Author: admin

ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ. ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅಟ್ಯಾಕ್ ‌ನಲ್ಲಿ ಮದನ್ ಕೈ ಯನ್ನು ಆರೋಪಿಗಳು ಕತ್ತರಿಸಿದ್ರು. ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.

Read More

ನವದೆಹಲಿ: ಭಾರತದಾದ್ಯಂತ ಅನೇಕ ಮೊಬೈಲ್ ಬಳಕೆದಾರರ ಮೊಬೈಲ್ ಗಳಿಗೆ ಭಾರತ ಸರ್ಕಾರ ತುರ್ತು ಧ್ವನಿಯೊಂದಿಗೆ ಸಂದೇಶವೊಂದನ್ನು ಕಳುಹಿಸಿದೆ. ಈ ಸಂದೇಶದ ಏನು ಎನ್ನುವುದು ತಿಳಿಯದೇ ಸಾರ್ವಜನಿಕರು ಕ್ಷಣ ಕಾಲ ದಂಗಾದ ಘಟನೆ ಕೂಡ ನಡೆಯಿತು.ಈ ಸಂದೇಶ ಬರುವುದಕ್ಕೂ ಮೊದಲು ಹಲವರ ಮೊಬೈಲ್ ಗಳಿಗೆ ಈ ರೀತಿಯ ಸಂದೇಶವನ್ನ ಕಳುಹಿಸುವುದಾಗಿ ಮೊದಲೇ ಮೆಸೇಜ್ ಗಳನ್ನು ಕಳುಹಿಸಲಾಗಿತ್ತು. ಅದರಲ್ಲಿ “ ಪ್ರಮುಖ ಸೂಚನೆ”: ತುರ್ತು ಪರಿಸ್ಥಿತಿಯ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ, ಈ ಸಂದೇಶವು ನಿಜವಾದ ತುರ್ತುಪರಿಸ್ಥಿತಿಯನ್ನ ಸೂಚಿಸುವುದಿಲ್ಲ. ಈ ಸಂದೇಶವನ್ನು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಯೋಜಿತ ಪ್ರಯೋಗ ಪ್ರಕ್ರಿಯೆಯಾಗಿ ಕಳುಹಿಸಲಾಗಿದೆ. ಎಂದು ತಿಳಿಸಲಾಗಿತ್ತು. ಆ ಬಳಿಕ ಬಂದ ಸಂದೇಶದಲ್ಲಿ ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ…

Read More

ದೇಶದಲ್ಲಿ ರಾಜಕೀಯ ವಾತಾವರಣ ಕಲುಷಿತವಾಗಿದ್ದು, ಮತ್ತೊಮ್ಮೆ ಸಂಪೂರ್ಣ ಕ್ರಾಂತಿಗೆ ದೇಶದ ನೆಲ ಹದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾರತ ಯಾತ್ರಾ ಕೇಂದ್ರ, ಲೋಕನಾಯಕ ಜೆ. ಪಿ. ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಜಯಪ್ರಕಾಶ್ ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ. ಆರ್. ಪಾಟೀಲ ಅವರಿಗೆ ಜೆ. ಪಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರ ನಿರ್ದೇಶಕ ಟಿ. ಎನ್. ಸೀತಾರಾಂ ಇತರರಿದ್ದರು.

Read More

ಬೆಂಗಳೂರು: ಪ್ರೇಯಸಿಯ ಖಾಸಗಿ ಫೋಟೊಗಳನ್ನು ಅಪ್‌ಲೋಡ್ ಮಾಡಲು ‘ಆ್ಯಪ್’ ಸೃಷ್ಟಿಸಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸಂಜಯ್ ಕುಮಾರ್(26) ಬಂಧಿತ ಆರೋಪಿ. ಆರೋಪಿಯಿಂದ ಪೆನ್‌ ಡ್ರೈವ್, ಲ್ಯಾಪ್‌ ಟಾಪ್, ಎರಡು ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ಜತೆಗೆ ಕೃತ್ಯದಲ್ಲಿ ಇನ್ನೂ 12 ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಹಾಗೂ ತಮಿಳುನಾಡಿನ ಯುವತಿ ಸಹಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

Read More

ಬೆಂಗಳೂರು: ಮಣಿಪಾಲ ಆಸ್ಪತ್ರೆಗಳ ಸಮೂಹವು ‘ಹೃದಯದ ರಕ್ಷಕ 2. 0’ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಡಿ ನಗರದ ಆಯ್ದ 40 ಸಂಚಾರ ಪೊಲೀಸರಿಗೆ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗೆ ಸಂಬಂಧಿಸಿದ ತರಬೇತಿ (ಸಿಪಿಆರ್) ನೀಡಲಾಯಿತು. ತರಬೇತಿಗೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ. ಎನ್. ಅನುಚೇತ್ ಚಾಲನೆ ನೀಡಿ ಮಾತನಾಡಿದರು. ಹೃದಯಾಘಾತಕ್ಕೆ ಒಳಗಾದವರಿಗೆ ಸಿಪಿಆರ್ ವಿಧಾನದಿಂದ ಹೃದಯವನ್ನು ಪುನರುಜ್ಜೀವನಗೊಳಿಸಿ, ವ್ಯಕ್ತಿಯ ಜೀವ ಉಳಿಸಬಹುದಾಗಿದೆ ಎಂದರು.

Read More

ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಕನ್ನಡ ಭವನದ ಆವರಣದ ಬದಲು ವಿಧಾನಸೌಧ ಎದುರು ಸ್ಥಾಪಿಸಲು ಸರ್ಕಾರ ಆಲೋಚಿಸಿದೆ. ಪ್ರತಿಮೆ ನಿರ್ಮಾಣ ಕುರಿತು ಸರ್ಕಾರ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರತಿಮೆಯನ್ನು ವಿಧಾನಸೌಧದ ಸಮೀಪ ಸ್ಥಾಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಸ್ಥಳ ಪರಿಶೀಲಿಸಲಾಗುತ್ತಿದೆ.

Read More

ಬೆಂಗಳೂರು: ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಕಡೆ ಪಟಾಕಿ ಗೋದಾಮೀನ ಮೇಲೆ ದಾಳಿ ನಡೆಸಿದ್ದು, ಸುಮಾರು 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿಗಳನ್ನು ಜಪ್ತಿಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ವಿಜಯಪುರ ಚನ್ನರಾಯಪಟ್ಟಣದಲ್ಲಿ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Read More

ತನ್ನ ಪ್ರಿಯತಮೆಯ ಖಾಸಗಿ ಫೋಟೋವನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬಳಿಕ ಆಕೆಯ ಜೊತೆಯೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ಯುವಕನನ್ನು ಆಗ್ನೇಯ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಅಂಜಯ್ (26) ಬಂಧಿತ ಆರೋಪಿ. ಈತ ಪ್ರಿಯತಮೆಯ ಫೋಟೊ ಹಾಕಿ ಅದರಿಂದ ಬರುವ ಅಶ್ಲೀಲ ಕಮೆಂಟ್ ನೋಡಿ ಖುಷಿ ಪಡುತ್ತಿದ್ದ. ಆರೋಪಿ ವಿಚಾರಣೆ ವೇಳೆ ಆತನ ಮತ್ತಷ್ಟು ಕಾಮಕೃತ್ಯ ಬಯಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

Read More

ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಿಗೆ ಹೋಗದೇ ಕೇವಲ ಆಧಾರ್ ಬಳಸಿಕೊಂಡು ಹಣ ಪಡೆಯಲು ದೇಶದಲ್ಲಿ ಎಇಪಿಎಸ್ (ಆಧಾರ್ ಆಧಾರಿತ ಹಣ ಪಾವತಿ ವ್ಯವಸ್ಥೆ) ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿರುವ ಸೈಬರ್ ವಂಚಕರು ಜನರ ಖಾತೆಗಳಲ್ಲಿರುವ ಹಣ ದೋಚುತ್ತಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿ ಸೇರಿದಂತೆ ಹಲವು ಕಡೆಯ ಕೆಲಸಗಳಿಗಾಗಿ ಆಧಾರ್ ಬಯೋಮೆಟ್ರಿಕ್ (ಬೆರಳಚ್ಚು) ಮಾಹಿತಿ ಹಂಚಿಕೊಳ್ಳುತ್ತಿರುವ ಜನರ ಖಾತೆಯಲ್ಲಿರುವ ಹಣ ಇವರ ಅರಿವಿಗೆ ಬಾರದಂತೆ ಕಡಿತವಾಗುತ್ತಿದೆ

Read More

ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ. ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ. ಇಂದು ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನ್ಯಾಯಾಲಯದ ತೀರ್ಪು ಬಂದಿದೆ. ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು 2020ರಲ್ಲಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಹಿಂದೂಗಳು ವಿವಾದಿತ ಸ್ಥಳದಲ್ಲಿ ಪೂಜೆ ಸಲ್ಲಿಸಬೇಕು. PIL ಅದರ ಪ್ರಸ್ತುತ ರೂಪದಲ್ಲಿ ವಿವಾದಿತ ಆವರಣದ ವೈಜ್ಞಾನಿಕ ತನಿಖೆಯನ್ನು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ಒತ್ತಾಯಿಸಿದೆ.…

Read More