Author: admin

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ  ದಾಖಲಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ವೃಕ್ಷ ಮಾತೆಯವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ.26 ರಂದು ಉಸಿರಾಟದಲ್ಲಿ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಸೋಮವಾರ ರಾತ್ರಿ ಉಸಿರಾಟದಲ್ಲಿ ತೀವ್ರ ಏರುಪೇರಾಗಿದ್ದರಿಂದ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು.

Read More

ಬೆಂಗಳೂರು: ಬೆಂಗಳೂರಿನ ಯಲಹಂಕ ಉಪನಗರ 3 ನೇ ಹಂತದಲ್ಲಿ ಕಿರಾತಕ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಆಕೆಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಘಟನೆ ಬೆಳಕಿಗೆ ಬಂದಿದೆ. ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ ಫ್ಯಾನಿಗೆ ನೇಣು ಹಾಕಿ, ಆತ್ಮಹತ್ಯೆ ಅಂತಾ ಬಿಂಬಿಸಿದ್ದ. ಸದ್ಯ ಪತಿ ಸಂತೋಷ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿ ಸಂತೋಷ್.

Read More

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ಸಾಕುನಾಯಿ ರಹಸ್ಯ ಪೊಲೀಸರನ್ನು ಕಚ್ಚಿದ ಘಟನೆಗಳು ನಡೆಯುತ್ತಲೇ ಇವೆ. ಕಳೆದ ಸೋಮವಾರ, ಬಿಡೆನ್ ಅವರ ಸಾಕು ನಾಯಿ ರಹಸ್ಯ ಪೊಲೀಸ್ ಅಧಿಕಾರಿಯ ಮೇಲೆ ದಾಳಿ ಮಾಡಿದೆ. ಬಿಡೆನ್ ಅವರ ನಾಯಿಯ ವಿರುದ್ಧ ಇದು 10 ನೇ ದೂರು. ಪೊಲೀಸ್ ಅಧಿಕಾರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಹಸ್ಯ ಸೇವೆಯ ವಕ್ತಾರ ಆಂಥೋನಿ ಗುಗ್ಲಿಯೆಲ್ಮಿ ತಿಳಿಸಿದ್ದಾರೆ. ಬಿಡೆನ್ ಅವರ ಜರ್ಮನ್ ಶೆಫರ್ಡ್ ನಾಯಿ ಈ ವರ್ಷದ ಜನವರಿ ಮತ್ತು ಅಕ್ಟೋಬರ್ ನಡುವೆ ರಹಸ್ಯ ಪೊಲೀಸರ ಮೇಲೆ ಹತ್ತು ಬಾರಿ ದಾಳಿ ಮಾಡಿದೆ. ಈ ಎಲ್ಲಾ ಬೆಳವಣಿಗೆಗಳು ಸಂಪ್ರದಾಯವಾದಿ ವಾಚ್‌ಡಾಗ್ ಗ್ರೂಪ್ ಜುಡಿಷಿಯಲ್ ವಾಚ್ ಸಲ್ಲಿಸಿದ ಮೊಕದ್ದಮೆಯ ನಂತರ ಬಂದಿವೆ. ನಾಯಿಗೆ ಉತ್ತಮ ತರಬೇತಿ ನೀಡಲಾಗುವುದು ಮತ್ತು ದಾಳಿಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶ್ವೇತಭವನವು ಪ್ರತಿಕ್ರಿಯಿಸಿದೆ. ಶ್ವೇತಭವನದ ಪರಿಸರವು ನಾಯಿಗೆ ಒತ್ತಡವನ್ನುಂಟುಮಾಡುತ್ತದೆ ಮತ್ತು ಅದನ್ನು ಪುನಃ ತರಬೇತಿ ನೀಡಲು ಪ್ರಯತ್ನಿಸುತ್ತದೆ ಎಂದು ಶ್ವೇತಭವನವು ಹೇಳಿದೆ.…

Read More

ವಾರಣಾಸಿ: ಉತ್ತರ ಪ್ರದೇಶ ಜಿಲ್ಲೆಯ ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಂಬತ್ತು ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಟ್ಯಾಕ್ಸಿಯು ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅವರು ಪಿಲಿಭಿತ್ ಜಿಲ್ಲೆಯವರಾಗಿದ್ದು, ಬಾಡಿಗೆ ಟ್ಯಾಕ್ಸಿಯಲ್ಲಿ ವಾರಣಾಸಿಗೆ ಬಂದಿದ್ದರು. ಮಹೇಂದ್ರ ಪಾಲ್ ಮತ್ತು ಅವರ ಸಂಬಂಧಿಕರು ವಾರಣಾಸಿಗೆ ಕುಟುಂಬದ ಸದಸ್ಯರ ಚಿತಾಭಸ್ಮವನ್ನು ಗಂಗಾದಲ್ಲಿ ಮುಳುಗಿಸಲು ಬಂದಿದ್ದರೆ, ಇತರರು ದೇವಾಲಯಗಳಲ್ಲಿ ಪೂಜೆ ಸಲ್ಲಿಸಲು ಬಂದಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೋಲೀಸ್ ಮೂಲವು ತಿಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಆದ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಬಾಲಕನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Read More

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಸಂಭವಿಸಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಭದ್ರತಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಈ ಪ್ರದೇಶದಲ್ಲಿ ಜಮಾಯಿಸಿದ ಮೈಟಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದರು. ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ನವದೆಹಲಿ: ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿ ಬುಧವಾರದಿಂದ ನಾಪತ್ತೆಯಾಗಿರುವ 22 ಸೈನಿಕರನ್ನು ಹೊರತುಪಡಿಸಿ ಸಿಕ್ಕಿಂ ಮತ್ತು ಉತ್ತರ ಬಂಗಾಳದ ಎಲ್ಲಾ ಸೈನಿಕರು ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಸಚಿವಾಲಯ ಗುರುವಾರ ಯೋಧರ ಕುಟುಂಬಗಳಿಗೆ ಭರವಸೆ ನೀಡಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಮೊಬೈಲ್ ಟೆಲಿಫೋನ್ ಸೇವೆಗಳು ಸ್ಥಗಿತಗೊಂಡಿವೆ, ಆದ್ದರಿಂದ ಸಿಕ್ಕಿಂ ಮತ್ತು ಉತ್ತರ ಬಂಗಾಳದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗೆ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು MoD ಹೇಳಿದರು. ನಾಪತ್ತೆಯಾಗಿರುವ 22 ಸೈನಿಕರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಸಿಕ್ಕಿಂ ಮತ್ತು ಉತ್ತರ ಬಂಗಾಳವು ಸೇನೆಯ 33 ಕಾರ್ಪ್ಸ್ ಅಡಿಯಲ್ಲಿವೆ. ಕಾರ್ಪ್ಸ್‌ನ ವಿವಿಧ ಘಟಕಗಳ ಅಡಿಯಲ್ಲಿ ಸುಮಾರು 50,000 ಸೈನಿಕರು ನೆಲೆಸಿದ್ದಾರೆ. ಸಿಕ್ಕಿಂ ಚೀನಾದೊಂದಿಗೆ 220 ಗಡಿಯನ್ನು ಹಂಚಿಕೊಂಡಿದೆ. 2017 ರ ಬೇಸಿಗೆಯಲ್ಲಿ ಟಿಬೆಟ್‌ ನ ಚುಂಬಿ ಕಣಿವೆಯ ಗಡಿಯಲ್ಲಿರುವ ಆಗ್ನೇಯ ಸಿಕ್ಕಿಂನಲ್ಲಿರುವ ಡೋಕ್ಲಾಮ್‌ ನಲ್ಲಿ 73 ದಿನಗಳ ಸ್ಟ್ಯಾಂಡ್‌ ಫ್‌ ನಲ್ಲಿ ಎರಡು ಕಡೆಯ ಸೇನೆಗಳು ಲಾಕ್…

Read More

ನಟ ರಣಬೀರ್ ಕಪೂರ್ ಗೆ ಇಡಿ ನೋಟಿಸ್ ಆನ್‌ಲೈನ್ ಜೂಜಿನ ಪ್ರಕರಣದಲ್ಲಿ ಶುಕ್ರವಾರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಮಹದೇವ್ ಆನ್‌ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದೆ. ಇಡಿ ತನಿಖೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಇತರ ಕೆಲವು ಪ್ರಮುಖ ಬಾಲಿವುಡ್ ನಟರು ಮತ್ತು ಗಾಯಕರಿಗೆ ಸಮನ್ಸ್ ನೀಡುವ ಸಾಧ್ಯತೆಯಿದೆ. ಇಡಿ ಹಲವಾರು ರಾಜ್ಯಗಳಲ್ಲಿ ಆನ್‌ ಲೈನ್ ಬೆಟ್ಟಿಂಗ್ ಪ್ಲಾಟ್‌ ಫಾರ್ಮ್ ಮಹದೇವ್ ಬುಕ್ ಆ್ಯಪ್ ನ ಕಚೇರಿಗಳನ್ನು ತನಿಖೆ ನಡೆಸುತ್ತಿದೆ.

Read More

ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಶುರುವಾಗಲು ಕೌಂಟ್ ಡೌನ್ ಶುರುವಾಗುತ್ತಿದ್ದಂತಯೇ, ಯಾರೆಲ್ಲಾ  ಬಿಗ್ ಬಾಸ್ ಸೀಸನ್ 10 ಗೆ ಎಂಟ್ರಿ ಕೊಡುತ್ತಾರೆ ಎಂದು ಒಂದಿಷ್ಟು ಹೆಸರುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅದರಲ್ಲಿ ಅದ್ವಿತಿ ಶೆಟ್ಟಿ ಗೆ ಕೂಡ  ಆಫರ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಈ  ಬಗ್ಗೆ ನಟಿ ಅದ್ವಿತಿ ಶೆಟ್ಟಿ ಯವರು, “ಬಿಗ್ ಬಾಸ್ ಮನೆಗೆ ಬರಲು ಆಫರ್ ಸಿಕ್ಕಿದ್ದು ನಿಜ. ಆದರೆ ನಾನು ಶೋನಲ್ಲಿ ಭಾಗಿಯಾಗ್ತಿಲ್ಲ. ಇತ್ತೀಚಿಗೆ ನನ್ನ ತಂದೆ ಅಗಲಿದರು. ಆ ನೋವಿನಿಂದ ಹೊರಬರಲು ಮಾನಸಿಕವಾಗಿ ಸಮಯಬೇಕಿದೆ. ಈ ನಡುವೆ ಫಿಟ್‌ ನೆಸ್ ಕಡೆ ಕೂಡ ನಾನು ಗಮನ ನೀಡಿಲ್ಲ. ಬಿಗ್ ಬಾಸ್ ಶೋ ಬಗ್ಗೆ ಗೌರವಿದೆ. ಆ ಗೌರವಕ್ಕಾದರೂ ಸರಿಯಾದ ಪೂರ್ವ ತಯಾರಿ ಮಾಡಬೇಕು” ಎಂದು ನಟಿ ಸ್ವತಃ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾನಸಿಕವಾಗಿ ಮತ್ತು ಫಿಟ್‌ ನೆಸ್ ನಿಂದಾಗಿ ತಯಾರಾಗದ ಕಾರಣ ಬಿಗ್ ಬಾಸ್‌ಗೆ ಹೋಗಲು ತಯಾರಿಲ್ಲ. ತಯಾರಿ…

Read More

ದೆಹಲಿಯ ಕೌಟುಂಬಿಕ ನ್ಯಾಯಾಲಯ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಅನುಮೋದಿಸಿದೆ. ಭಾರತದ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. ಭಾರತದ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. 2012ರಲ್ಲಿ ಇಬ್ಬರೂ ಮದುವೆಯಾಗಿದ್ದರು. ಇಬ್ಬರಿಗೂ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾ ಶಿಖರ್ ಗಿಂತ 10 ವರ್ಷ ದೊಡ್ಡವಳು. ಆಯೇಷಾ ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು ಆಕೆ ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಹೊಂದಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್(ಕೌಟುಂಬಿಕ ನ್ಯಾಯಾಲಯ) ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಅನುಮೋದಿಸಿದೆ. ಇದು ಆಯೇಷಾಳ ಎರಡನೇ ವಿವಾಹವಾಗಿದ್ದು, ತನ್ನ ಏಕೈಕ ಪುತ್ರನಿಂದ ವರ್ಷಗಟ್ಟಲೆ ಬೇರ್ಪಟ್ಟು ಬದುಕುವಂತೆ ಒತ್ತಾಯಿಸಿ ಶಿಖರ್ಗೆ ಪತ್ನಿ ಮಾನಸಿಕ ನೋವು ಉಂಟು ಮಾಡಿದ್ದಾಳೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ, ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ. ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ…

Read More