Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಕೇರಳದ ಕಣ್ಣೂರು ಜಿಲ್ಲೆಯ ಕಿಣಿಚಿರಾ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮೊಬೈಲ್ ಬಳಸಬೇಡ ಅಂದಿದ್ದಕ್ಕೆ ಯುವಕನೊಬ್ಬ ತಾಯಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಒಂದು ವಾರ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್-ಹಮಾಸ್ ಯುದ್ಧ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಟೆಲ್ ಜೋ ಬಿಡೆನ್ ನಾಳೆ ಇಸ್ರೇಲ್ ಗೆ ಆಗಮಿಸಲಿದ್ದಾರೆ. ಜೋ ಬಿಡೆನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಲಿದ್ದಾರೆ. ಇಸ್ರೇಲ್ ನಲ್ಲಿರುವ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಸ್ರೇಲ್ ಮಿಲಿಟರಿ 6 ಹಮಾಸ್ ನಾಯಕರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಲೆಬನಾನ್ ಗಡಿಯಲ್ಲಿ ಸಂಘರ್ಷ ಮುಂದುವರಿದಿದೆ. ಲೆಬನಾನಿನ ಗಡಿಯಲ್ಲಿರುವ ಇಸ್ರೇಲ್ ಸೇನಾ ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. ಹಿಜ್ಬ್ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಇಸ್ರೇಲ್ ಸೇನೆ ಪ್ರತಿಯಾಗಿ ಗುಂಡು ಹಾರಿಸಿತು. ನಿನ್ನೆ ಇಸ್ರೇಲ್ ಗಡಿ ಉಲ್ಲಂಘಿಸಿದೆ ಎಂದು ಚೀನಾ ಆರೋಪ ಮಾಡಿತ್ತು. ಇಸ್ರೇಲ್ ಸೇನೆಯು ಗಾಜಾವನ್ನು ವಶಪಡಿಸಿಕೊಂಡಿರುವುದು ತಪ್ಪಾಗುತ್ತದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.
ಮೋದಿ ಅವರಿಗೆ ಮಣಿಪುರ ಸಂಘರ್ಷಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಆಸಕ್ತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ. ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ ನೀಡಲು ರಾಹುಲ್ ಮಿಜೋರಾಂನಲ್ಲಿದ್ದರು. ಇಸ್ರೇಲ್ ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಪ್ರಧಾನ ಮಂತ್ರಿ ಮತ್ತು ಭಾರತ ಸರ್ಕಾರವು ಬಹಳ ಆಸಕ್ತಿ ಹೊಂದಿದೆ. ಆದರೆ ಆಶ್ಚರ್ಯವೆಂದರೆ ಅವರಿಗೆ ಮಣಿಪುರದ ವಿಷಯದಲ್ಲಿ ಈ ಆಸಕ್ತಿ ಇಲ್ಲ. ಜೂನ್ನಲ್ಲಿ ಮಣಿಪುರಕ್ಕೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಅವರು ನೋಡಿದ್ದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ಮಣಿಪುರದ ಪರಿಕಲ್ಪನೆಯನ್ನು ನಾಶ ಮಾಡಿದೆ. ಮಣಿಪುರವು ಇನ್ನು ಮುಂದೆ ಒಂದು ರಾಜ್ಯವಲ್ಲ ಆದರೆ ಎರಡು ಭಾಗಗಳಾಗಿ ವಿಭಜಿಸಲ್ಪಟ್ಟಿದೆ, ”ಎಂದು ಕಾಂಗ್ರೆಸ್ ನಾಯಕ ಹೇಳಿದರು, ಮೈತೆ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷವನ್ನು ಉಲ್ಲೇಖಿಸಿ. ‘ಜನರನ್ನು ಕೊಂದಿದ್ದಾರೆ, ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ, ಮಕ್ಕಳನ್ನು ಕೊಂದಿದ್ದಾರೆ, ಆದರೆ ಪ್ರಧಾನಿಗೆ ಅದು ಮುಖ್ಯ ಎಂದು ಅನಿಸುತ್ತಿಲ್ಲ’ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತಮಿಳುನಾಡಿನಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಸಾವು. ಸೋಮವಾರದ ಮಳೆಗೆ ತಿರುಪುರ್ ಜಿಲ್ಲೆಯಲ್ಲಿ ಸಮುದಾಯ ಭವನದ ಮೇಲ್ಛಾವಣಿ ಕುಸಿದಿದೆ. ಬಸ್ಗಾಗಿ ಕಾಯುತ್ತಿದ್ದಾಗ ಮಳೆಯಿಂದ ಒದ್ದೆಯಾಗುವುದನ್ನು ತಪ್ಪಿಸಲು ಜನರು ಸಭಾಂಗಣಕ್ಕೆ ಹತ್ತಿದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಮುರಳಿ, ಮಣಿಕಂದನ್ ಮತ್ತು ಗೌತಮ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿದ್ದ ಜನರು ಅವಶೇಷಗಳಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ಅವರ ಪ್ರಾಣ ಉಳಿಸಲಾಗಲಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ತುಮಕೂರು : ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಎಸ್ ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್(36) ಅವರು, ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ನಿವಾಸಿ, ಬಿಎಸ್ ಎಫ್ ಯೋಧರಾಗಿದ್ದ ಸುರೇಶ್ ಕುಮಾರ್ ಅವರು ಜಯರಾಮರೆಡ್ಡಿ– ಸುದಮ್ಮ ದಂಪತಿಯ ಹಿರಿಯ ಮಗ. ಕಿಡ್ನಿ ವೈಪಲ್ಯದಿಂದ ಚಂಡಿಗಢ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಒಂದು ತಿಂಗಳ ಹಿಂದೆ ಊರಿಗೆ ಬಂದು ಹೋಗಿದ್ದ ಸುರೇಶ್ ಕುಮಾರ್ ಕಿಡ್ನಿ ವೈಪಲ್ಯದಿಂದ ಚಂಡಿಗಢ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಪತ್ನಿಗೆ ಎರಡನೇ ಮಗುವಿನ ಹೆರಿಗೆಯ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ಊರಿಗೆ ಸುರೇಶ್ ಕುಮಾರ್ ಬಂದು ಇತ್ತೀಚೆಗೆ ಅ ಸೇನೆಗೆ ವಾಪಸ್ ಆಗಿದ್ದರು. ಇದರ ಬೆನ್ನಲ್ಲೇ ಅನಾರೋಗ್ಯದಿಂದ ಚಂಡಿಗಡದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸಂಜೆ ಅವರು ಇಹಲೋಕ ತ್ಯಜಿಸಿದ್ದಾರೆ. ಇಂದು ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ನಾಳೆ ಸ್ವಗ್ರಾಮದಲ್ಲಿ ಸುರೇಶ್ ಕುಮಾರ್ ರವರ…
ಚಿಕ್ಕಮಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರ ಪ್ರತಿಭಟನೆ. ಕಾಂಗ್ರೆಸ್ ನೇತೃತ್ವದ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಟಿಎಂ ಸರ್ಕಾರವನ್ನ ವಜಾ ಗೊಳಿಸುವಂತೆ ಬಿಜೆಪಿ ಆಗ್ರಹ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿ ಪಾಂಚಜನ್ಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಗಾಳಿ, ನೀರು, ಆಹಾರ ಸಕಲ ಜೀವ ಜಂತುಗಳಿಗೆ ಅತ್ಯಾವಶ್ಯಕ ಅದನ್ನು ಕಲುಷಿತಗೊಳಿಸದೇ ಉಳಿಸುವುದು ಎಲ್ಲರ ಕರ್ತವ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಬೆಂಗಳೂರಿನ ಕೃಷಿ ತಂತ್ರಜ್ಞರ ಸಂಸ್ಥೆವತಿಯಿಂದ ಏರ್ಪಡಿಸಿದ್ದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ದೇಶದ ಆಹಾರ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹಾಗೂ ಕೃಷಿ ತಜ್ಞರಾದ ಸ್ವಾಮಿನಾಥನ್ ಅವರನ್ನು ಸಚಿವರು ಸ್ಮರಿಸಿದರು. ಆಹಾರ ದಿನ ಹಾಗೂ ರೈತ ಮಹಿಳಾ ದಿನವನ್ನು ಒಟ್ಟಾಗಿ ಆಚರಿಸಲಾಗುತ್ತಿದೆ ಅಂದರೆ ಆಹಾರ ಉತ್ಪಾದಿಸುವ ರೈತ ಮಹಿಳೆ ಹಾಗೂ ಆಕೆ ಉತ್ಪಾದಿಸುವ ಆಹಾರ ಎರಡನ್ನೂ ಗೌರವಿಸುವ ಕ್ಷಣ ಇದಾಗಿದೆ ಎಂದು ಸಚಿವರು ಹೇಳಿದರು ಆಹಾರ ನಮ್ಮ ಮೂಲಭೂತ ಅವಶ್ಯಕತೆಗಳಲ್ಲಿ ಒಂದು.ಎಲ್ಲಾ ಜೀವ ಸಂಕುಲಗಳು ಮೊದಲ ಆದ್ಯತೆ ಆಹಾರ.ನಮ್ಮ ಜೀವ ವಿಕಾಸದ ಜೊತೆಗೆ ಆಹಾರ ಪದ್ದತಿಯಲ್ಲೂ ಬದಲಾವಣೆಯಾಗಿದೆ ಎಂದು ಅವರು ಹೇಳಿದರು. ಹಿಂದೆ ನಮ್ಮ ಹಿರಿಯರು ಆರೋಗ್ಯ ಪೂರ್ಣ ಆಹಾರ ಪದ್ದತಿ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಈ ಚಿರತೆಯು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಓಡಾಡುತ್ತಿತ್ತು ಎನ್ನಲಾಗಿದೆ. ಚಿರತೆ ಭಯದಿಂದ ಮನೆಯಿಂದ ಹೊರಗೆ ಬರಲು, ಜಮೀನುಗಳಿಗೆ ಹೋಗಲು ಹೆದರುತ್ತಿದ್ದ ರೈತರು, ಹಸುಗಳನ್ನು ಬಲಿ ಪಡೆದಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆಯು ಸೆರೆಯಾಗಿದೆ. ಗುಂಡೇಗಾಲದ ಹೊರವಲಯದಲ್ಲಿ ಇಂದು ಬೆಳಗ್ಗೆ ಬೋನಿನೊಳಗೆ ಚಿರತೆಯು ಬಂಧಿಯಾಗಿದ್ದು, ಸ್ಥಳೀಯರು ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ನಡೆದಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಯುವಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದ. ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಈ ವಿಷಯ ತಿಳಿಯುತ್ತಲೇ ಸ್ಥಳೀಯರು, ಮುಳುಗು ತಜ್ಞರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ತಸ್ಲೀಮ್ ಈಜಲು ತೆರಳಿದ್ದ ಸ್ಥಳದ ಸನಿಹವೇ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬೆಂಗಳೂರಿನ ಜಲಮೂಲಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು. ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಎಂಜಿ ರಸ್ತೆಯಲ್ಲಿ ಎಎಪಿ ಪತ್ರ ಚಳುವಳಿ ಅಭಿಯಾನ ನಡೆಸಿತು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಮೋಹನ್ ದಸಾರಿ ಅವರು, ತಮಿಳುನಾಡು ಸರ್ಕಾರವು ಕಾವೇರಿ ನೀರನ್ನು ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿರ್ಣಯವನ್ನು ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ. ಆದರೆ ನಮ್ಮ ರಾಜ್ಯದಲ್ಲಿ ಸಂಕಷ್ಟ ಕಾಲದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ತಕ್ಷಣ ಸದನವನ್ನು ಕರೆದು ಬರ ಸಂಕಷ್ಟದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಬೇಕು ಎಂದರು. ಎಂಜಿ ರಸ್ತೆಯ ಚರ್ಚ್ ಸ್ಟ್ರೀಟ್ ಮತ್ತು ಮ್ಯೂಸಿಯಂ ಅಡ್ಡ ರಸ್ತೆಯಲ್ಲಿ ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು,…