Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ಮಹಾತ್ಮ ಗಾಂಧಿ ಅವರ 154ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬಿಬಿಎಂಪಿ ನಗರದಲ್ಲಿ ‘1ನೇ ತಾರೀಖು, ಒಂದು ಗಂಟೆ- ಸ್ವಚ್ಛತೆಗಾಗಿ ಶ್ರಮದಾನ’ (ಭಾನುವಾರ) ಕಾರ್ಯಕ್ರಮ ಆಯೋಜಿಸಿದೆ. ಸ್ವಚ್ಛ ಸರ್ವೇಕ್ಷಣ್-2023′ ಅನುಸರಣೆಗಾಗಿ ಬಿಬಿಎಂಪಿಯ ಪ್ರತಿ ವಾರ್ಡ್ನಲ್ಲಿ ಕನಿಷ್ಠ ಎರಡು ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತದೆ. ಎನ್ ಜಿಒ, ಎಸ್ ಎ ಜಿ, ಎನ್ ಎಸ್ಎಸ್ ಅಥವಾ ಎನ್ ಸಿಸಿ ಕೆಡೆಟ್ ಗಳು, ಆರ್ ಡಬ್ಲ್ಯುಎ, ಸ್ವಯಂ ಸೇವಕರು, ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.
ತುಮಕೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂಧಗೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದು ವ್ಯಾಪಾರವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ನಗರದಲ್ಲಿ ಆಟೋ ಸಂಚಾರ ಯಥಾ ಸ್ಥಿತಿಯಲ್ಲಿದೆ, ಆದರೂ ಆಟಗಳ ಸಂಖ್ಯೆ ರಸ್ತೆಯಲ್ಲಿ ವಿರಳ ಸಂಖ್ಯೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಇನ್ನು ಬೆಂಗಳೂರಿಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ತೆರಳುತ್ತಿದ್ದರು ಪ್ರಯಾಣಿಕರ ಸಂಖ್ಯೆ ಅತಿ ಕಡಿಮೆ ಸಂಖ್ಯೆಯಲ್ಲಿದೆ. ಇನ್ನೊಂದೆಡೆ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಘೋಷಣೆ ಕೂಗಿದರು. ವಿಶೇಷವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣುಕು ಶವಯಾತ್ರೆಯನ್ನು ಮಾಡಿದರು. ರೈತ ಸಂಘ, ಕನ್ನಡ ಸೇನೆ , ಜೈ ಕರ್ನಾಟಕ, ರಕ್ಷಣಾ ವೇದಿಕೆ ಸೇರಿದಂತೆ ವಿಧ ಕನ್ನಡಪರ ಸಂಘಟನೆಗಳು ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ಮೆರವಣಿಗೆ…
ಬೆಂಗಳೂರು: ಯಲಹಂಕ ಬಳಿಯ ಚೊಕ್ಕನಹಳ್ಳಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಭಾರತೀಯ ನೌಕಾಪಡೆಯ 74 ವರ್ಷದ ನಿವೃತ್ತ ಎಂಜಿನಿಯರ್ ಮೇಲೆ ಹಲ್ಲೆ ನಡೆದಿದೆ. ಸ್ಥಳೀಯ ನಿವಾಸಿಯೊಬ್ಬರು ಮರದ ಹಲಗೆಯಿಂದ ಹೊಡೆದಿದ್ದು, ಗಾಯಗೊಂಡಿರುವ ವೃದ್ಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೊಕ್ಕನಹಳ್ಳಿಯ ಎನ್ ಆರ್ ಲೇಔಟ್ ನಿವಾಸಿ ಕೆ. ಅಮರನಾಥ ಚವ್ಹಾಣ್ ಹಲ್ಲೆಗೊಳಗಾದ ವ್ಯಕ್ತಿ. ಚೊಕ್ಕನಹಳ್ಳಿಯ ಎಸ್ ಮತ್ತು ಎನ್ ಲೇಔಟ್ ನಲ್ಲಿ ಭಾನುವಾರ ಬೆಳಗ್ಗೆ 7:15 ರಿಂದ 7:30 ರ ನಡುವೆ ಅವರ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಈ ಪ್ರದೇಶದ ನಿವಾಸಿಯಾಗಿರುವ ಅವರು ಪ್ರತಿದಿನ ಬೆಳಗ್ಗೆ 7 ರಿಂದ 7:45 ರವರೆಗೆ ವಾಕಿಂಗ್ ಹೋಗುತ್ತಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರವೊಂದರಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸುತ್ತಿದ್ದ ತಮಿಳು ನಟ ಸಿದ್ಧಾರ್ಥ್ ವಿರುದ್ಧ ಕರವೇ ಸ್ವಾಭಿಮಾನದ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿ ಸುದ್ದಿಗೋಷ್ಠಿಗೆ ತಡೆ ಒಡ್ಡಿದರು. ಕಾವೇರಿ ನೀರು ವಿಚಾರವಾಗಿ ಎರಡು ರಾಜ್ಯದ ನಡುವೆ ಪರಿಸ್ಥಿತಿ ಹದಗೆಟ್ಟಿದೆ. ಈ ಸಮಯದಲ್ಲಿ ಇದು ಬೇಕಾ, ನಾವು ಸುದ್ದಿಗೋಷ್ಠಿ ನಿಲ್ಲಿಸಿ ಎಂದು ಆರ್ಡರ್ ಮಾಡುತ್ತಿಲ್ಲ. ಮನವಿ ಮಾಡುತ್ತಿದ್ದೇವೆ. ದಯವಿಟ್ಟು ನೀವೂ ಕಾವೇರಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಆಗ್ರಹಿಸಿದರು.
ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟಗಾರರ ಮೇಲೆ ಹಲ್ಲೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ 6 ಫೇಸ್ಬುಕ್ ಹಾಗೂ ಟೆಲಿಗ್ರಾಪ್ ಗ್ರೂಪ್ಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆ.24ರಂದು ದೊಡ್ಡಬಳ್ಳಾಪುರದ ಐಬಿ ವೃತ್ತದಲ್ಲಿ ಅಕ್ರಮವಾಗಿ 18 ಟನ್ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದು, ಕಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದರು.
ಬೆಂಗಳೂರು: ಪ್ರತಿಷ್ಠಿತ ಮಾಲ್ ವೊಂದರ ಸಿದ್ಧ ಉಡುಪು ಮಾರಾಟ ಮಳಿಗೆಯಲ್ಲಿ ಬಿಲ್ ಮಾಡುವ ವಿಚಾರವಾಗಿ ಆ ಮಳಿಗೆಯ ಇಬ್ಬರು ಕ್ಯಾಶಿಯರ್ ಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಯಲಹಂಕದ ಆರ್ ಎಂಝಡ್ ಗ್ಯಾಲೇರಿಯಾ ಮಾಲ್ ನ 1ನೇ ಮಹಡಿಯಲ್ಲಿರುವ ಲೈಫ್ ಸ್ಟೈಲ್ ಶೋ ರೂಂ ಕ್ಯಾಶಿಯರ್ ಕುರುವ ಮಲ್ಲಿಕಾರ್ಜುನ್ (24) ಹತ್ಯೆಯಾಗೀಡಾದ ಯುವಕ. ಪ್ರಕರಣ ಸಂಬಂಧ ಮೃತನ ಸಹೋದ್ಯೋಗಿ ರಾಜರಥನ್ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ರಾಜಧಾನಿಯಲ್ಲಿ ರೌಡಿಶೀಟರ್ ಸುಹೇಲ್ ಅಲಿಯಾಸ್ ಪಪ್ಪಾಯಿ ಎಂಬಾತನನ್ನು ಕೊಚ್ಚಿ ಹತ್ಯೆಮಾಡಲಾಗಿದೆ. ಡಿಜೆ ಹಳ್ಳಿ ಪೋಲಿಸ್ ಠಾಣೆ ರೌಡಿಶೀಟರ್ ಸುಹೇಲ್ ಪಪ್ಪಾಯಿ ಎಂಬಾತನ ಮೇಲೆ ಡಿಜೆ ಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ಗುರುತು ಪತ್ತೆಯಾಗಬೇಕಿದೆ. ಗ್ಯಾಂಗ್ ವಾರ್ ಅಥವಾ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ರಾಜ್ಯದಲ್ಲಿ ‘108’ ಆ್ಯಂಬುಲೆನ್ಸ್ ಜನರ ಅತ್ಯಂತ ನಂಬಿಕಸ್ಥ ವೈದ್ಯಕೀಯ ವ್ಯವಸ್ಥೆಯಾಗಿದೆ. ಎಲ್ಲಿ ಯಾವುದೇ ಆರೋಗ್ಯ ತುರ್ತು ಸ್ಥಿತಿ ಇದ್ದರೂ, ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನ ತಲುಪಿಸಿ, ಅವರ ಜೀವ ಉಳಿಸುವ ಪುಣ್ಯದ ಕಾರ್ಯವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ಮಾಡುತ್ತಿದ್ದಾರೆ. ಆದರೆ, ಹಾಸನ ಜಿಲ್ಲೆಯಲ್ಲಿ ‘108’ ಆ್ಯಂಬುಲೆನ್ಸ್ ಸಿಬ್ಬಂದಿಯ ನಡೆಯ ಬಗ್ಗೆ ತೀವ್ರ ಆತಂಕಕ್ಕೊಳಗಾಗುವ ವಿಚಾರವೊಂದು ಕೇಳಿ ಬಂದಿದೆ. ಹೌದು..! 108 ಆ್ಯಂಬುಲೆನ್ಸ್ ನಲ್ಲಿ ಕರೆತರುವ ರೋಗಿಗಳನ್ನು ಕಮಿಷನ್ ಆಸೆಗೆ ಆ್ಯಂಬುಲೆನ್ಸ್ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ಸೇರಿಸುತ್ತಿದ್ದಾರೆ ಎಂದು ಹಾಸನದ ಯುವ ಮುಖಂಡ ಪ್ರದೀಪ್ ಅವರು ಗಂಭೀರ ಆರೋಪ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗೆ ಸೇರಿದ ವ್ಯಕ್ತಿಗಳು ರೋಗಿಗಳ ಬ್ರೈನ್ ವಾಶ್ ಮಾಡಿ, ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯುತ್ತಿರುವ ಘಟನೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ದರೆ 15ರಿಂದ 20% ಕಮಿಷನ್ ಸಿಗುತ್ತದೆ ಎನ್ನುವ ಆಸೆಗೆ ಬಡ ರೋಗಿಗಳನ್ನ ವ್ಯವಸ್ಥಿತವಾಗಿ ಸುಳ್ಳು ಹೇಳಿ ವಂಚಿಸಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗುತ್ತಿದೆ. ಕಮಿಷನ್…
ಬೆಂಗಳೂರು: ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಲಿದೆ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವು ಸಂಘಟನೆಗಳು 29 ನೇ ತಾರೀಖು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ. ನಗರದಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಕರ್ನಾಟಕ ಬಂದ್ ಕರೆ ನೀಡಿದವರಿಗೆ ನೋಟಿಸ್ ನೀಡಲಾಗುತ್ತದೆ. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ಆದೇಶದ ಪ್ರಕಾರ, ಬಂದ್ಗೆ ಕರೆ ನೀಡುವುದು ಕಾನೂನು ಬಾಹಿರ. ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಆದೇಶದಂತೆ ಕಾರ್ಯ ನಿರ್ವಹಿಸಲಿದೆ ಎಂದು ಕಮಿಷನರ್ ಮಾಹಿತಿ ನೀಡಿದರು.
ಬೆಂಗಳೂರು, ಸೆಪ್ಟೆಂಬರ್ 28: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು…