Subscribe to Updates
Get the latest creative news from FooBar about art, design and business.
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
- ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
Author: admin
ತುಮಕೂರು: ದೇಶದ ಬೆನ್ನೆಲುಬು ಪ್ರತಿಯೊಬ್ಬರಿಗೂ ಅನ್ನ ನೀಡುವ ಶ್ರಮಿಕ ವರ್ಗವೆಂದರೆ ಅದು ರೈತ ಕುಟುಂಬ. ದೇಶಕ್ಕೆ ಅನ್ನ ಹಾಕುವ ಅನ್ನದಾತನ ಬೆನ್ನುಮೂಳೆಯನ್ನು ದೇಶದಲ್ಲಿ ಇದುವರೆಗೂ ಅಧಿಕಾರ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಮುರಿದಿವೆ. ರೈತ ಮತ್ತು ರೈತರ ಸಂಘಟನೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜ್ಯದಲ್ಲಿ ಆಡಳಿತ ನೀಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಹೆಚ್ ಎ ಜಯರಾಮಯ್ಯ ಅವರು ತಿಳಿಸಿದರು. ತಮ್ಮ ಕಚೇರಿಯಲ್ಲಿ ವಿಶ್ವ ರೈತರ ದಿನಾಚರಣೆ ಪ್ರಯುಕ್ತ ವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದ ಅವರು ರೈತರ ಪರವಾಗಿ ಒಗ್ಗಟ್ಟಿನಿಂದ ರೈತರಿಗೆ ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಈ ದಿನಾಚರಣೆಯನ್ನು ಸಮರ್ಪಣೆ ಮಾಡುತ್ತಿದ್ದೇವೆ. ಅನ್ನದಾತನಿಂದ ಮತ ಪಡೆದು ರೈತರ ಬೆನ್ನುಮೂಳೆಯನ್ನು ಮುರಿಯುತ್ತಲೇ ಬಂದಿರುವ ಸರ್ಕಾರದ ಒಬಂದಿ ನೀತಿಯನ್ನು ನಮ್ಮ ಪಕ್ಷ ಖಂಡಿಸುತ್ತದೆ ಎಂದು ತಿಳಿಸಿದರು. ಸ್ವಾತಂತ್ರ್ಯ ನಂತರದಲ್ಲೂ ರೈತರಿಗೆ ಸಂವಿಧಾನ ಬದ್ಧವಾಗಿ ಸಲ್ಲಬೇಕಾದ ಸವಲತ್ತುಗಳು ಇದುವರೆಗೂ ದೊರೆಯುತ್ತಿಲ್ಲ. ದೇಶಕ್ಕೆ ಅನ್ನ ನೀಡುವ ಪ್ರತಿ ರೈತ ಕುಟುಂಬಗಳು ನೆಮ್ಮದಿಯಿಂದ ಬದುಕುವಂತಹ ಯೋಜನೆಯ…
ತುಮಕೂರು: ನಗರದ ಅಮಾನಿಕೇರೆ ಗಜಾನನ ಮಂಟಪದಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ ಸಂಜೆ ವಿದ್ಯುಕ್ತ ತೆರೆಬಿದ್ದಿತು. ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಕರಿಗೌಡ ಬೀಚನಹಳ್ಳಿ ದಂಪತಿಗೆ ಗೌರವ ಸನ್ಮಾನದೊಂದಿಗೆ ಕನ್ನಡ ಶಾಲೆಗಳನ್ನು ಮುಚ್ಚದೆ ಅವುಗಳನ್ನು ಬಲಪಡಿಸುವ ಕ್ರಮಕೈಗೊಳ್ಳುವುದು ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಅವರು, ಈಗಿನ ಮಕ್ಕಳು ಮೊಬೈಲ್ ಬಳಕೆಯಿಂದ ಕೇವಲ ತಾಂತ್ರಿಕ ಜ್ಞಾನದ ಅರಿವು ಪಡೆಯುತ್ತಿದ್ದಾರೆಯೇ ವಿನಃ ಮಾನವೀಯ ಸಂಬಂಧ ಹಾಗೂ ನೈತಿಕ ಮೌಲ್ಯಗಳಿಂದ ದೂರವಾಗುತ್ತಿದ್ದಾರೆ. ಮಕ್ಕಳಿಗೆ ಮೊಬೈಲ್ ಬಿಡಿಸಿ ಪುಸ್ತಕ, ಸಾಹಿತ್ಯ ಓದಿನ ಅಭಿರುಚಿ ಬೆಳೆಸಬೇಕು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಓದು ಅನಿವಾರ್ಯ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಿದರೆ ಭಾಷೆಯ ಉಳಿವು ಸಾಧ್ಯ ಎಂದರು. ಹಿಂದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಅಕ್ಕಪಕ್ಕದವರನ್ನು ಪರಿಚಯ ಮಾಡಿಕೊಂಡು ಅನುಭವಗಳನ್ನು ಹಂಚಿಕೊಳ್ಳುವ ಸಂಸ್ಕೃತಿ ಇತ್ತು.…
ಬೆಂಗಳೂರು: ಮದುವೆಯಾದ ಕೇವಲ ಮೂರೇ ತಿಂಗಳಲ್ಲಿ ಪತಿಯ ಅಸಹಜ ಲೈಂಗಿಕ ಕಿರುಕುಳ ಹಾಗೂ ವಿಕೃತ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಬೆಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ವಿವರ: ಖಾಸಗಿ ಕಂಪನಿಯೊಂದರಲ್ಲಿ ಹೆಚ್ಆರ್ (HR) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸಿ, 2025ರ ಸೆಪ್ಟೆಂಬರ್ 3ರಂದು ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯ ಅಸಲಿ ಮುಖ ಬಯಲಾಗಿದೆ. ಪತ್ನಿಯ ಗಂಭೀರ ಆರೋಪಗಳು: ಲೈಂಗಿಕ ಕಿರುಕುಳ: ಪತಿ ಮಂಜುನಾಥ್ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡಿ, ಅದೇ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪೀಡಿಸುತ್ತಿದ್ದ. ಪೀರಿಯಡ್ಸ್ (ಮಾಸಿಕ ತೀರ್ಪು) ಸಮಯದಲ್ಲೂ ದೈಹಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಎಂದು ಪತ್ನಿ ಆರೋಪಿಸಿದ್ದಾರೆ. ವಿಕೃತ ವರ್ತನೆ: ಮನೆಯಲ್ಲಿ ಅತ್ತೆ-ಮಾವ ಇದ್ದರೂ ಮಂಜುನಾಥ್ ಅರೆಬೆತ್ತಲೆಯಾಗಿ ಅಥವಾ ಸಂಪೂರ್ಣ ಬೆತ್ತಲೆಯಾಗಿ ಓಡಾಡುತ್ತಾ ಮುಜುಗರ ಉಂಟುಮಾಡುತ್ತಿದ್ದ. ಪತ್ನಿಯ ಅನುಮತಿ ಇಲ್ಲದೆ ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ…
ಬೆಂಗಳೂರು: ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಖ್ಯಾತ ಬಯೋಕಾನ್ (Biocon) ಕಂಪನಿಯ ಉದ್ಯೋಗಿಯೊಬ್ಬರು ಮಂಗಳವಾರ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಮೃತರನ್ನು ಅನಂತ್ ಭಟ್ (35) ಎಂದು ಗುರುತಿಸಲಾಗಿದೆ. ಇವರು ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಹಂತ–2ರಲ್ಲಿರುವ ಕಂಪನಿಯ ಕಟ್ಟಡದ ಐದನೇ ಮಹಡಿಯ ಕೆಫೆಟೇರಿಯಾ ಬಾಲ್ಕನಿಯಲ್ಲಿ ಇವರು ನಿಂತಿದ್ದರು. ಆ ಸಮಯದಲ್ಲಿ ಅವರು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ದಿಢೀರನೆ ಅವರು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ತಕ್ಷಣ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಹೆಬ್ಬಗೋಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ…
ತುಮಕೂರು: ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ತುಮಕೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ನಗರದ ಸುತ್ತಮುತ್ತಲಿನ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ 54 ಗ್ರಾಮಗಳನ್ನು ಪಾಲಿಕೆಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಸೋಮವಾರ ನಗರದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಈ ವಿಷಯವನ್ನು ಹಂಚಿಕೊಂಡರು. ವ್ಯಾಪ್ತಿ ವಿಸ್ತರಣೆ: ಒಟ್ಟು 14 ಗ್ರಾಮ ಪಂಚಾಯಿತಿಗಳು ಹಾಗೂ ಅವುಗಳ ಅಧೀನದಲ್ಲಿರುವ 54 ಗ್ರಾಮಗಳು ಇನ್ಮುಂದೆ ಮಹಾನಗರ ಪಾಲಿಕೆಯ ಅಡಿಯಲ್ಲಿ ಬರಲಿವೆ. ಬೆಂಗಳೂರು ಮಾದರಿ ಅಭಿವೃದ್ಧಿ: ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರು ಮತ್ತು ತುಮಕೂರು ನಡುವೆ ಯಾವುದೇ ವ್ಯತ್ಯಾಸವಿಲ್ಲದಂತೆ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಮೆಟ್ರೋ ಯೋಜನೆ: ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಡಿಪಿಆರ್ (DPR) ಸಿದ್ಧಪಡಿಸುವ ಕೆಲಸ ಪ್ರಗತಿಯಲ್ಲಿದೆ. ಕಲಾ ಗ್ರಾಮ: ಸಾಹಿತ್ಯ ಮತ್ತು…
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ವೈದ್ಯಾಧಿಕಾರಿ ಡಾ. ರತಿಕಾಂತ್ ವಿ. ಸ್ವಾಮಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂತಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಣುಕಾ ಚಂದ್ರಕಾಂತ, “ರಕ್ತ ಎನ್ನುವುದು ಕೃತಕವಾಗಿ ಸಿದ್ಧಪಡಿಸಲು ಸಾಧ್ಯವಿಲ್ಲದ ಏಕೈಕ ಅಮೂಲ್ಯ ವಸ್ತು. ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಅಪಘಾತಗಳಂತಹ ಸಂದಿಗ್ಧ ಸಮಯದಲ್ಲಿ ರಕ್ತವು ಸಂಜೀವಿನಿಯಂತೆ ಕೆಲಸ ಮಾಡುತ್ತದೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಭಾಗಿಗಳಾಗಬೇಕು,” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸಂತೋಷ್ ಮಾತನಾಡಿ, “ರಕ್ತದಾನ ಮಾಡುವುದರಿಂದ ಒಬ್ಬ ಸಾಮಾನ್ಯ ಮನುಷ್ಯ ಕೂಡ ದೇವರಾಗುವ ಅವಕಾಶ ಲಭಿಸುತ್ತದೆ. ಇಂತಹ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳಿಗೆ ಪಂಚಾಯತ್ ವತಿಯಿಂದ ಸದಾ ಬೆಂಬಲ ನೀಡಲಾಗುವುದು,” ಎಂದರು. ಆರೋಗ್ಯಕ್ಕೆ ರಕ್ತದಾನ ಪೂರಕ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ರತಿಕಾಂತ್ ವಿ.…
ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಆಶಿಸಿದರು. ಸೋಮವಾರ ನಗರದ ಗಾಜಿನಮನೆ ಆವರಣದಲ್ಲಿ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸಮಾಜಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಗಳಾಗಿ, ಸರ್ಕಾರಗಳಿಗೆ ಪರಿಣಾಮಕಾರಿ ಸಲಹೆ–ಸೂಚನೆಗಳನ್ನು ನೀಡಿದ ಇತಿಹಾಸವಿದೆ. ಈ ಸಲಹೆ ಸೂಚನೆಗಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಮನ್ನಣೆ ನೀಡಿದೆ ಎಂಬ ಚರ್ಚೆಗಳ ನಡುವೆಯೂ ಕನ್ನಡ ನಾಡಿನ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕು ಎಂದು ಕರೆ ಕೊಟ್ಟರು. ತುಮಕೂರಿನಲ್ಲಿ ಕಲಾಗ್ರಾಮ: ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಘೋಷಣೆ 1915ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಶತಮಾನದ ಕಾಲದಿಂದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ತುಮಕೂರು ಜಿಲ್ಲಾ ಕನ್ನಡ…
ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ವಿಶೇಷವಾಗಿ ಮಹಿಳೆಯರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿ ಪೊಲೀಸ್ ಇಲಾಖೆಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಸಂಭ್ರಮಾಚರಣೆಯ ಹೆಸರಿನಲ್ಲಿ ಅತಿರೇಕದ ವರ್ತನೆಗಳು ನಡೆಯದಂತೆ ತಡೆಯಲು ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿಎಂ ಸೂಚಿಸಿದ್ದಾರೆ. ಪ್ರಮುಖವಾಗಿ ರಸ್ತೆಗಳಲ್ಲಿ ‘ವ್ಹೀಲಿಂಗ್’ ಮಾಡುವ ಪುಂಡರ ಮೇಲೆ ತೀವ್ರ ನಿಗಾ ಇರಿಸಲು ಮತ್ತು ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ಪತ್ತೆಹಚ್ಚಲು ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮಹಿಳೆಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರ ನಿಯೋಜನೆಗೆ ಸೂಚಿಸಲಾಗಿದೆ. ಸಂಭ್ರಮಾಚರಣೆಯ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು…
ಗುಬ್ಬಿ: ಎಂಟು ಜಿಲ್ಲೆಯ ರೈತರ ಕೆರೆಗಳಿಗೆ ನೀರು ತುಂಬಿಸಿ ರೈತರ ಜೀವಜಲವಾಗಲು ಹೊರಟಿರುವ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿರುವಾಗ ಅಸೂಯೆಯಿಂದ ಕೇಂದ್ರ ಸರ್ಕಾರ ಇಲ್ಲಸಲ್ಲದ ಕ್ಯಾತೆ ತೆಗೆದು ಯೋಜನೆ ಪೂರ್ಣಗೊಳಿಸಲು ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕಿಡಿಕಾರಿದರು. ಅವರು ಪ್ರವಾಸಿ ಮಂದಿರದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ದೊಡ್ಡ ನೀರಾವರಿ ಯೋಜನೆ ಎನಿಸಿದ್ದ ಎತ್ತಿನಹೊಳೆ ಯೋಜನೆ ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಯ 76 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ತರ ಕಾರ್ಯ ನಡೆದಿದೆ. 29 ತಾಲ್ಲೂಕಿನ 6657 ಗ್ರಾಮಗಳಿಗೆ, 527 ಕೆರೆಗಳಿಗೆ ಒಟ್ಟು 14 ಟಿಎಂಸಿ ನೀರು ಹರಿಯಲಿದೆ. ಈ ಯೋಜನೆಯಿಂದ ಎಂಟು ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಒಟ್ಟು 252.69 ಕಿಮೀ ಉದ್ದದ ಕಾಲುವೆಯಲ್ಲಿ 208 ಕಿಮೀ ಕಾಮಗಾರಿ ಪೂರ್ಣವಾಗಿದೆ ಎಂದರು. ಕೇಂದ್ರ ಸರ್ಕಾರ ಈ ಮಟ್ಟದ ಕಾಮಗಾರಿ ಆಗುವವರೆಗೆ ಸುಮ್ಮನಿದ್ದು ಈಗ ನಾಲ್ಕು ತಿಂಗಳಿಂದ ಏಕಾಏಕಿ ಮೂರು…
ತುರುವೇಕೆರೆ: ತಾಲೂಕಿನ ತಂಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿಪುರ (ಕರೆಕಲ್ ಬಾರೆ) ಗ್ರಾಮದ ಜನರು ಕುಡಿಯುವ ನೀರಿಗಾಗಿ ಆಗ್ರಹಿಸಿ ಪಂಚಾಯಿತಿ ಮುಂಭಾಗ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ಗ್ರಾಮ ಮುಖಂಡ ಓಂಕಾರಾಚಾರ್ ಮಾತನಾಡಿ, ಈ ಮೊದಲು ಬಹುಗ್ರಾಮ ಕುಡಿಯುವ ಯೋಜನೆಯ ಟ್ಯಾಂಕರ್ ನಿಂದ ನಮ್ಮ ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸಲಾಗಿತ್ತು, ಈಗ ಅದು ಬಂದ್ ಆಗಿದೆ. ಗ್ರಾಮದ ಎರಡು ಸಿಸ್ಟನ್ ಗಳಿಗೆ ಪಂಚಾಯಿತಿ ಬೋರ್ವೆಲ್ ಮೂಲಕ ನೀರು ಬಿಡಲಾಗುತ್ತಿತ್ತು. ಆದರೆ ಪಂಚಾಯಿತಿಯಿಂದ ಬೋರ್ವೆಲ್ನ ಮೋಟಾರ್ ಪೈಪ್ಗಳನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ, ನೀರು ಇಲ್ಲದಂತೆ ಮಾಡಿದ್ದಾರೆ. ಈಗಾಗಲೇ ಕುಡಿಯುವ ನೀರು ಕಲ್ಪಿಸುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಹಾಗೂ ಪಿಡಿಒಗೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಒತ್ತಾಯಿಸಿದರು. ಟ್ಯಾಂಕರ್ ನೀರು ಪೂರೈಕೆ: ಪಿಡಿಒ ಭರವಸೆ ಪಿಡಿಒ ಕುಮಾರಸ್ವಾಮಿ ಮಾತನಾಡಿ, ಟ್ಯಾಂಕರ್ ಮೂಲಕ ಕುಡಿಯುವ ನೀರು ಕಲ್ಪಿಸಲಾಗುವುದು. ಮುಂದಿನ ಕೆಲ…