Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ಜ್ಯುವೆಲರಿ ಅಂಗಡಿಯಲ್ಲಿ ಕೆಲಸಗಾರನಾಗಿ ಸೇರಿ ಕಳ್ಳತನ ಮಾಡಿದ್ದ 1 ಕೆ.ಜಿ 262 ಗ್ರಾಂ ಚಿನ್ನದ ಆಭರಣಗಳನ್ನು ಅಂತರ್ ರಾಜ್ಯ ಕಳ್ಳರ ಬಂಧನವಾಗಿದೆ. ಅಂಗಡಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಆಗಸ್ಟ್ 28 ದ ರಂದು ಆಂದ್ರದ ನೆಲ್ಲೂರಿನ ಮಹೇಶ್ ಮತ್ತು ಶಕ್ತಿ ಗೋಲ್ಡ್ ಇವರ ಅಂಗಡಿಯ ಮಾಲೀಕರಿಗೆ ಒಟ್ಟು 1 ಕೆಜಿ 2620 ತಂದ ಚಿನ್ನದ ಆಭರಣಗಳನ್ನು ಕೊಟ್ಟು ಬರಲು ಕಳುಹಿಸಿಕೊಟ್ಟಿರುತ್ತಾನೆ. ಸೆಲ್ಸ್ ಮ್ಯಾನ್ ಆಗಿ ನೆಲ್ಲೂರಿಗೆ ಹೋಗಿದ್ದಲ್ಲದೇ ಮೊಬೈಲ್ ಮೂಲಕ ಅಂಗಡಿ ಮಾಲೀಕರಿಗೆ ನೆಲ್ಲೂರಿನಲ್ಲಿ ತನ್ನನ್ನು ಯಾರೋ ಅಪರಿಚಿತರು ಅಡ್ಡಗಟ್ಟಿ ತನ್ನ ಕೈಯಲ್ಲಿದ್ದ ಚಿನ್ನದಿಂದ ಕೂಡಿದ್ದ ಬ್ಯಾಗ್ ನ್ನು ದೋಚಿರುತ್ತಾರೆ ಎಂದಿರುತ್ತಾನೆ. ಅಲ್ಲಿ ದೂರನ್ನು ದಾಖಲಿಸಿದ್ದಾನೆ. ಈ ಸಂಬಂಧ ಅಂಗಡಿ ಮಾಲೀಕರಿಂದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಪೊಲೀಸ್ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ಕೈಗೊಂಡು, ಸೇಲ್ಸ್ಮ್ಯಾನ್ ನಿಂದ ನಿಜವಾಗಿ ನಡೆದ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ. ನಂತರ ಸೆಲ್ಸ್ಮ್ಯಾನ್ ಆರೋಪಿಯನ್ನು 10…
ಬೆಂಗಳೂರು: ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯದ, ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ರಾಜ್ಯದಲ್ಲಿ 51 ಆದಿವಾಸಿ ಜನಾಂಗಗಳಿದ್ದು, ಸೋಲಿಗ , ಜೇನುಕುರುಬ ಸೇರಿದಂತೆ 12 ಬುಡಕಟ್ಟು ಜನಾಂಗಗಳು ಸೌಲಭ್ಯ ವಂಚಿತವಾಗಿವೆ. ಅವರಲ್ಲಿ ಹಲವರಿಗೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು ಕೂಡ ಇಲ್ಲದ ಪರಿಸ್ಥಿತಿ ಇದೆ. ಶಿಬಿರಗಳನ್ನು ಆಯೋಜಿಸಿ ಆಧಾರ್ ಮುಂತಾದ ದಾಖಲೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗವು ಮನವಿ ಮಾಡಿತು. ಎಎನ್ಎ ಮ್, ನರ್ಸಿಂಗ್, ಮುಂತಾದ ಶಿಕ್ಷಣ ಪಡೆದಿರುವ ಬುಡಕಟ್ಟು ಜನಾಂಗಗಳ ಮೊದಲ ಪೀಳಿಗೆಗೆ ಆರೋಗ್ಯ ಇಲಾಖೆಯಲ್ಲಿ ಕೆಲಸ ನೀಡುವ ಬಗ್ಗೆ ಹಾಗೂ ಪ್ರಸ್ತುತ ಅರಣ್ಯ ಇಲಾಖೆಯ ಅರಣ್ಯ…
ಬೆಂಗಳೂರು: “ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆ ನಂತರ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ 5 ವರ್ಷಕ್ಕೆ ನೀಡಿರುವ ಪಟಾಕಿ ಮಳಿಗೆ, ದಾಸ್ತಾನು ಪರವಾನಗಿಯನ್ನು ಇನ್ನು ಮುಂದೆ ಒಂದು ವರ್ಷಕ್ಕೆ ಮಾತ್ರ ನೀಡಲಾಗುವುದು. ಈ ಹಿಂದಿನ ಕಾನೂನುಗಳನ್ನು ಮೀರಿ ಅಧಿಕಾರಿಗಳು ಪರವಾನಗಿ ನೀಡಿದ್ದರೆ ಅಂತಹ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗುವುದು, ಪರಿಶೀಲನೆ ಮಾಡದ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು” ಎಂದರು. ಸರ್ಕಾರದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆಯೇ ಎನ್ನುವ ಪ್ರಶ್ನೆಗೆ “ಮುಖ್ಯಮಂತ್ರಿಗಳ ಸಭೆಯೇ ಜಾಗೃತಿ ಮೂಡಿಸುವ ದೊಡ್ಡ ಸಂದೇಶ. ಇತರೇ ಪಟಾಕಿಗಳಿಂದ ಅವಘಡಗಳೆ ಹೆಚ್ಚು,…
ಬೆಂಗಳೂರು: “ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದೂ ಅವರು ತಿಳಿಸಿದರು. ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಂಗಳವಾರ ಮಾತನಾಡಿದರು. “ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು…
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ ನೀಡಿದರು.ಅಲ್ಲದೇ ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚಿಸಿದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದರು. ಎಕ್ಸ್ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು…
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ…
ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ..…
ಪಲ್ಲಕ್ಕಿ ಬಸ್ ಗಳು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು, ಬಸ್ಸುಗಳನ್ನು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ವಿನ್ಯಾಸಗೊಳಿಸಲಾಗಿದೆ. > ವಾಹನದ ಎತ್ತರ 3.4 ಮೀಟರ್ (ಹಿಂದೆ 3.2 ಮೀಟರ್ ಇತ್ತು) > ಆಸನಗಳ ಸಂಖ್ಯೆ 52, ಆಸನಗಳ ಮಧ್ಯೆ ಹೆಚ್ಚು ಸ್ಮಳಾವಕಾಶ > ವಿಶಾಲವಾದ ಪ್ರಯಾಣಿಕರ ಕಿಟಕಿ ಪ್ರೇಮ್ > ದೊಡ್ಡದಾದ ಕಿಟಕಿ ಗಾಜು ಟಿಂಟೆಡ್ ಗಾಜುಗಳು > ಒಳಾಂಗಣದಲ್ಲಿ ಸತತ ಎಲ್.ಇ. ಡಿ ದೀಪ > ಬಸ್ಸಿನ ಹಿಂದೆ, ಮುಂದೆ ಎಲ್.ಇ.ಡಿ ಮಾರ್ಗ ಫಲಕ > ಆಡಿಯೋ ಸ್ಪೀಕರ್ ಅಳವಡಿಕೆ ಹಾಗೂ ಸಾರ್ವಜನಿಕ ಮಾಹಿತಿ > ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ಚಾರ್ಜ್ ಮಾಡುವ ಸೌಲಭ್ಯ ಉದ್ಯೋಷಣಾ ವ್ಯವಸ್ಥೆ: > ಡಿಜಿಟಲ್ ಗಡಿಯಾರ > ಪ್ರಯಾಣಿಕರಿಗೆ ತಲೆದಿಂಬು ವ್ಯವಸ್ಥೆ > ಚಾಲಕರಿಗೆ ಸಹಕಾರಿಯಾಗುವಂತೆ ಹಿನ್ನೋಟ ಕ್ಯಾಮರಾ ಸೌಲಭ್ಯ
ಭಾರತೀಯ ಹ್ಯಾಕರ್ ಗಳು ಇಸ್ರೇಲ್ ಗೆ ಬೆಂಬಲವನ್ನು ನೀಡಿದ್ದು, ಪ್ಯಾಲೆಸ್ತೀನ್ ಮತ್ತು ಹಮಾಸ್ ಗೆ ಸೇರಿದ ಪ್ರಮುಖ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಲಾಗಿದೆ. ‘ಇಂಡಿಯನ್ ಸೈಬರ್ ಫೋರ್ಸ್’ ಎಂಬ ಭಾರತೀಯ ಹ್ಯಾಕರ್ ತಂಡವು ಪ್ಯಾಲೆಸ್ತೀನ್ ಸರ್ಕಾರದ ಅಧಿಕೃತ ವೆಬ್ಸೈಟ್ ಗಳು ಮತ್ತು ಹಮಾಸ್ ವೆಬ್ಸೈಟ್ ಅನ್ನು ಹ್ಯಾಕ್ ಮಾಡಿದೆ. ಪ್ಯಾಲೇಸ್ಟಿನಿಯನ್ ವೆಬ್ಮೇಲ್ ಸರ್ಕಾರಿ ಸೇವೆ, ನ್ಯಾಷನಲ್ ಬ್ಯಾಂಕ್ ವೆಬ್ಸೈಟ್, ಟೆಲಿ ಕಮ್ಯುನಿಕೇಷನ್ ಮತ್ತು ಹಮಾಸ್ ಅಧಿಕೃತ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಲಾಗಿದೆ.
ಗಾಂಜಾ ಸೇವನೆಯನ್ನು ದೃಢಪಡಿಸಲು ವೈದ್ಯರು ಮೂತ್ರ, ಸಲೈವ, ಕೂದಲಿನ ಪರೀಕ್ಷೆಯನ್ನು ನಡೆಸುತ್ತಿದ್ದರು. ಅದರ ವರದಿ ಸಿಗಲು ವಿಳಂಬವಾಗುತ್ತಿತ್ತು. ಇದನ್ನು ತಪ್ಪಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದ್ದು, ಕೇವಲ ಸೆಕೆಂಡುಗಳಲ್ಲಿ ಗಾಂಜಾ ಸೇವಿಸಿದ್ದೀರಿ, ಇಲ್ಲ ಎಂಬುದನ್ನು ಪತ್ತೆಹಚ್ಚಬಲ್ಲದು. ನ್ಯೂಜೆರ್ಸಿಯ ಸಂಶೋಧಕ ಸ್ಯಾಂಗ್ ವನ್ ಬೀ ನೇತೃತ್ವದ ತಂಡ ಇಂಥದ್ದೊಂದು ಸಂಶೋಧನೆ ನಡೆಸಿದ್ದು, 30 ಮಂದಿಯನ್ನು ಪ್ರಯೋಗಕ್ಕೂ ಒಳಪಡಿಸಿ ಯಶಸ್ವಿಯಾಗಿದೆ.