Author: admin

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ನಡಿಗುಡ್ಡೆ ದರ್ಖಾಸ್ತು ಮನೆ ಕೆಸರ್ ಗದ್ದೆಯ, ಬೆಳುವಾಯಿ ಪಂಚಾಯತ್ ಮಂಗಳೂರು ತಾಲೂಕಿನ ಮನೆಯೊಂದರಲ್ಲಿ ವೃದ್ಧ ಹಾಗೂ ಅವರ ಪುತ್ರಿ ಸಂಕಷ್ಟದ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಮಾಡಿದ ಬೆನ್ನಲ್ಲೇ ದಲಿತಪರ ಸಂಘಟನೆ ನೊಂದ ಕುಟುಂಬಸ್ಥರನ್ನ ಭೇಟಿ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿ, ಆರ್ಥಿಕ ಸಹಕಾರ ನೀಡಿದ್ದಾರೆ. ಈ ಕುಟುಂಬದ ಬಗ್ಗೆ ನಮ್ಮತುಮಕೂರು ಮಾಧ್ಯಮ ವರದಿ ಮಾಡಿದ ಬೆನ್ನಲ್ಲೇ ಸ್ಥಳೀಯ ಅಧಿಕಾರಿಗಳು ನೊಂದ ಕುಟುಂಬದ ಮನೆಗೆ ತೆರಳಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದಾರೆ. ಆದರೆ ಈವರೆಗೆ ಯಾವುದೇ ಪರಿಹಾರ ಕ್ರಮಗಳು ಆಗಿಲ್ಲ. ಇನ್ನೊಂದೆಡೆ ನಮ್ಮತುಮಕೂರು ಪ್ರಸಾರ ಮಾಡಿದ ವರದಿ ಗಮನಿಸಿದ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಮೂಡಬಿದ್ರಿ ತಾಲೂಕ್ ಸಮಿತಿ ನಡಿಗುಡ್ಡೆಗೆ ತೆರಳಿ ಸಂಕಷ್ಟದ ಸ್ಥಿತಿಯಲ್ಲಿರುವ ಸೋಮಯ್ಯ ಅವರ ಪುತ್ರಿ ಯಶೋಧ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದ್ದು, ಆರ್ಥಿಕ ಸಹಾಯಹಸ್ತ ನೀಡಿದೆ. ಜೊತೆಗೆ ಕುಟುಂಬಕ್ಕೆ ಇನ್ನಷ್ಟು ನೆರವು…

Read More

ಏಕದಿನ ವಿಶ್ವಕಪ್​ನ 5ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಡೆಂಗಿ ಜ್ವರದಿಂದ ಬಳಲುತ್ತಿರುವ ಶುಭ್​ ಮನ್ ಗಿಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಏಕದಿನ ಕ್ರಿಕೆಟ್ ​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ 149 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 56 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 83 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಇಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಹೊಂದಿರುವುದು ಸ್ಪಷ್ಟ. ಇನ್ನು ಕೊನೆಯ 6 ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Read More

ನವದೆಹಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ತಮ್ಮ ವೈದ್ಯಕೀಯ ಆರೋಗ್ಯ ತಪಾಸಣೆಗಾಗಿ ಭಾನುವಾರ ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಟಿಬೆಟಿಯನ್ ನಾಯಕ ತನ್ನ ಕಾರಿನಿಂದ ಇಳಿದು ನಗರಕ್ಕೆ ಹೋಗುತ್ತಿರುವಾಗ ದೆಹಲಿ ಪೊಲೀಸರಿಗೆ ಸೇರಿದ ಕಾರುಗಳ ಬೆಂಗಾವಲು ನಿಂತಿದ್ದವು. ಆಧ್ಯಾತ್ಮಿಕ ನಾಯಕ ಇಂದು ಮುಂಜಾನೆ ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ರಾಷ್ಟ್ರ ರಾಜಧಾನಿಗೆ ತೆರಳಿದರು. ಟಿಬೆಟಿಯನ್ ನಾಯಕನ ದರ್ಶನ ಪಡೆಯಲು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಎಂದು ತಿಳಿಸಿದ್ದಾರೆ.

Read More

ನವದೆಹಲಿ: ಮಧ್ಯಪ್ರದೇಶದ ಮೊವ್‌ ನಲ್ಲಿರುವ ಇನ್‌ ಫೆಂಟ್ರಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ಸೇನಾ ಅಧಿಕಾರಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಯಂಗ್ ಆಫೀಸರ್ಸ್ ಕೋರ್ಸ್ ಅನ್ನು ತೆಗೆದುಕೊಳ್ಳುತ್ತಿದ್ದರು. ನಾಪತ್ತೆಯಾದ ವ್ಯಕ್ತಿಯ ಬಗ್ಗೆ ಇಂದೋರ್ ಜಿಲ್ಲೆಯ ಮೊವ್ ಪೊಲೀಸ್ ಠಾಣೆಯಲ್ಲಿ ಶನಿವಾರ ವರದಿಗಾರರಿಗೆ ದೂರು ನೀಡಲಾಗಿದೆ. ಆರಂಭಿಕ ವರದಿಗಳ ಪ್ರಕಾರ, ಸೇನಾ ಅಧಿಕಾರಿ – ಲೆಫ್ಟಿನೆಂಟ್ ಮೋಹಿತ್ ಗುಪ್ತಾ – ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ನಾಪತ್ತೆಯಾಗಿದ್ದಾರೆ. ಎಲ್ಲ ಸಿಬ್ಬಂದಿಗಳು ಹಾಜರಾಗಬೇಕಿದ್ದ ದೈಹಿಕ ತರಬೇತಿಗೆ (ಪಿಟಿ) ಹಾಜರಾಗದೇ ಇದ್ದಾಗ ಈ ನಾಪತ್ತೆ ಗಮನಕ್ಕೆ ಬಂದಿದೆ. ಅವರ ಅನುಪಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೋಧಕನು ತನ್ನ ಸಹೋದ್ಯೋಗಿಗಳಿಗೆ ಅವನ ಯೋಗಕ್ಷೇಮವನ್ನು ಪರೀಕ್ಷಿಸಲು ಕೇಳಿದನು. ನಿಗೂಢ ನಾಪತ್ತೆ ಅವರ ಕೊಠಡಿಯನ್ನು ಪರಿಶೀಲಿಸಿದಾಗ, ಅವರ ನಾಪತ್ತೆಯ ನಿಗೂಢತೆಯು ತೀವ್ರಗೊಂಡಿತು ಮತ್ತು ಅವರು ಕ್ಯಾಂಪಸ್‌ ನಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳಿಗೆ ಅಧಿಕೃತವಾಗಿ ತಿಳಿಸಲಾಯಿತು. ಈ ಸಂಬಂಧ ಪೊಲೀಸರಿಗೂ ದೂರು ನೀಡಲಾಗಿತ್ತು. ಗುಪ್ತಾ ಅವರ ಮೊಬೈಲ್ ಸಂಖ್ಯೆ ಸ್ವಿಚ್ ಆಫ್…

Read More

ನವದೆಹಲಿ: ಇಸ್ರೇಲ್‌ ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್‌ ನಟಿ ನುಶ್ರತ್ ಭರುಚ್ಚಾ ಸುರಕ್ಷಿತವಾಗಿ ಭಾರತಕ್ಕೆ ಮರಳಲು ವಿಮಾನ ಹತ್ತಿದ್ದಾರೆ. ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಅವರು ಇಸ್ರೇಲ್‌ ನಲ್ಲಿ ಸಿಲುಕಿಕೊಂಡಿದ್ದರ ಬಗ್ಗೆ ನಟಿಯ ಸದಸ್ಯರ ತಿಳಿಸಿದ್ಗರು. ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ನಟಿ ನುಶ್ರತ್‌ ಹೈಫಾ ಇಸ್ರೇಲ್‌ ತೆರಳಿದ್ದರು ಎನ್ನಲಾಗಿದೆ. ಆ ವೇಳೆ ಇಸ್ರೇಲ್ ನಲ್ಲಿ ನುಶ್ರತ್ ಸಿಲುಕಿಕೊಂಡಿದ್ದರು. ಆ ಬಳಿಕ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ. “ನಾವು ನುಶ್ರತ್‌ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಯಾವುದೇ ಅಪಾಯಕ್ಕೆ ಸಿಲುಕದೆ ಅವರು ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ” ಎಂದು ನಟಿಯ ತಂಡದ ಸದಸ್ಯ ಹೇಳಿದ್ದರು. ಇದೀಗ ನಟಿ ನುಶ್ರತ್ ಭರುಚ್ಚ ಅವರ ಸಂಪರ್ಕಿಸಿದ್ದು, ನಟಿ ಇಸ್ರೇಲ್ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ. ಅವರು ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ.

Read More

ನವದೆಹಲಿ: ಭಾರತೀಯ ವಾಯುಪಡೆಯ ರಚನೆಯ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಅಧಿಕೃತವಾಗಿ 8 ಅಕ್ಟೋಬರ್, 1932 ರಂದು ಸ್ಥಾಪಿಸಲಾಯಿತು. ಭಾರತೀಯ ವಾಯುಪಡೆ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ. ವಾಯುಪಡೆ ದಿನಾಚರಣೆಯಂದು ನಮ್ಮೆಲ್ಲ ಯೋಧರಿಗೆ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ. ವಾಯುಪಡೆಯ ದಿನಾಚರಣೆಯಂದು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ಸಲ್ಲಿಸುತ್ತೇನೆ. ವಾಯುಪಡೆಯ ಶೌರ್ಯ, ಬದ್ಧತೆ ಮತ್ತು ಸಮರ್ಪಣೆಯ ಬಗ್ಗೆ ಇಡೀ ದೇಶ ಹೆಮ್ಮೆಪಟ್ಟುಕೊಳ್ಳುತ್ತದೆ. ಅವರ ತ್ಯಾಗ ಹಾಗೂ ಸೇವೆಯಿಂದ ನಮ್ಮ ಆಕಾಶವು ಸುರಕ್ಷಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸಂದೇಶದಲ್ಲಿ ಯುದ್ಧ ಮತ್ತು ಶಾಂತಿಯ ಸಮಯದಲ್ಲಿ ದೇಶದ ಹಿತಾಸಕ್ತಿಯನ್ನು ಕಾಯಲು ಲೋಹದ ಹಕ್ಕಿ ಮತ್ತು ಯೋಧರ ಕೊಡುಗೆಯನ್ನು ಸ್ಮರಿಸಿದ್ದಾರೆ. ದೇಶದ ಸೌರ್ವಭೌಮತ್ವ ರಕ್ಷಿಸಲು ವಾಯುಪಡೆಯ ಅಮೂಲ್ಯ ಸೇವೆ ಮತ್ತು ತ್ಯಾಗವನ್ನು ಸ್ಮರಿಸುವುದಾಗಿ ಹೇಳಿದ್ದಾರೆ. ಭಾರತವನ್ನು ಸುರಕ್ಷಿತವಾಗಿರಿಸಲು…

Read More

ಬೆಂಗಳೂರು:  ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್‌ ಅನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯಪಾಲರು, ಬೆಂಗಳೂರು ಮ್ಯಾರಥಾನ್‌ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ಪರ್ಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು “ಇಂಟರ್ನ್ಯಾಷನಲ್ ಹಬ್ ಆಫ್ ಸ್ಪೋರ್ಟ್ಸ್” ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು. ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಮತ್ತು ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿದೆ, ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ. ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. 19ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ…

Read More

ಬೆಂಗಳೂರು: 13 ಮಂದಿ ಬಲಿ ತೆಗೆದುಕೊಂಡಿರುವ ಪಟಾಕಿ ದುರಂತ ನಡೆದ ಅತ್ತಿಬೆಲೆಗೆ ಡಿಸಿಎಂ ಡಿಕೆಶಿ ಶನಿವಾರ ರಾತ್ರಿ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೊಂದು ಘೋರ ದುರಂತ. ಅಮಾಯಕ ಯುವಕರು ಮೃತಪಟ್ಟಿದ್ದಾರೆ. ಕೆಲವರು ವ್ಯಾಪಾರ ಮಾಡಲು ಬಂದಿದ್ದವರೂ ಇದ್ದರು. 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಸತ್ತವರ ಕುಟುಂಬಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದರು.

Read More

ಬೆಂಗಳೂರು: ಆಟೊ ಅಡ್ಡಗಟ್ಟಿ ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಮತ್ತು ರಘು ಬಂಧಿತರು. ಇವರಿಬ್ಬರು ಕ್ಯಾಬ್ ಚಾಲಕರು. ‘ಆಟೊ ಚಾಲಕ ನಂಜುಂಡ ನೀಡಿದ್ದ ದೂರು ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ಯುವತಿ ಸೇರಿ ನಾಲ್ವರು ಪ್ರಯಾಣಿಕರು ಆ್ಯಪ್ ಮೂಲಕ ಆಟೊ ಕಾಯ್ದಿರಿಸಿದ್ದರು. ಅವರನ್ನು ಹತ್ತಿಸಿಕೊಂಡಿದ್ದ ನಂಜುಂಡ, ಹೊರಮಾವು ಕಡೆ ಹೊರಟಿದ್ದಾಗ ಇವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

Read More

ಬೆಂಗಳೂರು: ಪತ್ನಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವುದಾಗಿ ಬೆದರಿಸಿ ಹಾಕಿ 10 ಲಕ್ಷ ರೂ. ಹಾಗೂ ಆಕೆಯ ವೇತನಕ್ಕಾಗಿ ಪತಿಯೇ ಬೇಡಿಕೆ ಇಡುತ್ತಿದ್ದ ವಿಚಿತ್ರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ 28 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿ ಸ್ವರೂಪ್ ಭಾರದ್ವಾಜ್ ಎಂಬಾತ ಹಾಗೂ ಆತನ ಪೋಷಕರ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More