Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು:”ನಾನು ಮತ್ತು ನನ್ನ ದಾಖಲೆಗಳು ಎರಡೂ ಕ್ಲೀನ್ ಇವೆ. ಬಿಜೆಪಿಯ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವ ಬಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣ ಹಾಗೂ ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಅವರು ಈ ರೀತಿ ಪ್ರತಿಕ್ರಿಯಿಸಿದರು; “ಬಿಜೆಪಿಯ ಕುತಂತ್ರದಿಂದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣವನ್ನ ಬಲವಂತವಾಗಿ ನನ್ನ ಮೇಲೆ ಹಾಕಲಾಗಿದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಇದ್ದ ಅಡ್ವೋಕೇಟ್ ಜನರಲ್ ಅವರೇ ‘ಇದು ಸಿಬಿಐ’ಗೆ ನೀಡುವಂತಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೂ ಕಾನೂನು ಬಾಹಿರವಾಗಿ ಸಿಬಿಐಗೆ ಪ್ರಕರಣ ವಹಿಸಿ, ನನ್ನ ಮೇಲೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು'” ಎಂದರು. “ಶೇ.90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ನ್ಯಾಯಾಲಯದ ಮುಂದೆ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ…
ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಆಳವಡಿಸಲಾಗಿದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ಅನಧಿಕೃತ ಫ್ಲೆಕ್ಸ್ ಮತ್ತು ಬಾನರ್ ಗಳನ್ನು ಆಳವಡಿಸಿದ್ದು, ಫ್ಲೆಕ್ಸ್ ಮತ್ತು ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳು ಆಳವಡಿಸಲು ಪಾಲಿಕೆಯಿಂದ ಆಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದರೆ ನೇರ ಹೊಣೆಗಾರನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರೇಸ್ಕೋರ್ಸ್ ರಸ್ತೆಯ ಖನಿಜ ಭವನದ 2ನೇ ಮಹಡಿಯಲ್ಲಿ ಇಂದು ಕರ್ನಾಟಕ ಸರ್ಕಾರದ 5ನೇ ರಾಜ್ಯ ಹಣಕಾಸು ಆಯೋಗದ ಕಾರ್ಯಾಲಯದ ಉದ್ಘಾಟನೆ ಮಾಡಲಾಯಿತು. ಸಮಾರಂಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಸಿ.ನಾರಾಯಣಸ್ವಾಮಿ, ರಾಜ್ಯ 5ನೇ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ರಾಜ್ಯ ಲೆಕ್ಕ ಪತ್ರ ಇಲಾಖೆ ನಿವೃತ್ತ ನಿಯಂತ್ರಕರು ಹಾಗೂ ಸದಸ್ಯರಾದ ಎಸ್.ಆರ್.ಪೋಂಡೆ, ರಾಜ್ಯ ಹಣಕಾಸು ಆಯೋಗದ ಕಾರ್ಯದರ್ಶಿಗಳಾದ ಉಜ್ವಲ್ಕುಮಾರ್ ಘೋಷ್ ಹಾಗೂ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಕಛೇರಿಯ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು : ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ ‘ ಯೋಜನೆ ಆರಂಭಿಸಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನೂತನ ಯೋಜನೆಗೆ ಚಾಲನೆ ನೀಡಿ, ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆ ಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬ ಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು. ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.
ಬೆಂಗಳೂರು: ನಗರದಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದು, ತಕ್ಷಣವೇ ಹುಕ್ಕಾ ಬಾರ್ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ವಕೀಲರಾದ ಲೋಹಿತ್ ಒತ್ತಾಯಿಸಿದರು. ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇರುವ ಹುಕ್ಕಾಬಾರ್ಗಳನ್ನು ನಿಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ ಒಂದು ತಿಂಗಳ ನಂತರ, ನಗರದ ಹುಕ್ಕಾಬಾರ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ, ಸಚಿವರು ಬರಿ ಹೇಳಿಕೆ ನೀಡುತ್ತಿದ್ದಾರೆ, ಆದರೆ ಇವು ಆದೇಶಗಳಾಗಿ ಬದಲಾಗುತ್ತಿಲ್ಲ ಎಂದರು. ಗಾಂಜಾ ವಿಚಾರದಲ್ಲಿ ರಾಜ್ಯದಲ್ಲಿ ಪ್ರತಿ ದಿನ 100 ರಿಂದ 150 ಪ್ರಕರಣ ದಾಖಲಾಗುತ್ತಿವೆ. ಈ ಗಾಂಜಾ ಸೇವನೆಗೆ ಹುಕ್ಕಾ ಬಾರ್ ಸುರಕ್ಷಿತ ತಾಣಗಳಾಗಿವೆ. ಗಾಂಜಾ ಮಿಶ್ರಣ ಮಾಡಿ ಹುಕ್ಕಾ ಸೇವನೆ ಮಾಡಲಾಗುತ್ತಿದೆ. ಮಧ್ಯರಾತ್ರಿ 2-3 ಗಂಟೆವರೆಗೂ ಇವು ತೆರೆದಿರುತ್ತವೆ, ಇದಕ್ಕೆ ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಇಂದು…
ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಬುಧವಾರ ಆದೇಶಿಸಿದೆ. ಬೈಂದೂರು ತಾಲೂಕಿನ ಹೆರಂಜಾಲು ಗ್ರಾಮದ ಗಿರೀಶ್(24) ಶಿಕ್ಷೆಗೆ ಗುರಿಯಾದ ಆರೋಪಿ. 15 ವರ್ಷ ವಯಸ್ಸಿನ ನೊಂದ ಬಾಲಕಿ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸಮಾಡಿಕೊಂಡಿದ್ದು, ತನ್ನ ತಾಯಿ ಮನೆಗೆ ಹೋಗಿ ಬರುತ್ತಿರುವ ವೇಳೆ ನೆರೆಮನೆಯ ಗಿರೀಶ್ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುತ್ತೇನೆಂದು ತಿಳಿಸಿದ್ದನು. 2021ರ ಆಗಸ್ಟ್ ತಿಂಗಳಲ್ಲಿ ಬೈಕ್ನಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಆತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದನು. ಇದರ ಪರಿಣಾಮ ಆಕೆ ಗರ್ಭ ಧರಿಸಿದ್ದರು. ಆಕೆಯ ದೇಹದ ಬದಲಾವಣೆಯನ್ನು ಗಮನಿಸಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂತು.…
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾಮದಿಂದ ಸುಮಾರು ಅರ್ಧ ಮೈಲಿ ದೂರದಲ್ಲಿ ಕೊರಟಗೆರೆಗೆ ಮಾರ್ಗವಾಗಿದ್ದ ಪ್ಯಾಟೇದಾರಿಯ ಎಡ ಭಾಗದಲ್ಲಿ ಹತ್ತಿಮರದ ಬಳಿ ಜಯರಾಮಯ್ಯನವರ ಜಮೀನಿನಲ್ಲಿ ಶಿಲ್ಪ ನೆಡಲಾಗಿದೆ. ಬ್ರಿಟೀಷ್ ಸರ್ವೆ ದಾಖಲೆಯ ಪ್ರಕಾರ ಇದು ಹಿಂದೆ ದೇಗುಲವಾಗಿತ್ತು ಎಂದು ತಿಳಿದುಬರುತ್ತದೆ. ಆದರೆ ಇಂದು ದೇಗುಲ ಪಾಳು ಬಿದ್ದಿದ್ದು ಬಳಸಿದ್ದ ಕಲ್ಲುಕಂಬಗಳು, ತೊಲೆಗಳು ಮತ್ತು ಚಪ್ಪಡಿಗಳು ಅಲ್ಲೇ ಬಿದ್ದಿವೆ. ಶಿಲ್ಪವು ಸುಮಾರು ಮೂರು ಅಡಿ ಎತ್ತರ ಮತ್ತು ಐದು ಅಡಿ ಅಗಲದ ಕಲ್ಲಿನಿಂದ ಮಾಡಲ್ಪಟ್ಟಿದೆ. ಮೇಲ್ಭಾಗದ ಇಕ್ಕೆಲದಲ್ಲಿ ಸೂರ್ಯಚಂದ್ರರ ಜೊತೆಗೆ ಎರಡು ರಂಧ್ರಗಳಿದ್ದು ವಿಜಯನಗರ ಕಾಲಘಟ್ಟ ಎಂದು ತಿಳಿಯಬಹುದು. ಶಿಲ್ಪದಲ್ಲಿ ವ್ಯಕ್ತಿಯೋರ್ವ ಅಶ್ವಾರೂಢನಾಗಿದ್ದು ಬಲಗೈನಲ್ಲಿ ಭರ್ಜಿಯನ್ನು ಎಡಗೈನಲ್ಲಿ ಕುದುರೆಯ ಲಗಾಮನ್ನು ಹಿಡಿದಿದ್ದಾನೆ. ನೀಳಮುಡಿಯಿದ್ದು ಕರ್ಣಕುಂಡಲ, ಕಂಠಿಹಾರ, ತೋಳ್ಬಂದಿ, ಕೈಕಡಗ, ಕಾಲೊಂದಿಗೆ ಮುಂತಾದ ಆಭರಣಗಳಿಂದ ಅಲಂಕೃತಗೊಳಿಸಲಾಗಿದೆ. ಕುದುರೆ ಸವಾರನ ಮುಂದೆ ನಾಟ್ಯ ಭಂಗಿಯ ನರ್ತಕಿಯ ಶಿಲ್ಪವಿದೆ. ಭರತನಾಟ್ಯ ಶೈಲಿಯ ವಸ್ತ್ರವನ್ನು ಧರಿಸಿದ್ದಾಳೆ. ಒಂದು ಕೈಯಲ್ಲಿ ಕನ್ನಡಿಯನ್ನು ಹಿಡಿದಿದ್ದು…
ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಸಚಿವರು, ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ, ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೆ ರಾಜೀನಾಮೆ ಸಲ್ಲಿಸಬೇಕು. ಸಿಬಿಐ ತನಿಖೆ ನಡೆಯಲಿದೆ. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆ- ಸಂದರ್ಭಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದು ನುಡಿದರು. ಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ ಸಿಎಂ ಅವರ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಾವು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ. ಇವತ್ತಿನ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡದಿದ್ದರೆ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟು ಒತ್ತಾಯಿಸಲಿದ್ದೇವೆ ಎಂದು ವಿವರಿಸಿದರು. ಇವತ್ತು ಹೈಕೋರ್ಟಿನಲ್ಲಿ ಒಂದು ಆದೇಶ ಹೊರಗೆ…
ಬೆಳಗಾವಿ: “ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ, “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ಉಳಿದಂತೆ ಮಾಧ್ಯಮಗೊಷ್ಠಿಯಲ್ಲಿ ಡಿಸಿಎಂ ಅವರು ಹೇಳಿದ್ದಿಷ್ಟು; “ಬೆಳಗಾವಿಯಲ್ಲಿ ಇಂದು ಈ ಭಾಗದ ವಿವಿಧ ನೀರಾವರಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಸಭೆ ಮಾಡಿ ಚರ್ಚಿಸಿದ್ದೇನೆ. ಈ ಭಾಗದಲ್ಲಿ ಘಟಪ್ರಭ, ಮಾರ್ಕಂಡೇಯ, ಹಿಪ್ಪರಗಿ, ಆಲಮಟ್ಟಿ ಜಲಾಶಯಗಳಲ್ಲಿ ಶೇ.90 ರಷ್ಟು ನೀರು ತುಂಬಿದೆ. ಮಲಪ್ರಭದಲ್ಲಿ ಮಾತ್ರ ಶೇ. 52ರಷ್ಟಿದೆ. ಈ ಭಾಗದಲ್ಲಿ ನೀರಾವರಿ ಇಲಾಖೆಯ ಹುದ್ದೆಗಳ ನೇಮಕಾತಿ ಸಮಸ್ಯೆ ಇದೆ. ಒಟ್ಟು 1322 ಹುದ್ದೆಗಳು ಮಂಜೂರಾಗಿದ್ದು, 671 ಭರ್ತಿಯಾಗಿದ್ದು, 651 ಹುದ್ದೆಗಳು ಖಾಲಿ ಇವೆ. ಬೆಂಗಳೂರಿಗೆ ಹೋದ ಮೇಲೆ ಈ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತೇನೆ. ಯಾವ ಕಾಮಗಾರಿಗಳನ್ನು…