Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಅಕ್ಟೋಬರ್ 10 ರಂದು ಮಣಿಪುರದ ವಿವಿಧ ಭಾಗಗಳಲ್ಲಿ ಸೇನಾ ಸಮವಸ್ತ್ರವನ್ನು ಹೋಲುವ ಗೇರ್ಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 80 ಬುಲೆಟ್ ಪ್ರೂಫ್ ಜಾಕೆಟ್ ಗಳು, ಸುಮಾರು 100 ನಕಲಿ ಮಿಲಿಟರಿ ಸಮವಸ್ತ್ರಗಳು, ಮಿಲಿಟರಿ ಬೂಟುಗಳು, 11 ವಾಕಿ-ಟಾಕಿಗಳು, ಮೂರು ರೇಡಿಯೋ ಸೆಟ್ ಗಳು ಮತ್ತು ಅಶ್ರುವಾಯು ಶೆಲ್ ಗಳನ್ನು ಶೋಧದ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಸಂಘಟಿತ ದಾಳಿ ನಡೆಸಲು ಉಗ್ರರು ಪೊಲೀಸ್ ಕಮಾಂಡೋ ಸಮವಸ್ತ್ರಗಳನ್ನು ರಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜೈಪುರದಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮೋದಿಯನ್ನು ಸೋಲಿಸುವುದೇ ನಿಮ್ಮ ಗುರಿಯಾಗಿದ್ದರೆ, ಮೋದಿಯನ್ನು ಎಂದಿಗೂ ಪ್ರಧಾನಿಯನ್ನಾಗಿ ಮಾಡಬಾರದು ಎಂಬುದು ನನ್ನ ಗುರಿ, ನೀವು ಎಂದಾದರೂ ಬಿಜೆಪಿಗೆ ಮತ ಹಾಕಿದ್ದೀರಾ ಎಂಬ ನನ್ನ ಪ್ರಶ್ನೆಗೆ, ಮತ ಹಾಕಿಲ್ಲ ಎಂಬ ಉತ್ತರ ನಿಮ್ಮದಾಗಿದ್ದರೆ, ಇಷ್ಟು ವರ್ಷ ಬಿಜೆಪಿ ಹೇಗೆ ಗೆದ್ದಿತು? ಎಂದು ಕೇಳಿದ್ದಾರೆ.
ಸಂಘರ್ಷ ವಲಯ ಗಾಜಾಕ್ಕೆ ಭಾರತ ನೆರವು ಕಳುಹಿಸಿದೆ. ಭಾರತೀಯ ವಾಯುಪಡೆಯ ವಿಮಾನವು ಔಷಧಿಗಳು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳೊಂದಿಗೆ ಈಜಿಪ್ಟ್ ಗೆ ಮರಳಿತು. ರಫಾ ಕಾರಿಡಾರ್ ಗಾಜಾಕ್ಕೆ ಹೆಚ್ಚು ಅಗತ್ಯವಿರುವ ನೆರವನ್ನು ತರುತ್ತದೆ. ಪ್ಯಾಲೆಸ್ತೀನ್ ಜನರಿಗೆ ಭಾರತ 40 ಟನ್ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ 6.5 ಟನ್ ಔಷಧಿ ಮತ್ತು ಸಂಬಂಧಿತ ವಸ್ತುಗಳನ್ನು ರವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿಕ್ಸಿಲ್ ತಿಳಿಸಿದ್ದಾರೆ. ಇದು ಅಗತ್ಯ ಜೀವ ಉಳಿಸುವ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್ ಗಳು, ಮಲಗುವ ಚೀಲಗಳು, ಟಾರ್ಪೌಲಿನ್ ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ನೀರಿನ ಶುದ್ಧೀಕರಣ ಸರಬರಾಜುಗಳನ್ನು ಒಳಗೊಂಡಿದೆ. ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರವಾಣಿ ಸಂಭಾಷಣೆಯ ನಂತರ ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವನ್ನು ತಲುಪಿಸಲಾಗುತ್ತಿದೆ.
ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇವತ್ತಿನ ದಿನ ಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇದಿನೆ ಅವರನ್ನು ಬೈಯ್ಯೋದು, ಇವರನ್ನು ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ ಎಂದರು.
ಹೆಚ್.ಡಿ. ದೇವೇಗೌಡರಿಗೆ ಇನ್ನೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡ್ತೀನಿ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರುಪರಿಶೀಲನೆ ಮಾಡಿ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಏಕೆಂದರೆ ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾಗೆ ಗೌರವ ಕೋಡೋಣ. ಅಕ್ಟೋಬರ್ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡ್ತೇನೆ, ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಮಾಜಿ ಎಂಎಲ್ ಸಿ ಇಬ್ರಾಹಿಂ ತಿಳಿಸಿದರು.
ಚಂದ್ರಯಾನ 3 & ಆದಿತ್ಯ L1 ಯಶಸ್ವಿ ಉಡಾವಣೆ ನಂತರ, ISRO ಮಾನವರನ್ನು ಕಕ್ಷೆಗೆ ಕಳುಹಿಸಲು. ಗಗನ್ ಯಾನ ಯೋಜನೆಗಳನ್ನು ಸಿದ್ಧಪಡಿಸುತ್ತಿದೆ. ಈ ಪ್ರಯೋಗಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಗಗನ್ ಯಾನ ಉಡಾವಣೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು, ವಿಜ್ಞಾನಿಗಳಿಂದ ಹಿಡಿದು ಪೈಲಟ್ ಗಳವರೆಗೆ ಎಲ್ಲರೂ ಮಹಿಳೆಯರಿಗೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಘೋಷಿಸಿದ್ದಾರೆ.
ತುಮಕೂರು: ಮಂಡಿ ನೋವಿನಿಂದ ಬಳಲುತ್ತಿದ್ದ ಅಂತಾರಾಷ್ಟ್ರೀಯ ರಗ್ಬಿ (ಅಮೇರಿಕನ್ ಫುಟ್ ಬಾಲ್) ಕ್ರೀಡಾಪಟುವಿಗೆ ವೈದ್ಯರು ಆದ ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ತಮ್ಮ ಸಹ ದ್ಯೋಗಿ ವೈದ್ಯರೊಂದಿಗೆ ಸೇರಿ ಮಂಡಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಕ್ರೀಡಾಪಟುವಿಗೆ ನೆರವಾಗಿದ್ದಾರೆ. ಆರ್ಥಿಕ ಹೊರೆಯನ್ನು ತಪ್ಪಿಸಿದ್ದಾರೆ. ವೈದ್ಯ ವೃತ್ತಿಯಿಂದ ರಾಜಕಾರಣಕ್ಕೆ ಬಂದಿ ರುವ ಶಾಸಕ ಡಾ.ಎಚ್.ಡಿ.ರಂಗನಾಥ್, ವೃತ್ತಿ ಪ್ರಾಮುಖ್ಯತೆಯನ್ನು ಮರೆಯದೇ, ಆಮೇರಿಕನ್ ಫುಟ್ಬಾಲ್ ಕ್ರೀಡಾ ಪಟುವಿಗೆ ಮಂಡಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮಾನ ವೀಯತೆ ಮರೆದಿದ್ದಾರೆ. ಮೂಲತಃ ಕುಣಿಗಲ್ ತಾಲೂಕಿನ ಹುತ್ತಿದುರ್ಗ ಯಲಿಯೂರು ಗ್ರಾಮದ ಹಾಲಿ ಬೆಂಗಳೂರಿನ ಟೆಂಪೋ ಚಾಲಕ ರಂಗಸ್ವಾಮಿ ಅವರ ಮತ್ರಿ ಆರ್.ಭವ್ಯ ರಗ್ನಿ ಕ್ರೀಡಾಪಟು ಆಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಅಭ್ಯಾಸದ ವೇಳೆ ಬಿದ್ದು ಬಲ ಭಾಗದ ಮಂಡಿ ನೋವು ಮಾಡಿ ಕೊಂಡಿದ್ದರು. ಈಗ ಮಂಡಿ ನೋವು ತೀವ್ರಗೊಂಡು ನೋವಿನಂದ ಬಳಲುತ್ತಿದ್ದರು, ಭವ್ಯ ಅವರಿಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಶನಿವಾರ ಶಾಸಕ ಡಾ.ಎಚ್ ರಂಗನಾಥ್, ದಾ. ಸಚಿನ್…
ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಅಚ್ಚರಿ ಮೂಡಿಸಿದೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾತಿ ಗಣತಿ ಮಾಹಿತಿ ಬಿಡುಗಡೆಯಾಗಿರಲಿಲ್ಲ. ಆದಿವಾಸಿಗಳು ಮತ್ತು ಹಿಂದುಳಿದವರ ಬೆಂಬಲವಿಲ್ಲದೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಈಗ ಎಲ್ಲರಿಗೂ ಅರ್ಥವಾಗಿದೆ ಎಂದರು. ಮಧ್ಯಪ್ರದೇಶದಲ್ಲಿ ಸೀಟು ವಿವಾದದ ನಂತರದ ವಿಭಜನೆಯ ನಂತರ ಟೀಕೆಗಳು ಬಂದಿವೆ. ಜಾತಿ ಗಣತಿಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ನೀಡದೇ ಇರುವುದು ಇದೇ ಕಾಂಗ್ರೆಸ್ ಪಕ್ಷ. ಹಿಂದುಳಿದ ಮತ್ತು ಬುಡಕಟ್ಟು ಜನರ ಬೆಂಬಲವಿಲ್ಲದೆ ಗೆಲ್ಲಲು ಸಾಧ್ಯವಿಲ್ಲ ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಈಗ ಜಾತಿ ಗಣತಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿರುವುದು ಅಚ್ಚರಿ ಮೂಡಿಸಿದೆ. ತಾವು ಹುಡುಕುತ್ತಿರುವ ಮತಗಳು ತಮ್ಮ ಬಳಿ ಇಲ್ಲ ಎಂಬುದು ಕಾಂಗ್ರೆಸ್ ಗೆ ಮನವರಿಕೆಯಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಆಮ್ಲಾ ಹೊರತುಪಡಿಸಿ ಉಳಿದೆಲ್ಲ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೀಟು ನೀಡದೆ ಘೋಷಿಸಿರುವುದು ಎಸ್ ಪಿಯನ್ನು ಕೆರಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಸೀಟು ಗೆಲ್ಲಲು ಕಾಂಗ್ರೆಸ್ ಸಿದ್ಧವಿಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ…
ಮುಂಬೈ: ತರಬೇತಿ ವೇಳೆ ವಿಮಾನವೊಂದು ಪತನಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುಣೆಯ ಗೊಜುಬಾವಿ ಎಂಬಲ್ಲಿ ನಡೆದಿದೆ. ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ತರಬೇತಿಯಲ್ಲಿದ್ದ ಪೈಲಟ್ ಮತ್ತು ತರಬೇತಿ ನೀಡುತ್ತಿದ್ದ ಶಿಕ್ಷಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು: ಪ್ರತಿಷ್ಠಿತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವೈಮಾನಿಕ ಪ್ರದರ್ಶನ ಅಕ್ಟೋಬರ್ 23 ರಂದು ನಡೆಯಲಿದೆ. ಏರ್ ಶೋನಲ್ಲಿ ಲೋಹದ ಹಕ್ಕಿಗಳ ಹಾರಾಟದೊಂದಿಗೆ ಸೈನಿಕರ ನಾನಾ ಸಾಹಸಗಳನ್ನು ಜನರು ಕಣ್ತುಂಬಿಕೊಳ್ಳಬಹುದಾಗಿದೆ. ಅ.23ರಂದು ನಡೆಯುವ ಏರ್ ಶೋನ ರಿಹರ್ಸಲ್ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. 5 ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಲೋಕದ ಹಕ್ಕಿಗಳ ಆರ್ಭಟ ಶುರುವಾಗುತ್ತಿದ್ದು, ಬಾನಂಗಳದಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ ತೋರಲಿದೆ. ಅ.23 ರಂದು (ಸೋಮವಾರ) ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ .23ರಂದು ನಡೆಯುವ ಏರ್ ಶೋನ ರಿಹರ್ಸಲ್ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ರಿಹರ್ಸಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಮೂರುಗಂಟೆ ಒಳಗೆ ವೀಕ್ಷಣೆಗೆ ಬಂದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಸುಮಾರು 1 ಗಂಟೆಗಳ ಕಾಲ ಸಾಹಸ ಪ್ರದರ್ಶನ ನಡೆಯಲಿದೆ.