Subscribe to Updates
Get the latest creative news from FooBar about art, design and business.
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
Author: admin
ಈ ಭಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಪ್ರಕಟ ಮಾಡಿದೆ. ಈಗಾಗಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಈ ಬಾರಿ 68 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ ಸೇರಿ ಕರ್ನಾಟಕ ಸಂಭ್ರಮ 50 ವರ್ಷ ಎಂಬ 10 ಪ್ರಶಸ್ತಿ ನೀಡಲು ನಿರ್ಧರಿಸಿದೆ. ರಂಗಭೂಮಿ ಕ್ಷೇತ್ರದ ಆರು ಕಲಾವಿದರಿಗೆ ರಾಜ್ಯೊತ್ಸವ ಪ್ರಶಸ್ತಿ ನೀಡಲಾಗಿದ್ದು, ಎ.ಜಿ. ಚಿದಂಬರ ರಾವ್ ಜಂಬೆ ಪಿ. ಗಂಗಾಧರ ಸ್ವಾಮಿ, ಹೆಚ್.ಬಿ.ಸರೋಜಮ್ಮ, ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ ಹಾಗೂ ಪಿ.ತಿಪ್ಪೇಸ್ವಾಮಿ ಅವರಿಗೆ ನೀಡಲು ನಿರ್ಧರಿಸಿದೆ. ಚಲನಚಿತ್ರ ಕ್ಷೇತ್ರದಲ್ಲಿ ಇಬ್ಬರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಕಟವಾಗಿದೆ. ಡಿಂಗ್ರಿ ನಾಗರಾಜ್ ಮತ್ತು ಬಿ.ಜನಾರ್ಧನ್ (ಬ್ಯಾಂಕ್ ಜನಾರ್ಧನ್) ಅವರಿಗೆ ಪ್ರಶಸ್ತಿ ದೊರೆತಿದೆ. ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ…
ಕನ್ನಡ ದಿನವನ್ನು ಪ್ರತಿ ವರ್ಷ ನವೆಂಬರ್ 1 ರಂದು ಆಚರಿಸಲಾಗುತ್ತದೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ. ಇನ್ನು ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ತಿಳಿದುಕೊಳ್ಳುವುದಾದರೆ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುವುದು. ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ದು ಅವರಿಗೆ ಈ ಪ್ರಶಸ್ತಿ ನೀಡಲಾಗುವುದು. 1966ರಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಪ್ರಾರಂಭಿಸಲಾಯಿತು. ಈ ಪ್ರಶಸ್ತಿಯನ್ನು ನವೆಂಬರ್ 1ರಂದು ರಾಜ್ಯದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಗೌರವಧನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನ. ನವೆಂಬರ್ ಬಂತೆಂದರೆ ಕರ್ನಾಟಕದ ಮನೆ ಮನಗಳಲ್ಲಿ ಕನ್ನಡದ ಕಹಳೆ ಮೊಳಗುತ್ತದೆ. ಕರ್ನಾಟಕ ಹೇಗೆ ರೂಪುಗೊಂಡಿತು ಎನ್ನುವುದಕ್ಕೆ ಒಂದು ಇತಿಹಾಸವಿದೆ. ಹೌದು, ಏಕೀಕರಣ ಚಳುವಳಿ 19ನೇ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956ರ ರಾಜ್ಯ ಪುನರ್ ವಿಂಗಡಣೆ ಕಾಯಿದೆಯೊಂದಿಗೆ ಮುಕ್ತಾಯವಾಯಿತು. ಕರ್ನಾಟಕ ಏಕೀಕರಣದ ಕನಸನ್ನು ಬಿತ್ತಿ ಕನ್ನಡವನ್ನು ಸಮರ್ಥವಾಗಿ ಕಟ್ಟುವಲ್ಲಿ ಸರ್ ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನೋ, ಗ್ರೀನ್ ಹಿಲ್ ಆರ್. ಗ್ರಾಂಟ್, ಡಬ್ಲ್ಯು. ಎ. ರಸೆಲ್, ಜೆ. ಎಫ್. ಪ್ಲೇಟ್ ರಂತಹ ಬ್ರಿಟಿಷ್ ಅಧಿಕಾರಿಗಳೂ ಕೂಡ ಕೆಲಸ ಮಾಡಿದರು. 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ಚಾಲನೆ ದೊರೆಯಿತು. ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ ಶಂಕರಗೌಡ ಪಾಟೀಲರು 1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಇದಾದ ಬಳಿಕ ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿ, ನವೆಂಬರ್ 1, 1956ರಂದು…
ವಿಜಯಪುರ: ಒಂದೆಡೆ ಬರ ಮತ್ತೊಂದೆಡೆ ಸಾಲಬಾಧೆ ತಾಳಲಾರದೆ, ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿದ್ದ ರೈತನೊಬ್ಬ ನೇಣು ಬಿಗಿದುಕೊಂಡಘಟನೆ ನಡೆದಿದೆ. ಸಿಂದಗಿ ತಾಲೂಕಿನ ಸಿದ್ದನಗೌಡ ಬಿರಾದಾರ್ (32) ಮೃತ ದುರ್ದೈವಿ. ನಂದಗೇರಿ ಗ್ರಾಮದಲ್ಲಿ ಜಮೀನು ಹೊಂದಿದ್ದ ಈತ ಬೆಳೆಗಾಗಿ ಸಾಲ ಮಾಡಿದ್ದ. ಬೆಳೆಯೂ ಕೈಕೊಟ್ಟಿದ್ದರಿಂದ ತೀವ್ರವಾಗಿ ಖಿನ್ನತೆಗೀಡಾಗಿದ್ದ. ಖಾಸಗಿ ವ್ಯಕ್ತಿಗಳ ಬಳಿ ಮಾಡಿದ್ದ ಸುಮಾರು 6 ಲಕ್ಷ ರೂ. ಸಾಲವನ್ನು ಹಿಂದಿರುಗಿಸುವಂತೆ ಈತನನ್ನು ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ರೈತ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆಯೇ ರಾಜ್ಯದಲ್ಲಿಯೂ ಅಕ್ರಮ ಮದ್ಯ ಸಾಗಾಟ ಆರಂಭವಾಗಿದೆ. ಭಾನುವಾರ ರಾತ್ರಿ ರಾಜ್ ಗಢ ಜಿಲ್ಲೆಯ ಮಚಲ್ ಪುರ ಪೊಲೀಸರು 80 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳಸಾಗಣೆದಾರರು ಪಂಜಾಬ್ ಮತ್ತು ಹರಿಯಾಣದಿಂದ ಇಂದೋರ್ ಗೆ ಮದ್ಯವನ್ನು ಸಾಗಿಸುತ್ತಿದ್ದರು. ತೆಲುಗಿನ ‘ಪುಷ್ಪ’ ಚಿತ್ರದಿಂದ ಪ್ರೇರಿತರಾದ ಕಳ್ಳಸಾಗಾಣಿಕೆದಾರರು,‘ಪುಷ್ಪ’ ಸಿನಿಮಾದ ಶೈಲಿಯಲ್ಲಿಯೇ ಇಡೀ ಮದ್ಯದ ಕಳ್ಳಸಾಗಣೆ ನಡೆಯುತ್ತಿತ್ತು. ಹುಲ್ಲು ತುಂಬಿದ ಲಾರಿಯಲ್ಲಿ ಹಿಂಬದಿಯಲ್ಲಿ ಪ್ರತ್ಯೇಕವಾಗಿ ಕಬ್ಬಿಣದ ಜಾಲರಿ ಬೆಸೆದು ಅದರಲ್ಲಿ ಮದ್ಯದ ಬಾಕ್ಸ್ ಗಳನ್ನು ಇಟ್ಟು ಸಾಗಿಸಲಾಗುತ್ತಿತ್ತು. ಇವುಗಳನ್ನು ಒಣಹುಲ್ಲಿನ ಚೀಲಗಳ ಹಿಂದೆ ಮರೆಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಚಾಲಕನನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಈ ಅಕ್ರಮ ಮದ್ಯ ದಂಧೆಯಲ್ಲಿ ತೊಡಗಿರುವ ಇತರ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮದ್ಯವು ಮಧ್ಯಪ್ರದೇಶದ ಒಂದು ಅಥವಾ…
ಮುಂದಿನ ತಿಂಗಳಿನಿಂದ ಮೇ 2024 ರವರೆಗೆ ಭಾರತ ಮತ್ತು ತೈವಾನ್ ನ ಪ್ರಯಾಣಿಕರಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡುವ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸಲು ಥೈಲ್ಯಾಂಡ್ ಯೋಜಿಸುತ್ತಿದೆ. ಈ ನಿರ್ಧಾರವು ಹೆಚ್ಚಿನ ಋತುವಿನ ಸಮೀಪಿಸುತ್ತಿರುವಂತೆ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಏನಾಯಿತು: ಥೈಲ್ಯಾಂಡ್ ಈ ಹಿಂದೆ ಸೆಪ್ಟೆಂಬರ್ ನಲ್ಲಿ ಚೀನೀ ಪ್ರವಾಸಿಗರಿಗೆ ವೀಸಾ ಅವಶ್ಯಕತೆಗಳನ್ನು ತೆಗೆದುಹಾಕಿತು. ಇದು ಸಾಂಕ್ರಾಮಿಕ ರೋಗದ ಮೊದಲು ಚೀನಾ ಥೈಲ್ಯಾಂಡ್ ನ ಪ್ರಾಥಮಿಕ ಪ್ರವಾಸೋದ್ಯಮ ಮಾರುಕಟ್ಟೆಯಾಗಿದ್ದು, 2019 ರಲ್ಲಿ ದಾಖಲೆಯ 39 ಮಿಲಿಯನ್ ಆಗಮನಗಳಲ್ಲಿ 11 ಮಿಲಿಯನ್ ಕೊಡುಗೆಯನ್ನು ನೀಡಿದ ಮಹತ್ವದ ಹೆಜ್ಜೆಯಾಗಿದೆ. ಜನವರಿಯಿಂದ ಅಕ್ಟೋಬರ್ 29 ರವರೆಗೆ, ಥಾಯ್ಲೆಂಡ್ 22 ಮಿಲಿಯನ್ ಸಂದರ್ಶಕರನ್ನು ಸ್ವಾಗತಿಸಿದೆ. ಭಾರತ ಮತ್ತು ತೈವಾನ್ನಿಂದ ಆಗಮಿಸುವವರು ವೀಸಾ ಅಗತ್ಯವಿಲ್ಲದೇ 30 ದಿನಗಳವರೆಗೆ ಥೈಲ್ಯಾಂಡ್ಗೆ ಪ್ರವೇಶಿಸಬಹುದು ಎಂದು ಥೈಲ್ಯಾಂಡ್ ನ ಸರ್ಕಾರದ ವಕ್ತಾರ ಚೈ ವಾಚರೋಂಕೆ ಹೇಳಿದ್ದಾರೆ.
ಬೆಂಗಳೂರು: ಈ ಆಕ್ಟೋಬರ್ ತಿಂಗಳಿನಲ್ಲಿ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಬೆಂಗಳೂರು ನಗರದಲ್ಲಿ ಮಾನವ ಕಳ್ಳಸಾಗಣೆ ಸಂಬಂಧ ವಿಶೇಷ ಕಾರ್ಯಚಾರಣೆ ಕೈಗೊಂಡು 14 ಜನ ಆರೋಪಿಗಳ (ಪಿಂಪ್ಗಳ)ನ್ನು ಬಂಧಿಸಿ, 20 ಜನ ನೊಂದ ಮಹಿಳೆಯರನ್ನು ಸಂರಕ್ಷಣೆ ಮಾಡಿದೆ. ಅಕ್ಟೋಬರ್ 1ರಿಂದ 30ರವರೆಗೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ವಿಶೇಷ ಕಾರ್ಯಚಾರಣೆ ಕೈಗೊಂಡು, ಬೆಂಗಳೂರಿನ ವಿವಿಧ ಕಡೆ ದಾಳಿ ನಡೆಸಿ ಬಾಂಗ್ಲದೇಶದಿಂದ ಹಾಗೂ ಹೊರರಾಜ್ಯದಿಂದ ಮಹಿಳೆಯರನ್ನು ಮಾನವ ಕಳ್ಳಸಾಗಣೆ ಮಾಡಿಕೊಂಡು ಬಂದು ವೇಶ್ಯವಾಟಿಕೆ ವೇಶ್ಯವಾಟಿಕೆ ನಡೆಸುತ್ತಿದ್ದ 14 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ವೇಶ್ಯವಾಟಿಕೆಗೆ ತೊಡಗಿಸಿಕೊಂಡಿದ್ದ ಒಟ್ಟು 20 ಜನ ಗೊಂದ ಮಹಿಳೆಯರನ್ನು ಸಂರಕ್ಷಣೆ ಮಾಡಿದ್ದಾರೆ. ಸಂರಕ್ಷಣೆಯಾದ ಮಹಿಳೆಯರಲ್ಲಿ ಬಾಂಗ್ಲಾದೇಶದ 4 ಜನ ಮಹಿಳೆಯರು, ಪಶ್ಚಿಮ ಬಂಗಾಳದ 11 ಜನ ಮಹಿಳೆಯರು, ತೆಲಂಗಾಣದ ಒಬ್ಬ ಮಹಿಳೆ, ಉತ್ತರಾಖಂಡ್ನ ಒಬ್ಬ ಮಹಿಳೆ ಹಾಗೀ ಕರ್ನಾಟಕದ 3 ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆರೋಪಿಗಳಿಂದ 04 ದ್ವಿಚಕ್ರ ವಾಹನಗಳು, ಒಂದು…
ಮಣಿಪುರದ ಮೊರೆಹ್ ನಲ್ಲಿ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೊರೆಹ್ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಚಿಂಗ್ತಮ್ ಆನಂದ್ ಗಡಿ ಪಟ್ಟಣದ ಪೂರ್ವ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಹೆಲಿಪ್ಯಾಡ್ ಅನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಆನಂದ್ ಕರ್ತವ್ಯದಲ್ಲಿದ್ದಾಗ ಮುಂಜಾನೆ ಈ ಘಟನೆ ಸಂಭವಿಸಿದೆ. ಇಂಡೋ-ಮ್ಯಾನ್ಮಾರ್ ಗಡಿಯ ಬಳಿ ಆತನ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಈ ಪ್ರದೇಶವು ಆಗಾಗ್ಗೆ ಬಂಡಾಯ ಚಟುವಟಿಕೆಗಳಿಂದ ಹಾನಿಗೊಳಗಾಗುತ್ತದೆ. ಆನಂದ್ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಗ್ರರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಬೆಂಗಳೂರು: ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಮಹಾತ್ಮಗಾಂಧಿ ಹತ್ಯೆ, ಇಂದಿರಾಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ ದೇಶಕ್ಕೆ ಆದ ದೊಡ್ಡ ನಷ್ಟ. ಈ ಮೂವರು ದೇಶಕ್ಕಾಗಿ ಹುತಾತ್ಮರಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಇವರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ನಮ್ಮ ದೇಶದ ಮಣ್ಣಿನಲ್ಲಿ ದಾಖಲಾಗಿದೆ ಎಂದರು. ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ಟೀಕಿಸಿದರು. ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇವರ ಕೊಡುಗೆ…
ರಷ್ಯಾದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಕೊನೆಯ ಎರಡು ಸ್ಕ್ವಾಡ್ರನ್ ಗಳಿಗೆ ಅಂತಿಮ ವಿತರಣಾ ವೇಳಾಪಟ್ಟಿಯನ್ನು ಚರ್ಚಿಸಲು ಮತ್ತು ನಿರ್ಧರಿಸಲು ಭಾರತ ಮತ್ತು ರಷ್ಯಾದ ಅಧಿಕಾರಿಗಳು ಶೀಘ್ರದಲ್ಲೇ ಭೇಟಿಯಾಗಲಿದ್ದಾರೆ. ಭಾರತೀಯ ವಾಯುಪಡೆ (IAF) ಈಗಾಗಲೇ ಈ ಮೂರು ಸ್ಕ್ವಾಡ್ರನ್ ಗಳನ್ನು ಕಾರ್ಯಗತಗೊಳಿಸಿದೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಕೊನೆಯ ಎರಡರ ವಿತರಣೆಯು ವಿಳಂಬವಾಯಿತು. ರಷ್ಯಾದ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ವಿಶ್ವದ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. 2018-19ರಲ್ಲಿ, ಐದು ಸ್ಕ್ವಾಡ್ರನ್ ಗಳ S-400 ಕ್ಷಿಪಣಿಗಳಿಗಾಗಿ ಭಾರತವು ರಷ್ಯಾದೊಂದಿಗೆ USD 4.2 ಶತಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ. “ಮೂರು ಸ್ಕ್ವಾಡ್ರನ್ ಗಳನ್ನು ಈಗಾಗಲೇ ಪ್ರಮುಖ ವಲಯಗಳಲ್ಲಿ ಕಾರ್ಯಗತಗೊಳಿಸಲಾಗಿದೆ. ಒಂದು ಘಟಕವು ಚೀನಾ ಮತ್ತು ಪಾಕಿಸ್ತಾನ ಎರಡನ್ನೂ ನೋಡುತ್ತಿದ್ದರೆ, ಚೀನಾ ಮತ್ತು ಪಾಕಿಸ್ತಾನದ ಮುಂಭಾಗಗಳಿಗೆ ತಲಾ ಒಂದನ್ನು ಮೀಸಲಿಡಲಾಗಿದೆ” ಎಂದು ತಿಳಿಸಿದೆ. ಉಕ್ರೇನ್ ಯುದ್ಧವು ಇನ್ನೂ ನಡೆಯುತ್ತಿರುವುದರಿಂದ ಉಳಿದ ಸ್ಕ್ವಾಡ್ರನ್ ಗಳ ವಿತರಣೆಯು ಯಾವಾಗ ನಡೆಯುತ್ತದೆ ಎಂಬುದನ್ನು ರಷ್ಯಾದ ಕಡೆಯು ಸಂಪೂರ್ಣವಾಗಿ ಸ್ಪಷ್ಟಪಡಿಸಿಲ್ಲ ಎಂದು ವರದಿಯಾಗಿದೆ.