Author: admin

ಬೀದರ್:  ವಿದ್ಯುತ್ ತಂತಿ ತಗುಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ ಮಲ್ಲಿಕಾರ್ಜುನ (51) ಹಾಗೂ ಶರಣಮ್ಮ (40) ಮೃತಪಟ್ಟ ರೈತ ದಂಪತಿಯಾಗಿದ್ದಾರೆ.  ತಮ್ಮಹೊಲದಲ್ಲಿ ಕೃಷಿ ಕೆಲಸಕ್ಕೆಂದು ತೆರಳುವ ವೇಳೆ ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪರಿಸರ ಮತ್ತು ಅರಣ್ಯ ಸಚಿವ  ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಈ ಸುದ್ದಿ ಕೇಳಿ ತುಂಬಾ ದುಃಖವಾಯಿತು.  ಮೃತ ದಂಪತಿ ಆತ್ಮಕ್ಕೆ ಶಾಂತಿ ಸಿಗಲಿ, ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸಿದರು. ಇಂತಹ ದುರ್ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಜೋತು ಬಿದ್ದಿರುವ ಮತ್ತು ಜಾಯಿಂಟ್ ಹಾಕಲಾಗಿರುವ ವಿದ್ಯುತ್ ತಂತಿಗಳ ಪರಿಶೀಲನೆ ಮಾಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.  ಮೃತ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಚೆಸ್ಕಾಂ ಮತ್ತು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.…

Read More

ಕುಮಾರ್ ಪೆರ್ನಾಜೆ, ಪುತ್ತೂರು ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೇಕಾಯಿ ರಾಮಬಾಣ ನುಗ್ಗೆಕಾಯಿಯನ್ನು ತಿನ್ನುವುದರಿಂದ ಏನಾಗುತ್ತದೆ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮ. ಚೋಟುದ್ದವಿದ್ದ ನುಗ್ಗೆಕಾಯಿ ಫಿಟುದ್ದ ಆಯಿತು ಹೈಬ್ರಿಡ್ ಬಂತು ಆದರೆ ಇತ್ತೀಚೆಗೆ ಮಾರುದ್ದದ ಚಿಕ್ಕ ಚಿಕ್ಕ ಗಿಡಗಳಲ್ಲಿ ಮೀಟರ್ ನುಗ್ಗೆಕಾಯಿ ಗಳು ಬಂಟ್ವಾಳ ತಾಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟರ ಹಿತ್ತಲಲ್ಲಿ ಬೆಳೆದ ಮೀಟರ್ ನುಗ್ಗೆಕಾಯಿ ನೋಡುಗರ ಕಣ್ತುಂಬಿ ಕಣ್ ಮನಸೆಳೆಯಿತು ಕ್ಯಾಮರಾ ಕಣ್ಣಲ್ಲಿ ಸೆರೆಯಾಯಿತು. ಪ್ರಾರಂಭದಲ್ಲಿ ಮೀಟರ್ ಅಲಸಂಡೆ ಬಂತು ನಾವು ಚಿಕ್ಕದಿರುವಾಗ ತರಕಾರಿಗಳ ಬಗ್ಗೆ ತೊಂಡೆಕಾಯಿ ಬೆಂಡೆಕಾಯಿ ತೋಟದಲ್ಲಿದೆ ಎಂದು ಹಾಡಿದ್ದೇನು ಪಡುವಾಲಕಾಯಿ ಮಾತ್ರ ಇಷ್ಟುದ್ದ ಎಂದು ಡ್ಯಾನ್ಸ್ ಮಾಡುತ್ತಾ ಹೇಳಿದ್ದೇವೆ ಆದರೆ ಇತ್ತೀಚೆಗೆ ಹೀರೆಕಾಯಿ ಸೋರೆಕಾಯಿ ಮುಳ್ಳು ಸೌತೆ ಹಾಗಲಕಾಯಿ ಎಲ್ಲಾ…

Read More

ಬೆಂಗಳೂರು:  ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವದರಿಂದ ಆಗುವ ಅನುಕೂಲಗಳು, ವಿದ್ಯುತ್ ಉತ್ಪಾದನೆಯ ಪ್ರಮಾಣ ಮುಂತಾದ ವಿಷಯಗಳ ಬಗ್ಗೆ ವಿಸ್ತ್ರುತ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಸೂಚನೆ ನೀಡಿದರು. ಇಂದು ಭಾರತೀಯ ವಿಜ್ಞಾನ ಸಂಸ್ಥೆ ಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆಯನ್ನ ನಡೆಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿ ಐ ಐ ಎಸ್‌ ಸಿ (ಭಾರತೀಯ ವಿಜ್ಞಾನ ಸಂಸ್ಥೆಯ) ಸಹಯೋಗದಲ್ಲಿ ರಾಜ್ಯದ ಹಲವಾರು ಇಲಾಖೆಗಳ ಸಂಶೋಧನೆ ಹಾಗೂ ವರದಿ ಸಿದ್ಧಪಡಿಸುತ್ತದೆ. ಸಿದ್ದಪಡಿಸುತ್ತಿದೆ. ಹಾಗೆಯೇ, ತಾಂತ್ರಿಕ ಸಲಹೆಯನ್ನು ನೀಡುತ್ತಿದೆ. ಎನ್ಆರ್ಡಿಎಂಎಸ್ ಮೂಲಕ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯ ಮಾಡುತ್ತಿದೆ. ಅಲ್ಲದೆ, ಜನರಲ್ಲಿ ವೈಜ್ಞಾನಿಕ ಭಾವನೆ ಬೆಳೆಸುವಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಂಡಳಿಯು…

Read More

ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸಾಗ್ರಾಮ್‌ ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ನಿಂದನೆ ಮಾಡಿದ್ದ ಆರೋಪಿಯನ್ನ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ನಿಲಯ್ ಮಂಡಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಂಗಳೂರಿನಲ್ಲಿ ಕಾಫಿ ತಿಂಡಿಗೆ ಹೆಚ್ಚಿನ ದರ ಚಾರ್ಜ್ ಮಾಡ್ತಾರೆ.  ಕನ್ನಡ ಮಾತಾಡಲು ಒತ್ತಾಯ ಮಾಡುತ್ತಾರೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ.

Read More

ತುಮಕೂರು: ಸಾಲಭಾದೇ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಯಲ್ಲಿ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲಿಗೆ ಸಿಲುಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Read More

ಬೆಂಗಳೂರು: ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆಯ ಪ್ರಯುಕ್ತ ಅವರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಇಂದು ದೇಶದ ಇಬ್ಬರು ಮಹಾಚೇತನರಾದ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿ ಅವರ ದೂರದೃಷ್ಟಿಯನ್ನು ನೆನೆಯುವ ದಿನ.ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ. ಅವರ ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ.ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ನಮ್ಮನ್ನು ಬಂದೂಕಿನ ಗುಂಡಿನ ಮೂಲಕ ಕುಗ್ಗಿಸಬಹುದು ಎಂದು ಬ್ರಿಟೀಷರು ಭಾವಿಸಿದ್ದರು. ಆದರೆ ನಮ್ಮ ನಾಯಕರುಗಳು ಆ ಗುಂಡಿಗೆ ಎದೆಕೊಟ್ಟು ಪ್ರಾಣತ್ಯಾಗ ಮಾಡಿದ ಪರಿಣಾಮ ಇಂದು ದೇಶದಲ್ಲಿ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದರು. ಈ ದೇಶದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಪಕ್ಷ 60 ವರ್ಷಗಳ ಕಾಲ ಆಡಳಿತ ಮಾಡಿ ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ,…

Read More

ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಸೋಮವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಭಾರತದ ಹೆಮ್ಮೆ. ಸತ್ಯ, ಅಹಿಂಸೆಯ ಮೂಲಕ ಜಗದ ಹೃದಯ ಗೆದ್ದ ಮಹಾತ್ಮರು. ಅಕ್ಟೋಬರ್ 2 ಭಾರತದ ಜನತೆಯ ಪಾಲಿನ ಮಹತ್ವದ ದಿನ. ಈ ವರ್ಷ ನಾವು ಗಾಂಧೀಜಿಯವರ 154ನೇ ಜಯಂತಿಯನ್ನು ಆಚರಿಸುತ್ತೇವೆ. ಗಾಂಧೀಜಿ ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಮತ್ತು ಅದರಂತೆ ನಡೆಯುವ ಪಣ ತೊಡುವ ದಿನವಿದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ.ಸುರೇಶ್ .ಸಿ. ಮತ್ತು ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ತುಮಕೂರು:  ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗೇಟ್ ಬಳಿಕ ನಡೆದಿದೆ. ಮೃತರನ್ನು  ಸಹೋದರರಾದ ಪವನ್ 20 ವರ್ಷ, ಬಾಲಾಜಿ(18) , ತಾಯಿ ಅನಿತಾ (40) ಎಂದು ಗುರುತಿಸಲಾಗಿದೆ.  ದ್ವಿಚಕ್ರವಾಹನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಟ್ಟಿದ್ದಾರೆ. ಮೃತರನ್ನು ಸವಾರರು ಮಧುಗಿರಿ ಮೂಲದವರಾಗಿದ್ದಾರೆ. ಘಟನಾ ಸ್ಥಳಕ್ಕೆ  ಕೊರಟಗೆರೆ ಸಬ್ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ  ಭೇಟಿ ಪರಿಶೀಲನೆ ನಡೆಸಿದರು. ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಾಯಿ ಮಗ ಹಾಗೂ ಅಣ್ಣನ ಮಗ ದುರಂತದಲ್ಲಿ ಮೃತಪಟ್ಟಿದ್ದಾರೆ. ಮಧುಗಿರಿ ಮೂಲದ ವೀರೇನಹಳ್ಳಿ ತಾಂಡದ ವಾಸಿಗಳು ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ, ತಮಿಳುನಾಡು ಮೂಲದವನಾದ ಈತ ವರ್ಕ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದನು. ವಸಂತನಗರದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ವಾಯು ವಿಹಾರ ಮಾಡುತ್ತಿದ್ದ ಯುವತಿಯನ್ನು ಕಂಡು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ನಂತರ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ತಬ್ಬಿಕೊಂಡು ನಂತರ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.

Read More

ಮೋಹನ್ ದಾಸ್ ಕರಮ್ ಚಂದ್ರ ಗಾಂಧಿ ಎನ್ನುವುದು ಕೇವಲ ಹೆಸರಲ್ಲ ಇದು ಭಾರತದ ಆತ್ಮ. ಸ್ವತಂತ್ರ ಹೋರಾಟದ ಅಸ್ತ್ರವಾಗಿದ್ದ ಗಾಂಧಿ ವಿಚಾರಗಳು ಇಂದಿಗೂ ಪ್ರಸ್ತುತ. ಅಕ್ಟೋಬರ್ 2 ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ಇಡೀ ಮಾನವ ಕುಲಕ್ಕೆ ನೀಡಿದ ಕೊಡುಗೆಗಳ ಸ್ಮರಣೆ ಮಾಡಲೇಬೇಕು. ಈ ದಿನವನ್ನ ಇಡೀ ವಿಶ್ವವೇ ಶಾಂತಿ ದಿನವೆಂದು ಆಚರಣೆ ಮಾಡುತ್ತದೆ. ಅವರ ಸತ್ಯ ಮತ್ತು ಅಹಿಂಸೆಯ ಮಾರ್ಗಗಳು ಜಗತ್ತಿನ ಅನೇಕ ನಾಯಕರುಗಳನ್ನು ಮಹಾತ್ಮರ ವ್ಯಕ್ತಿತ್ವಕ್ಕೆ ಪ್ರಭಾವಿತಗೊಳಿಸಿದ್ದವು. ಗ್ರಾಮೀಣ ಸರ್ವಾಂಗಿನ ಅಭಿವೃದ್ಧಿ ಇಂದಾಗಿ ದೇಶದ ಅಭಿವೃದ್ಧಿವಾಗಲಿದೆ ಎಂಬ ದೃಢವಾದ ನಂಬಿಕೆ ಅವರದಾಗಿತ್ತು. ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಶತಕಗಳ ಹಿಂದೆಯೇ ಯೋಚನೆ ಮಾಡಿದ್ದರು. ಅದರಂತೆ ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಮಹತ್ವವನ್ನು ಗಾಂಧೀಜಿಯವರು ನೀಡುತ್ತಿದ್ದರು. ಅದರ ಪರಿಕಲ್ಪನೆಯ ಪಲವಾಗಿ ಈಗ ಪಂಚಾಯತ್ ರಾಜ್ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳನ್ನು ಸದೃಢವಾಗಿ ಮತ್ತು ಪ್ರಗತಿ ಪರವಾಗಿ ನಡೆಸಿಕೊಂಡು ಬರುತ್ತಿದೆ. ಪ್ರಜಾಪ್ರಭುತ್ವದ ತಳಹದಿಯ ಮೇಲೆ ಗ್ರಾಮ ಸ್ವರಾಜ್ ಗಾಂಧೀಜಿ ಕಂಡ ಕಲ್ಪನೆಯ ವಾಸ್ತುವತೆಯನ್ನು…

Read More