Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಐಜ್ವಾಲ್: ಸೋಮವಾರ ಐಜ್ವಾಲ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಾಗ ಅಪಾರ ಜನಸ್ತೋಮ ಸ್ವಾಗತಿಸಿತು. ಚುನಾವಣಾ ಕಣದಲ್ಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ ಅವರು ಚನ್ಮಾರಿ ಜಂಕ್ಷನ್ನಿಂದ ಮೆರವಣಿಗೆಯನ್ನು ಪ್ರಾರಂಭಿಸಿದರು ಮತ್ತು ಕಾಂಗ್ರೆಸ್ ಬೆಂಬಲಿಗರು ಪಕ್ಷದ ಧ್ವಜಗಳನ್ನು ಬೀಸುವ ನಡುವೆ ನಗರದ ಅಂಕುಡೊಂಕಾದ ರಸ್ತೆಗಳಲ್ಲಿ ನಡೆದರು. ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಿದ್ದ ಜನರತ್ತ ಕೈಬೀಸಿ, ಪಾದಯಾತ್ರೆಯ ವೇಳೆ ತಮ್ಮನ್ನು ಭೇಟಿಯಾಗಲು ಬಂದವರ ಜತೆ ಕೈಕುಲುಕಿ ಸಂವಾದ ನಡೆಸಿದರು. ಕೆಲವರು ಕಾಂಗ್ರೆಸ್ ಮುಖಂಡರೊಂದಿಗೆ ಸೆಲ್ಫಿ ತೆಗೆದುಕೊಂಡರು. ಮೆರವಣಿಗೆಯಲ್ಲಿ ಸಾಂಪ್ರದಾಯಿಕ ನೃತ್ಯಗಳನ್ನು ಸಹ ಪ್ರದರ್ಶಿಸಲಾಯಿತು. 40 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಇಂದು ಬೆಳಗ್ಗೆ ತೆರಳಿ ಸಮಾಲೋಚನೆ ನಡೆಸಿದರು. ಸಮಾಲೋಚನೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ‘ಯಾರ್ಯಾರಿಗೆ ಏನೇನು ಉತ್ತರ ಕೊಡಬೇಕೋ ಖಂಡಿತ ಕೊಡ್ತೀನೆ. ಹೈ ವೋಲ್ವೇಜ್ಗೂ ಕೊಡ್ತೀನಿ, ಲೋ ವೋಲ್ವೇಜ್ಗೂ ಕೊಡ್ತೀನಿ, ನಕಲಿಗಳಿಗೂ ಕೊಡ್ತೀನಿ, ಲೂಟಿಗಳಿಗೂ ಕೊಡ್ತೀನಿ, ಎಲ್ಲರಿಗೂ ಕೊಡ್ತೀನಿ. ಸ್ವಲ್ಪ ಕಾಯಿರಿ’ ಎಂದರು. ಬಿಜೆಪಿಯವರು ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಅವರ ಲೂಟಿ ಜನರಿಗೆ ತಿಳಿಯುವುದು. ಎಲ್ಲಾ ಬಿಚ್ಚಿಡ್ತೀವಿ’ ಎಂದು ವೇಣುಗೋಪಾಲ್ ಜೊತೆ ತೆರಳಿದರು. ತಡರಾತ್ರಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಅವರು ಬೆಳಗ್ಗಿನ ಉಪಾಹಾರ ನೆಪದಲ್ಲಿ ಎಐಸಿಸಿ ಅಧ್ಯಕ್ಷರ ಮನೆಗೆ ತೆರಳಿದರು. ಅಲ್ಲಿಗೆ ಡಿ.ಕೆ. ಶಿವಕುಮಾರ್ ಕೂಡ ಬಂದರು. ಮೂವರೂ ಕೆಲಹೊತ್ತು ರಹಸ್ಯವಾಗಿ ಮಾತುಕತೆ ನಡೆಸಿದರು. ಈ ಸಭೆ ಕುತೂಹಲ…
ಬೆಂಗಳೂರು: ಬಾಗಲಗುಂಟೆ ಪೊಲೀಸರ ಕಾರ್ಯಾಚರಣೆಯಲ್ಲಿ ಹಗಲು ಮತ್ತು ರಾತ್ರಿ ಎರಡೂ ವೇಳೆ ಕನ್ನಾ ಹಾಕಿ ಕಳವು ಮಾಡುತ್ತಿದ್ದ ಕಳ್ಳನ ಬಂಧನವಾಗಿದೆ. ಬಂಧಿತ ಆರೋಪಿಯಿಂದ 2.76 ಲಕ್ಷ ರೂ. ಬೆಲೆ ಬಾಳುವ 40 ಗ್ರಾಂ ತೂಕದ ಚಿನ್ನಾಭರಣ ಮತ್ತು 113 ಗ್ರಾಂ ಬೆಳ್ಳಿ ವಸ್ತುಗಳ ಹಾಗೂ 54 ಸಾವಿರ ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರನಗರದಲ್ಲಿ ದಿನಾಂಕ ಅ. 7 ರಿಂದ 18ರ ಮಧ್ಯಭಾಗದಲ್ಲಿ ಮಗಳ ಮದವೆಯ ಆಮಂತ್ರಣ ಪತ್ರ ನೀಡಲು ಊರಿಗೆ ಹೋಗಿದ್ದ ಸಮಯದಲ್ಲಿ ವ್ಯಕ್ತಿಯೋರ್ವರ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು `ಬೆಳ್ಳಿ ವಸ್ತುಗಳನ್ನು ಕಳತನ ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿರುತ್ತಾರೆ. ಈ ದೂರಿನ ಮೇರೆಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಹಗಲು ಮತ್ತು ರಾತ್ರಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಪತ್ತೆ ಕಾರ್ಯಕೈಗೊಂಡ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 2,76 ಲಕ್ಷ…
ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು. ಸುಳ್ಳು ಹೇಳಿಕೆ: ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ…
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸರಿಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಶಹರ್ವಾಸಾ ಗ್ರಾಮದ ಬಳಿ ಮತ್ತು ಪಠಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಎರಡು ವಾಹನಗಳು ತಲಾ ಮೂರು ಜನರನ್ನು ಹೊತ್ತೊಯ್ಯುತ್ತಿದ್ದವು ಎಂದು ಪಥಾರಿ ಪೊಲೀಸ್ ಠಾಣೆಯ ಉಸ್ತುವಾರಿ ಬಬಿತಾ ಸಿಂಗ್ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಕುಟುಕಿರುವ ಹೆಚ್ಡಿಕೆ, ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼ ಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಪ್ರಶ್ನಿಸಿದ್ದಾರೆ. ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼ ಗಳನ್ನಾಗಿ ಮಾಡಿ ʼಸಾವಿನ ದಿಬ್ಬʼ ಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಪಟಾಲಂ ಎಂದು ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕುಮಾರಸ್ವಾಮಿ ಅವರೇನು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ ಎಂದಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ…, ಕಳ್ಳನ ಮನಸ್ಸು ಹುಳ್ಳುಳ್ಳಗೆ… ಎನ್ನುವ ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಟಾಂಗ್ ನೀಡಿದ್ದಾರೆ. “ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ” ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು…
ಬೆಂಗಳೂರು: ಕೆಟ್ಟ ಸರಕಾರ ರಾಜ್ಯದಲ್ಲಿದೆ. ಈ ಸರಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಬಿಜೆಪಿಯು ಎಲ್ಲ ಜಿಲ್ಲೆ ಮತ್ತು ಮಂಡಲಗಳಲ್ಲಿ ದೊಡ್ಡದಾದ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್ಕುಮಾರ್ ಕಟೀಲ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ನಾನು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿ ಸಭೆ ನಡೆಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧ್ಯಕ್ಷರು ನಾಳೆ ಜಿಲ್ಲೆಗಳಲ್ಲಿ ಮತ್ತು ಮಂಡಲ ಅಧ್ಯಕ್ಷರು ನಾಡಿದ್ದು ಮಂಡಲಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರಕಾರವಿದು. ಅಧಿಕಾರಿಗಳಿಂದ ಭ್ರಷ್ಟಾಚಾರ ಆರಂಭಿಸಿದ ಈ ಸರಕಾರದ ಕಾರ್ಯವು ಕಲಾವಿದರನ್ನೂ ಬಿಟ್ಟಿಲ್ಲ ಎಂದು ತೀವ್ರವಾಗಿ ಆಕ್ಷೇಪಿಸಿದರು. ತಮ್ಮಲ್ಲಿ ಲಂಚ ಕೇಳಿದ್ದಾಗಿ ಮೈಸೂರು ದಸರಾದಲ್ಲಿ ಭಾಗವಹಿಸಬೇಕಾದ ಕಲಾವಿದರೇ ಆರೋಪ ಮಾಡಿದ್ದಾರೆ. ಹಿಂದೆ ಎಟಿಎಂ…
ಬೆಂಗಳೂರು: ಚಾರ್ಟರ್ಡ್ ಅಕೌಂಟೆಂಟ್ ಉದ್ಯೋಗಿ 28 ವಯಸ್ಸಿನ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಲ್ ಮುಚ್ಚುವ ಸಮಯದಲ್ಲಿ ಹೊರಗಡೆ ಹೋಗುವಂತೆ ಹೇಳಿದ್ದಾರೆ. ಈ ವೇಳೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೇಲೆಯೇ ಮಹಿಳೆ ಹಲ್ಲೆ ನಡೆಸಿದ್ದಾಳೆಂದು ವರದಿಯಾಗಿದೆ. ಮಹಿಳೆ ಅ.11 ರ ರಾತ್ರಿ 10:30 ಕ್ಕೆ ಚಲನಚಿತ್ರ ವೀಕ್ಷಣೆಗೆ ಬಂದಿದ್ದರು. ಆದರೆ ಪ್ರದರ್ಶನ ಮುಗಿದ ನಂತರ ಗಂಟೆಗಟ್ಟಲೆ ಅಲ್ಲೇ ಇದ್ದರು. ಮಹಿಳೆ ಮಾಲ್ ಆವರಣದಲ್ಲಿ ಮಧ್ಯರಾತ್ರಿ 2:30 ರ ವರೆಗೂ ಅಲ್ಲೇ ಇದ್ದರು. ಇದನ್ನು ಭದ್ರತಾ ಸಿಬ್ಬಂದಿ ಪತ್ತೆ ಮಾಡಿದ್ದಾರೆ. ಮಾಲ್ ಒಳಗಡೆ ತಿರುಗಾಡುತ್ತಿದ್ದ ಮಹಿಳೆಯನ್ನು ಹೊರಗಡೆ ಹೋಗುವಂತೆ ಹೇಳಿದ್ದಾರೆ. ಆದರೆ ಮಹಿಳೆಯು ಸಿಬ್ಬಂದಿ ಹಾಗೂ ಮಾಲ್ ಮ್ಯಾನೇಜರ್ ಅವರನ್ನು ನಿಂದಿಸಿದ್ದಾಳೆ. ಅಲ್ಲದೇ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಬೆಳ್ಳೂರು ಪೊಲೀಸರು ತಿಳಿಸಿದ್ದಾರೆ. ಮಾಲ್ ಮ್ಯಾನೇಜರ್, ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಗಸ್ತು ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಕರೆಗೆ ಪ್ರತಿಕ್ರಿಯಿಸಿ, ನಂತರ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ…
ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಭಾರತೀಯ ಮೂಲದ ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಲೆಫ್ಟಿನೆಂಟ್ ಓರ್ಮೋಸೆಸ್ ಇನ್ಸ್ ಪೆಕ್ಟರ್ ಕಿಮ್ ಡಾಕ್ರೆಕರ್ ಕೊಲ್ಲಲ್ಪಟ್ಟರು. ಲೆಫ್ಟಿನೆಂಟ್ ಓರ್ಮೋಸೆಸ್ ಹೋಮ್ ಫ್ರಂಟ್ ಕಮಾಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಿಮ್ ಡಾಕ್ರೆಕರ್ ಅವರು ಸೆಂಟ್ರಲ್ ಡಿಸ್ಟ್ರಿಕ್ಟ್ ಆಫ್ ಪೋಲೀಸ್ ನಲ್ಲಿ ಗಡಿ ಅಧಿಕಾರಿಯಾಗಿದ್ದರು. ಅಕ್ಟೋಬರ್ 7 ರಂದು ಹಮಾಸ್ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು. ರಕ್ಷಣಾ ರೇಖೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರೂ ಸಾವನ್ನಪ್ಪಿದ್ದಾರೆ. ಇಸ್ರೇಲ್ ನ ಅಂಕಿ ಅಂಶಗಳ ಪ್ರಕಾರ, ಹಮಾಸ್ ಭಯೋತ್ಪಾದಕ ದಾಳಿಯಲ್ಲಿ ಇದುವರೆಗೆ 286 ಸೇನಾ ಸಿಬ್ಬಂದಿ ಮತ್ತು 51 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಅನೇಕ ಭದ್ರತಾ ಪಡೆಗಳು ತಮ್ಮ ಪ್ರಾಣವನ್ನು ಕಳೆದುಕೊಂಡಿರಬಹುದು ಎಂದು ಇಸ್ರೇಲ್ ಹೇಳಿದೆ.