Author: admin

ಬಿಬಿಎಂಪಿಯಲ್ಲಿ ಮಾರ್ಷಲ್ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕರಿಂದ ಹಣ ಪಡೆದು ನಕಲಿ ಪ್ರಮಾಣ ಪತ್ರ ನೀಡಿ ವಂಚಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಪಿ. ನಗರ ನಿವಾಸಿ ಹರ್ಷ(23) ಬಂಧಿತ ಆರೋಪಿಯಿಂದ ಬಿಬಿಎಂಪಿ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ನಕಲಿ ನೇಮಕಾತಿ ಪತ್ರಗಳು, ಫೋನ್ ಪೇ ಮಾಡಿ ಹಣ ಪಡೆದಿರುವ ಬಗ್ಗೆ ಮೊಬೈಲ್  ಸ್ಕ್ರೀನ್ ಶಾಟ್ ಪ್ರತಿಗಳನ್ನು ಜಪ್ತಿ ಮಾಡಲಾಗಿದೆ.

Read More

ಆಡುಗೋಡಿ ಠಾಣೆ ವ್ಯಾಪ್ತಿಯ ಮಾಲ್‌ ವೊಂದರಲ್ಲಿ ರಂಪಾಟ ಮಾಡಿ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ರೊಬ್ಬರ ಕೈಗೆ ಕಚ್ಚಿದ್ದ ಆರೋಪದಡಿ ಯುವತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ 28 ವರ್ಷದ ಯುವತಿ, ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ವಾಸವಿದ್ದರು. ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಚಿಂದಿ ಆಯುವವರ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನುಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನಕ್ಕೆ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಸಾಯಿ ಕರ್ಮಚಾರಿ ಮಕ್ಕಳಿಗೆ ನಿಗದಿ ಮಾಡಿರುವ ಶೇ.5 ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳಿಗೆ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

Read More

ಕಾವೇರಿ ಜಲಸಂಕಷ್ಟ, ಜನರ ಆತಂಕ ನಿವಾರಿಸಲು ಕೂಡಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸೂಚಿಸಲು ರಾಜ್ಯಪಾಲರಿಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಿಯೋಗ ಮನವಿ ಮಾಡಿದೆ. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್  ಗೆಹಲೋತ್ ಅವರನ್ನು ಕುರಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ, ಮನವಿಯನ್ನು ಸಲ್ಲಿಸಿದೆ. ಕುಡಿಯುವ ನೀರಿನ ಆತಂಕವಿರುವ ಕಾರಣ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸಲಾಗುತ್ತದೆ ಎಂಬ ನಿರ್ಣಯ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದೆ.

Read More

ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೊಂದು ಬೇಟೆಯಾಡಿದ್ದಾರೆ. ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಪತ್ತೆಯಾದ ಎರಡೇ ದಿನಗಳಲ್ಲಿ ಬಿಲ್ಡರ್ ಸಂತೋಷ್ ನಿವಾಸದಲ್ಲಿ 40 ಕೋಟಿ ಕ್ಯಾಶ್ ಸಿಕ್ಕಿದೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್‌ಮೆಂಟ್ ‌ನಲ್ಲಿರುವ ಫ್ಲಾಟ್‌ ನಲ್ಲಿ ಈ ದುಡ್ಡು ಪತ್ತೆಯಾಗಿದೆ. ಇದೀಗ ಸಂತೋಷ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇದು ಮಾಜಿ MLC ಯೊಬ್ಬರಿಗೆ ಸೇರಿದ ಹಣ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರಿನ ಲಗ್ಗರೆ ಬಳಿಯಿರುವ ಆಸರೆ ವೃದ್ಧಾಶ್ರಮ ಸಮೀಪದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಮ್ಮೆಲೆ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿದ್ದು ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ಬೆಂಕಿ ತಗುಲಿದೆ. ಮುಜಾಹಿಲ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದೆ. ಊಟಕ್ಕೆ ಕೆಲಸಗಾರರು ಹೊರ ಹೋಗಿದ್ದ ಹಿನ್ನೆಲೆಯಲ್ಲಿ ಅವಘಡ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

Read More

ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್‌ಗೆ ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಎದುರಾಗುವ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿ ಕರ್ತವ್ಯ ನಿರ್ವಹಸಲಿವೆ ಎಂದು ಪ್ರಕಟಣೆ ತಿಳಿಸಿದೆ. ನ್ಯಾಯಿಕ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅವರು ಈ ವಿಷಯವನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದರ ಜತೆಗೆ ರಜಾಕಾಲೀನ ಪೀಠಗಳ ವಿವರವನ್ನೂ ಒದಗಿಸಿದ್ದಾರೆ.

Read More

ತಮಿಳುನಾಡಿನಲ್ಲಿ ಡಿಎಂಕೆ ಮಹಿಳಾ ಘಟಕದ ನೇತೃತ್ವದಲ್ಲಿ ನಡೆದ ಮಹಿಳಾ ಹಕ್ಕುಗಳ ಸಮಾವೇಶ ಮಹಿಳಾ ಸಮುದಾಯದ ಶಕ್ತಿ ಪ್ರದರ್ಶನವಾಗಿತ್ತು. ಮಹಿಳಾ ಮಸೂದೆ ಪ್ರಮುಖ ಚರ್ಚೆಯಾಗಿದ್ದ ಅಧಿವೇಶನದಲ್ಲಿ ಬಿಜೆಪಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಸಮಾವೇಶದಲ್ಲಿ ಇಂಡಿಯಾ ಫ್ರಂಟ್ ಅನ್ನು ಅಧಿಕಾರಕ್ಕೆ ತರಲು ಕರೆ ನೀಡಲಾಯಿತು. ಸೋನಿಯಾ ಗಾಂಧಿ ಸೇರಿದಂತೆ ಭಾರತೀಯ ರಂಗದ ಎಲ್ಲಾ ಪ್ರಮುಖ ಮಹಿಳಾ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದ್ದಾರೆ. 75 ವರ್ಷಗಳಲ್ಲಿ ದೇಶ ಸಾಧಿಸಿದ್ದೆಲ್ಲವನ್ನೂ ಮೋದಿ ಸರಕಾರ ನಾಶಪಡಿಸಿ ಮಹಿಳೆಯರನ್ನು ಯಾವುದೋ ಒಂದು ಸಂಕೇತವನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯು ಚುನಾವಣೆಯಲ್ಲಿ ಮಹಿಳೆಯರಿಗೆ ವಂಚನೆ ಮಾಡಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದರು. ಮಹಿಳಾ ಮೀಸಲಾತಿ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಇನ್ನು ಸಮಯ ವ್ಯರ್ಥ ಮಾಡಬಾರದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಸಂಸದರಾದ ಕನಿಮೋಳಿ, ಸುಪ್ರಿಯಾ ಸುಳೆ, ಜಮ್ಮು…

Read More

ತುಮಕೂರು: ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್ ‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಆಕೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತುಮಕೂರು ನಗರದ ಜಯನಗರ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತೆ ಶೇರ್ ಮಾಡಿರುವ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಎನ್ನುವ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ? BoyCott Lulu Mall ಎಂಬ ಹ್ಯಾಷ್ ಟ್ಯಾಗ್ ಬಳಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು…

Read More

ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನೀರು, ಹೂ ಬಿಡುವ ಮೂಲಕ  ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ  ಕರ್ನಾಟಕ ಸೇನಾಪಡೆಯ ಅಧ್ಯಕ್ಷ  ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ  ಚಾ.ರಂ. ಶ್ರೀನಿವಾಸಗೌಡ  ಮಾತನಾಡಿ,  ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 31 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು.  ಇಂದು ಪಿತೃಪಕ್ಷದ ನಿಮಿತ್ತ  ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ  ಚೆನ್ನಾಗಿರಲಿ ಎಂದರು. ಕರ್ನಾಟಕ ಸರ್ಕಾರ  ತಮಿಳುನಾಡಿಗೆ ಬಿಟ್ಟಿರುವ ನೀರನ್ನು‌ನಿಲ್ಲಿಸಬೇಕು…

Read More