Author: admin

ಮುಂಬೈ: ವಾಘ್ ಬಕ್ರಿ ಟೀ ಗ್ರೂಪ್‌ನ ಉನ್ನತ ಕಾರ್ಯನಿರ್ವಾಹಕ ಉದ್ಯಮಿ ಪರಾಗ್ ದೇಸಾಯಿ ಅವರು ತಮ್ಮ ನಿವಾಸದ ಹೊರಗೆ ಬೀದಿ ನಾಯಿಗಳ ದಾಳಿಯಿಂದ ಭಾನುವಾರ ನಿಧನರಾದರು. ವಾಘ್ ಬಕ್ರಿ ಟೀ ಗ್ರೂಪ್ ‌ನ ನಿರ್ದೇಶಕ, ಉನ್ನತ ಕಾರ್ಯನಿರ್ವಾಹಕ ಪರಾಗ್ ದೇಸಾಯಿ ಅವರು ತಮ್ಮ ನಿವಾಸದ ಹೊರಗೆ ಅಕ್ಟೋಬರ್ 15ರಂದು ಬೀದಿ ನಾಯಿಗಳಿಂದ ತೀವ್ರ ದಾಳಿಗೆ ಒಳಗಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು. ಪರಾಗ್ ಅವರು 1892 ರಲ್ಲಿ ನಾರಂದಾಸ್ ದೇಸಾಯಿ ಸ್ಥಾಪಿಸಿದ ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವ ದೇಸಾಯಿ ಕುಟುಂಬದ ನಾಲ್ಕನೇ ತಲೆಮಾರಿನ ಸದಸ್ಯರಾಗಿದ್ದರು. ದೇಸಾಯಿ ಅವರು 30 ವರ್ಷಗಳ ಉದ್ಯಮಶೀಲತೆಯ ಅನುಭವ ಹೊಂದಿದ್ದಾರೆ. ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ, ಮಾರಾಟ ಮತ್ತು ಮಾರ್ಕೆಟಿಂಗ್ ಅನ್ನು ಮುನ್ನಡೆಸಿದ್ದಾರೆ. ಅವರು ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ನಂತಹ ಪ್ರಮುಖ ಉದ್ಯಮ ವೇದಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರು ಅಮೆರಿಕದ ಲಾಂಗ್‌ ಐಲ್ಯಾಂಡ್‌ ವಿವಿಯಿಂದ ಎಂಬಿಎ ಪದವಿ ಪಡೆದವರು. ವಾಘ್‌ ಬಕ್ರಿ ಕಂಪನಿ…

Read More

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಿದ ಆರೋಪದ ಕುರಿತು ಮಾತನಾಡಿದ ಸಚಿವ ಡಿ.ಸುಧಾಕರ್, ಭಾರತೀಯ ಜನತಾ ಪಕ್ಷದ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಲ್ಲ. ಈಗಾಗಲೇ‌ ಕೆಲವರು ಇಂಥದ್ದೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ ಎಂದರು. ಸಚಿವರು, ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿಎಂ, ಡಿಸಿಎಂ ಟೀಂ ಇಲ್ಲ, ಇರುವುದು ಒಂದೇ ಅದು ಕಾಂಗ್ರೆಸ್ ಟೀಂ. ಐದು ವರ್ಷ ಪೂರೈಸಿ ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು. ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಟಾಂಗ್ ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಾಡಿದ್ದು ನಮ್ಮ ಮೇಲೆ ಹೇಳುತ್ತಿದ್ದಾರೆ. ಕಮಿಷನ್ ಪಡಿಯೋದು, ಕಟ್ ರೂಟ್ ಆಡಳಿತ ಗೊತ್ತಿಲ್ಲ. ರಾಜ್ಯದಲ್ಲಿ ಬರ ಇದೆ, ಡ್ಯಾಂಗಳಲ್ಲಿ ನೀರಿಲ್ಲ, ಕಲ್ಲಿದ್ದಲು ಅಭಾವವಿದೆ. ಕೃತಕವಾಗಿ ವಿದ್ಯುತ್ ಕೊರತೆ ಸೃಷ್ಠಿಸುವ ಪ್ರಶ್ನೆ ಉದ್ಭವಿಸಲ್ಲ ಎಂದರು.

Read More

ಅಕ್ಟೋಬರ್ 10 ರಂದು ಮಣಿಪುರದ ವಿವಿಧ ಭಾಗಗಳಲ್ಲಿ ಸೇನಾ ಸಮವಸ್ತ್ರವನ್ನು ಹೋಲುವ ಗೇರ್‌ಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 80 ಬುಲೆಟ್ ಪ್ರೂಫ್ ಜಾಕೆಟ್ ಗಳು, ಸುಮಾರು 100 ನಕಲಿ ಮಿಲಿಟರಿ ಸಮವಸ್ತ್ರಗಳು, ಮಿಲಿಟರಿ ಬೂಟುಗಳು, 11 ವಾಕಿ-ಟಾಕಿಗಳು, ಮೂರು ರೇಡಿಯೋ ಸೆಟ್‌ ಗಳು ಮತ್ತು ಅಶ್ರುವಾಯು ಶೆಲ್‌ ಗಳನ್ನು ಶೋಧದ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಸಂಘಟಿತ ದಾಳಿ ನಡೆಸಲು ಉಗ್ರರು ಪೊಲೀಸ್ ಕಮಾಂಡೋ ಸಮವಸ್ತ್ರಗಳನ್ನು ರಚಿಸಿಕೊಂಡಿದ್ದಾರೆ ಎನ್ನಲಾಗಿದೆ.

Read More

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜೈಪುರದಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮೋದಿಯನ್ನು ಸೋಲಿಸುವುದೇ ನಿಮ್ಮ ಗುರಿಯಾಗಿದ್ದರೆ, ಮೋದಿಯನ್ನು ಎಂದಿಗೂ ಪ್ರಧಾನಿಯನ್ನಾಗಿ ಮಾಡಬಾರದು ಎಂಬುದು ನನ್ನ ಗುರಿ, ನೀವು ಎಂದಾದರೂ ಬಿಜೆಪಿಗೆ ಮತ ಹಾಕಿದ್ದೀರಾ ಎಂಬ ನನ್ನ ಪ್ರಶ್ನೆಗೆ, ಮತ ಹಾಕಿಲ್ಲ ಎಂಬ ಉತ್ತರ ನಿಮ್ಮದಾಗಿದ್ದರೆ, ಇಷ್ಟು ವರ್ಷ ಬಿಜೆಪಿ ಹೇಗೆ ಗೆದ್ದಿತು? ಎಂದು ಕೇಳಿದ್ದಾರೆ.

Read More

ಸಂಘರ್ಷ ವಲಯ ಗಾಜಾಕ್ಕೆ ಭಾರತ ನೆರವು ಕಳುಹಿಸಿದೆ. ಭಾರತೀಯ ವಾಯುಪಡೆಯ ವಿಮಾನವು ಔಷಧಿಗಳು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳೊಂದಿಗೆ ಈಜಿಪ್ಟ್‌ ಗೆ ಮರಳಿತು. ರಫಾ ಕಾರಿಡಾರ್ ಗಾಜಾಕ್ಕೆ ಹೆಚ್ಚು ಅಗತ್ಯವಿರುವ ನೆರವನ್ನು ತರುತ್ತದೆ. ಪ್ಯಾಲೆಸ್ತೀನ್ ಜನರಿಗೆ ಭಾರತ 40 ಟನ್ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ 6.5 ಟನ್ ಔಷಧಿ ಮತ್ತು ಸಂಬಂಧಿತ ವಸ್ತುಗಳನ್ನು ರವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿಕ್ಸಿಲ್ ತಿಳಿಸಿದ್ದಾರೆ. ಇದು ಅಗತ್ಯ ಜೀವ ಉಳಿಸುವ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್ ‌ಗಳು, ಮಲಗುವ ಚೀಲಗಳು, ಟಾರ್ಪೌಲಿನ್‌ ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ನೀರಿನ ಶುದ್ಧೀಕರಣ ಸರಬರಾಜುಗಳನ್ನು ಒಳಗೊಂಡಿದೆ. ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರವಾಣಿ ಸಂಭಾಷಣೆಯ ನಂತರ ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವನ್ನು ತಲುಪಿಸಲಾಗುತ್ತಿದೆ.

Read More

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇವತ್ತಿ‌ನ ದಿನ ಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇದಿನೆ ಅವರನ್ನು ಬೈಯ್ಯೋದು, ಇವರನ್ನು ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ ಎಂದರು.

Read More

ಹೆಚ್.ಡಿ. ದೇವೇಗೌಡರಿಗೆ ಇನ್ನೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡ್ತೀನಿ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರುಪರಿಶೀಲನೆ ಮಾಡಿ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಏಕೆಂದರೆ ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾಗೆ ಗೌರವ ಕೋಡೋಣ. ಅಕ್ಟೋಬರ್ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡ್ತೇನೆ, ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಮಾಜಿ ಎಂಎಲ್ ಸಿ ಇಬ್ರಾಹಿಂ ತಿಳಿಸಿದರು.

Read More

ಚಂದ್ರಯಾನ 3 & ಆದಿತ್ಯ L1 ಯಶಸ್ವಿ ಉಡಾವಣೆ ನಂತರ, ISRO ಮಾನವರನ್ನು ಕಕ್ಷೆಗೆ ಕಳುಹಿಸಲು. ಗಗನ್ ಯಾನ ಯೋಜನೆಗಳನ್ನು ಸಿದ್ಧಪಡಿಸುತ್ತಿದೆ. ಈ ಪ್ರಯೋಗಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಗಗನ್ ಯಾನ ಉಡಾವಣೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು, ವಿಜ್ಞಾನಿಗಳಿಂದ ಹಿಡಿದು ಪೈಲಟ್ ಗಳವರೆಗೆ ಎಲ್ಲರೂ ಮಹಿಳೆಯರಿಗೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಘೋಷಿಸಿದ್ದಾರೆ.

Read More

ತುಮಕೂರು: ಮಂಡಿ ನೋವಿನಿಂದ ಬಳಲುತ್ತಿದ್ದ ಅಂತಾರಾಷ್ಟ್ರೀಯ ರಗ್ಬಿ (ಅಮೇರಿಕನ್ ಫುಟ್ ಬಾಲ್) ಕ್ರೀಡಾಪಟುವಿಗೆ ವೈದ್ಯರು ಆದ ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್   ತಮ್ಮ ಸಹ ದ್ಯೋಗಿ ವೈದ್ಯರೊಂದಿಗೆ ಸೇರಿ ಮಂಡಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಕ್ರೀಡಾಪಟುವಿಗೆ ನೆರವಾಗಿದ್ದಾರೆ. ಆರ್ಥಿಕ ಹೊರೆಯನ್ನು ತಪ್ಪಿಸಿದ್ದಾರೆ. ವೈದ್ಯ ವೃತ್ತಿಯಿಂದ ರಾಜಕಾರಣಕ್ಕೆ ಬಂದಿ ರುವ ಶಾಸಕ ಡಾ.ಎಚ್.ಡಿ.ರಂಗನಾಥ್, ವೃತ್ತಿ ಪ್ರಾಮುಖ್ಯತೆಯನ್ನು ಮರೆಯದೇ,  ಆಮೇರಿಕನ್ ಫುಟ್ಬಾಲ್ ಕ್ರೀಡಾ ಪಟುವಿಗೆ ಮಂಡಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮಾನ ವೀಯತೆ ಮರೆದಿದ್ದಾರೆ. ಮೂಲತಃ ಕುಣಿಗಲ್ ತಾಲೂಕಿನ ಹುತ್ತಿದುರ್ಗ ಯಲಿಯೂರು ಗ್ರಾಮದ ಹಾಲಿ ಬೆಂಗಳೂರಿನ ಟೆಂಪೋ ಚಾಲಕ ರಂಗಸ್ವಾಮಿ ಅವರ ಮತ್ರಿ ಆರ್.ಭವ್ಯ ರಗ್ನಿ ಕ್ರೀಡಾಪಟು ಆಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಅಭ್ಯಾಸದ ವೇಳೆ ಬಿದ್ದು ಬಲ ಭಾಗದ ಮಂಡಿ ನೋವು ಮಾಡಿ ಕೊಂಡಿದ್ದರು. ಈಗ ಮಂಡಿ ನೋವು ತೀವ್ರಗೊಂಡು ನೋವಿನಂದ ಬಳಲುತ್ತಿದ್ದರು, ಭವ್ಯ ಅವರಿಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಶನಿವಾರ ಶಾಸಕ ಡಾ.ಎಚ್ ರಂಗನಾಥ್, ದಾ. ಸಚಿನ್‌…

Read More

ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಅಚ್ಚರಿ ಮೂಡಿಸಿದೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾತಿ ಗಣತಿ ಮಾಹಿತಿ ಬಿಡುಗಡೆಯಾಗಿರಲಿಲ್ಲ. ಆದಿವಾಸಿಗಳು ಮತ್ತು ಹಿಂದುಳಿದವರ ಬೆಂಬಲವಿಲ್ಲದೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಈಗ ಎಲ್ಲರಿಗೂ ಅರ್ಥವಾಗಿದೆ ಎಂದರು. ಮಧ್ಯಪ್ರದೇಶದಲ್ಲಿ ಸೀಟು ವಿವಾದದ ನಂತರದ ವಿಭಜನೆಯ ನಂತರ ಟೀಕೆಗಳು ಬಂದಿವೆ. ಜಾತಿ ಗಣತಿಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ನೀಡದೇ ಇರುವುದು ಇದೇ ಕಾಂಗ್ರೆಸ್ ಪಕ್ಷ. ಹಿಂದುಳಿದ ಮತ್ತು ಬುಡಕಟ್ಟು ಜನರ ಬೆಂಬಲವಿಲ್ಲದೆ ಗೆಲ್ಲಲು ಸಾಧ್ಯವಿಲ್ಲ ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಈಗ ಜಾತಿ ಗಣತಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿರುವುದು ಅಚ್ಚರಿ ಮೂಡಿಸಿದೆ. ತಾವು ಹುಡುಕುತ್ತಿರುವ ಮತಗಳು ತಮ್ಮ ಬಳಿ ಇಲ್ಲ ಎಂಬುದು ಕಾಂಗ್ರೆಸ್ ಗೆ ಮನವರಿಕೆಯಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಆಮ್ಲಾ ಹೊರತುಪಡಿಸಿ ಉಳಿದೆಲ್ಲ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೀಟು ನೀಡದೆ ಘೋಷಿಸಿರುವುದು ಎಸ್‌ ಪಿಯನ್ನು ಕೆರಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಸೀಟು ಗೆಲ್ಲಲು ಕಾಂಗ್ರೆಸ್ ಸಿದ್ಧವಿಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ…

Read More