Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗೆ ಅವಕಾಶವಿಲ್ಲ. ಡಿ.ಕೆ. ಶಿವಕುಮಾರ್ ಅವರದ್ದು ಅಭಿಪ್ರಾಯ ಅಷ್ಟೇ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹೊಸ ಬಾರ್ ಲೈಸೆನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸೆನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸೆನ್ಸ್ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಫಿನಾಡ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವಿನ ಸೆರೆ ಹಿಡಿಯಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇದು ಕಂಡುಬರಲಿದ್ದು ಅಳಿವಿನಂಚಿನಲ್ಲಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು. ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡು ಬಂದಿದೆ. ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ.
ಬೆಂಗಳೂರು:“ಇಲಾಖೆಗಳಿಂದ ಅನುಮತಿ ಪಡೆದು ಸ್ಥಗಿತವಾಗಿರುವ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಸಂತನಗರದ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಪಕ್ಕ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿಗಳು ನಂತರ ಜಯಮಹಲ್ ಪ್ಯಾಲೇಸ್ ರಸ್ತೆಯ ಅಗಲೀಕರಣ ಹಾಗೂ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ ಕಾಮಗಾರಿಯನ್ನು ಪರಿಶೀಲಿಸಿದರು. ಆದಷ್ಟು ಬೇಗ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಬಿಡಿಎ ಮುಖ್ಯಸ್ಥರಾದ ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಇದ್ದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಟೆಂಡರ್ ಶ್ಯೂರ್ ಕಾಮಗಾರಿ ನಡೆದಿವೆ. ಟೆಂಡರ್ ಶ್ಯೂರ್ ರಸ್ತೆಯಲ್ಲಿ ಮುಂದೆ ಯಾರೂ ಕೂಡ ರಸ್ತೆಯನ್ನು ಅಗೆಯಬಾರದು, ಕೇಬಲ್ ಲೈನ್ ಎಳೆದುಕೊಂಡು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಅವುಗಳನ್ನು ಯಾರೂ ಉಪಯೋಗಿಸುತ್ತಿಲ್ಲ. ನಾವು…
ತುಮಕೂರು: ಮಹಿಳೆಯರು ಮುಟ್ಟಾದಾಗ ಹಾಗೂ ಹೆರಿಗೆಯಾದ ಸಂದರ್ಭಗಳಲ್ಲಿ ಸೂತಕದ ಸಂಪ್ರದಾಯದ ಹೆಸರಿನಲ್ಲಿ ಆಕೆಯನ್ನು ಮನೆಯಿಂದ ಹೊರಗಿಡುವ ಗೊಲ್ಲರಹಟ್ಟಿಗಳ ಮೌಢ್ಯದ ಬಗ್ಗೆ ಜಾಗೃತಿ ಮುಂದುವರಿದಿದೆ. ಗುಬ್ಬಿ ತಾಲೂಕು ಹಾಗಲವಾಡಿ ಹೋಬಳಿ ಜುಂಜಪ್ಪನಹಟ್ಟಿಗೆ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು. ಮಹಿಳೆಯರನ್ನು ಇಡುವ ಕೃಷ್ಣಕುಟೀರಕ್ಕೆ ಬೀಗ ಹಾಕಿಸಿ, ಮನೆಯಲ್ಲಿಯೇ ಆರೈಕೆ ಮಾಡುವಂತೆ ಮನವಿ ಮಾಡಿದರು. ಗೊಲ್ಲರಹಟ್ಟಿಗಳಲ್ಲಿ ಸೂತಕದ ಸಂದರ್ಭದಲ್ಲಿ ಮಹಿಳೆಯರನ್ನು ಈ ಕೃಷ್ಣ ಕುಟೀರದಲ್ಲಿಡಲಾಗುತ್ತಿದೆ, ಇದೂ ಇಲ್ಲದ ಹಟ್ಟಿಗಳಲ್ಲಿ ಗುಡಿಸಲು ನಿರ್ಮಿಸಿ ಇಡುವ ಸಂಪ್ರದಾಯದಿಂದ ಅನೇಕ ಪ್ರಾಣ ಹಾನಿಯೂ ಸಂಭವಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಾಧೀಶೆ ಹುಂಡಿ ಮಂಜುಳ ಶಿವಪ್ಪ ಅವರು, ಇದಾ ಗುಡ್ಡ ಸಂಪ್ರದಾಯಗಳಿಗೆ ಒಂದು ರೀತಿ ಸಹಕಾರಿಯಾಗುವಂತೆ ಅನೇಕ ಗೊಲ್ಲರಹಟ್ಟಿಗಳ ಸಮೀಪ ಕೃಷ್ಣ ಕೋಟಿ ರಗಳನ್ನು ನಿರ್ಮಾಣ ಮಾಡಲಾಗಿದೆ. ಅದು ಕೂಡ ಇಂತಹ ಮೌಡ್ಯಾಚರಣೆಯನ್ನು ತೊಡೆದು ಹಾಕುವ ಬದಲು ಇದನ್ನು ಮುಂದುವರೆಸಲು ಸಹಕಾರಿಯಾಗುವಂತೆ ಪ್ರೇರೇಪಿಸುವಂತಾಗುತ್ತಿದೆ. ಈಗ ಮೊದಲು ಇಂತಹ ಕೃಷ್ಣ ಕೋಟಿ ರಗಳನ್ನು ಬೀಗ ಹಾಕಿ…
ನಿರಂತರ ಬದಲಾವಣೆಯಿಂದ ತುಂಬಿರುವ ಜಗತ್ತಿನಲ್ಲಿ, ದೈನಂದಿನ ದಿನಚರಿಯನ್ನು ಸ್ಥಾಪಿಸುವ ಕಲ್ಪನೆಯು ಕಟ್ಟುನಿಟ್ಟಾಗಿ ಅಥವಾ ಸ್ಪೂರ್ತಿದಾಯಕವಾಗಿಲ್ಲ. ಉತ್ತಮ ರಚನಾತ್ಮಕ ದೈನಂದಿನ ದಿನಚರಿಯು ವೈಯಕ್ತಿಕ ಬೆಳವಣಿಗೆ, ಉತ್ಪಾದಕತೆ ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಬಲ ಸಾಧನವಾಗಿದೆ. ನೀವು ನಿಗದಿತ ವೇಳಾಪಟ್ಟಿಯನ್ನು ಹೊಂದಿರುವಾಗ, ನಿಮ್ಮ ಮೆದುಳಿಗೆ ಏನನ್ನು ನಿರೀಕ್ಷಿಸಬಹುದು ಎಂದು ತಿಳಿದಿದೆ ಮತ್ತು ಪರಿಣಾಮಕಾರಿಯಾಗಿ ಸಂಪನ್ಮೂಲಗಳನ್ನು ನಿಯೋಜಿಸಬಹುದು ಮತ್ತು ಗಮನಹರಿಸಬಹುದು. ಇದು ಉತ್ತಮ ಸಮಯ ನಿರ್ವಹಣೆಗೆ ಕಾರಣವಾಗುತ್ತದೆ ಮತ್ತು ಕಡಿಮೆ ಸಮಯದಲ್ಲಿ ಹೆಚ್ಚಿನ ಕಾರ್ಯಗಳನ್ನು ಸಾಧಿಸುವ ಸಾಮರ್ಥ್ಯವನ್ನು ಹೊಂದಿದೆ. ನೀವು ವಿದ್ಯಾರ್ಥಿಯಾಗಿರಲಿ, ವೃತ್ತಿಪರರಾಗಿರಲಿ ಅಥವಾ ಕಲಾವಿದರಾಗಿರಲಿ, ದೈನಂದಿನ ದಿನಚರಿಯು ನಿಮ್ಮ ದಿನದ ಉತ್ತಮವಾಗಿರಲು ಸಹಾಯ ಮಾಡುತ್ತದೆ. ಚೆನ್ನಾಗಿ ಯೋಜಿತ ದೈನಂದಿನ ದಿನಚರಿಯು ಸಾಮಾನ್ಯವಾಗಿ ವ್ಯಾಯಾಮ, ಆರೋಗ್ಯಕರ ಊಟ ಮತ್ತು ಸ್ವಯಂ-ಆರೈಕೆ ಚಟುವಟಿಕೆಗಳಿಗೆ ಸಮಯವನ್ನು ಒಳಗೊಂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಈ ಘಟಕಗಳು ಅವಶ್ಯಕ. ನಿಯಮಿತ ವ್ಯಾಯಾಮವು ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಒಟ್ಟಾರೆ ಫಿಟ್ ನೆಸ್ ಅನ್ನು ಸುಧಾರಿಸುತ್ತದೆ. ಆದರೆ ಪೌಷ್ಟಿಕಾಂಶದ…
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಂಗಾನದಿಯ ಡಾಲ್ಫಿನ್ ಅನ್ನು ರಾಜ್ಯದ ಜಲಚರ ಎಂದು ಘೋಷಿಸಿದ್ದಾರೆ. ಈ ಡಾಲ್ಫಿನ್ ಗಳು ಗಂಗಾ, ಯಮುನಾ, ಚಂಬಲ್, ಘಾಘ್ರಾ, ರಾಪ್ತಿ ಮತ್ತು ಗೆರುವಾ ಮುಂತಾದ ನದಿಗಳಲ್ಲಿ ಕಂಡುಬರುತ್ತವೆ. ಕೊಳ ಮತ್ತು ನದಿಗಳ ಶುದ್ಧತೆ ಕಾಪಾಡುವ ಅಗತ್ಯವಿದೆ. ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಪ್ಲಾಸ್ಟಿಕ್ ಬಳಸುವುದನ್ನು ತಡೆಯುವುದು ಮುಖ್ಯವಾಗಿದೆ, ಏಕೆಂದರೆ ಇದು ನಮ್ಮ ನೀರು ಮತ್ತು ಪ್ರಕೃತಿಗೆ ಹಾನಿ ಮಾಡುತ್ತದೆ ಎಂದು ಸಿಎಂ ಯೋಗಿ ಹೇಳಿದರು. ಹೆಚ್ಚುವರಿಯಾಗಿ, ವನ್ಯಜೀವಿಗಳೊಂದಿಗೆ ಹೇಗೆ ಸಂವಹನ ನಡೆಸಬೇಕು ಎಂಬುದರ ಕುರಿತು ಸ್ಥಳೀಯ ನಿವಾಸಿಗಳಿಗೆ ತರಬೇತಿ ನೀಡುವ ಮಹತ್ವವಿದೆ ಎಂದು ಅವರು ತಿಳಿಸಿದರು. ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂಪರ್ಕ ಹೊಂದಿದ ಗ್ರಾಮಗಳ ವ್ಯಕ್ತಿಗಳಿಗೆ ಮಾರ್ಗದರ್ಶಕರಾಗಿ ತರಬೇತಿ ನೀಡಬೇಕು. ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ಸಮುದಾಯದೊಳಗೆ ಜಾಗೃತಿ ಮೂಡಿಸುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದರು.
ಮೈಸೂರು: ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಜಾತಿ-ಧರ್ಮ- ಸಮುದಾಯಗಳಿಗೆ ಅಕ್ಷರ ಮತ್ತು ಅನ್ನ ದಾಸೋಹವನ್ನು ನೀಡಿದ್ದು ಲಿಂಗಾಯತ ವೀರಶೈವ ಮಠಗಳು. ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳು ಕೂಡ ಶರಣರ ಆಶಯದಂತೆ ಎಲ್ಲಾ ಜಾತಿ, ಧರ್ಮಗಳಿಗೂ ಅನ್ವಯವಾಗುತ್ತವೆ ಎಂದು ವಿವರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣ ಸಂಸ್ಕೃತಿಯನ್ನು ತಮ್ಮ ಬದುಕಿನ ಆಚರಣೆಯನ್ನಾಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಬಸವ ಜಯಂತಿಯ ದಿನವನ್ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಯ್ಕೆ ಮಾಡಿಕೊಂಡರು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ನುಡಿದರು. ಶರಣ ಸಂಸ್ಕೃತಿಯ ಅನುಯಾಯಿಗಳಾದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ಸಹಿ ಹಾಕಿದ್ದು ದಾಸೋಹ ಸಂಸ್ಕೃತಿಯ…
ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಅವರು ಹೇಳಿದ್ದಿಷ್ಟು:“ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಬೆಂಗಳೂರಿನ ಐದನೇ ಒಂದು ಭಾಗದಷ್ಟು ಆದಾಯ ಹೊರ ವರ್ತುಲ ರಸ್ತೆಯ ಉದ್ದಿಮೆಗಳಿಂದಲೇ ಬರುತ್ತಿದೆ. ನಮಗೆ ಬೆಂಗಳೂರಿನ ಹಾಗೂ ಹೊರ ವರ್ತುಲ ರಸ್ತೆಯ ಉದ್ದಿಮೆಗಳ ಮಹತ್ವ ಮತ್ತಿತರ ವಿಚಾರಗಳ ಬಗ್ಗೆ ಅರಿವಿದೆ. ನಿಮಗೆ ಹಾಗೂ ನಿಮ್ಮ ನೌಕರರರಿಗೆ, ಆ ಭಾಗದ ನಿವಾಸಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮಸ್ಯೆ ನಿವಾರಿಸುವುದೇ ನಮ್ಮ ಆದ್ಯತೆ. ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು…
ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ,40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ. ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗುತ್ತಿದೆ. ಮೂಲಸೌಕರ್ಯಗಳ ನಿರ್ಮಾಣ ಭರದಿಂದ ಸಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿದೆ. ಒಟ್ಟಿನಲ್ಲಿ ರಾಜ್ಯ ಅಭಿವೃದ್ದಿಯ ಪಥದಲ್ಲಿ ದಾಪುಗಾಲಿಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದಿನ ಸರ್ಕಾರದಲ್ಲಿ ದುರಾಡಳಿತ, ಸಾಲ ಮತ್ತು ಬದ್ಧತಾ ವೆಚ್ಚ ಮಿತಿಮೀರಿದ್ದರಿಂದ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಪಕ್ಷದವರು ಶಿವಮೊಗ್ಗದಲ್ಲಿ ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್–ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ತಪ್ಪಿತಸ್ಥರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಸೂಕ್ತ…