Author: admin

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಒಬಿಸಿ ವಿಷಯವನ್ನು ಪುನರುಚ್ಚರಿಸಿದ್ದಾರೆ. ನರೇಂದ್ರ ಮೋದಿ ಜಾತಿ ಗಣತಿ ಡೇಟಾವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಹುಲ್ ಪ್ರಶ್ನಿಸಿದರು. ಲೋಕಸಭೆಯಲ್ಲಿ ಅದಾನಿ ಬಗ್ಗೆ ಪ್ರಧಾನಿಯನ್ನು ಕೇಳಿದ್ದಕ್ಕೆ ಅವರ ಲೋಕಸಭಾ ಸದಸ್ಯತ್ವವನ್ನು ಕಸಿದುಕೊಳ್ಳಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಛತ್ತೀಸ್‌ ಗಢದಲ್ಲಿ ಗ್ರಾಮೀಣ ಆವಾಜ್ ನ್ಯಾಯ್ ಯೋಜನೆ ಉದ್ಘಾಟನೆ ವೇಳೆ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ. ಮೋದಿಯವರ ಬಳಿ ರಿಮೋಟ್ ಕಂಟ್ರೋಲ್ ಇದೆ. ಆದರೆ ಅವರು ಅದನ್ನು ರಹಸ್ಯವಾಗಿಟ್ಟಿದ್ದಾರೆ. ನಾವು ಅದನ್ನು ಸಾರ್ವಜನಿಕಗೊಳಿಸಿದ್ದೇವೆ. ಆದರೆ ಬಿಜೆಪಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಮುಂಬೈ ವಿಮಾನ ನಿಲ್ದಾಣ ಸೇರಿದಂತೆ ಎಲ್ಲಾ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಬಿಜೆಪಿ ಅದಾನಿಗೆ ಖಾಸಗೀಕರಣ ಮಾಡುತ್ತಿದೆ. ರಾಹುಲ್ ಟೀಕಿಸಿದ್ದಾರೆ. ಚುನಾವಣೆಗೂ ಮುನ್ನ ಮಧ್ಯಪ್ರದೇಶದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ತುಕ್ಕು ಹಿಡಿದ ಪಕ್ಷ ಎಂದು ಲೇವಡಿ ಮಾಡಿದ ಬೆನ್ನಲ್ಲೇ ರಾಹುಲ್ ಪ್ರತಿದಾಳಿ ನಡೆಸಿದ್ದಾರೆ. ಜಾತಿ ಗಣತಿಯಿಂದ ಕೇಂದ್ರ ಸರಕಾರ ಓಡುತ್ತಿದೆ.…

Read More

ಬೆಂಗಳೂರು ಬಂದ್​ ಗೆ  ಕನ್ನಡ ಚಿತ್ರೋದ್ಯಮ ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್​​ ಆಗಿದೆ. ಅಲ್ಲದೇ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತ ಮಾಡಲಾಗಿದೆ. ಬಂದ್ ಗೆ ಬೆಂಬಲ ನಗರದಲ್ಲಿ ಇವತ್ತು ಚಿತ್ರಮಂದಿರಗಳಲ್ಲಿ ಇಂದು ಸಿನಿಮಾ ಪ್ರದರ್ಶನವಿಲ್ಲ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೂಡ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ನಡೆಯುತ್ತಿಲ್ಲ.

Read More

ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪೌಲ್ ಅವರ ತನಿಖೆ ನಡೆಸುತ್ತಿದ್ದು, ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ. 545 ಪಿಎಸ್‌ ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ನಡೆದಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

Read More

ರೈತ ಸಮುದಾಯ, ಹಾಲು ಉತ್ಪಾದಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜಾನುವಾರುಗಳ ಆರೈಕೆಗೆ ಇನ್ಮುಂದೆ ಮನೆ ಬಾಗಿಲಿಗೆ ಪಶು ಸಖಿಯರು ಬರಲಿದ್ದಾರೆ. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರ ರೀತಿಯಲ್ಲೇ ಪಶುಸಂಗೋಪನೆ ಇಲಾಖೆಯಲ್ಲಿ 5,962 ‘ಪಶು ಸಖಿ’ಯರನ್ನು ನೇಮಿಸಲಾಗಿದೆ. ಕನಿಷ್ಠ 18 ದಿನಗಳ ಸಾಮಾನ್ಯ ತರಬೇತಿ ನಂತರ, ಜಾನುವಾರುಗಳ ವೈಜ್ಞಾನಿಕ ಸಾಕಣೆ ಹಾಗೂ ಪೋಷಣೆ, ರೋಗ ನಿಯಂತ್ರಣ ಕ್ರಮಗಳ ಬಗ್ಗೆ 16 ದಿನಗಳ ತರಬೇತಿ ಕೊಡಲಾಗುತ್ತದೆ. ಬಳಿಕ ಕೆಲಸಕ್ಕೆ ನಿಯೋಜಿಸಲಾಗುತ್ತದೆ.

Read More

ಬೆಂಗಳೂರು: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದವನೇ ಹೆಣವಾದ ಘಟನೆ ಇಲ್ಲಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ ಕೊಲೆಯಾದವ. ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read More

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರ, ಕನ್ನಡಪರ ಸಂಘಟನೆಗಳ ದಂಡು. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‌. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಆದರೆ ಸುಮಾರು 175 ಸಂಘಟನೆಗಳು ಬಂದ್‌ ಗೆ ಬೆಂಬಲ ಘೋಷಿಸಿವೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿಯಿಂದ 24 ಗಂಟೆಗಳ ಕರ್ಫ್ಯೂ ಘೋಷಿಸಲಾಗಿದೆ. ನೀರು ಬಿಟ್ಟರೆ ಕರ್ನಾಟಕದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರೈತ ಸಂಘಟನೆಗಳು ಹೇಳುತ್ತಿವೆ. ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿ 29ರಂದು ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಿದ್ದಾರೆ.

Read More

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದ ರಾಜ್ಯದ ದೇವಾಲಯಗಳನ್ನು ನೋಂದಣಿ ಮಾಡಲು ಹಾಗೂ ದೇವಾಲಯ ಆಸ್ತಿ, ಚಿನ್ನಾಭರಣ ಸೇರಿದಂತೆ ಒಟ್ಟು ಸಂಪನ್ಮೂಲ ದಾಖಲಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ನಿಯೋಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ನೀಡಿದೆ. ಹಿಂದಿನ ಸರಕಾರದ ಮುಜರಾಯಿ ಇಲಾಖೆ ಸಚಿವರು ಅಸಂವಿಧಾನಿಕವಾಗಿ ಟಿಪ್ಪಣಿ ಹೊರಡಿಸಿದ್ದರು. ಇಂತಹ ಟಿಪ್ಪಣಿಗೆ ಕಾನೂನಿನಲ್ಲಿ ಯಾವುದೇ ಮಾನ್ಯತೆಯಿಲ್ಲ. ಇದನ್ನು ಈಗಿನ ಸರಕಾರ ಪರಿಗಣಿಸಿ ಇಲಾಖೆಗೆ ದೇವಾಲಯಗಳ ನೋಂದಣಿ ಮಾಡಬೇಕು ಎಂದರು.

Read More

ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲ್ಲೂಕು ಯರೇಕುಪ್ಪಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಷ್ಟಮಿ ಎಳೆ ಗೌರಿ ಪೂಜೆ ನೆರವೇರಿಸಲಾಯಿತು. ದಿವಂಗತ ಕಾಳಪ್ಪಜ್ಜ ಅಕ್ಕಾಚಾರಿ ಇವರು ಪೂಜಿಸುತ್ತಿದ್ದ ಅಷ್ಟಮಿ ಎಳೆ ಗೌರಿ ಪೂಜೆಯನ್ನು ಮಕ್ಕಳು ಮುಂದುವರಿಸಿದ್ದಾರೆ. ಈ ಹಬ್ಬದ ವಿಶೇಷವಾಗಿ ಪೂಜೆಯ ಜೊತೆಗೆ ಗೊಂಬೆಯಾಟದ ಗೊಂಬೆಯನ್ನು ಸಹ ಕೂರಿಸುತ್ತಾರೆ. ಈ ಗೊಂಬೆಗಳು, ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಪ್ರದರ್ಶನ ನೀಡಿ ಬಹುಮಾನ ಪಡೆದಿವೆ. ಈ ಬಾರಿ ಗೊಂಬೆ ಆಟ ಆಡಿಸುವರು ಇಲ್ಲದ ಕಾರಣ ಗೊಂಬೆಗಳನ್ನು ಇಟ್ಟು ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪೂಜೆಯಲ್ಲಿ ಶ್ರೀ ಮಾರುತಿ ಭಜನಾ ಸಂಘ ಇವರ ಭಜನಾ ಸೇವೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅಕ್ಕಾಚಾರಿ, ಚನ್ನವೀರಪ್ಪ ಅಕ್ಕಾಚಾರಿ, ನಾಗಪ್ಪ ಅಂಗಡಿ, ದ್ಯಾವಣ್ಣ ತೊಳಲಿ, ಹನುಮಪ್ಪ ಹೂರಕೇರಿ, ಮುಕುಂದಪ್ಪ ಯೋಗಿ, ಜನಾರ್ಧನ್ ಗೌಡ ಪಾಟೀಲ್ ಮತ್ತು ಊರಿನ ಎಲ್ಲಾ ಗ್ರಾಮಸ್ಥರು ಹಾಜರಿದ್ದರು. ವರದಿ: ಮಂಜು ಶ್ರವಣೂರು

Read More

ತುಮಕೂರು: ಜನತಾ ದರ್ಶನ ಕಾರ್ಯಕ್ರಮವು ಸರ್ಕಾರದ ಕಾರ್ಯಕ್ರಮವಾಗಿದ್ದು ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ ಎಂದು ನಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಅದರಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಜನತಾದಶಃ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನಾವು ಜನ ಪರವಾದ ಆಡಳಿತ ಕೊಡ್ತೆವೆ ಅಂತ ಹೇಳಿಕೊಂಡು ಬಂದಿದ್ದೇವೆ. ಅದೇ ರೀತಿ ನಮ್ಮ ಆಡಳಿತ ಚುರುಕಾಗಬೇಕು ಎಂದರು. ಹೆಚ್ಚಿನ ರೀತಿಯಲ್ಲಿ ಜನರಿಗೆ ಸ್ಪಂದನೆ ಮಾಡಬೇಕು ಎಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಕೂಡಾ ನಮ್ಮ ಸರ್ಕಾರ ಮಾಡಿದೆ. ಅದನ್ನ ಮತ್ತೆ ಪ್ರಾರಂಭ ಮಾಡಿದ್ದೆವೆ ಎಂದರು. ಜನರ ಅರ್ಜಿಗಳನ್ನ ತಗೊಂಡು ಸಮಸ್ಯೆಗಳು ಏನಿದೆ ಅದನ್ನ ಪರಿಹರಿಸಿ ಉತ್ತರ ಕೊಡ್ತಾರೆ. ಮೊದಲನೇಯದಾಗಿ ಇವತ್ತು ನಾವು ಪ್ರಾರಂಭ ಮಾಡ್ತಿದ್ದೇವೆ ಎಂದರು. ಇಡೀ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾರಂಭ ಮಾಡ್ತಾರೆ. ಬೆಂಗಳೂರಿನಲ್ಲಿ 30ನೇ ತಾರೀಖು ಮುಖ್ಯಮಂತ್ರಿಗಳು ಜನತಾ ದರ್ಶನವನ್ನ ಇಟ್ಟುಕೊಂಡಿದ್ದಾರೆ ಎಂದರು. ಲೋಕಾಸಭಾ ಚುನಾವಣೆಗೆ ಜಿಲ್ಲೆಗೆ…

Read More

ತುಮಕೂರು: ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ ಎಂದು ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್. ಶಾಸಕ ಸುರೇಶ್ ಬಾಬು ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಅಂತಾ ತೀರ್ಮಾನ ತಗೊಂಡಿದ್ದಾರೆ ಎಂದರು. ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಯಾವ ಯಾವ ಚುನಾವಣೆ ಹೊಂದಾಣಿಕೆ ಮಾಡ್ಕೊಳ್ತಾರೆ ಎಂಬುದನ್ನು ತಿರ್ಮಾನ ಮಾಡಿಲ್ಲ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಆಗುತ್ತೆ ಎಂದರು. ಮಾಧುಸ್ವಾಮಿ ಜೊತೆ ಕೈ ಜೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಕ್ಷ ಏನು ತೀರ್ಮಾನ ತಗೊಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು ಜೆ.ಡಿ.ಎಸ್.ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಪಕ್ಷದಲ್ಲೂ ಎಲ್ಲಾ ಸಮುದಾಯದವರೂ ಇದ್ದಾರೆ. ಎಲ್ಲಾ ಪಕ್ಷದಲ್ಲೂ ಮುಸ್ಲಿಂ ಇದ್ದಾರೆ. ಮುಸ್ಲಿಂ ಬರಿ ಕಾಂಗ್ರೆಸ್ ನಲ್ಲಿ ಮಾತ್ರ ಇಲ್ಲ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ…

Read More