Author: admin

ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ  ಕಾವೇರಿ ನೀರಿನ ವಿಚಾರದಲ್ಲಿ  ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ  ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ  ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಬೈಕ್ ನಲ್ಲಿ ಹೊರಟು ರೈಲ್ವೆ ನಿಲ್ದಾಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ,  ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ಕರ್ನಾಟಕ  ಸರ್ಕಾರ, ಸಂಸದರ ವಿರುದ್ದ ದಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,  ಕಾವೇರಿ ನೀರು‌ ಹಂಚಿಕೆಯಲ್ಲಿ  ಕಾವೇರಿ ನ್ಯಾಯಾಧೀಕರಣ ಕರ್ನಾಟಕ ಪಾಲಿಗ ಮರಣಶಾಸನ ಬರೆದಿದ್ದು ಅನ್ಯಾಯ ಮಾಡಿದೆ.  ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಗುಣರಾಜು ಇದ್ದರು.

Read More

ಮುಂಬೈ: ಮಹಾರಾಷ್ಟ್ರದ ಹಾದಿಯಲ್ಲಿ ಮಲಗಿದ್ದ ಐದು ಕಾರ್ಮಿಕರು ಟ್ರಕ್ಸ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಬುಲ್ದಾನ ಜಿಲ್ಲೆಯ ವಾಡ್ನರ್ ಭೋಲ್ಜಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಅಪಘಾತ ನಡೆದಿದೆ. ದಾರಿಯುದ್ದಕ್ಕೂ ತಾತ್ಕಾಲಿಕವಾಗಿ ಕಟ್ಟೆಯ ಶೆಡ್ಡುಗಳಲ್ಲಿ ಕಾರ್ಮಿಕರು ಮಲಗಿದ್ದರು. ಈ ಸಮಯದಲ್ಲಿ ಅಪಘಾತ ನಡೆದಿದೆ. ಮೂರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಟ್ರಕ್ ಚಾಲಕರು ಅಡಗಿರುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿತ್ತು. ಅದಾದ ನಂತರ ಇದೀಗ ಮಂಗಳೂರು ತಾಲೂಕಿನ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡರು ಹಸಿರು ಬಾವುಟ ಪ್ರದರ್ಶಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 28ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ರಸ್ತೆ ಬಂದ್ ಮಾಡಿ ಬೈಕ್ ಹಾರ್ನ್ ಹಾಕಿಕೊಂಡು ಯುವಕರಿಂದ ಹುಚ್ಚಾಟ ನಡೆದಿತ್ತು. ಸದ್ಯ ವಿಡಿಯೋವನ್ನು ಆಧರಿಸಿ ಯುವಕರನ್ನು ಉಳ್ಳಾಲ ಪೋಲೀಸರು ಇದೀಗ ಪತ್ತೆ ಹಚ್ಚಿದ್ದಾರೆ. ಉಳ್ಳಾಲದ ವೀರರಾಣಿ ಅಬ್ಬಕ್ಕ ಸರ್ಕಲ್ ಮೇಲೆ ಯುವಕರ ಗುಂಪೊಂದು ಹಸಿರು ಬಾವುಟ ಪ್ರದರ್ಶಿಸಿದ್ದ ವಿಡಿಯೋ ಒಂದು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಮೂಲಕ ವಿಡಿಯೋ ಅಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ಮಹಿಳಾ ಉದ್ಯಮಿಯ ಹಲ್ಲೆ ನಡೆಸಿ ಕಿಟ್ರ್ಯಾಪ್ ಮಾಡಲು ಯತ್ನಿಸಿ, ಜಾಲಹಳ್ಳಿ ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್ ಆಗಿದ್ದಾರೆ. ಹೋಟೆಲ್ ಉದ್ಯಮಿ ಆಗಿರುವ ಪಂಕಜಾ ಅವರನ್ನು ಬುರ್ಖಾ ಧರಿಸಿ ಬಂದಿದ್ದವರು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಹಿಂಬಾಲಿಸಿದ ಪೊಲೀಸರು ಬಿಇಎಲ್ ಸರ್ಕಲ್ ಬಳಿ ಅಡ್ಡಹಾಕಿ ಉದ್ಯಮಿ ಪಂಕಜ ಅವರನ್ನು ರಕ್ಷಣೆ ಮಾಡಿದ್ದಾರೆ.

Read More

ಈ ವರ್ಷದ ವೈದ್ಯಕೀಯ ನೊಬೆಲ್ ಪ್ರಶಸ್ತಿಯು ಹಂಗೇರಿಯನ್-ಅಮೆರಿಕನ್ ಜೀವ ರಸಾಯನಶಾಸ್ತ್ರಜ್ಞ ಕ್ಯಾಥ್ಲೀನ್ ಕ್ಯಾರಿಕೊ ಮತ್ತು ಅಮೆರಿಕನ್ ಮೂಲದ ವೈದ್ಯ ಮತ್ತು ವಿಜ್ಞಾನಿ ಡ್ರೂ ವೈಸ್ಮನ್ ಅವರಿಗೆ ಸಂದಿದೆ. ಅವರ ಆವಿಷ್ಕಾರಗಳು ಕೋವಿಡ್-19 ವಿರುದ್ಧ mRNA ಲಸಿಕೆಯನ್ನು ಅಭಿವೃದ್ಧಿಪಡಿಸಲು ಕಾರಣವಾಯಿತು. ಸಾಹಿತ್ಯ ಮತ್ತು ಶಾಂತಿ ಸೇರಿದಂತೆ ಇತರ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹಂಗೇರಿಯ ಸಗಾನ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಕಟೆಲಿನ್ ಕರಿಕೊ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡ್ರೂ ವೈಸ್ಮನ್ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಅವರು ನಡೆಸಿದ ಸಂಶೋಧನೆಯು ಕೋವಿಡ್ ಲಸಿಕೆ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಿದೆ. ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯ ದಿನವಾದ ಡಿಸೆಂಬರ್ 10 ರಂದು ಸ್ಟಾಕ್‌ ಹೋಮ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಪ್ರಮಾಣಪತ್ರ, ಚಿನ್ನದ ಪದಕ ಮತ್ತು 10 ಲಕ್ಷ ಡಾಲರ್‌ ಗಳನ್ನು ಒಳಗೊಂಡಿದೆ.

Read More

ಬೆಂಗಳೂರು: ವಿದೇಶಿ ಮೂಲದ ಯುವತಿಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ಮಾದಕ ವಸ್ತು ವ್ಯವಹಾರ, ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆ. ಆರ್. ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಡ್ರಗ್ ಹಾಗೂ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಆಫ್ರಿಕಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ದಂಧೆ ನಡೆಸುತ್ತಿದ್ದವರು ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಲಾಗಿದೆ. ಯುವತಿಯರ ಪಾಸ್‌ ಪೋರ್ಟ್ ಕಸಿದಿಟ್ಟುಕೊಂಡು ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.

Read More

ಬೆಂಗಳೂರು: ಬೆಂಗಳೂರಿನ ಬೆಟ್ಟಹಲಸೂರು ಗ್ರಾಮದಲ್ಲಿ ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್‌ ಗಳು ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್‌ ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ನಾಲೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್ ‌ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್ ‌ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ, ತಾಯಿ- ಮಗು ಸಜೀವ ದಹನಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ. ಕಾರು, ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಅದರೊಳಗೇ ಸುಟ್ಟು ಹೋಗಿದ್ದಾರೆ.

Read More

ಬೆಂಗಳೂರು: ಹೆಚ್‌.ಡಿ. ಕುಮಾರಸ್ವಾಮಿ ಅವರ ಸಕಲ ವಿದ್ಯೆಗಳೂ ನನಗೆ ಗೊತ್ತಿತ್ತು. ಆದರೆ, ಅವರು ಪ್ಯಾಂಟ್‌ ಒಳಗೆ ಆರ್ ‌ಎಸ್‌ ಎಸ್‌ ಚೆಡ್ಡಿ ಹಾಕಿದ್ದು ಗೊತ್ತೇ ಆಗಲಿಲ್ಲ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ನಾನಾ ಜೆಡಿಎಸ್‌ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜೆಡಿಎಸ್‌ ನಿಂದ ಹೊರಬರುತ್ತಿರುವ ಪ್ರಮುಖರನ್ನು ನಗರದ ಅರಮನೆ ಮೈದಾನದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜಿಸಿ ಕಾಂಗ್ರೆಸ್‌ ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯಿಂದ ಜಾತ್ಯತೀತ ಮನೋಭಾವದ ನೂರಾರು ನಾಯಕರು ಬೇಸರಗೊಂಡಿದ್ದು, ಕಾಂಗ್ರೆಸ್‌ ಸೇರ್ಪಡೆಗಾಗಿ ನನ್ನ ಸಂಪರ್ಕದಲ್ಲಿದ್ದಾರೆ. ದೇವೇಗೌಡರು ಈಗಲೂ ಸೆಕ್ಯುಲರ್‌. ಅವರಿಂದ ನಮ್ಮ ಮುಸ್ಲಿಂ ಸಮಾಜಕ್ಕೆ ನ್ಯಾಯ ಸಿಕ್ಕಿದೆ ಮತ್ತು 2ನೇ ಹಂತದ ನಾಯಕರನ್ನೂ ಬೆಳೆಸಿದ್ದಾರೆ. ಆದರೆ, ಕುಮಾರಸ್ವಾಮಿ ಖಂಡಿತವಾಗಿ ಸೆಕ್ಯುಲರ್‌ ಅಲ್ಲ. ಮುಸ್ಲಿಂ ಸಮುದಾಯದವರು ಅನಿವಾರ್ಯವಾಗಿ ನನಗೆ ಮತಹಾಕಿದರು ಎಂದು ಅವರು ಹೇಳಿಕೊಂಡಿರುವುದು ನೋವು ತಂದಿದೆ ಎಂದರು.

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಪಂ ವ್ಯಾಪ್ತಿಯ ವಾಡೇನ್ ಬಾಗ್ ತಾಂಡಕ್ಕೆ ಸೋಮವಾರ ಭೇಟಿ ನೀಡಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಭೀಮಸೇನರಾವ ಶಿಂಧೆ, ತಾಂಡದ ಜನರ ಸಮಸ್ಯೆ ಆಲಿಸಿದರು. ತಾಂಡದಲ್ಲಿನ ಶಾಲೆ, ಅಂಗನವಾಡಿ, ರಸ್ತೆ ಸೇರಿದಂತೆ ವಿದ್ಯುತ್ ಸೌಕರ್ಯಗಳ ಕುರಿತು ತಾಂಡದ ನಿವಾಸಿಗಳಿಂದ ಮಾಹಿತಿ ಪಡೆದರು. ಈ ವೇಳೆ ಗ್ರಾಮದ ನಿವಾಸಿ ಬಾಬುರಾವ ಎನ್ನುವರು ಸಾಹೇಬ್ರೆ ನಮಗೆ ರಸ್ತೆ ಮಾಡಿಸಿಕೊಡಿ ಮಕ್ಕಳು ನಿತ್ಯ ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿದೆ ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಅವರು,  ತಾಂಡಕ್ಕೆ ಹೋಗಲು ರಸ್ತೆಯಿಲ್ಲ ಎಂಬ ಬಗ್ಗೆ ಮಾಹಿತಿ ಬಂದಿದೆ.  ಆದ್ದರಿಂದ ತಾಂಡಕ್ಕೆ ಭೇಟಿ ಎಲ್ಲ ರಸ್ತೆ ಸೇರಿದಂತೆ ಎಲ್ಲ ಸಮಸ್ಯೆಗಳು ವಿಚಾರಿಸಲಾಗುತ್ತಿದೆ. ಸರಕಾರಕ್ಕೆ ಪತ್ರ ಬರೆಯುವ ಮೂಲಕ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಈಗಾಗಲೇ ಕಾಂಗ್ರೆಸ್ ಸರಕಾರ ಕೆಕೆಆರ್‌ ಡಿಬಿಯಿಂದ ನಿರೀಕ್ಷೆಗೂ ಮೀರಿ ಹಣ ನೀಡಲಿದೆ. ಈ ಹಣ ತಾಲೂಕಿನ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿ ಮಾಡಬೇಕಿದೆ. ಜನರಿಗೆ ಸಮಸ್ಯೆ…

Read More