Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಚಲನಚಿತ್ರ ಶೂಟಿಂಗ್ ನಿಮಿತ್ತ ಬಿಆರ್ ಟಿಗೆ ಬಂದಿದ್ದ ನಟ ಹಾಗು ಸಹಕಲಾವಿದರು, ಬಿಆರ್ ಟಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. 10 ನಿಮಿಷ ದೇವಾಲಯದಲ್ಲಿ ಪೂಜೆ ಮಾಡಿ, ಪುತ್ರ ಶೌರ್ಯನ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ದಾಸೋಹ ಭವನದಲ್ಲಿ ವಿಜಯ ರಾಘವೇಂದ್ರ ಪ್ರಸಾದ ಸೇವಿಸಿದ ಬಳಿಕ, ಮೆಚ್ಚಿನ ನಟನ ಜೊತೆ ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿಕೊಂಡರು.
ಐದು ರಾಜ್ಯಗಳ ಪ್ರಮುಖ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್ ಗೆ ₹200 ರಿಂದ ₹300 ಕ್ಕೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ನರೇಂದ್ರ ಮೋದಿ ಸರ್ಕಾರವು ಬುಧವಾರ ಘೋಷಿಸಿತು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೀಡಲಾಗುವ ಸಬ್ಸಿಡಿ ಮೊತ್ತವನ್ನು 100 ರೂ.ಗಳಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. “ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಎಲ್ಪಿಜಿ ಸಿಲಿಂಡರ್ಗೆ 200 ರಿಂದ 300 ರೂ.ಗೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಿದೆ” ಎಂದು ಕ್ಯಾಬಿನೆಟ್ ನಿರ್ಧಾರಗಳ ಬ್ರೀಫಿಂಗ್ ನಲ್ಲಿ ಹೇಳಿದರು. ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮುಂಚೆಯೇ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಿಂದ ಹಣದುಬ್ಬರದ ತೀವ್ರ ಟೀಕೆಗಳ ನಡುವೆ ಈ ನಿರ್ಧಾರವು ಬಂದಿದೆ.
ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದು, ಕಳೆದ ಎರಡು ದಿನಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ವೈದ್ಯರು ಆಸ್ಪತ್ರೆಯಲ್ಲಿ ಇನ್ನಷ್ಟು ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ: ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಅಸುನೀಗಿದ್ದಾನೆ. ಈತ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದರು. ಡ್ಯಾನ್ಸ್, ಸ್ಟಂಟ್ ಗಳನ್ನು ರೀಲ್ಸ್ ಮಾಡಿ ಗಮನ ಸೆಳೆಯುತ್ತಿದ್ದರು. ಯಳಂದೂರು ಪೊಲೀಸರು ಸದ್ಯ ಶವವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಕ್ಟೋಬರ್ 03,2021 ರಲ್ಲಿ ರೈತರ ಐತಿಹಾಸಿಕ ದೆಹಲಿ ಹೋರಾಟದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಕೇರಿಯಲ್ಲಿ ರೈತರು ನಡೆಸಿದ ಹೋರಾಟವನ್ನು ಹತ್ತಿಕ್ಕಲು, ಗ್ರಹ ವ್ಯವಹಾರಗಳ ಕೇಂದ್ರ ಸಚಿವ ಅಜಯ್ ಮಿಶ್ರಾ ಹೋರಾಟಗಾರರಿಗೆ ಬೆದರಿಕೆ ಒಡ್ಡಿದ ಬೆನ್ನಲ್ಲೇ, ಅಜಯ್ ಮಿಶ್ರ ಮಗ ಆಶಿಷ್ ಮಿಶ್ರ ರೈತ ಹೋರಾಟಗಾರರ ಮೇಲೆ ಕಾರು ಹರಿಸಿ ನಾಲ್ಕು ರೈತರು ಹಾಗೂ ಒಬ್ಬ ಪತ್ರಿಕಾ ವರದಿಗಾರನ ಕೊಲೆಗೆ ಕಾರಣವಾದ ದಿನವನ್ನು, ಸಿಐಟಿಯು ಹಾಗೂ ರೈತ ಸಂಘಟನೆಗಳು ದೇಶದಾದ್ಯಂತ ಕಪ್ಪು ದಿನ ಆಚರಿಸಿ ಹತ್ಯೆಗೆ ಕಾರಣಕರ್ತರಾದ ಸಚಿವ ಅಜಯ್ ಮಿಶ್ರಾನನ್ನು ಸಂಪುಟದಿಂದ ಕೈ ಬಿಟ್ಟು ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಉಡುಪಿ ಅಜ್ಜರಕಾಡುವಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ರೈತ ಮುಖಂಡ ಚಂದ್ರಶೇಖರ ಮಾತನಾಡಿದರು, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕವಾಗಿ ಮಾತನಾಡಿ; ‘ಅಮಾನವೀಯ ಕೃತ್ಯ ಎಸಗಿದವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ’ ಎಂದು ದೂರಿದರು.…
ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡವರು. 78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆಗೆ ಮನೆಗೆ ತೆರಳಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜಗನ್ನಾಥ ಭಂಡಾರಿ ಮನೆಗೆ ತೆರಳಿದಾಗ ಮನೆಯ ಬಾಗಿಲು ಮುಚ್ಚಲ್ಪಟ್ಟಿತ್ತು. ಕಿಟಕಿಯಿಂದ ನೋಡಿದಾಗ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದು, ತನಿಖೆ ನಡೆಯುತ್ತಿದೆ.
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕಳೆದ 28 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದ್ದು ಇಂದು ಕೂಡ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಿವಿಗೆ ಚೆಂಡು ಹೂ ಇಟ್ಟುಕೊಂಡು ರಸ್ತೆ ತಡೆ ನಡೆಸಿದರು. ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಕನ್ನಡಿಗರಿಗೆ ಹೂವು ಮುಡಿಸಿದೆ, ಕರ್ನಾಟಕ ಸರ್ಕಾರ ನಿರಂತರವಾಗಿ ನೀರು ಹರಿಸುವ ಮೂಲಕ ರೈತರು, ಜನರ ಕಿವಿಗೆ ಹೂವು ಮುಡಿಸಿದೆ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸ್ಟಾಲಿನ್ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಎಎಪಿ ಸಂಸದ ಸಂಜಯ್ ಸಿಂಗ್ ಅವರ ದೆಹಲಿ ಮನೆ ಮೇಲೆ ಇಡಿ ದಾಳಿ ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಇಡಿ ತಂಡ ಸಿಂಗ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದ ದಿನವೇ ಸಂಸದರ ಮನೆ ಮೇಲೆ ದಾಳಿ ನಡೆದಿದೆ. 2020 ರಲ್ಲಿ ಮದ್ಯದ ಅಂಗಡಿಗಳು ಮತ್ತು ವ್ಯಾಪಾರಿಗಳಿಗೆ ಪರವಾನಗಿ ನೀಡುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಸಂಜಯ್ ಸಿಂಗ್ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವುದು ಮತ್ತು ಭ್ರಷ್ಟಾಚಾರ ನಿಗ್ರಹ ಕಾನೂನು ಉಲ್ಲಂಘನೆ ಆರೋಪಗಳು ಇದೇ ವೇಳೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯು ಎಎಪಿ ನಾಯಕರನ್ನು ಸುಳ್ಳು ಆರೋಪದ ಮೇಲೆ…
ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಹಕಾರವಿದೆ, ಆದರೆ ರೈತರಿಗೆ ತೊಂದರೆಯಾದರೆ ಸಹಿಸುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವಿಮಾನ ನಿಲ್ದಾಣ ಅಭಿವೃದ್ಧಿಗೆ ಅನುಕೂಲ ಮಾಡಿ ಕೊಡೋಣ. ಆದರೆ ಸಾಂಬ್ರಾ ವಿಮಾನ ನಿಲ್ದಾಣಕ್ಕಾಗಿ ಈಗಾಗಲೇ ರೈತರು ಸಾಕಷ್ಟು ಜಮೀನನ್ನು ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಮನೆಗಳನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ. ಜತೆಗೆ ರೈತರಿಂದ ಬಲತ್ಕಾರವಾಗಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ. ರೈತರೊಂದಿಗೆ ಚರ್ಚಿಸದೇ ಮುಂದಡಿ ಇಡಲು ಅವಕಾಶ ಕೊಡುವುದಿಲ್ಲ. ರೈತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ…
ಪ್ರಧಾನಿ ನರೇಂದ್ರ ಮೋದಿಯವರ ಉಡುಗೊರೆಗಳು ಹರಾಜಿಗೆ! ಇತ್ತೀಚಿನ ಸುತ್ತಿನ ಇ-ಹರಾಜಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾದ 900 ಕ್ಕೂ ಹೆಚ್ಚು ಉಡುಗೊರೆಗಳು ಮತ್ತು ಸ್ಮರಣಿಕೆಗಳು ಹರಾಜಾಗಿವೆ. ಸೋಮವಾರ ಆರಂಭವಾದ ಇ-ಹರಾಜು ಅಕ್ಟೋಬರ್ 31ಕ್ಕೆ ಮುಕ್ತಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರದರ್ಶನದ ಭಾಗವಾಗಿ ಕೆಲವು ವಸ್ತುಗಳನ್ನು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಸ್ (NGMA) ನಲ್ಲಿ ಪ್ರದರ್ಶಿಸಲಾಗಿದೆ. ಇದು ಹರಾಜು ಸರಣಿಯ ಐದನೇ ಆವೃತ್ತಿಯಾಗಿದ್ದು, ಮೊದಲನೆಯದನ್ನು ಜನವರಿ 2019 ರಲ್ಲಿ ನಡೆಸಲಾಯಿತು ಎಂದು ಸಂಸ್ಕೃತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಉಡುಗೊರೆಗಳ ಬೆಲೆ 100 ರಿಂದ 64 ಲಕ್ಷ ರೂ. ಇವುಗಳಲ್ಲಿ ಕೆಲವು ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಉಳಿದವು ವೆಬ್ ಸೈಟ್ ನಲ್ಲಿ ಲಭ್ಯವಿದೆ. ಗುಜರಾತ್ ನ ಮೊಧೇರಾದಲ್ಲಿರುವ ಸೂರ್ಯ ದೇವಾಲಯದ ಪ್ರತಿಕೃತಿಗಳು, ಚಿತ್ತೋರ್ ಗಢದ ವಿಜಯ ಸ್ತಂಭ ಮತ್ತು ವಾರಣಾಸಿಯ ಘಾಟ್ ನ ವರ್ಣಚಿತ್ರಗಳು ಹರಾಜಿನಲ್ಲಿವೆ. ಮೋದಿಯವರ 900 ಕ್ಕೂ ಹೆಚ್ಚು ಉಡುಗೊರೆಗಳು…