Author: admin

ಸರಗೂರು:  ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿರುವ ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ಪೂಜೆ ನಡೆಯಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬೆಳಗ್ಗೆ ಧನುರ್ಮಾಸ ಪೂಜೆ ನಡೆದ ಬಳಿಕ ದೇವತೆಗೆ ವಿಶೇಷ ಅಭಿಷೇಕ ಮಾಡಲಾಯಿತು. ದೇವತೆಯನ್ನು ವಿವಿಧ ಹೂವುಗಳಿಂದ  ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವತೆ ದರ್ಶನ ಪಡೆದು ಪುನೀತರಾದರು. ದೇವಸ್ಥಾನದ ಪಾದದ ಬಳಿಯಲ್ಲಿ ದೇವತೆಗೆ ಮೊದಲಿಗೆ ಪೂಜೆ ಸಲ್ಲಿಸಿದ ಭಕ್ತರು ಮೆಟ್ಟಿಲುಗಳನ್ನು ಏರಿ ದೇವತೆಯ ಬಳಿ ಬಂದು, ಚಿಕ್ಕಮ್ಮ ಚಿಕ್ಕದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವತೆಯನ್ನು ಕಣ್ತುಂಬಿಕೊಂಡರು. ಹೊಸ ವರುಷ ದಿನದಂದು ದೇವಸ್ಥಾನಗಳಿಗೆ ತೆರಳಿ ಪೂಜೆ ಮಾಡಿಸಿ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ಇಷ್ಟಾರ್ಥ ಹರಕೆ ತೀರಿಸಿ ದೇವರ ಕೃಪೆಗೆ ಪಾತ್ರರಾದರು. ವರ್ಷದಿಂದ ವರ್ಷಕ್ಕೆ ಹೊಸ ವರುಷವಂತೂ ಜನದಟ್ಟಣೆ ಜೋರಾಗಿರುತ್ತದೆ. ಕಳೆದ ಸಾಲಿನಲ್ಲಿ ಇಷ್ಟು ಜನಸಂದಣಿ ಇರಲಿಲ್ಲ. ದೇವತೆಗೆ ಮಂಗಳವಾರ, ಶುಕ್ರವಾರ, ಭಾನುವಾರ ವಿಶೇಷ ಪೂಜೆ ಇರಲಿದೆ. ಇಂದು ಬುಧವಾರವೂ ದೇವತೆಯ ದರ್ಶನಕ್ಕಾಗಿ…

Read More

ತುಮಕೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ನಾಮದ ಚಿಲುಮೆ ಬಳಿ ಸಾಕಷ್ಟು ಕೋತಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ನಾಮದ ಚಿಲುಮೆ ಸಮೀಪ ಕೋತಿಗಳು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತಕ್ಷಣವೇ ತನಿಖೆ ಆರಂಭಿಸಿದ್ದಾರೆ. ಸಂಜೆ 5 ಗಂಟೆಯಿಂದ ತಡರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇದು ಸಾಮಾನ್ಯ ಮಂಗಗಳು ಹಾಗೂ ಎರಡು ಹನುಮಾನ್ ಲಂಗೂರ್‌ಗಳು ಸೇರಿದಂತೆ ಒಟ್ಟು ಏಳು ಕೋತಿಗಳ ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಕೋತಿಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಕೋತಿಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ವಿಷ ಸೇವನೆ ಮಾಡಿರುವ ಸಾಧ್ಯತೆ ಅಥವಾ ಮಂಗನ ಕಾಯಿಲೆ (Monkey Disease) ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅರಣ್ಯ…

Read More

ಸರಗೂರು:  ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂಥ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಜಿ.ರವಿ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಅಮರ ಶಿಲ್ಪಿಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಜಗತ್ತಿನಲ್ಲೆ ಪ್ರಸಿದ್ಧಿ ಪಡೆದ ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವದೇ ಒಂದು ಸೌಭಾಗ್ಯ. ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಗಳಿಸಲಿದೆ” ಎಂದು ಅವರು ಹೇಳಿದರು. “ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸಲು ಸಾಧ್ಯ. ಸಾಧರ‍್ನು ಸ್ಮರಣೆ ಮಾಡಿದರಷ್ಟೆ ಸಾಲದು. ಅವರ ಗುಣ ಮತ್ತು ಬೆಳೆದು ಬಂದ ಪ್ರರಿಶ್ರಮ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದು ನೆನೆಯುವುದರೊಂದಿಗೆ ಅವರ ಉತ್ತಮ ಜ್ಞಾನ, ಕಲಾತ್ಮಕ ಪ್ರವೃತ್ತಿ…

Read More

ಬೀದರ್: ಜಿಲ್ಲೆಯನ್ನು ನಶಾ ಮುಕ್ತಗೊಳಿಸುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಸುಮಾರು 11,11,500 ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವಿವರ: ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (IPS) ರವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತೆಲಂಗಾಣ ಕಡೆಯಿಂದ ಜಂಬಗಿ ಗ್ರಾಮದ ಮೂಲಕ ಆಟೋವೊಂದರಲ್ಲಿ ಅನಧಿಕೃತವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ(ಬಿ)-ಹಂಗರಗಾ ರಸ್ತೆಯ ಅರಣ್ಯ ಪ್ರದೇಶದಲ್ಲಿ ಹೊಂಚು ಹಾಕಿದ್ದರು. ಭಾಲ್ಕಿ ಉಪ-ವಿಭಾಗದ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅವರ ನೇತೃತ್ವದಲ್ಲಿ, ಔರಾದ್-ಬಿ ವೃತ್ತದ ಸಿಪಿಐ ರಘುವೀರಸಿಂಗ್ ಠಾಕೂರ್ ಮತ್ತು ಸಂತಪೂರ ಪಿಎಸ್‌ಐ ದಿನೇಶ್ ಎಮ್.ಟಿ ಹಾಗೂ ಸಿಬ್ಬಂದಿಗಳ ತಂಡ ಆಟೋ ಮೇಲೆ ದಾಳಿ ನಡೆಸಿತು. ವಶಪಡಿಸಿಕೊಂಡ ವಸ್ತುಗಳು: ಗಾಂಜಾ: 20 ಕೆಜಿ 630 ಗ್ರಾಂ…

Read More

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ ಸೈಟ್ https://bcwd.karnataka.gov.in ನಲ್ಲಿ ಅಥವಾ ದೂ.ವಾ.ಸಂ. 8050770004ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕನಾಯಕನಹಳ್ಳಿ: ಎತ್ತಿನಹೊಳೆ ನೀರಾವರಿ ಯೋಜನೆಯ ಕಾಮಗಾರಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜ.4ರಂದು ಚಿಕ್ಕನಾಯಕನಹಳ್ಳಿ ಸೇರಿದಂತೆ ತಿಪಟೂರು, ತುರುವೇಕೆರೆ, ತಿಪಟೂರು ನಾಲ್ಕು ತಾಲ್ಲೂಕಿನ ಮುಖಂಡರುಗಳ ಸಭೆ ನಡೆಯಲಿದೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ಪ್ರವಾಸಿ ಮಂದಿರ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಮಳೆಗಾಲದಲ್ಲಿ ನೀರು ಸಮುದ್ರ ಪಾಲಾಗುತ್ತಿತ್ತು, ನೀರಾವರಿ ತಜ್ಞರಿಂದ ಸರ್ವೆ ನಡೆಸಿ ಆ ನೀರನ್ನು ಜನರ ಅನುಕೂಲತೆ ದೃಷ್ಟಿಯಿಂದ ನಮ್ಮ ಸರ್ಕಾರ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿತು ಎಂದರು. ಕಾಮಗಾರಿ ಕೆಲಸ 252 ಕಿ.ಮೀ ಪೈಕಿ 208 ಕಿ.ಮೀ. ಉದ್ದದಷ್ಟು ಆಗಿದೆ. 23,252 ಕೋಟಿಯಷ್ಟು ರಾಜ್ಯ ಸರ್ಕಾರದ ಅನುದಾನವಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ಅನುದಾನ ನೀಡದಿದ್ದರೂ ಕಾಮಗಾರಿಗೆ ಅರಸೀಕೆರೆ ತಾಲ್ಲೂಕಿನ ಅರಣ್ಯ ಪ್ರದೇಶದ ಕೇವಲ 4 ಕುಂಟೆ ನೆಪ ಒಡ್ಡಿ ಕೆಲಸಕ್ಕೆ ಅಡಚಣೆ ಮಾಡಿದೆ. ಜ.4ರಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು…

Read More

ತುಮಕೂರು: ರುಡ್‌ಸೆಟ್ ಸಂಸ್ಥೆ ವತಿಯಿಂದ ಜನವರಿ 19 ರಿಂದ 13 ದಿನಗಳ ಉಚಿತ ಹಸು, ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ದೇಶದ ಜನತೆಗೆ ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ಡಾ. ಇಂತಿಯಾಜ್ ಅಹಮದ್ ಅಭಿಪ್ರಾಯಪಟ್ಟರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸ್ಥಾಪನಾ ದಿನ ಆಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಮ್ಮ ದೇಶದಲ್ಲಿ ಎಲ್ಲಾ ಧರ್ಮ, ಜಾತಿಯವರು ಉತ್ತಮ ಬಾಂಧವ್ಯದಿಂದ ಸಂವಿಧಾನದ ಆಶಯಗಳೊಂದಿಗೆ ನೆಮ್ಮದಿಯ ಬದುಕು ಸಾಗಿಸುವಂತಹ ಸದಾವಕಾಶವನ್ನು ಒದಗಿಸಿಕೊಟ್ಟಿದೆ ಎಂದು ನುಡಿದರು. 1885ರಲ್ಲಿ ಎ.ಒ. ಹ್ಯೂಮ್ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಕಾಂಗ್ರೆಸ್ ಪಕ್ಷವು, ಭಾರತದ ಸ್ವಾತಂತ್ರ್ಯ ಹೋರಾಟದ ಹೃದಯವಾಗಿತ್ತು, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ನಾಯಕರ ತ್ಯಾಗ, ಬಲಿ ಮತ್ತು ಆದರ್ಶಗಳ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ,…

Read More

ತುರುವೇಕೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ತಾಲೂಕಿನ ಕರಡು ಮತದಾರರ ಪಟ್ಟಿ ಪ್ರಕಟಗೊಳಿಸಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮದ್ ತಿಳಿಸಿದರು. ಅವರು ತಾಲೂಕು ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೊದಲ ಪಟ್ಟಿಯಲ್ಲಿ ಪುರುಷ ಮತ್ತು ಮಹಿಳೆ ಸೇರಿ ಒಟ್ಟು 2258 ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಸುವ ಸಂಬಂಧ ದಿ. 30—9–25 ರಿಂದ ದಿ. 6—11–25 ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ನೋಂದಣಿ ಅವಧಿ ಮುಕ್ತಾಯಗೊಂಡ ನಂತರ ಅಂತಿಮವಾಗಿ ದಿ. 25—11–25 ರಂದು ಅರ್ಹ ಪದವೀಧರರ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ತಾಲೂಕಿನಲ್ಲಿ ಪುರುಷರು-1464 ಮತ್ತು ಮಹಿಳೆಯರು-1086 ಸೇರಿ ಒಟ್ಟು 2258 ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದರು. 76–ತುರುವೇಕೆರೆ ಟೌನ್ ವ್ಯಾಪ್ತಿ– ಪುರುಷರು 705 ಮತದಾರರು ಮತ್ತು ಮಹಿಳೆಯರು–563 ಮತದಾರರು 77-ಮಾಯಸಂದ್ರ ಹೋಬಳಿ–ಪುರುಷ–705 ಮತ್ತು ಮಹಿಳೆಯರು-88 ಮತದಾರರು 78–ದಂಡಿನಶಿವಾರ ಹೋಬಳಿ-ಪುರುಷರು–320 ಮತ್ತು ಮಹಿಳೆಯರು–257 ಮತದಾರರು 79–ದಬ್ಬೇಘಟ್ಟ ಹೋಬಳಿ–ಪುರುಷರು–274 ಮತ್ತು ಮಹಿಳೆಯರು–178 ಅಂತಿಮ ಆಗ್ನೇಯ ಪದವೀಧರರ ಮತದಾರರ ಪಟ್ಟಿಯನ್ನು…

Read More

ತಿಪಟೂರು: ಬುದ್ಧ, ಬಸವ ಮತ್ತು ಅಂಬೇಡ್ಕರ್ ರವರು ಜಗತ್ತಿನ ಬೆಳಕು. ಇವರುಗಳು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದ ಅಸಮಾನತೆಯ ವಿರುದ್ಧ ಹೋರಾಡಿದ ಮಹಾ ಪುರುಷರು ಎಂದು ತಿಪಟೂರು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು. ಅವರು ಕಲ್ಪತರು ಕಾಲೇಜು ಆಡಿಟೋರಿಯಂನಲ್ಲಿ ಡಾ. ಅಂಬೇಡ್ಕರ್ ಸೇನೆ(ರಿ.) ವತಿಯಿಂದ ಹಮ್ಮಿಕೊಂಡಿದ್ದ ಭೀಮೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತದವರೆಗೂ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಬುದ್ಧ ಶಾಂತಿ ಸಮಾನತೆಗೆ ಹೋರಾಟ ಮಾಡಿದರೆ, ಬಸವಣ್ಣ ಸಮಾನತೆಗೆ ಹೋರಾಟ ಮಾಡಿ ದಮನಿತರಿಗೆ ಧ್ವನಿಯಾದರು ಎಂದು ತಿಳಿಸಿದರು. ಡಾ.ಅಂಬೇಡ್ಕರ್ ಸೇನೆ ರಾಜ್ಯಧ್ಯಕ್ಷ ಪಿ.ಮೂರ್ತಿ ಮಾತನಾಡಿ, ಶೋಷಿತ ಸಮುದಾಯಗಳ ಆಶಾಕಿರಣ, ಭಾರತದ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ತಾವು ಬಾಲ್ಯದಲ್ಲಿ ಅನುಭವಿಸಿದ ಅಸ್ಪೃಶ್ಯತೆ ನೋವು, ನಮ್ಮ ದೇಶದ ಜನ ಅನುಭವಿಸಬಾರದು, ದೇಶದಲ್ಲಿ ಅಸಮಾನತೆ ಸಂಪೂರ್ಣವಾಗಿ ಹೋಗಲಾಡಿಸಬೇಕು ಎಂದು ತಮ್ಮ ಸುಖ ದುಃಖವನ್ನೆಲ್ಲ ತ್ಯಾಗ ಮಾಡಿದ್ದಾರೆ ಎಂದರು. ಕೆಪಿಸಿಸಿ ಸದಸ್ಯ ಎ.ಯೋಗೇಶ್ ಮಾತನಾಡಿ, ಸಮಾಜದಲ್ಲಿ ಬಡವ…

Read More