಲಿ ಸರ್ಕಾರ ಸೂಚನೆ ನೀಡಿದೆ. ಇನ್ನೂ ಎಂಟು ಸ್ಥಳಗಳನ್ನು ಹೊಸ ವಾಯುಮಾಲಿನ್ಯ ಹಾಟ್ ಸ್ಪಾಟ್ಗಳಲ್ಲಿ ಸೇರಿಸಲಾಗಿದೆ. ದೆಹಲಿಯ ನೆರೆಯ ರಾಜ್ಯಗಳಲ್ಲಿ ಕೃಷಿ ಅವಶೇಷಗಳನ್ನು ಸುಡುವುದರಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ಪಂಜಾಬ್ ಮತ್ತು ಹಿಮಾಲ್ ನಂತಹ ರಾಜ್ಯಗಳಲ್ಲಿ ಕೃಷಿ ಅವಶೇಷಗಳ ದಹನ ಮುಂದುವರಿದಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆ. ವಾಯು ಮಾಲಿನ್ಯವನ್ನು ತಡೆಯಲು ಸರ್ಕಾರ ತುರ್ತು ಕ್ರಮಗಳನ್ನು ಪ್ರಾರಂಭಿಸಿದೆ. ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಮುಂತಾದ ಪ್ರಸ್ತಾವನೆಗಳನ್ನು ಸರ್ಕಾರ ಮುಂದಿಡುವ ಸಾಧ್ಯತೆ ಇದೆ.
ಬೆಂಗಳೂರು: ವಿದ್ಯಾರ್ಥಿಗಳು ಎಂದಿಗೂ ತಾವು ಬೆಳೆದು ಬಂದ ಹಾಗೂ ಬೆಳೆಯುವ ದಾರಿ ಮರೆಯಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ನಗರದ ಯಲಹಂಕದಲ್ಲಿರುವ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಆವರಣದಲ್ಲಿ ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ ಹಾಗೂ ಫುಡ್ ಕೋರ್ಟ್ ಉದ್ಘಾಟಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು , “ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡರೆ ಯಾವುದೇ ಕೆಲಸಗಳು ಕಠಿಣವಲ್ಲ. ಸುಲಭವಾಗಿ ಗುರಿ ಮುಟ್ಟಬಹುದು. ಕೇವಲ ಧನಾತ್ಮಕ ಚಿಂತನೆಗಳ ಬಗ್ಗೆ ಯೋಚಿಸಬೇಕೆ ಹೊರತು, ನಕಾರಾತ್ಮಕ ಚಿಂತನೆಗಳ ಕುರಿತು ಒಂದು ಕ್ಷಣವೂ ಯೋಚಿಸಬಾರದು. ಮಹಾತ್ಮ ಗಾಂಧಿ ಅವರು ಹೇಳುತ್ತಾರೆ, “ನೀವು ನಿಮ್ಮನ್ನು ನಿಯಂತ್ರಣ ಮಾಡಿಕೊಳ್ಳಲು ನಿಮ್ಮ ಮೆದುಳನ್ನು ಬಳಸಿ, ಇತರರನ್ನು ನಿಯಂತ್ರಿಸಲು ಹೃದಯವನ್ನು ಬಳಸಿ” ಎಂದು. ಯಾವುದೇ ಕಾರಣಕ್ಕೂ ಇತರೇ ವಿಚಾರಗಳಿಂದ ಕಲುಷಿತರಾಗಬೇಡಿ, ಸ್ವಂತ ಆಲೋಚನೆ ಬೆಳೆಸಿಕೊಳ್ಳಿ. ಈ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ಶತ್ರುಬುದ್ಧಿವಿನಾಶಾಯ ದೀಪಜ್ಯೋತಿ ನಮೋಸ್ತುತೇ ಎನ್ನುವ…
ಮೈಸೂರು: ರಾಜ್ಯ ಸರ್ಕಾರದ ಐದು ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಕೂಡ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳನ್ನು ನಿರ್ಮಾಣ ಮಾಡಲಾಗಿದೆ. ಜಂಬೂ ಸವಾರಿ ಮುನ್ನ ವಿಶೇಷ ಟ್ಯಾಬ್ಲೊಗಳು ಸಾಗಲಿವೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಟ್ಯಾಬ್ಲೊಗಳು ಆಗಮಿಸಿವೆ.
ಮಧ್ಯಪ್ರದೇಶದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಚಿವ ರುಸ್ತಮ್ ಸಿಂಗ್ ಪಕ್ಷ ತೊರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ ಶರ್ಮಾ ಅವರಿಗೆ ಪತ್ರ ಬರೆದಿರುವ ಅವರು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮುಂದಿನ ತಿಂಗಳು ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರ ರಾಜೀನಾಮೆ ನೀಡಲಾಗಿದೆ. ರುಸ್ತಮ್ ಸಿಂಗ್ ಅವರ ಪುತ್ರ ರಾಕೇಶ್ ಸಿಂಗ್ ಮೊರೆನಾ ಕ್ಷೇತ್ರದಿಂದ ಬಿಎಸ್ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರುಸ್ತಮ್ ಸಿಂಗ್ ಗ್ವಾಲಿಯರ್-ಚಂಬಲ್ ಪ್ರದೇಶದ ಗುರ್ಜರ್ ನಾಯಕ. 2003ರಲ್ಲಿ ಐಪಿಎಸ್ ಹುದ್ದೆ ತ್ಯಜಿಸಿ ಬಿಜೆಪಿ ಸೇರಿದರು. 2003-2008 ಮತ್ತು 2013-2018ರ ಅವಧಿಯಲ್ಲಿ ಶಾಸಕರಾಗಿದ್ದರು. ಅವರು 2003 ರಿಂದ 2008 ರವರೆಗೆ ಮತ್ತು 2015 ರಿಂದ 2018 ರವರೆಗೆ ಎರಡು ಬಾರಿ ಸಚಿವರಾಗಿದ್ದರು. ಮೊರೆನಾದಲ್ಲಿ ತಮ್ಮ ಮಗನ ಪರ ಪ್ರಚಾರ ಮಾಡಲು ಅವರು ಬಿಜೆಪಿ ತೊರೆಯುತ್ತಾರೆ ಎಂಬ ವದಂತಿಗಳು ಈ ಹಿಂದೆ ಇದ್ದವು.
ಲಂಡನ್ ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಬೆಂಗಳೂರುಮೂಲದ ವಿಹಾನ್ ತಾಳ್ಯ ವಿಕಾಸ್ ಗೆ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ. ಜೇಡದ ಜೊತೆಗೆ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ ಗೆ ಪ್ರಶಸ್ತಿ ಸಿಕ್ಕಿದೆ. ಪುರಾತನ ದೇವಸ್ಥಾನದ ಗೋಡೆ ಮೇಲೆ ಮರದ ಕಾಂಡದ ಜೇಡವು ತನ್ನ ಬೇಟೆ ತಪ್ಪಿಸಿಕೊಳ್ಳದಂತೆ ತಡೆಯುವ ಚಿತ್ರವನ್ನು ಸೆರೆ ಹಿಡಿದಿದ್ದ. ಹಾಗೇ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ಕಿಸಿದ್ದ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಈ ಇವೆಂಟ್ ಮ್ಯಾನೇಜೆಂಟ್ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿತ್ತು.