Author: admin

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾದ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳ, ನಿರ್ದೇಶಕಿ ಡಾ.ಕೆ. ಧಾರಣಣೀದೇವಿ ಮಾಲಗತ್ತಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Read More

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಮುಂದೆ ಮರಳಿನ ರಾಶಿ ಹಾಕಲಾಗಿದ್ದು, ಮರಳಿನ ರಾಶಿಯಡಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮರಳಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರ, ಶವ ಇರುವಿಕೆಯನ್ನು ಪತ್ತೆ ಮಾಡಿ ಪೊಲೀರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

Read More

ಬೆಂಗಳೂರು: ಸಾಲ ಬಾಧೆ ತಾಳಲಾರದೆ ನೀರಿನ ಟ್ಯಾಂಕರ್ ಮುಂದೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವಲ್ ಪಂಡಿತ್ (25) ಎಂದು ಗುರುತಿಸಲಾಗಿದೆ. ಈತ ಹಾಲು ಒಕ್ಕೂಟದ ಉತ್ಪಾದನಾ ವಿಭಾಗದಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಎಸ್ ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

1 ರಿಂದ 9ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಸುಧಾರಣೆಗಳು, ವಿನಾಯಿತಿ ಸೌಲಭ್ಯ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆ ಸರ್ಕಾರ ವಿನಾಯಿತಿ ನೀಡಿ ಆದೇಶ ಮಾಡಿದ್ದು, ವಿದ್ಯಾರ್ಥಿಗಳು ಅಂಗವಿಕಲತೆ ಪ್ರಮಾಣ ಪತ್ರ ಸಲ್ಲಿಸಿ ಪರೀಕ್ಷಾ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Read More

ಬೆಂಗಳೂರು: ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಕೋಗಿಲು ಲೇಔಟ್ ನ 3ನೇ ಕ್ರಾಸ್ ರಸ್ತೆ ನಿವಾಸಿ ಶಕೀಲ್ ಅಕ್ತರ್ ಸೈಫಿ(28) ಮೃತ. ಬಿಹಾರ ಮೂಲಕ ಶಕೀಲ್, ನಗರದಲ್ಲಿ ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಶವ ಮನೆಯ ಸಮೀಪದ ಮಾರ್ಟಿನ್ ಎಂಬುವವರ ನಿವೇಶನದ ಶೌಚ ಗುಂಡಿಯಲ್ಲಿ ಮೂಟೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪಿಗೆಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್ ನಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ 3 ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ ಎರಡು ಉಂಗುರಗಳನ್ನು ಕಳ್ಳತನ ಮಾಡಿದ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಘವೇಂದ್ರ ಎಂಬುವರಿಗೆ ಸೇರಿದ ಚಿನ್ನಾಭರಣ ಇದಾಗಿದ್ದು, ಜಾಲಹಳ್ಳಿ ಕ್ರಾಸ್ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಬಿಹಾರದಲ್ಲಿ ಎನ್ ಕೌಂಟರ್ ಹತ್ಯೆ. ವಾಹನ ತಪಾಸಣೆ ವೇಳೆ ಕಾನ್ ಸ್ಟೇಬಲ್ ಮೇಲೆ ಗುಂಡು ಹಾರಿಸಿ ಕೊಂದ ಆರೋಪಿಗಳು ಪೊಲೀಸ್ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಕಸ್ಟಡಿಯಿಂದ ತಪ್ಪಿಸಿಕೊಳ್ಳುವಾಗ ಒಬ್ಬ ಆರೋಪಿ ಪೊಲೀಸರತ್ತ ಗುಂಡು ಹಾರಿಸಿದ. ವೈಶಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ ಸರಾಯ್ ಬಜಾರ್ ಚೌಕ್‌ ನಲ್ಲಿರುವ ಯುಕೊ ಬ್ಯಾಂಕ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಅನುಮಾನಗೊಂಡ ಬೈಕ್ ಗ್ಯಾಂಗ್ ತಡೆದಾಗ ಮೂವರು ದುಷ್ಕರ್ಮಿಗಳು ಬೈಕ್ ಬಿಟ್ಟು ಓಡಿ ಹೋಗಿದ್ದಾರೆ. ಪರಾರಿಯಾಗುತ್ತಿದ್ದಾಗ ಮೂವರು ಸದಸ್ಯರ ತಂಡ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪೊಲೀಸ್ ಪೇದೆ ಅಮಿತಾಬ್ ಕುಮಾರ್ ಸಾವನ್ನಪ್ಪಿದ್ದಾರೆ. ಇಬ್ಬರು ಆರೋಪಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಠಾಣೆಗೆ ಕರೆದೊಯ್ಯಲು ಪೊಲೀಸರು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಕಾರಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಪೊಲೀಸರು ಅವರ ಮೇಲೆ ಗುಂಡು ಹಾರಿಸಿದರು.

Read More

ಮಹಾರಾಷ್ಟ್ರದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಅಹಮದ್ ‌ನಗರದಿಂದ ಅಷ್ಟಿಗೆ ಹೊರಟಿದ್ದ ಉಪನಗರ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಐದು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಬೆಂಕಿ ಹರಡುವ ಮುನ್ನವೇ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.

Read More

ಚಾಮರಾಜನಗರ: ಸ್ನಾನಕ್ಕೆಂದು ಇಟ್ಟಿದ್ದ ಬಿಸಿ ನೀರನ್ನು ಮಗುವೊಂದು ಮೈಮೇಲೆ ಸುರಿದುಕೊಂಡ ಪರಿಣಾಮ ಮಗು ಸಾವನ್ನಪ್ಪಿರುವ ದುರಂತ ಘಟನೆ ಚಾಮರಾಜನಗರ ಜಿಲ್ಲೆಯ ಸತ್ತೇಗಾಲ ಗ್ರಾಮದಲ್ಲಿ ಜರುಗಿದೆ. ಘಟನೆಯಲ್ಲಿ ನಾಲ್ಕು ವರ್ಷದ ಧೃವನಾಯಕ ಮೃತಪಟ್ಟ ಮಗುವಾಗಿದೆ. ನೀರು ಸುರಿಕೊಂಡ ಕೂಡಲೇ ಗಾಯಗೊಂಡ ಮಗುವನ್ನು ತಕ್ಷಣ ಚಿಕಿತ್ಸೆಗೆಂದು ಪಟ್ಟಣದ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಮೃತಪಟ್ಟಿದೆ ಎನ್ನಲಾಗಿದೆ. ಮಗುವಿನ ತಂದೆ ಕಿರಣ್ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

Read More

ಪ್ಯಾಲೆಸ್ತೀನ್‌ ಗೆ ಬೆಂಬಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಕಾನ್‌ ಸ್ಟೆಬಲ್ ಸುಹೇಲ್ ಅನ್ಸಾರಿ ಅವರು ಪ್ಯಾಲೆಸ್ತೀನ್‌ ಗೆ ಬೆಂಬಲ ನೀಡಲು ದೇಣಿಗೆ ಕೇಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಮೇಲಧಿಕಾರಿಗಳ ಗಮನಕ್ಕೆ ತಿಳಿದು ಬಂದಿದ್ದು, ಈ ಕುರಿತು ತನಿಖೆಗೆ ಆದೇಶಿಸಿರುವ ಎಸ್ಪಿ ಅವರು ಅನ್ಸಾರಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

Read More