Author: admin

ಬೆಂಗಳೂರು: ಸುಸ್ಥಿರ ಭವಿಷ್ಯದ ಸಂಶೋಧನೆ ಮತ್ತು ಆವಿಷ್ಕಾರಗಳ ಪ್ರೋತ್ಸಾಹ ಹಾಗೂ ಅವುಗಳ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಇ-ಕೆಆರ್‌ ಡಿಐಪಿ (e-KRDIP ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಅನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆಯಿಂದ ಅಗತ್ಯ ಅನುಮೋದನೆಯನ್ನು ಪಡೆದುಕೊಳ್ಳಲಾಗಿದೆ. ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸೇರಿದಂತೆ ಸಂಶೋಧನೆಗೆ ಒತ್ತು ನೀಡುವ ಈ ಎರಡೂ ಸಂಸ್ಥೆಗಳನ್ನ ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ನಗರದಲ್ಲಿ ಶೆಲ್‌ ಇಂಡಿಯಾ “ಚೇಂಜ್‌ ಮೇಕರ್ಸ್‌ ಆಫ್‌ ಟುಮಾರೋ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್‌ ಅಪ್ ‌ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ…

Read More

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ನಕ್ಷೆ ಮಂಜೂರಾತಿ ಬಯಸುವವರಿಗೆ ಮುಖಾಮುಖಿ ರಹಿತ (ಫೇಸ್ ಲೆಸ್) ಸೇವೆ ಒದಗಿಸಲು ತಂತ್ರಾಂಶ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯಿದೆ 2020ರ ಕಲಂ 144(6)ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸುವ ಕುರಿತ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾದ ಈಶ್ವರ ಖಂಡ್ರೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರುವುದರಿಂದಾಗುವ ಸಾಧಕ ಬಾಧಕಗಳ ಬಗ್ಗೆ ಪರಾಮರ್ಶಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಅಂದರೆ ಕಂದಾಯ ಭೂಮಿಯಲ್ಲಿ ಭೂಪರಿವರ್ತನೆ ಆಗದೆ,  ಬಡಾವಣೆಗೆ ಅನುಮೋದನೆ ಪಡೆಯದೆ ಮತ್ತು ಮನೆಗಳಿಗೆ ನಕ್ಷೆಯ ಮಂಜೂರಾತಿಯೂ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಮನೆಗಳಿಗೆ ಮತ್ತು ನಿವೇಶನಗಳಿಗೆ ಬಿ ವಹಿಯಲ್ಲಿ ಖಾತೆ ನೀಡುತ್ತಿರುವುದನ್ನು ಯಾವುದಾದರೂ ಒಂದು ಹಂತದಲ್ಲಿ ನಿಲ್ಲಿಸಲೇಬೇಕಾಗುತ್ತದೆ. ಹೀಗಾಗಿ ಇದಕ್ಕೆ ಪರಿಹಾರ ಹುಡಕ…

Read More

ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಿದ್ದರೂ ಸಹ ಅಂತ್ಯಕ್ರಿಯೆಗೊಂಡಂತಹ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಪುಣ್ಯಭೂಮಿಗೆ ಕನಿಷ್ಠ 20 ಗುಂಟೆಗಳ ಜಾಗ ನೀಡಬೇಕೆಂದು ಕೋರಿ ಡಾ.ವಿಷ್ಣು ಸೇನಾ ಸಮಿತಿಯು 18.09.2015 ರ ಕೇಸ್ .RD/308/LJB/2015   ರಲ್ಲಿ ಕೇಸಿನಲ್ಲಿ  implead ಆಗಿ ತಮ್ಮ ವಾದವನ್ನು ಮಂಡಿಸಿತ್ತು. ಜೊತೆಗೆ ಹಿರಿಯ ನಟ ಬಾಲಕೃಷ್ಣ ಅವರಿಗೆ ನೀಡಿರುವಂತಹ ಜಮೀನು ಅರಣ್ಯ ಇಲಾಖೆಗೆ ಒಳಪಟ್ಟಿರುತ್ತದೆ ಮತ್ತು ಅವರ ಕಾಲ ನಂತರದಲ್ಲಿ ಅವರ ಮಕ್ಕಳು/ಮೊಮ್ಮಕ್ಕಳು ಹತ್ತು ಎಕರೆಯನ್ನು ಮಾರಾಟ ಮಾಡಿ ಸರ್ಕಾರಕ್ಕೆ ವಂಚಿಸಿರುತ್ತಾರೆ ಎಂಬ ವಿಷಯವನ್ನು ಪ್ರಸ್ತಾಪಿಸಿತ್ತು. ಈ ಕುರಿತು ವಾದ ವಿವಾದ ಆಲಿಸಿದ ನ್ಯಾಯಾಲಯವು ” ಈ ಸಂಬಂಧ ಅಭಿಮಾನಿ ಸಂಘವಾದ ಡಾ.ವಿಷ್ಣು ಸೇನಾ ಸಮಿತಿಗೆ ಹಕ್ಕಿರುವುದಿಲ್ಲವೆಂದೂ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಥವಾ ಸರ್ಕಾರದ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ತಿಳಿಸಿತು. ನ್ಯಾಯಾಧೀಶರ ಅಭಿಪ್ರಾಯದಂತೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ನಟ ದಿ.ಬಾಲಕೃಷ್ಣ ಅವರ ಕಲಾಸೇವೆಗೆ ಮೆಚ್ಚಿ ಸರ್ಕಾರವು ನೀಡಿದ 20 ಎಕರೆಯ ಭೂಮಿಯನ್ನು ಅವರ ಮಕ್ಕಳು ಖಾಸಗಿ…

Read More

ಬೆಂಗಳೂರು: “ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು  ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸಲ್ಲಿ ಶಾಸಕ ಮುನಿರತ್ನ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,“ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಚರ್ಚೆ ನಡೆಸಿದರು.  ʼದ್ವೇಷದ ರಾಜಕಾರಣ’ ಎಂದು ಹೇಳಿದರು. ಅದಕ್ಕೆ ನಾನು, “ಬಿಜೆಪಿ ಸರ್ಕಾರ ಇದ್ದ ವೇಳೆ ಕಾಂಗ್ರೆಸ್ ಶಾಸಕರ ಅನುದಾನಕ್ಕೆ ಏಕೆ ಕತ್ತರಿ ಹಾಕಿದ್ದರು? ಹೋಗಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನೇ ಕೇಳಿನೋಡಿ. ಕನಕಪುರಕ್ಕೆ ಬಂದಿದ್ದ ವೈದ್ಯಕೀಯ ಕಾಲೇಜನ್ನು ಹೇಗೆ ತೆಗೆದರು? ಅಂತಾ. ಅದನ್ನು ಯಾವ ರಾಜಕಾರಣ ಎಂದು ಕರೆಯುತ್ತಾರೆ”ಎಂದು ಮುನಿರತ್ನ ಅವರಿಗೆ ಕೇಳಿದ್ದಾಗಿ ತಿಳಿಸಿದರು. “ಅದಕ್ಕೆ ಮುನಿರತ್ನ ಅವರು ನಾನು ಚಿಕ್ಕವನು, ಇದಕ್ಕೆಲ್ಲ ನನ್ನನ್ನ ಮುಂದೆ ಬಿಡಬೇಡಿ ಎಂದರು. ಇನ್ನೂ ಅನೇಕ…

Read More

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ಕಾರಣದಿಂದ ಸಿಡಬ್ಲುಆರ್ ಸಿ ಮತ್ತೆ ರಾಜ್ಯದ ವಿರುದ್ದ ಆದೇಶ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಡಬ್ಲುಆರ್ ತಮಿಳುನಾಡು ನಿಯಮಬಾಹಿರವಾಗಿ ನೀರು ಬಳಕೆ ಮಾಡಿಕೊಂಡಿರುವುದನ್ನು, ಕರ್ನಾಟಕದ ನೀರಿನ ಅಗತ್ಯತೆಯನ್ನು ಅರಿಯದೇ ಆದೇಶ ಮಾಡುತ್ತಿದೆ. ರಾಜ್ಯ ಸರ್ಕಾರವೂ ಸಿಡಬ್ಲುಎಂಎ ಹಾಗೂ ಸಿಡಬ್ಲುಆರ್ ಸಿ ಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸಿಡಬ್ಲುಆರ್ ಸಿಡಬ್ಲುಎಂಎ ಆದೇಶಗಳ ವಿರುದ್ದ ಮಧ್ಯಂತರ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು. ಆದರೆ,  ಇದುವರೆಗೂ ಹಾಕಿಲ್ಲ. ಇದರ ಪರಿಣಾಮ ರಾಜ್ಯದ ವಿರುದ್ದ ಮತ್ತೊಂದು ಆದೇಶ ಬರುವಂತಾಗಿದೆ ಎಂದು ಹೇಳಿದ್ದಾರೆ.

Read More

ಹಸಿರು ಪಟಾಕಿಗಳನ್ನು ಪತ್ತೆಹಚ್ಚಲು ಕ್ಯೂ ಆರ್ ಕೋಡ್ ಬಂದಿದೆ. ನಿಮ್ಮ ಮೊಬೈಲ್‌ ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ನೀವು ಖರೀದಿಸಿರುವುದು ಹಸಿರು ಪಟಾಕಿ ಹೌದ? ಅಲ್ಲವ ಎಂದು ಪರೀಕ್ಷಿಸಬಹುದು. ತಮಿಳುನಾಡು ಪಟಾಕಿ ತಯಾರಕರ ಸಂಘದ ಉಪಾಧ್ಯಕ್ಷ ಅಯ್ಯನ್ ಬೆಂಗಳೂರಿನಲ್ಲಿ ಮಾತನಾಡಿ ಶಿವಕಾಶಿಯಲ್ಲಿ ಪಟಾಕಿ ತಯಾರಕರು ಹಸಿರು ಪಟಾಕಿ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಸಿರು ಲೋಗೋ ಹೊರತುಪಡಿಸಿ, ಈ ವರ್ಷ ಕ್ಯೂಆರ್ ಕೋಡ್ ಪರಿಕಲ್ಪನೆ ಹೊರತಂದಿದ್ದೇವೆ ಎಂದರು.

Read More

ಮಾಧ್ಯಮಗಳು ಸಮಾಜ ಮತ್ತು ಸರ್ಕಾರದ ನಡುವೆ ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ. ಕೆ. ರವಿ ಅವರ ಸಂಪಾದಕತ್ವದ ‘ಮೀಡಿಯಾ ಆಫ್ ದಿ ಮಿಲೇನಿಯಂ’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು: ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದರಿಂದ ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೇರಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತಪಟ್ಟಿದ್ದಾನೆ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ.

Read More

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪರಾಧಿ ಮುತ್ತಪ್ಪ ಬಸಪ್ಪ ಸವದಿ 10,000 ರೂಪಾಯಿ ದಂಡ ಪಾವತಿಸುವಂತೆಯೂ ಸೂಚಿಸಿದೆ. ನ್ಯಾಯಾಧೀಶ ಮಂಜುನಾಥ್, ತೀರ್ಪಿನ ಪ್ರತಿಯನ್ನು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸಿ, ಮೃತ ಮಹಾದೇವಿಯ ಮಕ್ಕಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ.

Read More

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿ ಹೆಸರು, ತಂದೆ-ತಾಯಿ ಹೆಸರು, ಜನ್ಮ ದಿನಾಂಕ ಮತ್ತು ಇತರ ತಪ್ಪುಗಳಿದ್ದರೆ ಇನ್ಮುಂದೆ ಆನ್‌ಲೈನ್‌ನಲ್ಲಿಯೆ ತಿದ್ದುಪಡಿ ಮಾಡಿಕೊಳ್ಳಬಹುದು. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ತಿದ್ದುಪಡಿಗಾಗಿ ವ್ಯಾಸಂಗ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ದಾಖಲೆಗಳನ್ನು ಸಲ್ಲಿಸಬೇಕು. ಮುಂದಿನ ಒಂದು ತಿಂಗಳ ಮಟ್ಟಿಗೆ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬಳಿಕ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

Read More