Author: admin

ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿನಾ ಜೈಲಿಗೆ ಕಳುಹಿಸಿ ಅಂತಾ ಇವರೇ ಮನವಿ ಮಾಡಿರಬೇಕು. ಬಹುಶಃ ಅಮಿತ್ ಶಾಗೆ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ ಬಂದಿರಬೇಕು ಎಂದಿದ್ದಾರೆ. ಕುಮಾರಸ್ವಾಮಿ ಗೊಡ್ಡು ಬೆದರಿಕೆಗೆ ಹೆದರುವ ಜಾಯಮಾನ ನಮ್ಮದಲ್ಲ. ಇವರು ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತೆ. JDS ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆನುಡಿ ನೋಡಿ ತಮ್ಮ ದಾರಿ ನೋಡಿಕೊಳ್ಳುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ ಎಂದರು.

Read More

ಮಂಡ್ಯ: ಕಾವೇರಿ ನೀರಿನ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯೆಪ್ರವೇಶ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿರುವ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ ಕಾವೇರಿ ವಿಚಾರವಾಗಿ ಪ್ರತ್ಯೇಕವಾದ ಎರಡು ಬೋರ್ಡ್ ಇದೆ. ಇದರಲ್ಲಿ ಸುಪ್ರಿಂ ಕೋರ್ಟ್ ಸಹ ಮಧ್ಯಪ್ರವೇಶ ಮಾಡಲು ಆಗುವುದಿಲ್ಲ. ಅಧಿಕಾರಿಗಳು ಏನು ನಿರ್ಣಯ ಮಾಡುತ್ತಾರೆ ಅದೇ ಅಂತಿಮ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಂತಹದರಲ್ಲಿ ಯಾರು ಮಧ್ಯ ಪ್ರವೇಶಿಸಬೇಕು. ತಮಿಳುನಾಡು, ಕರ್ನಾಟಕ ನಿರ್ಧಾರ ಮಾಡುವುದು ಅಲ್ಲ ಎಂದು ಹೇಳಿದರು.

Read More

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ರೈತರ ಬದುಕಿಗೆ ಗ್ಯಾರಂಟಿ ಇಲ್ಲ. ಕೆಲವು ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು. ಈಗಾಗಲೇ ಪಂಜಾಬ್ ರಾಜ್ಯ ದಿವಾಳಿ ಆಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆಗೆ ಹೋಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಶ್ರಮದ ಹಣವನ್ನು ಸೋಮಾರಿಗಳಿಗೆ ನೀಡುತ್ತಿದೆ. ಉಚಿತ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಸರ್ಕಾರ ಜನ ವಿರೋಧಿಯಾಗಿದೆ. ಕೇವಲ 5 ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಜನ ವಿರೋಧಿಯಾಗಿದೆ. ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರದ ದರ್ಪದಲ್ಲಿ ಮೆರೆಯುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ಮಾಡಿದರು.

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ. ಲಡಾಖ್ ನ ಮೌಂಟ್ ಕುನಿಯಲ್ಲಿ ಹಿಮಪಾತ. ಒಬ್ಬ ಯೋಧ ವೀರ ಮರಣವನ್ನಪ್ಪಿದರೆ ಮೂವರು ನಾಪತ್ತೆಯಾಗಿದ್ದಾರೆ. ನಿತ್ಯದ ತರಬೇತಿಯ ಅಂಗವಾಗಿ ಶಿಖರವನ್ನು ಹತ್ತುವಾಗ ಈ ಅವಘಡ ಸಂಭವಿಸಿದೆ. ಹೈ ಆಲ್ಟಿಟ್ಯೂಡ್ ವಾರ್‌ ಫೇರ್ ಸ್ಕೂಲ್ ಮತ್ತು ಸೇನೆಯ ಆರ್ಮಿ ಅಡ್ವೆಂಚರ್ ವಿಂಗ್‌ ನ 40 ಸೈನಿಕರು ತರಬೇತಿಯಲ್ಲಿ ಭಾಗವಹಿಸಿದ್ದರು. ತರಬೇತಿ ಸಮಯದಲ್ಲಿ ಹಿಮ ಬೀಳುತ್ತಿತ್ತು. ಯೋಧನ ಮೃತದೇಹ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ನಡೆಯುತ್ತಿದೆ. ಪ್ರತಿಕೂಲ ಹವಾಮಾನದ ನಡುವೆಯೂ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: ರಸ್ತೆಬದಿಯಲ್ಲಿ ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಚನ್ನಸಂದ್ರಲೇಔಟ್ ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಬಂಧಿತ ಆರೋಪಿ. ಕೆಂಗೇರಿಯ ಕೋಟೆ ಬೀದಿಯ ಮಾರಮ್ಮ ದೇವಸ್ಥಾನದ ಬಳಿ ನಿಲುಗಡೆ ಮಾಡಿದ್ದ ಬೈಕ್ ಕಳ್ಳತನವಾಗಿದೆ ಎಂದು ನಾರಾಯಣ ಮೂರ್ತಿ ಎಂಬುವರು ದೂರು ನೀಡಿದ್ದರು. ತನಿಖೆ ಕೈಗೊಂಡಾಗ ಆರೋಪಿ ಸರಣಿ ಕಳ್ಳತನ ನಡೆಸಿರುವುದು ಗೊತ್ತಾಗಿದೆ.

Read More

ತುಮಕೂರು: ಕೇಂದ್ರ ಬರ ಅಧ್ಯಯನ ತಂಡ ತುಮಕೂರು ಜಿಲ್ಲೆಗೆ ಆಗಮಿಸಿ ಮಾಹಿತಿ ಕಲೆ ಹಾಕಿತು. ಮೂರು ಅಧಿಕಾರಿಗಳ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ  ನಡೆಸಿತು ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿತ್ತು. ಗ್ರಾಮದ ರೈತ ನಾಗೇಂದ್ರಕುಮಾರ್ ಜಮೀನಿಗೆ ಭೇಟಿ ನೀಡಿ ಶೇಂಗಾ ಬೆಳೆದಿರುವ ನಾಗೇಂದ್ರ ಕುಮಾರ್ ಅವರಿಂದ ನಷ್ಟದ ಮಾಹಿತಿ ಪಡೆಯಿತು. 1.20 ಎಕರೆ ಪ್ರದೇಶದಲ್ಲಿ  ರೈತ ನಾಗೇಂದ್ರ ಕುಮಾರ್ ಶೇಂಗಾ ಬೆಳೆದಿದ್ದಾರೆ. ಭೈರೇನಹಳ್ಳಿ ಗ್ರಾಮದ ಹಲವು ರೈತರ ಜಮೀನಿಗೆ ಭೇಟಿ ನೀಡಿ ಮುಸಿಕಿನ ಜೋಳ, ತೊಗರಿ, ಶೇಂಗಾ, ರಾಗಿ ಬೆಳೆ ಬೆಳೆದಿರುವ ರೈತರಿಂದ ಮಾಹಿತಿ ಪಡೆಯಿತು. ಮಳೆ ಬಾರದೆ ಒಣಗಿರುವ ಬೆಳೆಗಳ ನ್ನು ಕೊರಟಗೆರೆ, ಮಧುಗಿರಿ, ಶಿರಾ ತಾಲ್ಲೂಕಿನಲ್ಲಿ ಬರ ಅಧ್ಯಯನ ನಡೆಸಿತು

Read More

ತುಮಕೂರು: ಹೇಮಾವತಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದ್ದೀರಿ, ತುಮಕೂರಿಗೂ ನೀರು ಕೊಡಬೇಕು ಎಂಬ ಕುರಿತಂತೆ ಜಿಲ್ಲೆಯ ಸಚಿವದ್ವಯರಿಗೆ ಪತ್ರದ ಮೂಲಕ ಮನವಿ ಮಾಡಿರೋದಾಗಿ  ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಗೆ  ಹೇಮಾವತಿ ಹರಿಸುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಮನವಿ ಮಾಡಿದರು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಗೆ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣಗೂ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದರು. ಹೇಮಾವತಿ ನೀರು ತಮಿಳುನಾಡಿಗೆ ಬಿಡುತ್ತಿರುವುದು ದುರಂತವಾಗಿದೆ. ಕಳೆದ ತಿಂಗಳು ನೆಪ ಮಾತ್ರಕ್ಕೆ ತುಮಕೂರು ಜಿಲ್ಲೆಗೆ ನೀರು ಬಿಟ್ಟು ಸ್ಥಗಿತಗೊಳಿಸಲಾಗಿದೆ. ಕೇವಲ  5 ಟಿ.ಎಮ್ ಸಿ ನೀರು ಹರಿಸಲಾಗಿದೆ ಎಂದರು. ಇನ್ನುಳಿದ 20 ಟಿ.ಎಮ್.ಸಿ ನೀರು ಬಿಡುವಂತೆ ಆಗ್ರಹಿಸಿದ್ದಾರೆ. ತಮಿಳುನಾಡಿಗೆ ಯಾವ ಪುರುಷಾರ್ಥಕ್ಕೆ ನೀರು ಹರಿಸಲಾಗುತ್ತಿದೆ ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ. ಇಡೀ ಜಿಲ್ಲೆ ಬರಗಾಲದಿಂದ ತತ್ತರಿಸಿದೆ. ಈ ನಡುವೆ ಹೇಮಾವತಿ ನೀರು…

Read More

ಚೆನ್ನೈ: ಬೆಂಗಳೂರಿನ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ಅವಘಡದ ಘಟನೆ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಇಂತದ್ದೇ ದುರಂತ ಸಂಭವಿಸಿದೆ. ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಾಲೂರಿನಲ್ಲಿ ಖಾಸಗಿ ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಕಾರ್ಮಿಕರು ಪಟಾಕಿ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳಿಗ್ಗೆ 9:30ರ ಸುಮಾರಿಗೆ ಸ್ಫೋಟಗೊಂಡು 10 ಜನ ಕಾರ್ಮಿಕರು ಸಜೀವ ದಹನ ಹೊಂದಿದ್ದಾರೆ. ಇಬ್ಬರ ಮೃತದೇಹಗಳು ಮಾತ್ರ ಪತ್ತೆಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Read More

ಬೆಂಗಳೂರು: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನೋರ್ವನ  ಕೊಲೆಯಲ್ಲಿ ಅಂತ್ಯಕಂಡಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಗಣೇಶ ವಿಸರ್ಜನೆ ವೇಳೆ ಇಲ್ಯಾಕೆ ಡ್ಯಾನ್ಸ್ ಮಾಡ್ತೀರಾ ಎಂಬ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ  ಗಲಾಟೆಗೆ ಕಾರಣವಾಗಿದೆ. ಅಲ್ಲದೇ ಲಾಂಗ್ ಮಚ್ಚುಗಳಿಂದ ಹೊಡೆದಾಟ ನಡೆದಿದೆ‌. ಹಿಂದಿನ ತಿಂಗಳು ನಡೆದ ಗಣೇಶ ವಿಸರ್ಜನೆ  ಸಮಯದಲ್ಲಿ ಡ್ರಾನ್ಸ್ ವಿಚಾರವಾಗಿ ಗಲಾಟೆಯಾಗಿತ್ತು. ಶ್ರೀನಿವಾಸ್ ಕಡೆಯವರಿಗೆ ಇಲ್ಲಿ ನೀವು ಡ್ಯಾನ್ಸ್ ಮಾಡಬೇಡಿ ಅಂತಾ ವಾರ್ನ್ ಮಾಡಿದ್ದರು. ಭಾನುವಾರ ಇವರು ಗಣಪತಿ ಬಿಡುವಾಗ ಶ್ರೀನಿವಾಸ್ ಏರಿಯಾದಲ್ಲಿ ಡ್ಯಾನ್ಸ್ ಮಾಡಿದ್ದರು. ಈ ಗಣೇಶ ಬಲಿ ಕೇಳುತ್ತೆ ಎಂದು ಕೂಗಿದ್ದಾರೆ. ಆಗ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಲಾಂಗು ಮಚ್ಚು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಗುಂಪು ಗಲಾಟೆ ಮಾಡಬೇಕು ಅಂತಾ ರೆಡಿಯಾಗಿಯೇ ಬಂದಿತ್ತು. ಗಲಾಟೆ ಸಂದರ್ಭದಲ್ಲಿ ಓರ್ವ ರೌಡಿಶೀಟರ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಗಲಾಟೆಯಲ್ಲಿ ರಂಜಿತ್ ಎಂಬವನಿಗೂ ಗಂಭೀರ ಗಾಯಗಳಾಗಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು…

Read More

ಬೆಂಗಳೂರು: ಬೈಕ್‌ ಗೆ ಹಿಂಬದಿಯಿಂದ ಬಿಎಂಟಿಸಿ  ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸಿ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಮೃತ ಪಟ್ಟಿದೆ.  ಬಿಎಂಟಿಸಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು,ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More