Author: admin

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳು ‘ಗರ್ಭ’ ಎಂಬ ಕನ್ನಡ ನಾಟಕವನ್ನು ತುಂಬಾ ಮನೋಜ್ಞವಾಗಿ ಮತ್ತು ಭಾವನಾತ್ಮಕವಾಗಿ ಅಭಿನಯಿಸಿ ಪ್ರದರ್ಶಿಸಿದರು. ರಂಗ ಚಂದಿರ ಮತ್ತು ಸಮೃದ್ಧಿ ರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು ಜೆ. ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ರಂಗಪತಾಕೆ-2023ರ ಅಡಿ ನಾಟಕ ಪ್ರದರ್ಶಿಸಲಾಯಿತು. ‘ಸರೋಗಸಿ’ ವಿಧಾನದಲ್ಲಿ ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆಯುವ ಕತೆಯುಳ್ಳ ‘ಗರ್ಭ’ ಎಂಬ ನಾಟಕವನ್ನು ವಿದ್ಯಾರ್ಥಿಗಳು ಉತ್ತಮವಾಗಿ ಪ್ರದರ್ಶಿಸಿದರು.

Read More

ಬೆಂಗಳೂರು: ವಿವಿ ಪುರಂ ಟೆಂಪಲ್ ಸ್ಟ್ರೀಟ್ ಬಳಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಸಿಗರೇಟ್ ಸೇದುತ್ತ ನಿಂತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ವಿದ್ಯಾರ್ಥಿಗಳ ಫೋಟೋ ತೆಗೆದು ವಿವಿ ಪುರಂ ಪೊಲೀಸರಿಗೆ ಟ್ಯಾಗ್ ಮಾಡಿ ಕಳುಹಿಸಿ, ಕ್ರಮಕ್ಕೆ ಮನವಿ ಮಾಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಪೊಲೀಸರು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಇದಕ್ಕೆ ಕ್ಯಾರೇ ಅನ್ನದ ವಿದ್ಯಾರ್ಥಿಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲೇ ಸಿಗರೇಟ್ ಸೇವನೆ ಮಾಡಿದ್ದಾರೆ.

Read More

ವೈಯಕ್ತಿಕವಾಗಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ನನ್ನ ಸಹಮತ ಇಲ್ಲ. ‘ಹೈಕಮಾಂಡ್ ಅಂದ್ರೆ ನಮಗೆ ಬಿ.ಎಸ್.ಯಡಿಯೂರಪ್ಪ’. ನಾನು ಹೇಳುವವರೆಗೂ ಏನೂ ಮಾಡಬೇಡಿ ಎಂದು ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಒಂದು ತಿಂಗಳಿಂದ ಎಲ್ಲೂ ಏನನ್ನೂ ಮಾತನಾಡಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನಿರಾಕರಿಸಿ ಬೆಂಗಳೂರಿನ ಹೈಕೋರ್ಟ್ ಆದೇಶ ಹೊರಡಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್. ಬಿ. ಪ್ರಭಾಕರ್ ಶಾಸ್ತ್ರಿ ಮತ್ತು ಅನಿಲ್ ಕೆ. ಕಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿ ತಿರಸ್ಕರಿಸಿ ಆದೇಶಿಸಿದೆ. ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ದಾಳಿ ವೇಳೆ ಸ್ಥಳದಲ್ಲಿ ಮೂರು ಆರೋಪಿಗಳು ಹಾಜರಿರಲಿಲ್ಲ.

Read More

ಮಧ್ಯಪ್ರದೇಶ:  ಕೇಂದ್ರ ಸರ್ಕಾರ ಮಹಿಳೆಯರನ್ನು ತಮಾಷೆಯಾಗಿ ಪರಿಗಣಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಗುರುವಾರ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮೋಹನ್‌ ಖೇಡಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲು ಸಾಧ್ಯವಾಗದಿದ್ದರೆ, ಈ ಹಂತದಲ್ಲಿ ಏಕೆ ಮಂಡಿಸಲಾಗಿದೆ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ತಂದಿದೆ. ನಾವೆಲ್ಲರೂ ಸಹ ಅದನ್ನು ಬೆಂಬಲಿಸಿದ್ದೇವೆ. ಆದರೆ ಅದಕ್ಕೂ ಮೊದಲು ಜನಗಣತಿ ನಡೆಸಲಾಗುವುದು, ಕಾಯ್ದೆಯನ್ನು 10 ವರ್ಷಗಳವರೆಗೆ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಹೇಳಿದೆ. ಹಾಗಾದರೆ ಈ ಘೋಷಣೆಯ ಅರ್ಥವೇನು? ಎಂದು ಅವರು ಪ್ರಶ್ನಿಸಿದರು.

Read More

ಅಲಹಾಬಾದ್ ಹೈಕೋರ್ಟ್ ಹಿಂದೂ ವಿವಾಹ ಕಾಯ್ದೆಯಡಿ, ಹಿಂದೂ ವಿವಾಹಗಳಲ್ಲಿ ಸಪ್ತಪದಿ ನಡೆಸದ ಹೊರತು ಮದುವೆಯನ್ನು ಮಾನ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಸಪ್ತಪದಿ 7 ಬಾರಿ ಅಗ್ನಿ ಪ್ರದಕ್ಷಿಣೆ ಮಾಡುವುದಾಗಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಅವರು ಈ ಆದೇಶ ನೀಡಿದ್ದಾರೆ. ವಿಚ್ಛೇದನ ನೀಡದೆ ಬೇರೊಬ್ಬ ವ್ಯಕ್ತಿಯನ್ನು ಎರಡನೇ ಮದುವೆಯಾಗಿರುವ ಪತ್ನಿ ವಿರುದ್ಧ, ಮೊದಲ ಪತಿ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮದುವೆಯ ಸಮಯದಲ್ಲಿ ತಾನು ಬೆಂಕಿಗೆ ಪ್ರದಕ್ಷಿಣೆ ಹಾಕಲಿಲ್ಲ ಮತ್ತು ಮೊದಲ ಮದುವೆಗೆ ಮಾನ್ಯತೆ ಇಲ್ಲ ಎಂದು ಮಹಿಳೆಯ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿತು. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 7 ರ ಪ್ರಕಾರ, ಸಪ್ತಪದಿ  ಸೇರಿದಂತೆ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡರೆ ಮಾತ್ರ ವಿವಾಹವನ್ನು ನೆರವೇರಿಸಬಹುದು ಎಂದು ನ್ಯಾಯಾಲಯವು ಗಮನಿಸಿದೆ. ಮಹಿಳೆಯ ವಿರುದ್ಧ ಮೊದಲ ಪತಿ ನೀಡಿದ ದೂರಿನ ಮೇರೆಗೆ ನ್ಯಾಯಾಲಯವು ಪೊಲೀಸ್ ಕ್ರಮವನ್ನು ರದ್ದುಗೊಳಿಸಿದೆ. ಸ್ಮೃತಿ ಸಿಂಗ್ ಅವರು ಸತ್ಯಂ ಸಿಂಗ್ ಅವರನ್ನು 2017 ರಲ್ಲಿ ವಿವಾಹವಾದರು. ಆದರೆ ಇಬ್ಬರ…

Read More

ಬೆಂಗಳೂರು: ಗ್ಯಾರಂಟಿ ಯೋಜನೆ ಬಳಿಕ ವ್ಯಾಪಾರ ವಹಿವಾಟು ಗರಿಗೆದರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ‌ ತಿಳಿಸಿ ಎಂದಿದ್ದಾರೆ. ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ನಮ್ಮ ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದೆ. ಈ ಕಾರಣಕ್ಕಾಗಿ ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ( ಜಿ.ಎಸ್.ಟಿ ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದ್ದು, ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಸಂಗ್ರಹಕ್ಕಿಂತ ಶೇ. 20 ಪ್ರಗತಿ ಕಂಡಿದೆ. ಸೆಪ್ಟೆಂಬರ್ ನಲ್ಲಿ ರೂ. 11,693 ಕೋಟಿ ಜಿಎಸ್‌ ಟಿ ಸಂಗ್ರಹವಾಗಿದ್ದು, ಇದು ರಾಜ್ಯದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿ ಎಂದು ಭಾವಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಈ ಹಿಂದೆ ಹಲವು ಬಾರಿ ಹೇಳಿದಂತೆ, ”ಬಡವರ ಜೀಬಿಗೆ ಹಣ ಹಾಕಿದರೆ ಅವರಲ್ಲಿ ಕೊಳ್ಳುವ ಸಾಮರ್ಥ್ಯ ಬರುತ್ತದೆ, ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ” ಎಂದು. ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹ ನನ್ನ ಮಾತನ್ನು ಸಾಬೀತು ಮಾಡಿದೆ ಎಂದಿದ್ದಾರೆ.

Read More

ಬೆಂಗಳೂರು: ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ  ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು.  ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ  ಕುರಿತಂತೆ ಚರ್ಚಿಸಲು  ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು  ಅವರನ್ನು  ಭೇಟಿಯಾಗಿ  ಚರ್ಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕವಸ್ತುಗಳ  ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು ಮತ್ತು ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009 ರಲ್ಲಿ ನಾಲ್ಕು ಸ್ವಾಮೀಜಿಗಳು  ದಾವೆ ಹೂಡಿದ್ದು,  ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ  ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅದರ…

Read More

ಕೆಂಗೇರಿ ಠಾಣೆ ವ್ಯಾಪ್ತಿಯ ಜ್ಞಾನಭಾರತಿ ಲೇಔಟ್ ‌ನಲ್ಲಿ ಹೊಸದಾಗಿ ನಿರ್ಮಾಣ ಮಾಡುತ್ತಿರವ ಮನೆಗೆ ಅಳವಡಿಸಿದ್ದ ಎಲೆಕ್ಟ್ರಿಕ್ ವೈರ್‌ ಕಳ್ಳತನವಾಗಿತ್ತು.ಕಳೆದ ಸೆ. 20 ರ ಬೆಳಗ್ಗೆ ಸುಮಾರು 6 ಗಂಟೆಗೆ  ಕಳ್ಳತನವಾದ ಬಗ್ಗೆ ದೂರು ದಾಖಲಾಗಿತ್ತು. ದೂರಿನಾಧಾರದ ಮೇಲೆ ಕಾರ್ಯಪ್ರವೃತ್ತರಾದ ಪೊಲೀಸರು  ಸೆ.29ರಂದು ತಮಿಳುನಾಡು ಮೂಲದ ಆರೋಪಿ ವೈರಮುಗಲನನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ  ನೀಡಿದ ಮಾಹಿತಿ ಮೇರೆಗೆ ಸಮಾರು ಒಟ್ಟು 6,00,000/-ರೂ ಬೆಲೆ ಬಾಳುವ ವಿವಿಧ ಬಣ್ಣಗಳ ಒಟ್ಟು 93 ಬಂಡಲ್ ಎಲೆಕ್ಟ್ರಿಕ್ ವೈರ್ ‌ಗಳು ಮತ್ತು 01 ಚಕ್ರ ವಾಹನವನ್ನು ವಶಪಡಿಸಿಕೊಳ್ಳವಲ್ಲಿ ಯಶಸ್ವಿಯಾಗಿರುತ್ತಾರೆ.

Read More

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ‌ನನ್ನು ಬಂಧಿಸಲಾಗಿದೆ. ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್ ಎಂಬಾತನನ್ನು ಅರೆಸ್ಟ್‌ ಮಾಡಲಾಗಿದೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ‌ನಲ್ಲಿ ಈತ ಕೈಚಳಕ ತೋರಿ ಭೂಗತವಾಗಿದ್ದ. ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಹ್ಯಾಕರ್ ರಾಜೇಂದ್ರ ಸಿಂಗ್‌ ನನ್ನು ಬಂಧಿಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ವೆಬ್‌ ಸೈಟ್ ‌ಗಳನ್ನು ಹ್ಯಾಕ್ ಮಾಡುತ್ತಿದ್ದ. ಈತನಿಗಾಗಿ ನಾಲ್ಕು ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಹುಡುಕಾಟ ನಡೆಸಿದ್ದವು. ಸಿಸಿಬಿ ಅಧಿಕಾರಿಗಳು ಶ್ರೀಕಿಯಿಂದ ಸುಮಾರು 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆಯಲ್ಲಿ ಪಂಜಾಬ್ ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು. ರಾಜೇಂದ್ರ ಸಿಂಗ್ ಬಂಧನಕ್ಕೆ ಬಲೆ ಬೀಸಲಾಗಿತ್ತು. ಈತನನ್ನು ಪಂಜಾಬ್‌ ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಾಜೇಂದ್ರ ಸಿಂಗ್ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಬೀಳುವ ಸಾಧ್ಯತೆ ಇದೆ.

Read More