Author: admin

ತುಮಕೂರು: ಮಾನಸಿಕ‌ ಅಸ್ವಸ್ಥನಿಂದ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟಿರವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಅನಿಲ್ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಮಾನಸಿಕ ಅಸ್ವಸ್ಥನಾಗಿದ್ದು ಶಂಕರಪ್ಪ ಎಂಬುವರಿಗೆ ದೊಣ್ಣೆಯಿಂದ ಥಳಿಸಿದ್ದನು. ತೀವ್ರ ರಕ್ತ ತ್ರಾವದಿಂದ. ಶಂಕರಪ್ಪ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಅನಿಲ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 6 ವರ್ಷದ ಹಿಂದೆ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ಕೊಲೆ ಮಾಡಿದ್ದ ಅನಿಲ್, ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದನು. ಬಳಿಕ ಮಾನಸಿಕ ಅಸ್ವಸ್ಥನಾಗಿ ಕೊರಟಗೆರೆಯಲ್ಲಿ ಅಲೆದಾಡುತ್ತಿದ್ದನು. ನಿನ್ನೆ ರಾತ್ರಿ ಶನಿಮಹಾತ್ಮ ದೇವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ಶಂಕರಪ್ಪ ಮೇಲೆ ಹಲ್ಲೆ ಮಾಡಿದ್ದನು. ಹಿಂದಿನಿಂದ ಬಂದು ದೊಣ್ಣೆಯಿಂದ ಶಂಕರಪ್ಪ ತಲೆಗೆ ಬಲವಾಗಿ ಹೊಡೆದಿದ್ದನು. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಸಂಭವಿಸಿದ ಕಾರು ಮತ್ತು ಟ್ರಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ, ಮಲ್ಲ‌, ಮಣಿಕಂಠ, ಹೇಮಂತ್ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಇಂದು ಒಂದೇ ಕುಟುಂಬದ ಏಳು ಮಂದಿಯ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ವಿಷಯ ತಿಳಿದು ಕಾಂಗ್ರೆಸ್ ವಕ್ತಾರ ಮುರುಳೀಧರ ಹಾಲಪ್ಪ ಅವರು ಸೋಮವಾರ ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. ಒಂದೇ ಕುಟುಂಬದ ಏಳು ಮಂದಿ ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರ ರೋಧನೆ ಮುಗಿಲು ಮುಟ್ಟಿತ್ತು.

Read More

ತುರುವೇಕೆರೆ: ತಾಲ್ಲೂಕಿನ ಲಕ್ಕಸಂದ್ರ ಗ್ರಾಮದ  ಶಿವಗಂಗಮ್ಮ ಎಂಬ ವಯೋವೃದ್ದೆ ತನ್ನ ಗಂಡನ ಮರಣದ ನಂತರ ತನ್ನ ಗಂಡನ ಪಿತ್ರಾರ್ಜಿತ ಜಮೀನನ್ನು ಖಾತೆ ಮಾಡಿಸಲು ತಹೀಶೀಲ್ದಾರ್ ಕಚೇರಿಗೆ ತೆರಳಿದಾಗ ತನ್ನ ಅರಿವಿಗೆ ಬಾರದೆ ತನ್ನ ಗಂಡ ಜಮೀನನ್ನು ಬೇರೊಬ್ಬರ ಹೆಸರಿಗೆ ತಾನು ತೀರಿ ಹೋಗುವ ಮುನ್ನ ಮರಣ ಸಮರ್ಥನಾ ಪತ್ರ ಮಾಡುವ ಮೂಲಕ ಜಮೀನನ್ನು ಚರಿತ ಎಂಬುವವರ ಹೆಸರಿಗೆ ಬರೆದದ್ದು ತಿಳಿದು ದಿಕ್ಕು ತೋಚದಂತಾಗಿ ಕೊನೆಗೆ ತನ್ನ ತಂಗಿ ಮಕ್ಕಳ ಸಹಾಯದಿಂದ ಕೋರ್ಟ್ ಮೆಟ್ಟಿಲೇರಿರುವ ಈಕೆ ಕೋರ್ಟ್  ಮೂಲಕ ಖಾತೆ ಬದಲಾವಣೆ ಮಾಡದಂತೆ ಸ್ಟೇ ಆರ್ಡರ್ ಪಡೆದಿದ್ದು ತಹಶಿಲ್ದಾರ್ ಎದುರು ಕೋರ್ಟ್ ದಾಖಲೆಯನ್ನಿಡಿದು ಖಾತೆ ಬದಲಾವಣೆ ಮಾಡದಂತೆ ಗಳಗಳನೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ  ಮಾತನಾಡಿದ ಶಿವಗಂಗಮ್ಮ, ಈ ಜಮೀನು ನಮಗೆ ಪಿತ್ರಾರ್ಜಿತ ಆಸ್ಥಿಯಾಗಿದ್ದು ನನ್ನ ಗಂಡನನ್ನು ಪುಸಲಾಯಿಸಿ ಮರಣ ಸಮರ್ಥನಾ ಪತ್ರ ಬರೆಹಿಸಿಕೊಂಡಿದ್ದಾರೆ. ಎಲ್ಲಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಹೊಡೆಯುವ ಹುನ್ನಾರ ಮಾಡಿದ್ದಾರೆ. ನನಗೆ ಇರುವ ಈ…

Read More

ಬೆಂಗಳೂರು: ಸುಧಾರಿತ ರೈತ ಸ್ನೇಹಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು  ಕಾರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಸೂಚನೆ ನೀಡಿದ್ದಾರೆ ನಿಗಮದ  ಅಧ್ಯಕ್ಷರೂ ಅಗಿರುವ ಸಚಿವರು ಅ17 ರಂದು ನಿಗಮದ ಕಚೇರಿಯಲ್ಲಿ 310ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ರೈತರ ಶ್ರೇಯೋಭಿವೃದ್ದಿಗೆ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿ  ಕೃಷಿ ಚಟುವಟಿಕೆಗೆ ಬಲ ತುಂಬುವಂತೆ ಸಚಿವರು ತಿಳಿಸಿದರು. ನಿಗಮದ ಯೋಜನೆಗಳನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರ್ದೇಶಕ ಮಂಡಳಿ ಚಿಂತನೆ ನಡೆಸಿ ಕ್ರಮಕೈಗೊಳ್ಳಬೇಕು ಎಂದೂ ಸಚಿವರು ಸಲಹೆ ನೀಡಿದರು. ಕೃಷಿಕರಿಗೆ ಉತ್ತಮ ಬೀಜ ಪೂರೈಕೆ ಮಾಡುವ ಜೊತೆಗೆ ಹೊಸ ಸ್ವರೂಪದ ನೆರವು ಯೋಜನೆಗಳನ್ನು ಅನುಷ್ಠಾನ ಗೊಳಿಸಿ  ಅದರ ಅನುಕೂಲ ನೇರವಾಗಿ  ಫಲಾನುಭವಿಗಳಿಗೆ ತಲುವಂತೆ  ನಿಗಾ ವಹಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್ ಪಾಟೀಲ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್, ನಿರ್ದೇಶಕ ರುಗಳಾದ ಡಿ.ಎಲ್ ನಾಗರಾಜ್ .ಎನ್…

Read More

ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ಕುಡಿಯುವ ನೀರಿಗಾಗಿ ಶಿರಾ  ವಿಧಾನಸಭಾ ಕ್ಷೇತ್ರದ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು . ಸಣ್ಣ  ನೀರಾವರಿ ಇಲಾಖೆಯ ಇಂಜಿನಿಯರ್ ಗಳಾದ ಸಂಜೀವ್ ರಾಜು, ಮೂಡಲ ಗಿರಿಯಪ್ಪ ಪ್ರಭಾಕರ್ ಸೇರಿದಂತೆ ಹಲವಾರು ಇಂಜಿನಿಯರ್ ಗಳು ಸಭೆಯಲ್ಲಿ ಭಾಗವಹಿಸಿದ್ದರು‌. EA Technologies  ಮುಖ್ಯಸ್ಥ ರಂಗನಾಥ್ ಅವರು ಸಹ ಸಭೆಯಲ್ಲಿ ಭಾಗವಹಿಸಿದ್ದರು. ಎತ್ತಿನಹೊಳೆ ಯೋಜನೆಯಲ್ಲಿ ಕುಡಿಯುವ ನೀರಿಗಾಗಿ ಪಾಯಿಂಟ್ 514 ಟಿಎಂಸಿ ನೀರು ಒದಗಿಸಲಾಗಿದೆ. ಈ ನೀರನ್ನು ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿಗಾಗಿ ಬಳಸಲು ಯೋಜನೆ ರೂಪಿಸಬೇಕು ಹಾಗೂ ಇದಕ್ಕೆ ಅಗತ್ಯ ಹಣಕಾಸಿನ ನೆರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪಡೆಯಬೇಕು ಎಂದು ಟಿ.ಬಿ. ಜಯಚಂದ್ರ ಅವರು ಇದೇ ವೇಳೆ ತಿಳಿಸಿದರು. ಈ ನಿಟ್ಟಿನಲ್ಲಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. EA Technologies ಮುಖ್ಯಸ್ಥ ರಾದ…

Read More

ಬರ ಹಿನ್ನೆಲೆ; ಕಬ್ಬು ಇಳುವರಿ ಕಡಿಮೆ ಸಾಧ್ಯತೆ ಸಕ್ಕರೆ ಉತ್ಪಾದನೆ ಕಡಿಮೆಯಾಗುವ ಸಂಭವ ರೈತರಿಗೆ ಒಂದು ರೂಪಾಯಿಯೂ ಬಾಕಿ ಇಲ್ಲ ಸದ್ಯಕ್ಕೆ ಕಾರ್ಖಾನೆಗಳ ಅಂತರ ನಿಗದಿ ಇಲ್ಲ ವಿದ್ಯುನ್ಮಾನ ಮಾಪನ ಯಂತ್ರ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಒಂದು ವಾರ ಮುಂಚಿತವಾಗಿ ಕಬ್ಬು ಅರೆಯುವಿಕೆ ಶುರುವಾಗಲಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದರು. ನವೆಂಬರ್‌ ಒಂದರಿಂದ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಅರೆಯುವಿಕೆ ಆರಂಭವಾಗಬೇಕಿತ್ತು. ಆದರೆ, ಬರದ ಹಿನ್ನೆಲೆಯಲ್ಲಿ ಒಂದು ವಾರ ಅಂದರೆ ಇದೇ ತಿಂಗಳ 25ರಿಂದ ಕಬ್ಬು ಅರೆಯುವಿಕೆ ಆರಂಭವಾಗಲಿದೆ ಎಂದು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರೈತರು ಕಂಗಲಾಗಿದ್ದಾರೆ. ಬಹಳಷ್ಟು ಕಡೆ ಕಬ್ಬು ಒಣಗುತ್ತಿದೆ. ಹಂಗಾಮಿಗೆ ಬೇಗನೆ ಕಬ್ಬು ಅರೆಯುವಿಕೆ ಶುರು ಮಾಡುವಂತೆ ಬೆಳಗಾರರು ಮನವಿ ಮಾಡಿದ್ದಾರೆ. ಹೀಗಾಗಿ ಒಂದು ವಾರಕ್ಕೆ ಮುನ್ನ ಕಬ್ಬು ಅರೆಯುವಿಕೆಯನ್ನು ಆರಂಭಿಸುವಂತೆ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಲಾಗಿದೆ ಎಂದರು. ಮುಖ್ಯಮಂತ್ರಿಗಳ…

Read More

ಬೆಂಗಳೂರು: ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ವತಿಯಿಂದ ಆಯೋಜಿಸಲಾದ ವಿಲಕ್ಷಣ ಮತ್ತು ಕಡಿಮೆ ಶೋಷಣೆಗೊಳಗಾದ ತೋಟಗಾರಿಕಾ ಬೆಳೆಗಳು – ಆದ್ಯತೆಗಳು ಮತ್ತು ಉದಯೋನ್ಮುಖ ಪ್ರವೃತ್ತಿಗಳ ಕುರಿತು ಮೂರು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯಪಾಲರು, ಐಸಿಎಆರ್-ಐಐಎಚ್ ಆರ್ ಬೆಂಗಳೂರು, ವಿವಿಧ ತೋಟಗಾರಿಕಾ ಬೆಳೆಗಳಲ್ಲಿ ಮೂಲಭೂತ ಮತ್ತು ಅನ್ವಯಿಕ ಸಂಶೋಧನೆ ನಡೆಸಲು ಹೆಸರುವಾಸಿಯಾದ ದೇಶದ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾದ ತಂತ್ರಜ್ಞಾನಗಳು ರೈತರಲ್ಲಿ ಜನಪ್ರಿಯವಾಗುತ್ತಿವೆ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ವಾರ್ಷಿಕವಾಗಿ ಮೂವತ್ತು ಸಾವಿರ ಕೋಟಿ ರೂ.ಗೂ ಹೆಚ್ಚು ಕೊಡುಗೆ ನೀಡುತ್ತಿರುವುದನ್ನು ತಿಳಿದು ಸಂತೋಷವಾಗಿದೆ ಎಂದು ಹೇಳಿದರು. ಈ ಸಂಸ್ಥೆಯಲ್ಲಿ 54 ತೋಟಗಾರಿಕಾ ಬೆಳೆಗಳ ಮೇಲೆ ಸಂಶೋಧನಾ ಕಾರ್ಯವನ್ನು ಮಾಡಲಾಗುತ್ತಿದೆ ಮತ್ತು ಇದುವರೆಗೆ 300ಕ್ಕೂ ಹೆಚ್ಚು ಪ್ರಭೇದಗಳು ಮತ್ತು ಮಿಶ್ರತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಂಸ್ಥೆಯಲ್ಲಿ ವಿಲಕ್ಷಣ ಹಣ್ಣುಗಳು, ಡ್ರ್ಯಾಗನ್ ಹಣ್ಣು, ಆವಕಾಡೊ, ಮ್ಯಾಂಗೋಸ್ಟೀನ್, ರಂಬುಟಾನ್‌ಗಳ ಕುರಿತು ಸಂಶೋಧನಾ…

Read More

ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಬೆಂಗಳೂರು ವಿಶ್ವವಿದ್ಯಾಲಯ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೌಗೂ ಹಾಗೂ ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಶ್ರೀ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮವಾದ ಕೆಲಸಗಳನ್ನು ಮಾಡಿ ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಭಾರತದ ಮಾಜಿ ಪ್ರಧಾನಿ ಶ್ರೀ ದೇವೇಗೌಡರನ್ನು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯೊಂದಿಗೆ ಗೌರವಿಸಿರುವುದು ಸಂತೋಷದ ವಿಷಯ. ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೋಮನಾಥ್ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಕಾರಣಾಂತರಗಳಿಂದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಸಮಾಜಕ್ಕಾಗಿ ಈ ಇಬ್ಬರು ಮಹನೀಯರ ಕೊಡುಗೆ ನಿರಂತರವಾಗಿರಲಿ…

Read More

ಬೆಂಗಳೂರು :ಸುಧಾರಿತ ರೈತ ಸ್ನೇಹಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಸೂಚನೆ ನೀಡಿದ್ದಾರೆ ನಿಗಮದ ಅಧ್ಯಕ್ಷರೂ ಅಗಿರುವ ಸಚಿವರು ಅ17 ರಂದು ನಿಗಮದ ಕಚೇರಿಯಲ್ಲಿ 310ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ರೈತರ ಶ್ರೇಯೋಭಿವೃದ್ದಿಗೆ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಕೃಷಿ ಚಟುವಟಿಕೆಗೆ ಬಲ ತುಂಬುವಂತೆ ಸಚಿವರು ತಿಳಿಸಿದರು . ನಿಗಮದ ಯೋಜನೆಗಳನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರ್ದೇಶಕ ಮಂಡಳಿ ಚಿಂತನೆ ನಡೆಸಿ ಕ್ರಮಕೈಗೊಳ್ಳಬೇಕು ಎಂದೂ ಸಚಿವರು ಸಲಹೆ ನೀಡಿದರು. ಕೃಷಿಕರಿಗೆ ಉತ್ತಮ ಬೀಜ ಪೂರೈಕೆ ಮಾಡುವ ಜೊತೆಗೆ ಹೊಸ ಸ್ವರೂಪದ ನೆರವು ಯೋಜನೆಗಳನ್ನು ಅನುಷ್ಠಾನ ಗೊಳಿಸಿ ಅದರ ಅನುಕೂಲ ನೇರವಾಗಿ ಫಲಾನುಭವಿಗಳಿಗೆ ತಲುವಂತೆ ನಿಗಾ ವಹಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್ ಪಾಟೀಲ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್, ನಿರ್ದೇಶಕ ರುಗಳಾದ ಡಿ.ಎಲ್ ನಾಗರಾಜ್ .ಎನ್…

Read More

ಬೆಂಗಳೂರು: ಮನೆಯ ಹಣಕಾಸು ವ್ಯವಹಾರ ತಾನೇ ನೋಡಿಕೊಳ್ಳಬೇಕು ಎಂದು ಯೋಚಿಸಿದ್ದ ಸೊಸೆ ಪ್ರಿಯಕರ ಜೊತೆ ಸೇರಿ ಅತ್ತೆಯನ್ನ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರು ಆರೋಪಿಗಳು ಜೈಲು ಪಾಲಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಆರೋಪಿಗಳನ್ನು ಸೊಸೆ ರಶ್ಮಿ ಅಕ್ಷಯ್ ಮತ್ತು ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಮಂಜುನಾಥ್ ಎಂಬುವವನ ಜೊತೆ ರಶ್ಮಿಯ ವಿವಾಹವಾಗಿತ್ತು . ಅದೇ ಮನೆಯ ಮಹಡಿಯಲ್ಲಿಯೇ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ರಶ್ಮಿ  ಸಂಪರ್ಕ ಹೊಂದಿದ್ದಳು. ಮನೆಯಲ್ಲಿ ಅತ್ತೆ ಲಕ್ಷ್ಮಮ್ಮ ಜೊತೆ ಹಣಕಾಸು ವಿಚಾರದಲ್ಲಿ ರಶ್ಮಿ ಆಗಾಗ್ಗೆ ಗಲಾಟೆ ನಡೆಸುತ್ತಿದ್ದು, ವ್ಯವಹಾರಗಳನ್ನು ತಾನೇ ನೋಡಿಕೊಳ್ಳುವ ಯೋಜನೆ ರೂಪಿಸಿದ್ದಳು. ಹೀಗಾಗಿ ಮನೆಯಲ್ಲಿ ಗಂಡ ಇಲ್ಲದ ವೇಳೆ ಕಳೆದ  ಅ.5 ರಂದು ಅತ್ತೆಗೆ ಮತ್ತು ಬರುವ ಮಾತ್ರೆ ನೀಡಿ ರಶ್ಮಿ ಹಾಗೂ ಅಕ್ಷಯ್ ಮತ್ತು ಪುರುಷೋತ್ತಮ್ ಮೂರು ಜನ  ಸೇರಿ ಕತ್ತು ಹಿಸುಕಿ ಲಕ್ಷ್ಮಮ್ಮ ಅವರನ್ನು ಹತ್ಯೆ ಮಾಡಿ ಬಳಿಕ ಹೃದಯಾಘಾತವಾಗಿದೆ ಎಂದು…

Read More