Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನಂದಿನಿ ನಾಯ್ಕ (30) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಲೋಕೇಶ್ ನಾಯ್ಕ (34) ಕೊಲೆ ಆರೋಪಿಯಾಗಿದ್ದಾನೆ. ಇಬ್ಬರ ನಡುವೆ ಗಲಾಟೆ ನಡೆದಿದೆ ಇದೇ ಕಾರಣಕ್ಕೆ ಆರೋಪಿ ಏಕಾಏಕಿ ಚಾಕುವಿನಿಂದ ಕತ್ತಿನ ಬಳಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಹೊರಗೆ ಓಡಿ ಬಂದಿದ್ದು, ಜನ ಸೇರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಕೊಲೆ ಮಾಡಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಹೋಟೆಲ್ ಒಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೆಶ್ ನಾಯ್ಕ ಕಳೆದ ಮೂರು ದಿನಗಳಿಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಬೆಂಗಳೂರು : ಹೆಚ್ಐವಿ ಸೋಂಕಿತ ಎಂದು ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ ಪಿಸಿಆ ಮೂಲಕ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಬಾಧಿತ ಉದ್ಯೋಗಿಯನ್ನು ಹೆಚ್ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಅದೇಶಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿರುವುದರಿಂದ ಈ ಸಂಬಂಧ ಸ್ಪಷ್ಟನೆ ಹೊರಡಿಸಿರುವ ಸರ್ಕಾರ, ಈ ಆದೇಶ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಿಎಂ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು.
ಬೆಂಗಳೂರು: ಸತೀಶ್ ಜಾರಕಿಹೊಳಿ ಅವರು 20 ಶಾಸಕರ ಜೊತೆ ವಿದೇಶ ಪ್ರವಾಸ ಹೋಗಲು ಸಿದ್ದರಾಗಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್, ಅವರೇನೋ ಸ್ನೇಹಿತರು ಫಾರಿನ್ ಕಂಟ್ರಿಗೆ ಹೋಗುತ್ತಿರಬಹುದು. ವಿದೇಶಕ್ಕೆ ಹೋಗೋದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು. ಐಟಿ ದಾಳಿಯಲ್ಲಿ ಸಿಕ್ಕ ಹಣದ ವಿಚಾರವಾಗಿ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಅವರು ಆರೋಪ ಮಾಡುತ್ತಾರೆ. ಸಿಬಿಐಗೆ ಕೊಡಬೇಕು ಅಂತಿದರೇ ಐಟಿ ಡಿಪಾರ್ಟ್ಮೆಂಟ್ ನವರೇ ಕೊಡುತ್ತಾರೆ. ಪಂಚರಾಜ್ಯಗಳಿಗೆ ಹಣ ಕಳಿಸುತ್ತಾರೆ ಅಂತ ಹೇಳುತ್ತಾರೆ. ಅವಕಾಶ ಸಿಕ್ಕಾಗ ಬಿಜೆಪಿಯವರು ಹೀಗೆ ಹೇಳುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
ತುಮಕೂರು: ನಗರದ ಹೊರವಲಯದ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆಯೊಂದು ಬಹುದೊಡ್ಡ ಬಾವಲಿಯೊಂದನ್ನು ಬೇಟೆಯಾಡಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಸಂಜಯ್ ಗುಬ್ಬಿ ಮತ್ತು ತಂಡ ಅಳವಡಿಸಿದ್ದ ಕ್ಯಾಮೆರಾದಲ್ಲಿ ಹೊಳೆಮತ್ತಿ ನೇಚರ್ ಫೌಂಡೇಶನ್ ಹಾಗೂ ನೇಚರ್ ಕನ್ನರ್ವೇಷನ್ ಫೌಂಡೇಶನ್ ವತಿಯಿಂದ ಆಗಸ್ಟ್- ಸೆಪ್ಟೆಂಬರ್ ಅವಧಿಯಲ್ಲಿ ಚಿರತೆ ಬೇಟೆಯಾಡುವಂತಹ ದೃಶ್ಯ ಕಂಡುಬರುತ್ತದೆ. ಈ ರೀತಿಯಾದ ಅಪರೂಪದ ದೃಶ್ಯ ಇದೇ ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾನ್ಯವಾಗಿ ಚಿರತೆಗಳು ಪ್ರಾಣಿಗಳನ್ನು ಬೇಟೆಯಾಡುತ್ತವೆ.ಚಿರತೆಗಳು ಹಲವು ವಿಧದ ಪ್ರಾಣಿಗಳನ್ನು ಭಕ್ತಿಸುವುದು ವೈಜ್ಞಾನಿಕವಾಗಿ ದಾಖಲಾಗಿದೆ. ಕಡವೆ, ಸಾರಂಗ, ಕಾಡು ಹಂದಿ, ಕುರಿ, ಮೇಕೆ, ನಾಯಿ, ಮೊಲ, ಮುಳ್ಳುಹಂದಿ, ಚಿಪ್ಪು ಹಂದಿಯನ್ನು ಬೇಟೆಯಾಡುತ್ತವೆ. ಆದರೆ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿಯ ಚಿರತೆ ದೊಡ್ಡ ಬಾವಲಿಯನ್ನೂ ಬೇಟೆಯಾಡಿರೋದು ಕಂಡುಬಂದಿದೆ. ಸಾಮಾನ್ಯವಾಗಿ ದೇವರಾಯನ ದುರ್ಗಾ ಅರಣ್ಯ ದಲ್ಲಿ ಕಂಡುಬರುವ (ಹಾಲಕ್ಕಿ) ಎಂದು ಕರೆಲಾಗುವ ಈ ದೊಡ್ಡ ಬಾವಲಿಗಳು 1.5 ಕೆ.ಜಿಯಷ್ಟು ತೂಕವಿರುತ್ತವೆ. ರಕ್ಕೆಗಳನ್ನು ಹರಡಿದರೆ ಐದು ಅಡಿಗಳಷ್ಟು ವಿಸ್ತಾರವಾಗಿದೆ.…
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ತಂಗುದಾಣದ ಸಮೀಪ ಭಿಕ್ಷುಕನ ಬಳಿ ಸಾವಿರಾರು ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಮೂಟೆಯಲ್ಲಿ ಗಾಂಜಾ ಸೊಪ್ಪಿನ ಶಂಕೆ: ತಂಗುದಾಣದ ಬಳಿ ಗುರುಸಿದ್ದಪ್ಪನ ವರ್ತನೆ ಮತ್ತು ಹಳೆಯ ಚೀಲದಲ್ಲಿ ಗಾಂಜಾಸೊಪ್ಪು ಇರುವುದಾಗಿ ಶಂಕಿಸಿ ಎಎಸೈ ಹನುಮಂತರಾಯಪ್ಪ ಮತ್ತು ಮುಖ್ಯಪೇದೆ ರಾಮಕೃಷ್ಣಯ್ಯ ವಿಚಾರಣೆ ನಡೆಸಿದ್ದರು. ಈ ವೇಳೆ ಭಿಕ್ಷುಕನ ಮೂಟೆಯಲ್ಲಿ 50 ಸಾವಿರಕ್ಕೂ ಅಧಿಕ ಚಿಲ್ಲರೇ ಹಣ ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಿದ್ದರಬೆಟ್ಟದ ತಪ್ಪಲಿನಲ್ಲೇ ಇರುವ ತಂಗುದಾಣ ಮತ್ತು ರಸ್ತೆಬದಿಯ ಮರದ ಕೆಳಗಡೆ ಕಳೆದ ವಾರದಿಂದ ಕೊಳಕು ಹರಿದ ಬಟ್ಟೆಯಲ್ಲಿಯೇ ಗುರುಸಿದ್ದಪ್ಪ ತನ್ನ ಚೀಲದೊಂದಿಗೆ ವಾಸವಿದ್ದನು. ಈತ ಎಲ್ಲಿಗೆ ಹೋದ್ರು ಹಳೆಯ ಚೀಲವನ್ನು ಜೊತೆಯಲ್ಲೇ ಕೊಂಡೊಯ್ಯುತ್ತಿದ್ದ. ಸ್ಥಳೀಯರಿಗೆ ವೃದ್ದನ ಮೇಲೆ ಅನುಮಾನ ಬಂದು ಚೀಲದಲ್ಲಿ ಗಾಂಜಾದ ಸೋಪ್ಪು ಇದೆ ಎಂದು ಶಂಕಿಸಿ 112ಕ್ಕೆ ದೂರವಾಣಿ ಕರೆ ಮಾಡಿದ್ದರು. ಪೊಲೀಸರಿಗೆ ಮಾಹಿತಿ ಲಭ್ಯವಾಗಿ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.…
ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ದಲಿತ ವ್ಯಕ್ತಿಯ ಮೇಲೆ ನಗಾರಿಯನ್ನು ಹೋರಿಸಿ ಸುವರ್ಣೀಯ ವ್ಯಕ್ತಿಯೊಬ್ಬನು ಅದನ್ನು ಬಾರಿಸಿಕೊಂಡು ಊರಿಲ್ಲ ಸುತ್ತಿರುವ ಘಟನೆ ಸುದ್ದಿಯು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಈ ಸಂಬಂಧ ತುರುವೇಕೆರೆ ತಾಲೂಕಿನ ದಂಡಾಧಿಕಾರಿಗಳಾದ ವೈ ಎಮ್ ರೇಣು ಕುಮಾರ್ ರವರು ಕೋಳಘಟ್ಟ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿಯನ್ನು ಪರಿಶೀಲನೆ ಮಾಡಿದರು. ಇದೇ ವೇಳೆ ದಲಿತರು ಮತ್ತು ಸವರ್ಣಿಯರಿಂದ ಹೇಳಿಕೆಗಳನ್ನು ಪಡೆದು ದಲಿತರ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯಿಂದ ಇರಿ ಹಾಗೇನಾದರೂ ಮುಂದಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸೌಹಾರ್ದತೆಯಿಂದ ಜೀವನ ನಡೆಸಲು ಈ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸೌಹಾರ್ದಯತ ಸಭೆ ಹಾಗೂ ಅಸ್ಪೃಶ್ಯತಾ ಅರಿವು ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು. ವರದಿ: ಸುರೇಶ್ ಬಾಬು ಎಂ.…
ತುರುವೇಕೆರೆ: ಶಾಸಕ ಎಂ.ಟಿ.ಕೃಷ್ಣಪ್ಪನವರೇ ನಿಮ್ಮ ಅಧಿಕಾರಾವಧಿ 20 ವರ್ಷಗಳಲ್ಲಿ ತುರುವೇಕೆರೆ ತಾಲ್ಲೂಕಿನ ದಲಿತ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯ ಇಲ್ಲದಿರುವುದು ದುರಂತ. ಕೆಟ್ಟ ರಾಜಕೀಯ ಮಾಡುವುದನ್ನು ಬಿಟ್ಟು ಅಭಿವೃದ್ಧಿಯ ಕಡೆ ಗಮನಹರಿಸಿ ಎಂದು ಸಿ.ಎಸ್. ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಮೇಲನಹಳ್ಳಿ ಮಂಜಯ್ಯ ಆಕ್ರೋಶ ವ್ಯಕ್ತಪಡಿಸಿದರು. ಬೆಮೆಲ್ ಕಾಂತರಾಜು ಅವರ ವಿರುದ್ಧ ವರ್ಗಾವಣೆ ದಂಧೆ ಆಪಾದನೆಯ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಅವರು, ಕೃಷ್ಣಪ್ಪನವರ ಬೆಂಬಲಿಗರು ಬೆಮೆಲ್ ಕಾಂತರಾಜುರವರ ಬಗ್ಗೆ ಆರೋಪಗಳು ಹಾಗೂ ಹಗುರವಾಗಿ ಮಾತನಾಡಿದ್ದಾರೆ. ಇದು ಖಂಡನೀಯವಾಗಿದೆ. ಕಾಂತರಾಜುರವರು ಈ ತಾಲ್ಲೂಕಿನ ಶಾಸಕರಲ್ಲ, ತಾಲ್ಲೂಕು ಆಡಳಿತ ಕೃಷ್ಣಪ್ಪನವರ ಕೈನಲ್ಲಿ ಇದೆಯೇ ವಿನಃ ಕಾಂತರಾಜುರವರ ಬಳಿ ಇಲ್ಲ. ಅವರು ವರ್ಗಾವಣೆಯ ದಂಧೆಮಾಡುತ್ತಿಲ್ಲ, ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವವಂತ ಕಾರ್ಯಕರ್ತ. ನೀವು ಶಾಸಕರಾಗಿ ಇಂತಹ ಕೆಳಮಟ್ಟದ ಆಪಾದನೆಗಳನ್ನು ಮಾಡಬೇಡಿ ಎಂದರು. ತಾಲ್ಲೂಕಿನಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಿಮ್ಮ ಬೆಂಬಲಿಗರು ಮೂರು ನಾಲ್ಕು ಬೋರ್ವೆಲ್ ಗಳನ್ನು ಓರ್ವ ವ್ಯಕ್ತಿಯೇ ಕೊರೆಸಿಕೊಂಡಿದ್ದಾರೆ. ಇದನ್ನೇ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ…
ತುಮಕೂರು: ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲರಿ ಅಂಗಡಿ ಕಳ್ಳತನಕ್ಕೆ ಯತ್ನಿಸಿರೋ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕೆ.ಜಿ.ಟೆಂಪಲ್ ನಲ್ಲಿ ನಡೆದಿದೆ. ಲಕ್ಷ್ಮೀ ಜ್ಯುವೆಲರಿ ಶಾಪ್ ನಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿರುವ ಚೋರರು ಜ್ಯುವೆಲರಿ ಅಂಗಡಿಯ ಬಾಗಿಲು ಮುರಿದಿದ್ದಾರೆ. ಸ್ಥಳೀಯರನ್ನು ಕಂಡು ಖದೀಮರು ಬೈಕ್ ಹಾಗೂ ಗ್ಯಾಸ್ ಕಟ್ಟರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಇದೇ ರೀತಿ ಕಳ್ಳತನ ನಡೆದಿತ್ತು. ಕೆ.ಜಿ ಟೆಂಪಲ್ ಭವಾನಿ ಜ್ಯುವೆಲರಿ ಶಾಪ್ ನಲ್ಲಿ ಕಳ್ಳತನ ನಡೆದಿತ್ತು. 6 ಕೆಜಿ ಬೆಳ್ಳಿ ಆಭರಣ ದೋಚಲಾಗಿತ್ತು. ಇದೀಗ ಮತ್ತೊಂದು ಕಳ್ಳತನ ಯತ್ನ ಪತ್ತೆಯಾಗಿದ್ದು ವ್ಯಾಪಾರಸ್ಥರು ಆತಂಕದಲ್ಲಿದ್ದಾರೆ.