Author: admin

2022-23 ಜುಲೈ ಆವೃತ್ತಿ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ಮತ್ತು B.Lib.I.Sc., PG Diploma., Diploma., Certificate Programsಗೆ ಪ್ರವೇಶಾತಿ ಪಡೆದ (Fresh Students) ವಿದ್ಯಾರ್ಥಿಗಳಿಗೆ ಹಾಗೂ 2013-14, 2014-15 ಹಾಗೂ 2018-19ನೇ ಸಾಲಿನಿಂದ 2021-22ನೇ ಸಾಲಿನ ವರೆಗೆ ಪುನರಾವರ್ತಿತ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ವಿದ್ಯಾರ್ಥಿಗಳಿಗೆ ಮತ್ತು 2018-19ನೇ ಸಾಲಿನಿಂದ 2020-21ನೇ ಜುಲೈ ಆವೃತ್ತಿಯ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ (NoN-CBCS) ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮತ್ತು 2020-21ನೇ ಸಾಲಿನಿಂದ 2021-22ನೇ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ ಹಾಗೂ PG Diploma., Diploma., Certificate Programsನ  ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದಂಡ ಶುಲ್ಕವಿಲ್ಲದೆ ಅಂತಿಮ ದಿನಾಂಕ:- 14/08/2023 200ರೂ. ದಂಡ ಶುಲ್ಕದೊಂದಿಗೆ ಕೊನೆಯ ದಿನಾಂಕ:- 24/08/2023. ಪರೀಕ್ಷಾ ಶುಲ್ಕವನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ  ಆನ್ ಲೈನ್ (http://ksouportal.com/views/ExamHome.aspx) ಮೂಲಕ ಪಾವತಿ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ…

Read More

ಕೊಪ್ಪಳ‌ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ಕನಕಗಿರಿ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಆದೇಶ ಹೊರಡಿಸಿದ್ದಾರೆ. ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ವರ್ಷ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ 11ನೇ ಜುಲೈ 2023 ರಿಂದ ಬೀದಿ ನಾಯಿಗಳ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಈ ವರ್ಷ ನಾವು ಕ್ಷೇತ್ರ ಸಮೀಕ್ಷಾ ತಂಡಗಳ ಜೊತೆಗೆ, VayDyn, ಸ್ಟಾರ್ಟ್ ಅಪ್ @ARTPARK IISc(ಕೃತಕ ಬುದ್ಧಿಮತ್ತೆ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್- ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್) ಡೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಬೆಂಗಳೂರು ನಗರದ ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡುವ ಬೀದಿ ನಾಯಿಗಳ ಎಣಿಕೆ ಕಾರ್ಯದ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲು ಪಾಲಿಕೆಯೊಂದಿಗೆ ಕೈಜೋಡಿಸಿದೆ. ಬೀದಿ ನಾಯಿಗಳ ಸಮೀಕ್ಷೆಗೆ ಡ್ರೋನ್ ಗಳನ್ನು ಬಳಸುತ್ತಿರುವುದು ಭಾರತದಲ್ಲಿ ಇದೇ ಮೊದಲನೆಯ ಯೋಜನೆಯಾಗಿದೆ. ಮೊದಲ ಹಂತದಲ್ಲಿ ಹುಳಿಮಾವು, ಸಾರಕ್ಕಿ, ಸೀಗೇಹಳ್ಳಿ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳನ್ನು ಪರಿಕಲ್ಪನೆಯ ಪುರಾವೆಯಾಗಿ ಆಯ್ಕೆ ಮಾಡಲಾಗಿರುತ್ತದೆ. ಡ್ರೋನ್ ಗಳು ನಾಯಿಗಳ ಚಿತ್ರಗಳನ್ನು ಸೆರೆಹಿಡಿಯಲು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಬೀದಿ ನಾಯಿಗಳನ್ನು ಗುರುತಿಸಲು ಯಶಸ್ವಿಯಾಗಿದೆ. ಡ್ರೋನ್ ಸಮೀಕ್ಷೆಯ ದತ್ತಾಂಶವನ್ನು ಮುಂಬರುವ ದಿನಗಳಲ್ಲಿ ವಿಶ್ಲೇಷಿಸಲಾಗುವುದು ಮತ್ತು ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ತಂಡವು ಸಂಗ್ರಹಿಸಿದ ದತ್ತಾಂಶದೊಂದಿಗೆ(ಡೇಟಾ) ತಾಳೆ ಮಾಡಲಾಗುತ್ತದೆ.…

Read More

ಶಿವಮೊಗ್ಗ: ಮನುಷ್ಯ ಪರ ನಿಲುವುಗಳಿಗಾಗಿ, ಮೂಲಭೂತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಪಿತವಾಗಿರುವ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೊರಂ ನ ಲಾಂಛನವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಂದ ಬಿಡುಗಡೆಗೊಳಿಸಲಾಯಿತು. ಲಾಂಛನವನ್ನು ನಗರದ ಅಂಬೇಡ್ಕರ್ ಭವನದ ಮುಂದಡಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಿದ ಪೌರಕಾರ್ಮಿಕರ ಪ್ರತಿನಿಧಿ ಶ್ರೀಧರ್ ರವರು ಮಾತನಾಡಿ, ಎಲ್ಲಾ ಸಮುದಾಯದ ಶೋಷಿತರಿಗೆ ಫೋರಂ ಕಾನೂನಾತ್ಮಕವಾಗಿ ನೆರವಾಗಲಿ ಎಂದರು ಅಲ್ಲದೆ ಒಳ್ಳೆಯ ಉದ್ದೇಶವಿದೆ ಇದು ರಾಜ್ಯದಲ್ಲಿ ಸಂಘಟಿತಗೊಳ್ಳಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಫೋರಂ ನ ಉಪಾಧ್ಯಕ್ಷರಾದ ಶಶಿ.ಕೆ.ಎಸ್ ರವರು ಮಾತನಾಡಿ,  ಯಾವುದೇ ಜಾತಿ.ಮತ ಪಂಥಗಳ ಬೇದವಿಲ್ಲದೆ, ರಾಜಕೀಯದ ಲೇಪನವಿಲ್ಲದೆ, ಮನುಷ್ಯ ಸಮುದಾಯದ ಜೀವನದ ಮೌಲ್ಯಗಳಿಗಾಗಿ ಇಂದು ಸಮಗ್ರವಾಗಿ ತಿಳುವಳಿಕೆ ಮೂಡಿಸಬೇಕಾದ ಸಂದರ್ಭಗಳಿವೆ, ಹೀಗಾಗಿಯೇ ನಮ್ಮ ಸಂಸ್ಥೆಯ ಮೊದಲ ಕಾರ್ಯಕ್ರಮದಲ್ಲಿ ಲಾಂಛನ (ಲೋಗೋ) ಬಿಡುಗಡೆಯನ್ಮು ಶೋಷಿತ ವರ್ಗಗಳಿಂದಲೇ ಮಾಡಿಸಲು ಹಾಗೂ ಇದರ ಮೂಲಕ ಸಹಭಾಗಿತ್ವ, ಸಹಭಾಳ್ವೆ, ಸಾಮರಸ್ಯವನ್ನು ನಾಗರೀಕ ಸಮಾಜಕ್ಕೆ ಫೋರಂ ನ ನಿಲುವುಗಳನ್ನು ಸ್ಪಷ್ಟಪಡಿಸಿದ್ದೇವೆ ಎಂದರು. ಈಗಾಗಲೇ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಬೂದಗವಿ ಗ್ರಾಮ ಪಂಚಾಯತಿಯ ಸಹಭಾಗಿತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಮರೇನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಶಾಲಾ ಮಕ್ಕಳಿಂದ ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ತಾಲೂಕು ದಂಡಾಧಿಕಾರಿ ಮುನಿಶಾಮಿ ರೆಡ್ಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೂದಗವಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀನಿವಾಸ್ ಎಂ ಎಸ್ ಮತ್ತು ನೂತನ ಉಪಾಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.15 ಕ್ಕೂ ಹೆಚ್ಚು ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಾಶಾಸನ ಆದೇಶ ಪತ್ರವನ್ನು ಗ್ರೇಟ್ 2 ತಹಶೀಲ್ದಾರ್ ನರಸಿಂಹಮೂರ್ತಿ ವಿತರಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು,ಗ್ರಾಮ ಪಂಚಾಯತಿ ಸದಸ್ಯರು,ಗ್ರಾಮ ಪಂಚಾಯತಿ ಮಾಜಿ…

Read More

ಬೆಂಗಳೂರು ನಗರದಲ್ಲಿ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆರೋಪಿ ಬೆನಸ್ಟಿನ್ ರಾಯ್‌ನನ್ನು (22) ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕೇರಳದ ಬೆನಸ್ಟಿನ್ ರಾಯ್, ಕೆಂಗೇರಿ ಬಳಿಯ ಪ್ಯಾರಾಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿ. ಡ್ರಗ್ಸ್ ವ್ಯಸನಿಯಾಗಿದ್ದ ಈತ, ಕ್ರಮೇಣ ಪೆಡ್ಲರ್ ಆಗಿ ಮಾರ್ಪಟ್ಟಿದ್ದ. ನಗರದ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಿ ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. * 20 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದ ಎಂದು ತಿಳಿಸಿವೆ. ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ: ‘ಎರಡು ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ಬೆನಸ್ಟಿನ್ ರಾಯ್ ನಗರಕ್ಕೆ ಬಂದಿದ್ದ. ಕೆಲ ಸ್ನೇಹಿತರ ಜೊತೆ ಸೇರಿ, ಡ್ರಗ್ಸ್ ವ್ಯಸನಿಯಾಗಿದ್ದ. ಕೇರಳದಲ್ಲಿ ಡ್ರಗ್ಸ್ ಮಾರುತ್ತಿದ್ದವರ ಜೊತೆ ಒಡನಾಟ ಬೆಳೆಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ಅದನ್ನು ಕಾಲೇಜು ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರ ಅಮಾನತಾದ ಬಳಿಕ, ಆವರಣದಲ್ಲಿ ನೂಕಾಟ ತಳ್ಳಾಟ ಏರ್ಪಟ್ಟು ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಸಸ್ಪೆಂಡ್ ಆದ ಬಳಿಕವೂ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾರ್ಷಲ್‌ ಗಳು ಅಮಾನತಾದ ಶಾಸಕರನ್ನು ಸದನದಿಂದ ಹೊರಹಾಕುವ ಕೆಲಸ ಮಾಡಿದರು. ಈ ವೇಳೆ ಸ್ಥಳದಲ್ಲಿ ನೂಕಾಟ ತಳ್ಳಾಟ ಜೋರಾಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯ ಆವರಣದಲ್ಲಿ ಕುಸಿದು ಬಿದ್ದಿದ್ದಾರೆ. ಯತ್ನಾಳ್ ಅವರಿಗೆ ಬಿಪಿ ಏರಿಕೆ ಹಾಗೂ ಶುಗರ್‌ ನಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಇದೀಗ ಯತ್ನಾಳ್ ಅವರನ್ನು ಚಿಕಿತ್ಸೆಗೆ ಅಂಬುಲೆನ್ಸ್ನಲ್ಲಿ ಪೋರ್ಟಿಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬಳ್ಳಾರಿ ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಮೆಹಬೂಬ್ ಬಾಷಾ(40) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಬಾಷಾ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಬಾಷಾ ಮೃತಪಟ್ಟಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‌ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವ್ಯಾಪ್ತಿಯನ್ನು ಮೀರಿ ವಿದೇಶಕ್ಕೂ ಈ ಜಾಲ ಹರಡಿದೆ ಎಂಬ ಸಂಶಯವಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವುದು ಸೂಕ್ತ ಎಂದು ನುಡಿದರು. ಅವರು ಬೆಂಗಳೂರಿನ ಹಲವೆಡೆ ಬಾಂಬ್ ಸ್ಫೋಟಿಸಲು ಯೋಜಿಸಿದ್ದರು ಎಂಬುದು ಬಹಳ ಗಂಭೀರವಾದ ಸಂಗತಿ ಎಂದ ಅವರು, ಕಾಂಗ್ರೆಸ್ ನಾಯಕರು ಈಗಲಾದರೂ ಮನ ಪರಿವರ್ತನೆ ಮಾಡಿಕೊಳ್ಳಲಿ ಎಂದು ಆಗ್ರಹಿಸಿದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗ ಕೆಪಿಸಿಸಿ ಅಧ್ಯಕ್ಷರು ಬಿಜೆಪಿಯನ್ನು ನಿಂದಿಸಿದ್ದರು. ಬಿಜೆಪಿ ದುರುದ್ದೇಶದಿಂದ ಬಂಧಿಸಿದೆ ಎಂದು ಟೀಕಿಸಿದ್ದರು ಎಂದು ವಿವರಿಸಿದರು. ಉಗ್ರಗಾಮಿ ಜಾಲ ಕರ್ನಾಟಕದಲ್ಲಿ ವಿಸ್ತರಿಸುತ್ತಿರುವುದು…

Read More

ಹುಕ್ಕೇರಿ: ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ನೆರಲಿ ಗ್ರಾಮ ಪಂಪಂಚಾಯತಿನ ನೂತನ ಅಧ್ಯಕ್ಷರಾಗಿ 3ನೇ ವಾನ ತಾತ್ಯಾಸಾಹೇಬ್ (ನೀಲೇಶ) ಜಾದವ್, ಉಪಾಧ್ಯಕ್ಷರಾಗಿ 5ನೇ ವಾರ್ಡನ ವಿಮಲಾ ಕೆಂಪಣ್ಣ ಕಾಂಬಳೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 16 ಸದಸ್ಯರ ಬಲ ಹೊಂದಿದ ಈ ಗ್ರಾಪಂನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪಂಚಾಯತಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖಂಡರಾದ ಇಲಿಯಾಸ್ ಇನಾಮದಾರ್, ಮಧುಕರ್ ಖೋತ, ಅನಿಲ್ ಪಾಟೀಲ್, ಶಂಕರ ಸಂಕಪಾಳ, ರಾಜಶೇಖರ್ ಹಂದಿಗೂಡಮಠ, ರವೀಂದ್ರ ಪಾಟೀಲ್, ಕಲಗೌಡ್ ಪಾಟೀಲ್, ಶಿವಲಿಂಗ ಹುಕ್ಕೇರಿ, ವಿರುಪಾಕ್ಷಿ ಹೊಸಮನಿ, ಮಾರುತಿ ತಳವಾರ್, ಶಕೀಲ್ ಮುಲ್ಲಾ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More