Author: admin

ತುಮಕೂರು: ಬಳ್ಳಾರಿ ಫೈರಿಂಗ್ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಎಸ್ಪಿಯಾಗಿ ಅಧಿಕಾರವಹಿಸಿಕೊಂಡ ಒಂದೇ ದಿನಕ್ಕೆ ಅಮಾನತ್ತು ಶಿಕ್ಷೆಗೆ ಗುರಿಯಾಗಿದ್ದ ಐಪಿಎಸ್ ಅಧಿಕಾರಿ ಪವನ್ ಸಜ್ಜನ್ ಅವರು ಮನನೊಂದು ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಯತ್ನ ನಡೆಸಿದ್ದಾರೆಂಬ ಸುಳ್ಳು ಸುದ್ದಿ ಶನಿವಾರ ವ್ಯಾಪಕವಾಗಿ ಹರಡಿತ್ತು.  ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ವದಂತಿ ಏನು? ಅಮಾನತ್ತಾದ ಬಳಿಕ ಬೇಸರಗೊಂಡಿದ್ದ ಪವನ್ ಸಜ್ಜನ್ ಬಳ್ಳಾರಿಯಿಂದ ಸಿರಾ ತಾಲ್ಲೂಕಿನ ಬರಗೂರು ಅಗ್ರಹಾರದ ಖಾಸಗಿ ಫಾರಂ ಹೌಸ್‌ನಲ್ಲಿ ತಂಗಿದ್ದರು. ಈ ವೇಳೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ ನಡೆಸಿದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು ಎಂದು ರಾಜ್ಯದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಸುಳ್ಳು ಸುದ್ದಿ ಪ್ರಕಟವಾಗಿತ್ತು. ಇದರ ಬೆನ್ನಲೇ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿ ಹತ್ತಿಕೊಂಡಿತ್ತು. ಜಿ.ಪರಮೇಶ್ವರ್ ಸ್ಪಷ್ಟನೆ: ಈ ಕುರಿತಾಗಿ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬಳ್ಳಾರಿ ಘಟನೆ, ಅಮಾನತ್ತು ಪ್ರಕ್ರಿಯೆಯಿಂದ ಸಹಜವಾಗಿ ಐಪಿಎಸ್ ಅಧಿಕಾರಿ ಪವನ್ ಸಜ್ಜನ್ ಬೇಸರಗೊಂಡಿದ್ದಾರೆ. ಮಾಧ್ಯಮದವರು…

Read More

ಮಧುಗಿರಿ: ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣದಿಂದ ಈ ಭಾಗದಲ್ಲಿ ಇತಿಹಾಸ ಸೃಷ್ಟಿಯಾಗಲಿದೆ, ಕಾಮಗಾರಿಯು ಜನರ ಮನಸ್ಸಿನಲ್ಲಿ ಸದಾಕಾಲ ನೆನಪಿನಲ್ಲಿ ಉಳಿಯುವಂಥದ್ದಾಗಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು. ಕೊಡಿಗೇನಹಳ್ಳಿ ಹೋಬಳಿ, ಮುದ್ದೇನಹಳ್ಳಿ, ಶಾನ ಗಾನಹಳ್ಳಿ ನಡುವೆ ಜಯಮಂಗಲಿ ನದಿಗೆ ಅಡ್ಡಲಾಗಿ 18.50 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಕಮ್ ಬ್ರಿಡ್ಜ್, ಕುಮುದ್ವತಿ ನದಿಗೆ ಅಡ್ಡಲಾಗಿ ತಿಂಗಳುರು-ಕಲಿದೇವಪುರ ನಡುವೆ 8 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಕಮ್ ಬ್ರಿಡ್ಜ್ ಹಾಗೂ ದೊಡ್ಡೇರಿ ಹೋಬಳಿಯ ಜಕ್ಕೇನಹಳ್ಳಿ ಮತ್ತು ಶಂಕರಪುರ ನಡುವೆ 3 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣ ಸೇರಿ ಒಟ್ಟು 29.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುದ್ದೇನಹಳ್ಳಿಯಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದು ಎರಡೂವರೆ ವರ್ಷಗಳು ಕಳೆದಿದ್ದು ಹಳ್ಳಿಗಾಡಿನ ಜನರಿಗೆ ಅಗತ್ಯವಿರುವ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ತಾಲೂಕಿನಲ್ಲಿ ಹರಿಯುವ…

Read More

ತುಮಕೂರು: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ತುಮಕೂರು ಗ್ರಾಮಾಂತರದ ದೇವರಾಯನದುರ್ಗದ ಮೀಸಲು ಅರಣ್ಯ ಪ್ರದೇಶ ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ‘ನಾಮದ ಚಿಲುಮೆ’ ಬಳಿ ಏಕಕಾಲಕ್ಕೆ 11 ಕೋತಿಗಳು ಶವವಾಗಿ ಪತ್ತೆಯಾಗಿರುವುದು ಕೇವಲ ಅರಣ್ಯ ಇಲಾಖೆಯನ್ನು ಮಾತ್ರವಲ್ಲದೆ ಪರಿಸರ ಪ್ರೇಮಿಗಳನ್ನೂ ಆತಂಕಕ್ಕೆ ತಳ್ಳಿದೆ. ಇದು ಕೇವಲ ಸಾವುಗಳಲ್ಲ, ಬದಲಾಗಿ ಮಾನವ ಮತ್ತು ವನ್ಯಜೀವಿಗಳ ನಡುವೆ ನಡೆಯುತ್ತಿರುವ ಸಂಘರ್ಷದ ಮತ್ತೊಂದು ಕರಾಳ ಮುಖ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯ ಹಿನ್ನೆಲೆ: ಕಳೆದ ಶುಕ್ರವಾರ ಸಂಜೆ ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದರು. ಶುಕ್ರವಾರ ಸಂಜೆಯಿಂದ ತಡರಾತ್ರಿಯವರೆಗೆ ನಡೆದ ಶೋಧ ಕಾರ್ಯ ಶನಿವಾರವೂ ಮುಂದುವರಿಯಿತು. ಅಂತಿಮವಾಗಿ ಐದು ಸಾಮಾನ್ಯ ಮಂಗಗಳು ಮತ್ತು ಎರಡು ಹನುಮಾನ್ ಲಂಗೂರ್‌ಗಳು ಸೇರಿದಂತೆ ಒಟ್ಟು 11 ಕೋತಿಗಳ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳು ಒಂದೇ ವಲಯದಲ್ಲಿ ಸಿಕ್ಕಿರುವುದು ಇವುಗಳ ಸಾವಿನ ಹಿಂದೆ ಯಾವುದೋ ಸಂಚು ಇರುವುದನ್ನು ಪುಷ್ಟೀಕರಿಸುವಂತಿದೆ. ವಿಷಪ್ರಾಶನದ ಶಂಕೆ: ಪತ್ತೆಯಾದ ಕೋತಿಗಳ…

Read More

ತುಮಕೂರು: ನವೋದಯದ ಮಹಾನ್ ವ್ಯಕ್ತಿತ್ವ ಸಾವಿತ್ರಿಬಾಯಿ ಅವರ 195 ನೇ ಜನ್ಮದಿನವನ್ನು  ಇಂದು ತುಮಕೂರಿನ ವಿವಿಧ ಮೈದಾನ, ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್ ಹಾಗೂ ಬಡಾವಣೆಗಳಲ್ಲಿ ಪ್ರತಿರೋಧ ದಿನವನ್ನಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ,  ಸಾವಿತ್ರಿಬಾಯಿ ಫುಲೆ ಅವರು ಕೇವಲ ಶಾಲೆಯನ್ನು ತೆರೆಯಲಿಲ್ಲ. ಬದಲಾಗಿ ಸಾವಿರಾರು ವರ್ಷಗಳ ಶೋಷಣೆ ವಿರುದ್ಧ ಕೇವಲ ಒಂದು ಪುಸ್ತಕ ಮತ್ತು ಎದೆಯ ತುಂಬಾ ಧೈರ್ಯವನ್ನು ಅಸ್ತ್ರವನ್ನಾಗಿ  ಮಾಡಿಕೊಂಡು ಯುದ್ಧವನ್ನೇ ಸಾರಿದರು. ಅವರು ಪುಣೆಯ ಬೀಡೆವಾಡ ಶಾಲೆಗೆ ನಡೆದುಕೊಂಡು ಹೋಗುವಾಗ ಜನ ಅವರಿಗೆ ಕೆಸರು, ಸಗಣಿ ಮತ್ತು ಕಲ್ಲುಗಳನ್ನ ಎಸೆದಿದ್ದಾರೆ, ಆದರೆ ಅವರು ಯಾವುದೇ ಅವಮಾನಕ್ಕೆ ಹಿಂಜರಿಯದೆ  ಅಂದು ಹೆಣ್ಣುಮಕ್ಕಳ ಹಾಗೂ ಕೆಳ ವರ್ಗದ ಮಕ್ಕಳಿಗಾಗಿ ಶಾಲೆಗಳನ್ನು ತೆರೆದರು. ಜೊತೆಗೆ  ಅಂದಿನ ಸಮಾಜದಲ್ಲಿದ್ದ ಆಳವಾಗಿ ಬೀರೂರಿದ್ದ  ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು ಹಾಗೂ  ಅನ್ಯ ಜಾತಿಯ ವಿವಾಹವನ್ನು ಬೆಂಬಲಿಸಿ ಸ್ವತಃ ತನ್ನ ಮಗನಿಗೆ ಅನ್ಯ ಜಾತಿ ವಿವಾಹವನ್ನು ಮಾಡಿಸುವುದರ ಮೂಲಕ ಸಮಾಜದಲ್ಲಿ ಜಾತಿ ವ್ಯವಸ್ಥೆ,…

Read More

ಬೆಂಗಳೂರು: ಮಧ್ಯರಾತ್ರಿ ರಸ್ತೆ ಬದಿ ಕಾಣಿಸಿದ ಮಹಿಳೆಯನ್ನು ಕರೆದೊಯ್ದು ಜೀಪ್‌ನಲ್ಲೇ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಸಹಾಯಕ ಸಬ್ ಇನ್‌ ಸ್ಪೆಕ್ಟರ್‌ ಗೆ 62 ವರ್ಷ ತುಂಬಿರುವ ಜೊತೆಗೆ ವಯೋವೃದ್ಧ ತಾಯಿ, ಪತ್ನಿಯ ಆರೈಕೆ ಮತ್ತು ಮಕ್ಕಳ ಮದುವೆ ಮಾಡಬೇಕಾದ ಕಾರಣ ಪರಿಗಣಿಸಿರುವ ಹೈಕೋರ್ಟ್ ಶಿಕ್ಷಾ ಅವಧಿಯನ್ನು 10 ವರ್ಷಕ್ಕೆ ಇಳಿಸಿದೆ. ತನಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ತುಮಕೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಂದಿನ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಶಿಕ್ಷಾವಧಿಯನ್ನು ಇಳಿಸಿದೆ. ಇದರಿಂದ ಈಗಾಗಲೇ 9 ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಪೊಲೀಸ್ ಅಧಿಕಾರಿ ಇನ್ನೊಂದು ವರ್ಷ ಶಿಕ್ಷೆ ಪೂರೈಸಿದ ಬಳಿಕ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಮಿತ್ ರಾಣಾ ಮತ್ತು ಹರಿಯಾಣ ಸರ್ಕಾರದ ನಡುವಿನ ಪ್ರಕರಣದಲ್ಲಿ ಕಾನೂನಿನಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಲ್ಪಟ್ಟ ಸಂದರ್ಭದಲ್ಲಿ ಶಿಕ್ಷೆ ಪ್ರಮಾಣ ಇಳಿಸಲು…

Read More

ತುಮಕೂರು: ಬ್ಲ್ಯಾಕ್ ಮೇಲ್‌ಗೆ ಹೆದರಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿರಾ ತಾಲ್ಲೂಕು ಕಳ್ಳಂಬೆಳ್ಳದಲ್ಲಿ ನಡೆದಿದೆ. ಕಳ್ಳಂಬೆಳ್ಳದಲ್ಲಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಯ ಸಾವಿಗೆ ಮುಳುವಾಗಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಹಂಸಲೇಖ ಅವರು ಮಲ್ಲಿಕಾರ್ಜುನ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಹಂಸಲೇಖ ಭಯಗೊಂಡು ಮಗನೊಂದಿಗೆ ಮನೆ ತೊರೆದು ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ…

Read More

ತುಮಕೂರು: ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೀಡುವ ಧನಸಹಾಯಕ್ಕೆ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಆಸಕ್ತರು ಈಗ ಜನವರಿ 9ರವರೆಗೆ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಾಡಿನ ಭಾಷಾ ಸಂವರ್ಧನೆ, ಸಂಗೀತ, ಜಾನಪದ, ನೃತ್ಯ ಹಾಗೂ ವಿವಿಧ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವವರಿಗೆ ಈ ಧನಸಹಾಯ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಮತ್ತು ಸಂಸ್ಥೆಗಳು ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವೆಬ್‌ಸೈಟ್: www.Sevasindhu.karnataka.gov.in ಅರ್ಜಿಗೆ ಸಂಬಂಧಿಸಿದ ಹೆಚ್ಚಿನ ಮಾರ್ಗಸೂಚಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅರ್ಜಿ ಸಲ್ಲಿಕೆ ಅಥವಾ ಯೋಜನೆಯ ಬಗ್ಗೆ ಯಾವುದೇ ಗೊಂದಲಗಳಿದ್ದಲ್ಲಿ ಸಾರ್ವಜನಿಕರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು: ದೂರವಾಣಿ ಸಂಖ್ಯೆ: 0816-2275204 ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್ ಕು.…

Read More

ಪಾವಗಡ:  ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ದಿಯೇ ಶಿಕ್ಷಣ  ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ ಖ್ಯಾತ ವೈದ್ಯ ಡಾ.ಜಿ.ವೆಂಕಟರಾಮಯ್ಯ ತಿಳಿಸಿದರು ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜು ಅವರಣದಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಪಾವಗಡ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಪಾವಗಡ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪಾವಗಡ ಇವರ ಸಂಯುಕ್ತಾಶ್ರಯದಲ್ಲಿ 2025–26 ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ  ತಾಲ್ಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಪಾವಗಡ ತಾಲ್ಲೂಕು ಬರಪೀಡಿತ, ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿ ಪಡೆದಿದ್ದು, ಇಂತಹ ಪ್ರದೇಶದಲ್ಲಿ ಇಲ್ಲಿನ ಮಕ್ಕಳು ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ ಮಾಡಲಿ ಎಂಬ ಉದ್ದೇಶವಿರಿಸಿಕೊಂಡು ನಾನು  ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿದೆ, ಕಳೆದ ಹಲವಾರು ವರ್ಷ ಗಳಿಂದ ತಾಲ್ಲೂಕಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸೇವೆ ನೀಡಿದ ತೃಪ್ತಿ ನನಗಿದೆ, ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ನೂರಾರು ಮಕ್ಕಳು ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಉನ್ನತ ಸ್ಥಾನ…

Read More

ಸರಗೂರು:  ಕೋರೆಗಾಂವ್‌ ಘಟನೆಯು ಮಹರ್‌ ಸೈನಿಕರ ಹೋರಾಟವನ್ನು ಸ್ಮರಿಸುತ್ತದೆ. ಇತಿಹಾಸದಲ್ಲಿ ಹುದುಗಿದ್ದ ಮಹರ್ ಸೈನಿಕರ ಚರಿತ್ರೆಯನ್ನು ಅಂಬೇಡ್ಕರ್‌ ಅವರು ಅಧ್ಯಯನ ನಡೆಸಿ ಮುನ್ನಲೆಗೆ ತಂದರು’ ಎಂದು ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಸ್ಮರಿಸಿದರು. ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಬುಧವಾರದಂದು ವಿಶ್ವ ಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಬುಧವಾರ ದಂದು ಭೀಮಾ ಕೋರೆಗಾಂವ್ ವಿಜಯೋತ್ಸವ ವಿಜೃಂಭಣೆಯಿಂದ ನಡೆಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಪೇಶ್ವೆ ಸೈನ್ಯದ ವಿರುದ್ಧ ದಲಿತ ಮಹರ್ ಸೈನಿಕರ ಗೆಲುವನ್ನು ಈ ವಿಜಯೋತ್ಸವವು ಸ್ಮರಿಸುತ್ತದೆ. ಈ ಹೋರಾಟವು ಇಂದಿಗೂ ದಲಿತ ಸಮುದಾಯಕ್ಕೆ ಮಾದರಿಯಾಗಿದೆ. ಆತ್ಮವಿಶ್ವಾಸವನ್ನು ತುಂಬಲಿದೆ ಎಂದು ಹೇಳಿದರು. ದೇಶದಲ್ಲಿ ಕೆಲವರು ಜ.1ರಂದು ಹೊಸ ವರ್ಷವಾಗಿ ಸಂಭ್ರಮಿಸುವರು. ನಾವು ಪೇಶ್ವೆಗಳ ವಿರುದ್ಧ ಮಹರ್ ಸೈನಿಕರು ಹೋರಾಟ ನಡೆಸಿ ವಿಜಯ ಸಾಧಿಸಿದ ದಿನವಾಗಿ ಆಚರಿಸುತ್ತೇವೆ’ ಎಂದು ಹೇಳಿದರು. ದಲಿತ ಸಮುದಾಯವನ್ನು ಅವಮಾನಿಸಿದ ಪೇಶ್ವೆಗಳ ವಿರುದ್ಧ ಆತ್ಮಗೌರವಕ್ಕಾಗಿ ಹೋರಾಡಿದ ದಿನವೇ ಕೋರೆಗಾಂವ್ ವಿಜಯೋತ್ಸವದ…

Read More

ಸರಗೂರು:   ಆದಿ ಕರ್ನಾಟಕ ಮಹಾಸಭಾ ತಾಲ್ಲೂಕು ಘಟಕದಿಂದ ಪಟ್ಟಣದಲ್ಲಿ ಗುರುವಾರ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಮಹಾರ್ ವೀರಯೋಧರ ಭೀಮ ಕೋರೆಗಾಂವ್ 208ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮ ನಡೆಸಲಾಯಿತು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಜಮಾವಣೆಗೊಂಡ ದಲಿತ ಸಮಾಜದ ಮುಖಂಡರು ಬೈಕ್ ರ‍್ಯಾಲಿಯಲ್ಲಿ ಹೊರಟ ಮೆರವಣಿಗೆಯು ಪಟ್ಟಣ ಪಂಚಾಯಿತಿ ಮುಂದೆ ಕೊನೆಗೊಂಡಿತು. ನಂತರ ಪಟಾಟಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿ, ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಹೋರಾಡಲು 28 ಸಾವಿರ ಪೇಶ್ವೆಗಳನ್ನು 500 ಮಹಾರ್ ಸೈನಿಕರು ಸೋಲಿಸಿ ವಿಜಯಪತಾಕೆ ಹಾರಿಸಿದ ದಿನವನ್ನು ಕೋರೆಗಾಂವ್ ವಿಜಯೋತ್ಸವವಾಗಿ ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಮುಂದಾದ ಮಹಾರ್ ಸೈನಿಕರ ಧೈರ್ಯ ಸಾಹಸ ಮೆಚ್ಚುವಂತಾಗಿದೆ ಎಂದು ಹೇಳಿದರು. ಮಹಾಸಭಾದ ಮಾಜಿ ಅಧ್ಯಕ್ಷ ಶಿವಣ್ಣ ಮಾತನಾಡಿ,…

Read More