Author: admin

ಪಿಟಿಐ ವರದಿಯ ಪ್ರಕಾರ ದೇವಾಲಯದಲ್ಲಿ ಭಕ್ತರಿಗೆ ಡ್ರೆಸ್ ಕೋಡ್ 1 ಜನವರಿ 2024 ರಿಂದ ಜಾರಿಗೆ ಬರಲಿದೆ. “ಜನವರಿ 1, 2024 ರಿಂದ ದೇವಸ್ಥಾನದೊಳಗೆ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ದೇವಾಲಯದ ‘ಸಿಂಗ ದ್ವಾರ’ದಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಮತ್ತು ದೇವಾಲಯದೊಳಗಿನ ಪ್ರತಿಹಾರಿ ಸೇವಕರಿಗೆ ಕೋಡ್ ಜಾರಿಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ” ಎಂದು ಶ್ರೀ ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಮುಖ್ಯಸ್ಥ ರಂಜನ್ ಕುಮಾರ್ ದಾಸ್, ಪಿಟಿಐ ವರದಿ ಮಾಡಿದೆ. ದೇವಸ್ಥಾನದಲ್ಲಿ ಅಸಭ್ಯ ವಸ್ತ್ರ ಧರಿಸಿದವರು ಕಂಡು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದಲ್ಲಿ ಸರಿಯಾದ ವಸ್ತ್ರ ಸಂಹಿತೆಯನ್ನು ಅಳವಡಿಸುವುದು ದೇವಾಲಯದ ಘನತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ಹರಿದ ಜೀನ್ಸ್ ಪ್ಯಾಂಟ್, ಸ್ಲೀವ್ ಲೆಸ್ ಡ್ರೆಸ್, ಹಾಫ್ ಪ್ಯಾಂಟ್ ಹಾಕಿಕೊಂಡು ಕೆಲವರು ಸಮುದ್ರ ತೀರದಲ್ಲೋ, ಪಾರ್ಕ್ ನಲ್ಲೋ ಅಡ್ಡಾಡುತ್ತಿರುವಂತೆ ದೇವಸ್ಥಾನದಲ್ಲಿ ಕಂಡು ಬಂದಿದ್ದು, ದೇವಸ್ಥಾನ ದೇವರ ವಾಸಸ್ಥಾನವೇ ಹೊರತು ಮನರಂಜನಾ…

Read More

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸದ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಕ್ಕೆ ಮೂಲಭೂತ ಸೌಕರ್ಯ ಕೊರತೆ ಇರುವುದು ತಿಳಿದಿಲ್ಲವೇ ? ಮೂಲಭೂತ ಸೌಕರ್ಯ ಒದಗಿಸಲೂ 5 ವರ್ಷಗಳ ಯೋಜನೆ ಬೇಕೆ ? 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. 32 ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಡ ಮಕ್ಕಳಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲವೇ ? ಶ್ರೀಮಂತರ ಮಕ್ಕಳು ಮಾತ್ರ ಶಿಕ್ಷಣ ಪಡೆಯಬೇಕೇ ? ಮೂಲಭೂತ ಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿದೆ. ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆ ಪ್ರೋತ್ಸಾಹಿಸುತ್ತಿದ್ದೀರಾ? ಹಣವಿಲ್ಲದ ಬಡ ಜನರು ಮಕ್ಕಳಿಗೆ ಶಿಕ್ಷಣ ನೀಡುವುದು ಹೇಗೆ? ಎಂದು ತರಾಟೆಗೆ ತೆಗೆದುಕೊಂಡಿದೆ.

Read More

ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ..…

Read More

ಬೆಂಗಳೂರು:“ನಾಗರೀಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಬೆಂಗಳೂರಿನ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ತಾವು ಕೈಗೊಳ್ಳಲಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. “ಬೆಂಗಳೂರಿಗೆ ಅಂಟಿರುವ ಗ್ರಾಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ನಾವು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ ಕ್ಯೂಆರ್  ಕೋಡ್ ಹಾಕಿ ಅಲ್ಲಿನ ಕಾಮಗಾರಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಲಾಗುವುದು. ಜನರಿಗೆ ಆ ರಸ್ತೆಯ ಕಾಮಗಾರಿ ಕುರಿತು ಜನರಿಗೆ ಮಾಹಿತಿ ನೀಡಿ ಪಾರದರ್ಶಕತೆ ನೀಡಲಾಗುವುದು. ಬಿಬಿಎಂಪಿ ಚುನಾವಣೆಗೆ 225 ವಾರ್ಡ ಮಾಡಲಾಗಿದೆ. ವಾರ್ಡ್ ಸಮಿತಿ ಇಲ್ಲದ ಕಾರಣ ಜನರು ಕೆಲವು ಸಲಹೆ ನೀಡಿದ್ದಾರೆ. ಅದೇನೆಂದರೆ ಪಾರ್ಕ್, ಆಟದ ಮೈದಾನಗಳ…

Read More

ಬೆಂಗಳೂರು: ಅರಣ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕ ಎಂದು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ. ಅಕ್ಟೋಬರ್ 2ರಿಂದ 8  ರವರೆಗೆ ನಡೆದ 69ನೇ ವನ್ಯಜೀವಿ ಸಪ್ತಾಹದ  ವಿವಿಧ ಸ್ಪರ್ಧೆಗಳ  ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಜನರಲ್ಲಿ ಅರಣ್ಯ ವನ್ಯಜೀವಿಗಳ ಮಹತ್ವವನ್ನು ತಿಳಿಸುವ ಅಗತ್ಯವಿದ್ದು, ಶಾಲಾ ಮಕ್ಕಳಿಗೆ ಪಠ್ಯದಲ್ಲಿಯೇ ವನ್ಯಜೀವಿಗಳು ಮತ್ತು ಅರಣ್ಯದ  ಮಹತ್ವದ ಬಗ್ಗೆ ತಿಳಿಯ ಹೇಳುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು. ಈ ಸಪ್ತಾಹದ ಸಂದರ್ಭದಲ್ಲಿ ಹಳೆಯ ವಾಹನಗಳ ಯಾನ, ವಿವಿಧ ಸ್ಪರ್ಧೆಗಳು,  ವನ್ಯಜೀವಿಗಾಗಿ ನಡಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ಜನರಿಗೆ ಅರಿವು ಮೂಡಿಸಲಾಯಿತು ಎಂದರು. ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ  ಈವರೆಗೆ ಐದು ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ…

Read More

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆ ನಿಟ್ಟಿನಲ್ಲಿ ನಡೆಸುತ್ತಿರುವ ರಾಜ್ಯ ಪ್ರವಾಸವನ್ನು ಮುಂದುವರಿಸಿದ್ದಾರೆ. ಅಕ್ಟೋಬರ್‌ 12ರಿಂದ ನಾಲ್ಕು ದಿನಗಳ ಕಾಲ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಆಯ್ದ ಗ್ರಾಮಗಳಲ್ಲಿ ನಡೆಯುವ ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರ ಜೊತೆ ನೇರವಾಗಿ ಮಾತುಕತೆ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆಗಳನ್ನು, ಭೇಡಿಕೆಗಳನ್ನು ಆಲಿಸಲಿದ್ದಾರೆ. ಜಿಲ್ಲಾ ಭೇಟಿ ವಿವರ: ಅಕ್ಟೋಬರ್‌ 12, ಗುರುವಾರ, ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನವಲಿ ಗ್ರಾಮದಲ್ಲಿ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್‌ 13, ಶುಕ್ರವಾರ, ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾಗೋಷ್ಠಿ  , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ…

Read More

ಬಿಸಿಯೂಟ ನೌಕರರಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ. ಫ್ರೀಡಮ್ ಪಾರ್ಕ್‌ ನಲ್ಲಿ ಅನಿರ್ಧಿಷ್ಟ ಧರಣಿ ಆರಂಭಿಸಲಾಗುತ್ತದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಅಧ್ಯಕ್ಷ ಪ್ರಭುದೇವ್ ಯಳಸಂಗಿ ಹೇಳಿದ್ದಾರೆ. ಅನಿರ್ಧಿಷ್ಟ ಧರಣಿಯಲ್ಲಿ ಜಿಲ್ಲೆಯಿಂದ ಸುಮಾರು 150 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಿಸಿಯೂಟ ತಯಾರಕರು ಪಾಲ್ಗೊಳ್ಳುವರು ಎಂದರು

Read More

ಬೆಂಗಳೂರು: ಯಲಹಂಕ ತಾಲೂಕಿನ, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ. 28 ರಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು 70 ಕೋಟಿ ರೂ. ಮೌಲ್ಯದ 6. 05 ಎಕರೆ ಸರ್ಕಾರಿ ಜಮೀನನ್ನು ಸೋಮವಾರ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ವಾರದಲ್ಲಿ ಕಂದಾಯ ಇಲಾಖೆ ನಡೆಸುತ್ತಿರುವ ನಾಲ್ಕನೇ ಒತ್ತುವರಿ ಕಾರ್ಯಾಚರಣೆ ಇದಾಗಿದೆ. ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ.

Read More

ರಾಮನಗರ: ಡಿ.ಕೆ. ಶಿವಕುಮಾರ್ ಅವರಿಂದಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿದ್ದು ಎಂದು ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪತನವಾಗು ಗ್ಯಾರಂಟಿ, ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ. ನಮ್ಮ ಹಾಸನಕ್ಕೆ ಕಳಿಸಬಹುದು, ಅವರು ತಿಹಾರ್ಗೆ ಓಡುವ ಕಾಲ ಹತ್ತಿರವಿದೆ. ಡಿ.ಕೆ.ಶಿವಕುಮಾರ್ ಒಮ್ಮೆ ತಿಹಾರ್ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಶಾಶ್ವತವಾಗಿ ತಿಹಾರ್ಗೆ ಹೋದರೂ ಅಚ್ಚರಿ ಅಲ್ಲ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೇಳಿದರು.

Read More

ಬೆಂಗಳೂರು: ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರದ್ದು ಉತ್ತರನ ಪೌರುಷ. ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು ಬಾರಿ ಅಧಿಕಾರ ಕೊಡಿ ಎಂದಿದ್ದರು. ಆದರೆ ನೀವು ಸಿಎಂ ಆದ್ರಾ? ಎಂದು ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿಮಾಡಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗೆ ಇಲ್ವಲ್ಲಾ. ಉತ್ತರನ ಪೌರುಷ ನಿಮ್ಮದು ಅಂತ ಜನ ಮಾತನಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಯಾರು ತೆಗೆದರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಈಗ ರಾಜ್ಯದ ಜನರಿಗೆ ಸತ್ಯ ಹೇಳಬೇಕು ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ಮಾಡಿದರು.

Read More