Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನದ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಮಾಡಿರುವ ಕಾರ್ಯಕ್ರಮ ಸ್ವಾಗತಾರ್ಹವಾಗಿದ್ದು, ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉಡುಪಿ ಜಿಲ್ಲೆಯನ್ನು ಮಾತ್ರ ನಿರಂತರವಾಗಿ ಕಡೆಗಣಿಸುತ್ತಾ ಬಜೆಟ್ ಅನುದಾನದಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಜಿಲ್ಲೆಯಲ್ಲಿ 5 ಕ್ಕೆ 5 ಬಿಜೆಪಿ ಶಾಸಕರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹತಾಶೆಗೊಂಡ ರಾಜ್ಯ ಸರ್ಕಾರ ಶಾಸಕರು ಸಲ್ಲಿಸಿದ ಯಾವುದೇ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೇವೆ ಸಮಸ್ಯೆ, ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅನುದಾನ ಬಿಡುಗಡೆ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಬಿಡುಗಡೆ ಮಾಡುವಲ್ಲಿ ತಾರತಮ್ಯ, ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ ಸಹಿತ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡದೇ ಸಾರ್ವಜನಿಕರ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೀರ ಅನಾನುಕೂಲತೆಯಿಂದ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ನೀಡುತ್ತಿದ್ದ ಅನುದಾನದ ಬಹುಪಾಲನ್ನು ಮೊಟಕುಗೊಳಿಸಿ, ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ…
ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೀರಿಗಾಗಿ ನಾವು ಬಡಿದಾಡುತ್ತಾ ಇದ್ದೇವೆ. ಆದರೆ ನಿಮ್ಮ ಬಳಿ ಮಾಹಿತಿಯೇ ಇಲ್ಲ. ಎಷ್ಟು ಶುದ್ಧ ನೀರು ಪೂರೈಕೆ ಘಟಕಗಳು (RO) ಗಳು ಇವೆ. ನಿತ್ಯ ಎಷ್ಟು ನೀರು ಪೂರೈಕೆ ಆಗುತ್ತಿದೆ. ಎಷ್ಟು ಜನ ಬಳಸುತ್ತಿದ್ದಾರೆ ಎಂಬ ವಿವರವೇ ನಿಮ್ಮ ಬಳಿ ಇಲ್ಲ. ಸಭೆಗೆ ಬರುವ ಮುನ್ನ ಸಿದ್ಧತೆಯನ್ನೇ ಮಾಡಿಕೊಂಡು ಬಂದಿಲ್ಲ. ಸಭೆಯ ಗಂಭೀರತೆಯೇ ನಿಮಗೆ ಅರ್ಥವಾಗಿಲ್ಲ. “ಪ್ರತಿ ಕಚೇರಿಯಲ್ಲಿ ಏನು…
ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯು ಆಯೋಜಿಸಿದ್ದ 2023-24 ನೇ ಸಾಲಿನ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ಜಿಲ್ಲಾ ವರಿಷ್ಠಾಧಿಕಾರಿಯಾದ ಅಶೋಕ್ ಕೆ. ವಿ. ರವರು ವಹಿಸಿಕೊಂಡಿದ್ದರು.ಮುಖ್ಯ ಅತಿಥಿಯಾಗಿ ತುಮಕೂರು ನಗರಸಭೆಯ ಆಯುಕ್ತೆಯಾದ ಅಶ್ವಿಜಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಹತ್ತು ದಿನಗಳ ತರಬೇತಿಯಲ್ಲಿ .22″ ರೈಫಲ್ ನಲ್ಲಿ ಗುರಿ ಅಭ್ಯಾಸ ಮಾಡಿ ಆಯುಧ ನಿರ್ವಹಣೆಯ ತರಬೇತಿಯನ್ನು ಶಿಬಿರಾರ್ಥಿಗಳು ಯಶಸ್ವಿಯಾಗಿ ಪೂರೈಸಿದರು.ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ನಾಗರೀಕರು, ಯುವಕರು,ಮಹಿಳೆಯರು ಶಿಬಿರದಲ್ಲಿ ಹೆಚ್ಚಾಗಿ ಪಾಲ್ಗೊಂಡಿದ್ದರು. ಭಾನುವಾರ ತುಮಕೂರಿನ ಮಂದಾರಗಿರಿ ಬೆಟ್ಟದ ನಡುವಲ್ಲಿ ಗುಂಡಿನ ಸಪ್ಪಳದೊಂದಿಗೆ ಫೈರಿಂಗ್ ಕ್ಯಾಂಪ್ ಆಯೋಜಿಸಿ ನಂತರ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಪಿ. ಅಶೋಕ್ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಅಪರಾಧ ಪ್ರಕರಣಗಳನ್ನು ಕಡಿವಾಣ ಹಾಕಲು ಪ್ರತಿಯೊಬ್ಬರೂ ಸಹಕರಿಸಬೇಕು, ಜೊತೆಗೆ ಸಾರ್ವಜನಿಕರು ತಮ್ಮ ಮನೆ ಸುತ್ತ ಮುತ್ತಲಿನ ಪ್ರದೇಶದಲ್ಲಿ…
ಭಾರತದ ಆಧಾರ್ ವಿಶ್ವಾಸಾರ್ಹ ದಾಖಲೆಯಲ್ಲ ಎಂದು ಅಂತಾರಾಷ್ಟ್ರೀಯ ರೇಟಿಂಗ್ ಏಜೆನ್ಸಿ ಮೂಡೀಸ್ ಹೇಳಿದೆ. ಮೂಡೀಸ್ ಭದ್ರತೆ ಮತ್ತು ಗೌಪ್ಯತೆ-ಸಂಬಂಧಿತ ಅಂಶಗಳನ್ನು ಮೊದಲು ಇರಿಸುತ್ತದೆ. ಮೂಡೀಸ್ ಕೂಡ ಆಧಾರ್ ನ ಬಯೋಮೆಟ್ರಿಕ್ ವಿಶ್ವಾಸಾರ್ಹತೆಯನ್ನು 100 ಪ್ರತಿಶತವಲ್ಲ ಎಂದು ಟೀಕಿಸಿದೆ. ಆಧಾರ್ ನ್ನು ಅಂತಾರಾಷ್ಟ್ರೀಯವಾಗಿ ಪ್ರಾಥಮಿಕ ಗುರುತಿನ ದಾಖಲೆಯನ್ನಾಗಿಸುವುದು ಭಾರತದ ಬಹುಕಾಲದ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಟೀಕೆಯೊಂದಿಗೆ ಮೂಡಿ ಬಂದಿದೆ. ಬಿಸಿ ಮತ್ತು ಆರ್ದ್ರ ವಾತಾವರಣವು ಬಯೋಮೆಟ್ರಿಕ್ ಡೇಟಾದಲ್ಲಿ ದೋಷಗಳಿಗೆ ಕಾರಣವಾಗುತ್ತದೆ ಎಂದು ಮೂಡೀಸ್ ಗಮನಸೆಳೆದಿದೆ. ಈ ಸಣ್ಣಪುಟ್ಟ ದೋಷಗಳು ಸೇವಾ ನಿರಾಕರಣೆಗೆ ಕಾರಣವಾಗಿವೆ ಎಂದೂ ಮೂಡೀಸ್ ಆರೋಪಿಸಿದೆ. ಸಂಬಳ ಪಡೆಯುವ ಕಾರ್ಮಿಕರಿಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಬದಲಾಯಿಸುವ ಗಡುವನ್ನು ಸರ್ಕಾರ ಐದನೇ ಬಾರಿಗೆ ವಿಸ್ತರಿಸಿದೆ. ಈ ಗಡುವನ್ನು ಡಿಸೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಟೀಕೆಯೂ ಮೂಡಿ ಬಂದಿದೆ.
ಹ್ಯಾಂಗ್ಝೌ ಏಷ್ಯನ್ ಗೇಮ್ಸ್ನಲ್ಲಿ ಭಾರತ ಮೊದಲ ಚಿನ್ನ ಗೆದ್ದಿದ್ದುರುದ್ರಮಶ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡ 10 ಮೀಟರ್ ಏರ್ ರೈಫಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪಾಟೀಲ್ ಮತ್ತು ತೋಮರ್ ವೈಯಕ್ತಿಕ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಪನ್ವಾರ್ ಕೂಡ ಟಾಪ್ 8 ರಲ್ಲಿ ಸ್ಥಾನ ಪಡೆದರು, ಆದರೆ ಎನ್ಒಸಿಯಿಂದ ಇಬ್ಬರು ಮಾತ್ರ ಫೈನಲ್ನಲ್ಲಿ ಶೂಟ್ ಮಾಡಬಹುದು. 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ವಿಶ್ವದಾಖಲೆಯೊಂದಿಗೆ ತಂಡದ ಸಾಧನೆಯಾಗಿದೆ. ಭಾರತ ತಂಡ 1893.7 ಅಂಕ ಗಳಿಸಿದೆ. ಕೊರಿಯಾ ಎರಡನೇ ಮತ್ತು ಚೀನಾ ಮೂರನೇ ಸ್ಥಾನ ಪಡೆದಿವೆ. ರೋಯಿಂಗ್ ನಲ್ಲಿ ಭಾರತವು ಏಷ್ಯನ್ ಗೇಮ್ಸ್ನಲ್ಲಿ ಮತ್ತೊಂದು ಪದಕವನ್ನು ಗೆದ್ದುಕೊಂಡಿತು, ಪುರುಷರ ನಾಲ್ಕರಲ್ಲಿ ಕಂಚು. ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನಿತ್ ಕುಮಾರ್ ಮತ್ತು ಆಶಿಶ್ ಪದಕ ಗೆದ್ದರು.
ಬೆಂಗಳೂರು : ಪಾರ್ಸೆಲ್ ಮೂಲಕ ಡ್ರಗ್ಸ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದರಿಂದ ವೈಟ್ಫೀಲ್ಡ್ ವಿಭಾಗದ ಪೊಲೀಸರು, ಹಲವು ಕಂಪನಿಗಳ ಗೋದಾಮುಗಳಲ್ಲಿ ಶೋಧ ಮುಂದುವರಿಸಲಾಗಿದೆ. ಕೊರಿಯರ್ ಹಾಗೂ ಪಾರ್ಸೆಲ್ನಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದಬಗ್ಗೆ ಮಾಹಿತಿ ಇತ್ತು. ಹೀಗಾಗಿ, ಹಲವು ಕಂಪನಿಗಳಿಗೆ ಸೇರಿದ್ದ 10 ಗೋದಾಮುಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಬೆಂಗಳೂರು : ವೀಲಿಂಗ್ ಮಾಡುವ ಪುಂಡರನ್ನು ರೌಡಿಗಳ ರೀತಿಯಲ್ಲೇ ಪರಿಗಣಿಸಿ ಕಠಿಣ ಕ್ರಮ ಜರುಗಿಸಲು ಚಿಂತಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ. ಎನ್. ಅನುಚೇತ್ ಹೇಳಿದ್ದಾರೆ. ಅಪ್ರಾಪ್ತರು ವೀಲಿಂಗ್ ಮಾಡಿ ಸಿಕ್ಕಿಬಿದ್ದರೆ ಅವರ ಪಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಸೈಲೆನ್ಸರ್ಗಳಲ್ಲಿ ಹೆಚ್ಚಿನ ಶಬ್ದ ಬರುವಂತೆ, ಕರ್ಕಶ ಧ್ವನಿಗಳನ್ನು ವಾಹನಗಳಲ್ಲಿ ಅಳವಡಿಸಿ ನವೀಕರಣ ಗೊಳಿಸುವ ಗ್ಯಾರೇಜ್ಗಳ ಮೇಲೆ ಕಣ್ಣಿಡಲಾಗಿದೆ. ಗ್ಯಾರೇಜ್ ಮಾಲೀಕರಿಗೂ ಬಿಸಿ ಮುಟ್ಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ನಡೆದಿದೆ. ಕೃತ್ಯ ಸಂಬಂಧ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಕ ಪ್ರಾಣಿ ಜೊತೆ ಸಾರ್ವಜನಿಕ ಸ್ಥಳದಲ್ಲಿ ಅಸಹಜ ಲೈಗಿಂಕ ಕ್ರಿಯೆ ನಡೆಸಿದ ಮಂಡ್ಯ ಮೂಲದ ಮರಿಗೌಡ ಬಂಧಿತ ಆರೋಪಿಯಾಗಿದ್ದಾನೆ. ಪ್ರಾಣಿ ಕಲ್ಯಾಣ ಅಧಿಕಾರಿ ತೇಜೇಶ್ವರ್ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ತಿಲಕ್ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಆಂಟಿ’ ಎಂದು ಕರೆದಿದ್ದರಿಂದ ಕೋಪಗೊಂಡ ಮಹಿಳೆಯೊಬ್ಬರು ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಕಪಾಳಕ್ಕೆ ಹೊಡೆದು ಜೀವ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಮಲ್ಲೇಶ್ವರ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಎಟಿಎಂ ಘಟಕದ ಭದ್ರತಾ ಸಿಬ್ಬಂದಿಯಾಗಿರುವ 60 ವರ್ಷದ ವೃದ್ಧ, ಹಲ್ಲೆ ಹಾಗೂ ಜೀವ ಬೆದರಿಕೆ ಬಗ್ಗೆ ಇತ್ತೀಚೆಗೆ ದೂರು ನೀಡಿದ್ದಾರೆ. ಅಪರಿಚಿತ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು : ಕಂಟೋನ್ಮಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಜಾಗದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿ ಶಾಬಾಜ್ ಖಾನ್ನನ್ನು (26) ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಜೆ. ಸಿ. ನಗರ ಮುನಿರೆಡ್ಡಿಪಾಳ್ಯದ ನಿವಾಸಿ ಶಬಾಜ್ ಖಾನ್, ಹಲವು ತಿಂಗಳಿನಿಂದ ಗಾಂಜಾ ಮಾರುತ್ತಿದ್ದ. ಸೆ. 22ರಂದು ಬೆಳಿಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 1 ಕೆ. ಜಿ 130 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.