Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಅಮೃತಸರ: ಪಂಜಾಬ್ ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ಗೆ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ರಾಹುಲ್ ಗಾಂಧಿಯವರು ಕರಸೇವೆಯಲ್ಲಿ ತೊಡಗಿಕೊಂಡರು. ಬಳಿಕ ಕಾಂಗ್ರೆಸ್ ಸದಸ್ಯರು ಹಾಗೂ ಗುರುದ್ವಾರದ ಸ್ವಯಂಸೇವಕರ ಜೊತೆ ತಾವೂ ಪಾತ್ರೆ ತೊಳೆದರು. ಈ ವೇಳೆ ರಾಹುಲ್ ಗಾಂಧಿ ಅವರು ತಲೆಗೆ ನೀಲಿ ಬಣ್ಣದ ಕರವಸ್ತ್ರ ಸುತ್ತಿದ್ದಾರೆ. ರಾಹುಲ್ ಗಾಂಧಿಯವರು ಇಂದು ರಾತ್ರಿ ನಗರದಲ್ಲಿಯೇ ಉಳಿದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ. ಇದು ಅವರ ಖಾಸಗಿ ಭೇಟಿಯಾಗಿದೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಿರಲಿಲ್ಲ. ಕಾಂಗ್ರೆಸ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷ ನಡುವಿನ ಉದ್ವಿಗ್ನತೆಯ ನಡುವೆ ರಾಹುಲ್ ಗಾಂಧಿ ಅವರ ಅಮೃತಸರ ಭೇಟಿ ಕುತೂಹಲ ಹುಟ್ಟು ಮಾಡಿದೆ.
ಶಿವಮೊಗ್ಗ: ಸೆಪ್ಟೆಂಬರ್ 30ರಂದು ನಡೆದ ಈದ್ ಮೆರವಣಿಗೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ತಲವಾರು ಝಳಪಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಗಾಯಾಳುಗಳ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗದಲ್ಲಿ ದೊಡ್ಡ ಮಟ್ಟದಲ್ಲಿ ಗಲಭೆ ಏನು ನಡೆದಿಲ್ಲ. ಸಾರ್ಜನಿಕರು ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ ಈ ಘಟನೆ ಆಗಬಾರದಿತ್ತು. ಗಾಯಾಳುಗಳಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುತ್ತೇನೆ. ಕೊಡುವುದಾದರೆ ಸರ್ಕಾರದಿಂದ ಕೊಡಿಸುತ್ತೇನೆ. ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಶಿವಮೊಗ್ಗ ಶಾಂತಿಯಿಂದ ಇದೆ, ಜನ ಸಹಕರಿಸುತ್ತಿದ್ದಾರೆ. ಕಾನೂನು ಹದ್ದುಬಸ್ತು ಮಾಡಬೇಕು. ಅಧಿಕಾರಿಗಳು ಆ ಕೆಲಸ ಮಾಡುತ್ತಿದ್ದಾರೆ. ಗಣಪತಿ ಹಬ್ಬ ಚೆನ್ನಾಗಿ, ಅದ್ಧೂರಿಯಾಗಿ ಆಯ್ತು. ಈದ್ ಮಿಲಾದ್ ಮೆರವಣಿಗೆ ಕೂಡ ಚೆನ್ನಾಗಿ ಆಯ್ತು. ಆದರೆ, ಕೊನೆಯಲ್ಲಿ ಕೆಲವರಿಂದ ಅಶಾಂತಿ ಉಂಟಾಗಿದೆ. ಗಲಭೆ ಹಿನ್ನೆಲೆಯಲ್ಲಿ 24 ಎಫ್ ಐಆರ್ ಆಗಿದೆ, 60 ಮಂದಿಯನ್ನು ಬಂಧಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಾನು…
ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗುತ್ತದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಾನೂನಡಿ ಪೊಲೀಸರು ಕ್ರಮ ಕೈಗೊಳ್ಳಲಾಗುತ್ತದೆ. ನಾವು ಕೋಮುಗಲಭೆಗೆ ತಕ್ಷಣ ಕ್ರಮ ಕೈಗೊಂಡಿದ್ದೇವೆ. ಯಾರೇ ಕೋಮುಗಲಭೆ ಮಾಡಿದ್ರೆ ಅವರ ವಿರುದ್ಧ ಕಠಿಣ ಕ್ರಮ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಅಡ್ಡಿ ಮಾಡುವುದಿಲ್ಲ. ಯಾವುದೇ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಆರೋಪ ಮಾಡೋದು ಬಿಟ್ಟು, ಬೇರೆ ಏನು ಕೆಲಸ ಇದೆ. ಆರೋಪ ಮಾಡುವುದೇ ಅವರ ಕೆಲಸ, ಅರೋಪ ಮಾಡುತ್ತಿರುವುದೆಲ್ಲವೂ ಸುಳ್ಳು. ಕೋಮುಗಲಭೆ ಎಲ್ಲಿ ನಡೆದಿದೆ ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.
ರಾಜಸ್ಥಾನದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಹಳಿ ತಪ್ಪಿಸಲು ಯತ್ನ. ಸಿಬ್ಬಂದಿಯ ಮಧ್ಯಪ್ರವೇಶದಿಂದ ಭಾರೀ ಅನಾಹುತ ತಪ್ಪಿದೆ. ಟ್ರ್ಯಾಕ್ ಮೇಲೆ ದೊಡ್ಡ ಕಲ್ಲುಗಳು ಮತ್ತು ತಂತಿಯ ತುಂಡುಗಳು ಕಂಡು ಬಂದಿವೆ. ಭಿಲ್ವಾರಾ ಬಳಿ ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್ ಪ್ರೆಸ್ ವಿರುದ್ಧ ವಿಧ್ವಂಸಕ ಯತ್ನ ನಡೆದಿದೆ. ಪ್ರಾಥಮಿಕ ತನಿಖೆಯ ನಂತರ, ನಡೆದಿರುವುದು ವಿಧ್ವಂಸಕ ಯತ್ನ ಎಂದು ರೈಲ್ವೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಬಂಡೆಗಲ್ಲುಗಳ ಜೊತೆಗೆ ಬೋಲ್ಟ್ ಮತ್ತು ತಂತಿಗಳನ್ನು ಟ್ರ್ಯಾಕ್ ನಲ್ಲಿ ಹುದುಗಿಸಿ ಅದನ್ನು ಚಲಿಸದಂತೆ ಮಾಡಲಾಗಿತ್ತು. ಇದೆಲ್ಲವೂ ರೈಲನ್ನು ಹಳಿತಪ್ಪಿಸುವ ಪ್ರಯತ್ನ ಎಂದು ಅಧಿಕಾರಿಗಳು ವಿವರಿಸುತ್ತಾರೆ. ಲೊಕೊ ಪೈಲಟ್ ಗಳ ಗಮನಕ್ಕೆ ತಂದಾಗ ಭಾರಿ ಅನಾಹುತ ತಪ್ಪಿದೆ.
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಅತ್ಯಂತ ಹಿಂದುಳಿದ ವರ್ಗ ಶೇ.36.01, ಹಿಂದುಳಿದ ವರ್ಗ ಶೇ.27.1 ಮತ್ತು ಸಾಮಾನ್ಯ ವರ್ಗ ಶೇ.15.52 ಎಂದು ಅಂಕಿಅಂಶಗಳು ತೋರಿಸುತ್ತವೆ. ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇ.19.65ರಷ್ಟು ಪರಿಶಿಷ್ಟ ಜಾತಿಗಳು ಮತ್ತು ಶೇ.1.68ರಷ್ಟು ಪರಿಶಿಷ್ಟ ಪಂಗಡಗಳು. ರಾಜ್ಯದಲ್ಲಿ ಜಾತಿ ಗಣತಿ ವರದಿ ಬರುತ್ತಿರುವುದು ದೇಶದಲ್ಲಿ ಇದೇ ಮೊದಲು. ರಾಜ್ಯದ ಒಟ್ಟು ಜನಸಂಖ್ಯೆ 13 ಕೋಟಿ. ಇದೇ ವೇಳೆ ಗಾಂಧಿ ಜಯಂತಿಯಂದು ಜನಗಣತಿ ವರದಿಯನ್ನು ಬಿಡುಗಡೆ ಮಾಡಿದ್ದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಜನಗಣತಿಯಲ್ಲಿ ಕೆಲಸ ಮಾಡಿದ ಇಡೀ ತಂಡವನ್ನು ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಎಕ್ಸ್ ಪ್ಲಾಟ್ ಫಾರ್ಮ್ ನಲ್ಲಿ ಹೇಳಿದರು. ಜನಗಣತಿಯು ಎಲ್ಲರಿಗೂ ಪ್ರಯೋಜನಕಾರಿಯಾಗಿದೆ ಮತ್ತು ಬಡವರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿತೀಶ್ ಕುಮಾರ್ ಹೇಳಿದರು. ಒಬಿಸಿ ಮೀಸಲಾತಿಯನ್ನು ಶೇ.27ಕ್ಕೆ ಏರಿಸುವುದು ಸೇರಿದಂತೆ ಜಾತಿ ಗಣತಿಗೆ ಸಂಬಂಧಿಸಿದ ಮುಂದಿನ ಕ್ರಮಗಳನ್ನು ಮಿತ್ರಪಕ್ಷಗಳೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ…
ಪ್ರಶ್ನೆ ಕೇಳುವ ವೇಳೆ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಟೀಕೆ. ರಾಜ್ಯ ಘಟಕದ ಅಧ್ಯಕ್ಷರಾಗದಿದ್ದರೆ ಬಿಜೆಪಿಯಲ್ಲೇ ಉಳಿಯುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಅಧ್ಯಕ್ಷರು ಕೆರಳಿದರು. ಆಗ, ಅಣ್ಣಾಮಲೈ ಅವರ ಪ್ರತಿಕ್ರಿಯೆ ಯಾರು ‘ಆ ಪ್ರಶ್ನೆ ಕೇಳಿದ್ದು ಅಕ್ಕ ಇಲ್ಲಿ ಬನ್ನಿ ಎಲ್ಲರೂ ನೋಡಲಿ. ಬಂದು ನನ್ನ ಜೊತೆ ಇರು. ನನಗೆ ಇಂತಹ ಪ್ರಶ್ನೆ ಕೇಳಿದವರು ಟಿವಿಯಲ್ಲಿ ನೋಡಲಿ. ಪ್ರಶ್ನೆಗಳನ್ನು ಕೇಳಲು ಒಂದು ಮಾರ್ಗವಿದೆ. ಇಂತಹ ಅದ್ಭುತ ಪ್ರಶ್ನೆಯನ್ನು ಕೇಳಿದ ವ್ಯಕ್ತಿಯನ್ನು ಎಂಟು ಕೋಟಿ ಜನರು ತಿಳಿದುಕೊಳ್ಳಬೇಕು’ ಎಂದು ಬಿಜೆಪಿ ನಾಯಕ ಹೇಳಿದರು. ವರದಿಗಾರರನ್ನು ಕ್ಯಾಮರಾ ಮುಂದೆ ನಿಲ್ಲುವಂತೆ ಬಿಜೆಪಿ ಅಧ್ಯಕ್ಷರು ಕೇಳಿದಾಗ, ಸಹ ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಕೊಯಮತ್ತೂರು ಪ್ರೆಸ್ ಕ್ಲಬ್ ಕೂಡ ಅಣ್ಣಾಮಲೈ ಅವರ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಪತ್ರಿಕೋದ್ಯಮದ ನೀತಿಯನ್ನು ಕಲಿಸುವ ಮೊದಲು ನಾಯಕತ್ವದ ಸದ್ಗುಣಗಳನ್ನು ಕಲಿತು ಘನತೆಯಿಂದ ವರ್ತಿಸಬೇಕು. ಕೊಯಮತ್ತೂರು ಪ್ರೆಸ್ ಕ್ಲಬ್ ಪದಾಧಿಕಾರಿಗಳು ಪ್ರತಿಕ್ರಿಯಿಸಿ, ಪತ್ರಿಕೋದ್ಯಮ ಜನರು ಮತ್ತು…
ಮಂಡ್ಯ: ಕಲ್ಲು ತೂರುವವರು, ಗಲಭೆ ಸೃಷ್ಟಿಸುವವರಿಗೆ ಈ ಸರ್ಕಾರದಲ್ಲಿ ಕಾನೂನಿನ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಭೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಗಲಾಟೆ ಎಂದು ಹೇಳಿರುವುದು ದುರ್ದೈವದ ಸಂಗತಿ. ಮನೆಗಳಿಗೆ ಕಲ್ಲು ತೂರಿದ್ದಾರೆ. ಕೋಲಾರದಲ್ಲಿಯೂ ಇದೇ ರೀತಿ ಘಟನೆ ನಡೆಯಿತು. ಸರ್ಕಾರ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಬಾಲಿಶವಾಗಿದೆ ಎಂದು ಹೇಳಿದರು. ಸರ್ಕಾರದ ಈ ನಡವಳಿಕೆಯಿಂದಲೇ ಜೂಜುಕೋರರು, ಗಲಭೆಕೋರರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದರು.
ಮಣಿಪಾಲ: ಎರಡು ತಂಡಗಳ ಮಧ್ಯೆ ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ, ಬೈಕಾಡಿಯ ಹರ್ಷಿತ್, ತಿಲಕ್ ಹಾಗೂ ರಿತೇಷ್ ಬಂಧಿತ ಆರೋಪಿಗಳು. ಚೂರಿ ಇರಿತಕ್ಕೆ ಒಳಗಾದ ಪ್ರತಾಪ್(19) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಪ್ರತಾಪ್, ತಿಲಕ್ ಮತ್ತು ಹರ್ಷಿತ್ ನೊಂದಿಗೆ ರಾತ್ರಿ ಮಣಿಪಾಲದ ಎಡ್ಜ್ ಹೊಟೇಲ್ ಬಳಿ ಹೋದಾಗ ಕಾರಿನಲ್ಲಿ ಬಂದ ಇದೇ ಮೂರು ಜನ ಹಾಗೂ ಇತರರು ಪ್ರತಾಪ್ ಗೆ ಕೈಯಿಂದ ಹೊಡೆದು ಚೂರಿಯಿಂದ ಕೈಗೆ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಲಾಗಿದೆ.
ಬೆಂಗಳೂರು: ಕಾವೇರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಡಿಸಿಎಂ ಯಾವಾಗಲೂ ಬ್ರಾಂಡ್ ಬೆಂಗಳೂರು ಅಂತ ಭಾಷಣ ಮಾಡಿದರೆ ಸಾಲದು, ಬೆಂಗಳೂರಿಗೆ ಕಾವೇರಿ ನೀರು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಬ್ಯಾಡ್ ಬೆಂಗಳೂರು ಆಗುತ್ತದೆ ಎಂದರು. ಸಂಕಷ್ಟ ಸೂತ್ರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2018 ಕ್ಕೂ ಮೊದಲು ಸಂಕಷ್ಟ ಸೂತ್ರ ಜಾರಿಗೊಳಿಸಲು ಈ ಪರಿಸ್ಥಿತಿ ಇರಲಿಲ್ಲ. ಸಿಡಬ್ಲುಎಂಎ ಬಂದ ಮೇಲೆ ನೀರಿನ ಸಮಸ್ಯೆ ಈಗ ಬಂದಿದೆ. ಹೀಗಾಗಿ ಸಂಕಷ್ಟ ಸೂತ್ರ ಜಾರಿ…
ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ. ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿಲಾಗಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.