Author: admin

ಬೆಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ನಡೆದಿದೆ. ಆನಂದ್ ದಯಾಳ್ ದಾದು, ಚಾಲಕ ಶ್ಯಾಮ್ ಸುಂದರ್ ಪಿಳ್ಳೆ ಕಾರು ನಿಲ್ಲಿಸದೆ, ರಸ್ತೆ ಬದಿಯಿಂದಲೇ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದರು. ಇದರಿಂದ ಕುಪಿತಗೊಂಡ ಕೆಲವರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.

Read More

ಬೆಂಗಳೂರು: ದುಬಾರಿ ಮೌಲ್ಯದ ಮೊಬೈಲ್ ಕಳವು ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧನಕ್ಕಳಪಡಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಮಹ್ಮದ್ ಪಾಷಾ ಅಲಿಯಾಸ್ ಆರೀಫ್ ಪಾಷಾ ಹಾಗೂ ಈತನ ಸಹಚರರಾದ ಮೊಹಮದ್ ಉಮರ್, ಐಯಾನ್ ಅಲಿಯಾಸ್ ಅಲೀಂ ಪಾಷ ಮತ್ತು ಮೊಹಮದ್ ಸಲೀಂ ಎಂದು ಗುರ್ತಿಸಲಾಗಿದೆ. ಆರೋಪಿಗಳಿಂದ ರೂ. 2 ಕೋಟಿ ಮೌಲ್ಯದ 1037 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ.

Read More

ಬೆಂಗಳೂರು: ಡ್ರಗ್ ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕಾರ್ಯಾಚರಣೆಯಲ್ಲಿ, ಸಿಸಿಬಿ ಅಧಿಕಾರಿಗಳು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಸೋಲದೇವನಹಳ್ಳಿ, ಎಚ್‌ಎಸ್‌ಆರ್ ಲೇಔಟ್, ವೈಟ್‌ ಫೀಲ್ಡ್, ಪರಪ್ಪನ ಅಗ್ರಹಾರ, ಕೆಆರ್ ಪುರಂ, ಕಾಡುಗೋಡಿ ಮತ್ತು ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಬಂಧಿತರ ವಿರುದ್ಧ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.

Read More

ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಹೈದರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಇದು ಕಾಂಗ್ರೆಸ್‌ ನ ಶಾಸಕರಿಗೆ ಕೊನೆಯ ಖಡಕ್ ಎಚ್ಚರಿಕೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಯಾವುದೇ ಹೇಳಿಕೆಗಳನ್ನು ನೀಡಬಾರದು. ಇದು ಅವರಿಗೆ ಕಡೆಯ ಎಚ್ಚರಿಕೆ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಮಾಧ್ಯಮಗಳ ಮುಂದೆ ಬರಬಾರದು. ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ಪಕ್ಷದ ವತಿಯಿಂದ ಇದಕ್ಕೆ ಬೇಕಾದ ಸೂಚನೆ ನೀಡಿದ್ದು, ಇದು ಮುಂದುವರೆದ್ರೆ, ಕ್ರಮ ನಿಶ್ಚಿತ ಎಂದಿದ್ದಾರೆ.

Read More

ಕರ್ನಾಟಕದ ಬಿಜೆಪಿಯಲ್ಲಿ ಕೆಲ ನಾಯಕರಿಗೆ ಅಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋತ ನಾಯಕರನ್ನು ಕರೆದು ಮಾತನಾಡಿಸಬೇಕಿತ್ತು ಎಂದರು. ಈ ಹಿಂದೆ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಆ ಕೆಲಸವನ್ನು ಮಾಡುತ್ತಿದ್ದರು ಎಂದು ಎಂ. ಪಿ ರೇಣುಕಾಚಾರ್ಯಗೆ ಉಲ್ಲೇಖಿಸಿದರು. ಆದರೆ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಇರುವ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಹೀಗಿರುವಾಗ ನಾಯಕರು ಪಕ್ಷ ತೊರೆದು ಹೋಗಬಹುದಾದ ಆತಂಕ ಇದೆ ಎಂದು ಹೇಳಿದರು. ರಾಜ್ಯದಲ್ಲಿ ಅಭದ್ರತೆ ಹಿನ್ನೆಲೆ ಯಾರಾದರೂ ಬಿಜೆಪಿ ತೊರೆದು ಹೋಗಬಹುದು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬಿವೈ ವಿಜಯೇಂದ್ರ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷ ಸಂಘಟನೆ ಆಗಬೇಕಾದರೆ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.

Read More

ಬೆಂಗಳೂರು: ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಗಾಗಿ ಅಳವಡಿಸಲು ಉದ್ದೇಶಿಸಲಾಗಿರುವ ಎರಡು ಮೊಬೈಲ್ ಆಕ್ಸಿಜನ್ ವಾಹನಗಳ ಕಾರ್ಯನಿರ್ವಹಣೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿದರು. 500 ಎಲ್ ಪಿಎಂ ಮತ್ತು 250 ಎಲ್ ಪಿ ಎಂ ಶಕ್ತಿಯುಳ್ಳ ಮೊಬೈಲ್ ಆಕ್ಸಿಜನ್ ವಾಹನಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು 500 ಎಲ್ ಪಿ ಎಂನಿಂದ 22 ಆಕ್ಸಿಜನ್ ಸಿಲಿಂಡರ್ ಹಾಗೂ 250 ಎಲ ಪಿ ಎಂನಿಂದ 11 ಸಿಲಿಂಡರ್ ಗಳನ್ನು ಒಮ್ಮೆಲೇ ಭರ್ತಿ ಮಾಡಬಹುದಾಗಿದೆ ಎಂದರು.

Read More

ಚೀನಾದ ಮಾಜಿ ಪ್ರಧಾನಿ ಲಿ ಕೆಕಿಯಾಂಗ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ನಿಧನರಾದರು. ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಅವರು 2013 ರಿಂದ 10 ವರ್ಷಗಳ ಕಾಲ ಚೀನಾದ ಪ್ರಧಾನಿಯಾಗಿದ್ದರು. ಈ ವರ್ಷದ ಆರಂಭದಲ್ಲಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಅವರು ಆಡಳಿತಾರೂಢ ಚೀನೀ ಕಮ್ಯುನಿಸ್ಟ್ ಪಕ್ಷದಲ್ಲಿ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿದ್ದರು. ಪ್ರಸ್ತುತ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಉಪಾಧ್ಯಕ್ಷರಾಗಿದ್ದರು ಮತ್ತು ಲಿ ಉಪ ಪ್ರಧಾನಿಯಾಗಿದ್ದರು, ಹು ಜಿಂಟಾವೊ ಅಧ್ಯಕ್ಷರಾಗಿದ್ದರು. ಕ್ಸಿ ಜಿನ್‌ಪಿಂಗ್ ಚೀನಾದ ಅಧ್ಯಕ್ಷರಾದರು ಮತ್ತು ಲೀ ಕೆಕಿಯಾಂಗ್ 2012 ರಲ್ಲಿ ಪ್ರಧಾನಿಯಾದರು. ಕೆಚಿಯಾಂಗ್‌ನ ಕಾಲದಲ್ಲಿ ಚೀನಾದ ಆರ್ಥಿಕತೆಯು ನಿರ್ಣಾಯಕ ಶಕ್ತಿಯಾಯಿತು. ಕಾನೂನಿನಲ್ಲಿ ಪದವಿ ಮತ್ತು ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್, ಮಾವೋ ಝೆಡಾಂಗ್ ಚಿಂತನೆಯ ಅಧ್ಯಯನದಲ್ಲಿ ಅವರು ಪೀಕಿಂಗ್ ವಿಶ್ವವಿದ್ಯಾಲಯದಲ್ಲಿ ಉತ್ತಮ ಸಾಧನೆ ಮಾಡಿದರು. ಅಲ್ಲಿ ಅವರು ಕಮ್ಯುನಿಸ್ಟ್ ಯೂತ್ ಲೀಗ್‌ನ ಕಾರ್ಯದರ್ಶಿಯಾದರು.

Read More

ಸಿರಿಯಾದ ಎರಡು ಕೇಂದ್ರಗಳ ಮೇಲೆ US ದಾಳಿ. ಪೆಂಟಗನ್ ದಾಳಿಯನ್ನು ದೃಢಪಡಿಸಿದೆ. US 900 ಹೆಚ್ಚುವರಿ ಸೈನಿಕರನ್ನು ಪಶ್ಚಿಮ ಏಷ್ಯಾಕ್ಕೆ ನಿಯೋಜಿಸಿದೆ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ನಾಗರಿಕರ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಸಿರಿಯಾದಲ್ಲಿ ದಾಳಿ ನಡೆಸಲಾಗಿದೆ ಎಂದು ಯುಎಸ್ ಹೇಳಿದೆ. ನಿನ್ನೆ ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಿರಿಯಾದಲ್ಲಿರುವ ಯುಎಸ್ ಮಿಲಿಟರಿ ನೆಲೆಯ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಬಂದವು. ಇದರ ಬೆನ್ನಲ್ಲೇ ಅಮೆರಿಕ ಪ್ರತಿದಾಳಿ ನಡೆಸಿತು. ಪೂರ್ವ ಸಿರಿಯಾದ ಡೀರ್ ಎಲ್-ಝೌರ್ ಪ್ರಾಂತ್ಯದ ಅಲ್-ಒಮರ್ ತೈಲ ಕ್ಷೇತ್ರದಲ್ಲಿರುವ ಯುಎಸ್ ಸೇನಾ ನೆಲೆ ಮತ್ತು ಅಲ್-ಶದ್ದಾದಿಯ ಮೇಲೆ ದಾಳಿ ನಡೆದಿದೆ. ಇರಾಕ್ ಮತ್ತು ಸಿರಿಯಾದಲ್ಲಿನ ಯುಎಸ್ ನೆಲೆಗಳ ಮೇಲೆ ಡ್ರೋನ್ ದಾಳಿಗಳ ಸರಣಿಯಲ್ಲಿ ಎರಡು ಡಜನ್ ಯುಎಸ್ ಸೈನಿಕರು ಗಾಯಗೊಂಡಿದ್ದಾರೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಪೆಂಟಗನ್ ದಾಳಿಯನ್ನು ದೃಢಪಡಿಸಿದೆ ಆದರೆ ಸಾವುನೋವುಗಳ ಸಂಖ್ಯೆಯನ್ನು ಬಹಿರಂಗಪಡಿಸಲಿಲ್ಲ. ಅಕ್ಟೋಬರ್ 18 ರಂದು, ದಕ್ಷಿಣ ಸಿರಿಯಾದ ಅಲ್-ಟಾನ್ಫ್ ಸೇನಾ ನೆಲೆಯ ಮೇಲೆ ಎರಡು ಡ್ರೋನ್…

Read More

ಗಾಜಾದಲ್ಲಿ ಇಸ್ರೇಲಿ ಭಾರೀ ವೈಮಾನಿಕ ದಾಳಿ. ಗಾಜಾದಲ್ಲಿ ಇದುವರೆಗಿನ ಅತಿ ಹೆಚ್ಚು ವೈಮಾನಿಕ ದಾಳಿ ಇದಾಗಿದೆ ಎಂದು ವರದಿಯಾಗಿದೆ. ಗಾಜಾ ನಗರದಾದ್ಯಂತ ಹಿಂಸಾತ್ಮಕ ಸ್ಫೋಟಗಳು ನಡೆದವು. ಭಾರೀ ವೈಮಾನಿಕ ದಾಳಿಯ ಅಡಿಯಲ್ಲಿ ಗಾಜಾದಲ್ಲಿ ಸುದ್ದಿ ಪ್ರಸಾರ ಸಿಸ್ಟಂಗಳು ಕ್ರ್ಯಾಶ್ ಆಗಿವೆ ಮತ್ತು ಇಂಟರ್ನೆಟ್ ಕೆಟ್ಟದಾಗಿ ಹೋಯಿತು. ಹಮಾಸ್ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ. ಇಸ್ರೇಲಿ ಮಿಲಿಟರಿ ಕೂಡ ನೆಲದ ಯುದ್ಧವನ್ನು ವಿಸ್ತರಿಸುವುದಾಗಿ ಘೋಷಿಸಿತು. ಆಹಾರ ಮತ್ತು ಇಂಧನದ ಮೇಲಿನ ನಿಷೇಧದ ನಂತರ ಗಾಜಾವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸುವ ಮೂಲಕ ಸಂಪರ್ಕ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ. ರಕ್ಷಣಾ ಸಿಬ್ಬಂದಿಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಗಳು ಸೇರಿದಂತೆ ಮೊಬೈಲ್ ಮತ್ತು ಇಂಟರ್ ನೆಟ್ ಸಂಪರ್ಕ ಸಂಪೂರ್ಣ ಕಡಿತಗೊಂಡಿರುವುದರಿಂದ ಚಿಕಿತ್ಸೆಗೆ ವ್ಯತ್ಯಯ ಉಂಟಾಗುತ್ತಿದೆ. ಇಸ್ರೇಲ್ ಇಂದು ರಾತ್ರಿಯಿಂದ ತನ್ನ ನೆಲದ ದಾಳಿಯನ್ನು ತೀವ್ರಗೊಳಿಸಲು ಯೋಜಿಸುತ್ತಿದೆ. ಇದಕ್ಕೂ ಮುನ್ನ ಗಾಜಾ ನಗರದಲ್ಲಿ ಇಸ್ರೇಲ್ ಅಭೂತಪೂರ್ವ ಭಾರೀ ವೈಮಾನಿಕ ದಾಳಿ ನಡೆಸಿದೆ…

Read More

ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಡಿಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಇಲಾಖೆಯ ಶೈಕ್ಷಣಿಕ ಮಾರ್ಗದರ್ಶಿ ಅನ್ವಯ ವರ್ಷದಲ್ಲಿ ನಾಲ್ಕು ಪೋಷಕರ ಸಭೆ/ತಾಯಂದಿರ ಸಭೆ/ ಎಸ್.ಡಿ.ಎಂ.ಸಿ ಸಭೆಗಳನ್ನು ನಡೆಸುವ ಕಾರ್ಯಕ್ರಮವನ್ನು ಜಿಲ್ಲಾ ಹಂತದಲ್ಲಿ ರೂಪಿಸಲಾಗಿದೆ. ಶೈಕ್ಷಣಿಕ ಮಾರ್ಗಸೂಚಿಯಂತೆ “ಸಮುದಾಯದತ್ತ ಶಾಲೆ”ಯನ್ನು ಪ್ರಾಥಮಿಕ ಶಾಲೆಗಳಲ್ಲಿ ದಿನಾಂಕ 30-10-2023 ರಂದು ಹಾಗೂ ಪ್ರೌಢಶಾಲೆಗಳಲ್ಲಿ 31-10-2023 ರಂದು ನಡೆಸಲು ತಿಳಿಸಿದೆ. ಸದರಿ ಸಭೆಯಲ್ಲಿ ” ಪ್ರಭು. ಜಿ IAS, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ತುಮಕೂರು” ಇವರು “ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಮತ್ತು ಸ್ಥಳೀಯ ಸಂಸ್ಥೆಗಳ ಪಾತ್ರ” ಎಂಬ ವಿಷಯದ ಬಗ್ಗೆ ಪೋಷಕರನ್ನು ಉದ್ದೇಶಿಸಿ ಆನ್ ಲೈನ್ ಮೂಲಕ ಮಾತನಾಡಲಿದ್ದಾರೆ. ಎಲ್ಲಾ ಪೋಷಕರು ಈ ಸಭೆಗೆ ಆಗಮಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಭು ಜಿ ಅವರು ಕೋರಿದ್ದಾರೆ.

Read More