Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಹೆಚ್.ಡಿ.ಕೋಟೆ: ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳಿಂದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಯ ನ್ಯೂನತೆಗಳ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿ ಮಾರಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ತಾಲ್ಲೂಕಿನಲ್ಲಿ ನಿಗದಿತ ಸಮಕ್ಕೆ ಸರಿಯಾಗಿ ಶಿಕ್ಷಕರು ತರಗತಿಗೆ ತೆರಳುತಿಲ್ಲ ಮತ್ತು ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುತ್ತಾರೆ ಎಂಬುದಾಗಿ ಸಾರ್ವಜನಿಕ ವಲಯದಲ್ಲಿ ದೂರು ಕೇಳಿಬರುತ್ತಿದ್ದು, ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುವ ಶಿಕ್ಷಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈ ಗೊಳ್ಳಬೇಕೆಂದು ಹೆಚ್ಚರಿಕೆ ನೀಡಿದರು ಮದ್ಯಪ್ರವೇಶಿಸಿದ ಜಿಲ್ಲಾಧಿಕಾರಿ ರಾಜೇಂದ್ರ ನೀವು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಮಾಹಿತಿಯನ್ನೇ ತಿಳಿದುಕೊಂಡಿಲ್ಲ ಅಂದರೆ ನೀವೇನು ಕಾರ್ಯನಿರ್ವಾಹಿಸುತ್ತೀರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು ಸರಿಯಾದ ಮತ್ತು ನಿಖರವಾದ ಮಾಹಿತಿಯನ್ನು ನೀಡದೆ ಶಾಸಕರ ಕೆಂಗಣ್ಣಿಗೆ ಗುರಿಯಾದ ಕ್ಷೇತ್ರಶಿಕ್ಷಣಾಧಿಕಾರಿ ಮಾರಯ್ಯ ಅವರನ್ನು ಹಾಗೂ ಇಲಾಖೆಯ ಎಲ್ಲ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಸಾರ್ವಜನಿಕರಿಗೆ ಸೇವೆ…
ಚಾಮರಾಜನಗರ: ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದಿದೆಯೇ ? ಎಂದು ಪ್ರಶ್ನಿಸಿದರು. ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.
ಹೆಚ್.ಡಿ.ಕೋಟೆ: ತಮಿಳುನಾಡು ರಾಜ್ಯದ ಕೊಯಂತ್ತೂರಿನ ಮುತ್ತು ಸೆಲ್ವರಾಜ್ ಎಂಬುವ ಯುವಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ನಂತರ ಅವರ ವಿಚಾರಗಳನ್ನು ತಿಳಿದು ರಾಜ್ಯ ಮತ್ತು ಅಂತಾರಾಜ್ಯ ಪರ್ಯಾಟನೆ ಮಾಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಆಗಮಿಸಿದ ಅವರು ಮಾದ್ಯಮಗಳೊಂದಿಗೆ ಮಾತನಾಡಿ, ಪುನೀತ್ ಅಭಿಮಾನಿಯಾಗಿ ಅವರ ವಿಚಾರಗಳನ್ನು ದೇಶ ವಿದೇಶಗಳಿಗೆ ಬಿತ್ತರಿಸಬೇಕೆಂಬ ಮಹಾದಾಸೆ ನನ್ನದು. ಆದರಿಂದ ಸೈಕಲ್ ನಲ್ಲಿ ಅವರ ವಿಚಾರಗಳನ್ನ ದೇಶದಾದ್ಯಂತ ಭಿತ್ತರಿಸಲು ಆರಂಬಿಸಿದ್ದೇನೆ ಎಂದು ತಿಳಿಸಿದರು. ಇಂದಿಗೆ ಸುಮಾರು ಎರಡೂ ವರ್ಷಗಳ ಹತ್ತಿರವಾಗಿದ್ದೂ 19,000 ಕಿ.ಲೋ. ಮೀಟರ್ ಕ್ರಮಿಸಿದ್ದೇನೆ ಎಂದು ತಿಳಿಸಿದರು. ಹೆಚ್.ಡಿ.ಕೋಟೆಗೆ ಆಗಮಿಸಿದ ಮುತ್ತುಸೆಲ್ವರಾಜ್ ರನ್ನು ಕಂಡು ಹೆಚ್.ಡಿ ಕೋಟೆ ಜನರು ಹರ್ಷ ವ್ಯಕ್ತಪಡಿಸಿದರು ಈ ವ್ಯಕ್ತಿಯನ್ನು ಕಂಡ ಕೂಡಲೇ ರಾಜ್ ಕುಟುಂಬದ ಅಪ್ಪಟ ಅಭಿಮಾನಿ ಟೀ ಅಂಗಡಿ ಮುತ್ತಣ್ಣ ಅವರಿಗೆ ಆತ್ಮೀಯತೆಯಿಂದ ಧನ್ಯವಾದವನ್ನು ತಿಳಿಸಿ ಕೇರಳ ರಾಜ್ಯದೆಡೆಗೆ ಬಾವಲಿ ಮಾರ್ಗವಾಗಿ ಬೀಳ್ಕೊಟ್ಟರು ವರದಿ: ಮಲಾರ ಮಹದೇವಸ್ವಾಮಿ
ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದರು.
ಕಾವೇರಿ ನೀರು ವಿಚಾರವಾಗಿ ತಮಿಳುನಾಡು ಜೊತೆ ಸಿಎಂ ಮಾತಾಡಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದರು. ತಮಿಳುನಾಡು ಸಿಎಂ ಸ್ಟಾಲಿನ್ ಗೂ ಸಿದ್ದರಾಮಯ್ಯಗೂ ಸಂಬಂಧ ಚೆನ್ನಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಇಬ್ಬರೂ ತಮಿಳುನಾಡಿಗೆ ಹೋಗಿ ಸಿಎಂ ಸ್ಟಾಲಿನ್ ಜೊತೆ ಮಾತಾಡಿ ರಾಜ್ಯದ ಜನರ ಕಷ್ಟದ ಬಗ್ಗೆ ವಿವರಿಸಿ. ಇದರಿಂದ ನಿಮಗೆ ತಾನೇ ರಾಜಕೀಯ ಲಾಭ ಆಗೋದು. ನೀವು ಯಾಕೆ ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಬಾರದು? ನೀವು ನಮ್ಮನ್ನು ರಾಜಕಾರಣ ಮಾಡುತ್ತಿದ್ದೀರಿ ಎನ್ನುವುದು ತಪ್ಪುತ್ತದೆ. ನಿಮ್ಮ ಅವರ ನಡುವಿನ ಸಂಬಂಧ ಹೇಗಿದೆ ಅಂತಾ ನನಗೆ ಗೊತ್ತು. ಸಿಎಂ ಸ್ಟಾಲಿನ್ ಜೊತೆ ಸಿದ್ದರಾಮಯ್ಯ, ಡಿಕೆ ಮಾತಾಡಿ ಪುಣ್ಯ ಕಟ್ಟಿಕೊಳ್ಳಿ. ನೀವು ಮಾತಾಡಿದರೆ ತಮಿಳುನಾಡಿನವರು ಯಾವುದೇ ಬೇಡಿಕೆ ಇಡಲ್ಲ ಎಂದರು.
ವಿಧಾನಸೌಧದ ಆವರಣದಲ್ಲಿ ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ನಳಿನ್ ಕುಮಾರ್ ಕಟೀಲು, ಗೋವಿಂದ ಕಾರಜೋಳ, ಸದಾನಂದಗೌಡ, ಅಶ್ವತ್ಥನಾರಾಯಣ, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನ ಭೇಟಿ ಆಗುವ ಮೊದಲು ಹೋಂ ಮಿನಿಸ್ಟರ್ ಬಳಿ ನಾನು ಚರ್ಚೆ ಮಾಡಿದ್ದೇನೆ. ಕದ್ದು ಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿ ಏನಿದೆ ಅಂತ ಶಾ ಅವರತ್ರ ಎಲ್ಲಾ ವಿಚಾರ ಮಾತಾಡಿದ್ದೇನೆ. ಇದನ್ನು ಮೊದಲು ಸರಿ ಮಾಡಿ ನಂತರ ಕುಮಾರಸ್ವಾಮಿ ಅವರು ಬಂದು ಮಾತಾಡ್ತಾರೆ ಎಂದೆ. ಯಾವುದೇ ಸಮುದಾಯಕ್ಕೆ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ. ಇವತ್ತು ಯಾಕೆ ಹೀಗಾಯ್ತು, ಯಾರು ಇದಕ್ಕೆ ಕಾರಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ತೆಗೆದದ್ದು ಯಾರು? ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸವಿತಾ ಪುನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ ತನ್ನ ಮೊದಲ ಪಂದ್ಯದಲ್ಲಿ ಸಿಂಗಾಪುರವನ್ನು 13-0 ಅಂತರದಿಂದ ಸೋಲಿಸಿದೆ. ಭಾರತ ಪರ ಸಂಗೀತಾ ಕುಮಾರಿ 3 ಗೋಲು ಗಳಿಸಿದರು. ಸಿಂಗಾಪುರಕ್ಕೆ ಸತತ ಎರಡನೇ ಸೋಲು ಸಂಭವಿಸಿದೆ. ಭಾರತ ಮಹಿಳಾ ಹಾಕಿ ತಂಡ ತನ್ನ ಅಭಿಯಾನಕ್ಕೆ ಶುಭಾರಂಭ ಮಾಡಿದೆ. ಮಲೇಷ್ಯಾ, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಸಿಂಗಾಪುರದೊಂದಿಗೆ ಭಾರತ ತಂಡ ಪೂಲ್-ಎಯಲ್ಲಿ ಸ್ಥಾನ ಪಡೆದಿದೆ. ಈ ಪೂಲ್ ನ ಮೊದಲ ಪಂದ್ಯದಲ್ಲಿ ಮಲೇಷ್ಯಾ 8-0 ಗೋಲುಗಳಿಂದ ಹಾಂಕಾಂಗ್ ತಂಡವನ್ನು ಸೋಲಿಸಿತು. ಆದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ 4-0 ಗೋಲುಗಳಿಂದ ಸಿಂಗಾಪುರವನ್ನು ಸೋಲಿಸಿತು. ಇದೀಗ ಭಾರತ ತಂಡ ಸಿಂಗಾಪುರವನ್ನು 13-0 ಅಂತರದಿಂದ ಸೋಲಿಸಿದೆ. ಈ ಮೂಲಕ ಸಿಂಗಾಪುರ ತಂಡ ಸತತ 2ನೇ ಪಂದ್ಯದಲ್ಲಿಯೂ ಕೂಡ ಸೋಲನ್ನು ಕಂಡಿದೆ. ಸವಿತಾ ಪುನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ ಚಿನ್ನದ ಪದಕ ಗೆಲ್ಲುವಲ್ಲಿ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಭಾರತೀಯ ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2 ರಂದು ಸಂಜೆ 4.30 ಕ್ಕೆ ನಗರದ ಭಗವಾನ್ ಮಹಾವೀರ(ಇನ್ಫೆಂಟ್ರಿ) ರಸ್ತೆಯ ವಾರ್ತಾ ಸೌಧದ ಸುಲೋಚನ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಐದು ಲಕ್ಷ ರೂಪಾಯಿ ನಗದು ಒಳಗೊಂಡ ರಾಜ್ಯ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು, ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸುವರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. ತನ್ನ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಸುಗಮ ಸಾರಿಗೆ ಸೇವೆ ನೀಡುತ್ತಾ ಬಂದಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮ. ಈ 25 ವಸಂತಗಳ ಸುದೀರ್ಘ ಹಾದಿಯಲ್ಲಿ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಸೇವೆಗೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ ಎಂದು ಹೆಮ್ಮೆಯಿಂದ ಸಿಎಂ ಹೇಳಿದ್ದಾರೆ. ನಮ್ಮ ಸರ್ಕಾರವು 921 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಈ ವರ್ಷಾಂತ್ಯದೊಳಗೆ 1,900 ಹೊಸ ಬಸ್ ಗಳನ್ನು ಖರೀದಿಸಿ ಬಿಎಂಟಿಸಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪರಿಸರ ಸ್ನೇಹಿಯಾಗಿಸಲು ಕಾರ್ಯಪ್ರವೃತ್ತವಾಗಿದೆ. ಬೆಂಗಳೂರಿನ ಜನತೆ ಹೆಚ್ಚೆಚ್ಚು ಸಾರ್ವಜನಿಕ ಸಾರಿಗೆಯನ್ನು ಬಳಸುವ ಮೂಲಕ ಪರಿಸರ ಮಾಲಿನ್ಯ ಮತ್ತು ಸಂಚಾರ ದಟ್ಟಣೆ ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.