Author: admin

ತುಮಕೂರು: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆಯನ್ನು ಖಂಡಿಸಿ ಹತ್ಯೆಯಾದ ನೊಂದ ಜೀವಕ್ಕೆ ಶಾಂತಿ ಸಿಗಲೆಂದು ಹಾಗೂ ಆಕೆಯನ್ನು ಹತ್ಯೆ ಮಾಡಿದ ಆಕೆಯ ಹೆತ್ತ ತಂದೆಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಇಂದು ತುಮಕೂರು ಜಿಲ್ಲಾ ಅಂಬೇಡ್ಕರ್ ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ಮನವಿಯನ್ನು ಸಲ್ಲಿಸಲಾಯಿತು. ಮನವಿ ಪತ್ರವನ್ನು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಅಂಬೇಡ್ಕರ್ ಸೇನೆಯ ತುಮಕೂರು ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ. ಸುಮಾ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 78 ವರ್ಷಗಳು ಕಳೆದರೂ ಸಹ ಜಾತಿ ಎಂಬ ಪಿಡುಗು ಇನ್ನೂ ಜೀವಂತವಾಗಿಯೇ ಉಳಿದಿದೆ, ನಮ್ಮ ದೇಶದ ಕಾನೂನಿಗೆ ಶಕ್ತಿ ಕುಂದಿದೆಯಾ ಎಂಬ ಅನುಮಾನಗಳು ಬರುತ್ತಿವೆ, ಏಕೆಂದರೆ ಜನ್ಮ ಕೊಟ್ಟ ತಂದೆಯೇ 7 ತಿಂಗಳ ಗರ್ಭಿಣಿ ಎಂಬುದನ್ನೂ ಸಹ ನೋಡದೇ ಕೇವಲ ತಮ್ಮ ಮರ್ಯಾದೆಗೋಸ್ಕರ ತಾನೇ ಜನ್ಮ ಕೊಟ್ಟ ಮಗಳನ್ನು ಕೊಂದಿರುವುದು ಅಮಾನವೀಯ ಎಂದರು ಮನವಿ ಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತುಮಕೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಕೆ.…

Read More

ಚಿಕ್ಕೋಡಿ: ಪ್ರೀತಿಸಿ ಮದುವೆಯಾಗಿ ಸುಂದರ ಸಂಸಾರದ ಕನಸು ಕಂಡಿದ್ದ ದಂಪತಿಯ ಜೀವನದಲ್ಲಿ ಕೌಟುಂಬಿಕ ಕಲಹ ವಿಧಿಯಾಟವಾಡಿದೆ. ಪತ್ನಿ ನೇಣಿಗೆ ಶರಣಾದ ಬೆನ್ನಲ್ಲೇ, ಆಘಾತಕ್ಕೊಳಗಾದ ಪತಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ನಾಗರಾಳ ಗ್ರಾಮದ ಉಮಾಶ್ರೀ (24) ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು ಒಂದೂವರೆ ವರ್ಷದ ಹಿಂದೆ ಲಗಮಣ್ಣ ಹೆಗ್ಗನ್ನವರ್ (27) ಎಂಬುವವರನ್ನು ಉಮಾಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಸಂಬಂಧಿಕರಾಗಿದ್ದರಿಂದ ಮನೆಯವರು ಒಪ್ಪಿಗೆ ನೀಡಿ ವಿವಾಹ ಮಾಡಿಕೊಟ್ಟಿದ್ದರು. ಆದರೆ, ಇತ್ತೀಚಿನ ಕೆಲವು ದಿನಗಳಿಂದ ದಂಪತಿಗಳ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎನ್ನಲಾಗಿದೆ. ಪತ್ನಿಯ ಸಾವಿನ ಬೆನ್ನಲ್ಲೇ ಪತಿಯ ಆತ್ಮಹತ್ಯೆ ಯತ್ನ: ಸೋಮವಾರ ರಾತ್ರಿ ಉಮಾಶ್ರೀ ನೇಣು ಹಾಕಿಕೊಂಡಿರುವುದನ್ನು ಕಂಡ ಪತಿ ಲಗಮಣ್ಣ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಪತ್ನಿಯ ಸಾವು ನೋಡಿ ನೊಂದ ಅವರು ಕೂಡ ತಕ್ಷಣವೇ ವಿಷ ಸೇವಿಸಿ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾರೆ.…

Read More

ತುರುವೇಕೆರೆ: ದೇಶ ಮತ್ತು ರಾಜ್ಯ ಕಂಡ ಧೈರ್ಯವಂತ, ಪ್ರಾಮಾಣಿಕ ಹಾಗೂ ದಕ್ಷ IPS ಅಧಿಕಾರಿಗಳಲ್ಲಿ ಒಬ್ಬರಾದ ದಿ.ಡಾ.ಕೆ.ಮಧುಕರ್ ಶೆಟ್ಟಿ ಅವರ ಪುಣ್ಯತಿಥಿಯ ಅಂಗವಾಗಿ, ತುರುವೇಕೆರೆ ಪೊಲೀಸ್ ಠಾಣೆಗೆ ಅವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿ, ಅವರನ್ನು ಪೊಲೀಸ್ ಇಲಾಖೆಗೆ ಆದರ್ಶಪ್ರಾಯ ವ್ಯಕ್ತಿಯಾಗಿ ಸ್ಥಾಪಿಸುವ ಹಾಗೂ ಪೊಲೀಸರಲ್ಲಿ ಕರ್ತವ್ಯಪ್ರಜ್ಞೆ ಮತ್ತು ನೈತಿಕತೆ ಬಲಪಡಿಸುವ ಉದ್ದೇಶದ ಅಭಿಯಾನವನ್ನು ಕೆ ಆರ್ ಎಸ್ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ರವರ ನೇತೃತ್ವದಲ್ಲಿ ನಡೆಸಲಾಯಿತು. ಈ ಅಭಿಯಾನವನ್ನು ಇಡೀ ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ KRS ಪಕ್ಷದ ಕಾರ್ಯಕರ್ತರು ಕೈಗೊಂಡಿದ್ದು, ರಾಜ್ಯದ ಪೊಲೀಸ್ ಸಿಬ್ಬಂದಿಯಲ್ಲಿ ಜಾಗೃತಿ ಮತ್ತು ಸ್ಪೂರ್ತಿ ಮೂಡಿಸುವ ಪ್ರಯತ್ನವಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟಿರುವುದು, ಕೆಲವೆಡೆ ಪೊಲೀಸರೇ ಅಕ್ರಮಗಳಲ್ಲಿ ಭಾಗಿಯಾಗುತ್ತಿರುವುದು ಹಾಗೂ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗುತ್ತಿರುವುದು ಅತ್ಯಂತ ದುರಾದೃಷ್ಟಕರ ಮತ್ತು ಶೋಚನೀಯ ಸಂಗತಿಯಾಗಿದ್ದು, ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಡಾ.…

Read More

ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ರಸ್ತೆಯ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನೂರಾರು ವಿದ್ಯಾರ್ಥಿಗಳು ಕೆಎಸ್ ಆರ್‌ ಟಿಸಿ ಬಸ್ಸುಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಶಾಲಾ-ಕಾಲೇಜುಗಳಿಗೆ ತೆರಳಲು ಸಕಾಲಕ್ಕೆ ಬಸ್ ಸೌಲಭ್ಯ ಇಲ್ಲದಿರುವುದನ್ನು ಖಂಡಿಸಿ, ಜೆಡಿಎಸ್ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಹೃತ್ವಿಕ್ ಗೌಡ ಅವರ ನೇತೃತ್ವದಲ್ಲಿ ಈ ಹೋರಾಟ ನಡೆಯಿತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಕಿಡಿ: ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹೃತ್ವಿಕ್ ಗೌಡ, “ಕಳೆದ ಒಂದು ವರ್ಷದಿಂದ ವಿದ್ಯಾರ್ಥಿಗಳು ಬಸ್ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಳಿಗ್ಗೆ ಕಾಲೇಜಿಗೆ ಬರಲು ಮತ್ತು ಸಂಜೆ ಗ್ರಾಮಗಳಿಗೆ ಮರಳಲು ಸರಿಯಾದ ಸಮಯಕ್ಕೆ ಬಸ್ಸುಗಳಿಲ್ಲ. ಈ ಬಗ್ಗೆ ಡಿಪೋ ಮ್ಯಾನೇಜರ್‌ಗೆ ಹಲವಾರು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಮನವಿ ನೀಡಿದ ಎರಡು ದಿನ ಮಾತ್ರ ಸರಿಯಾಗಿ ಬಸ್ ಬಿಟ್ಟು, ನಂತರ ಮತ್ತೆ ಹಳೆ ಚಾಳಿ ಮುಂದುವರಿಸುತ್ತಾರೆ. ಅಧಿಕಾರಿಗಳ ಈ ಉದಾಸೀನತೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ,” ಎಂದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಮತ್ತು…

Read More

ಸರಗೂರು:  ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಾ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯದ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಎಂದರು. ಪಟ್ಟಣ ಪ್ರವಾಸಿ ಮಂದಿರದಲ್ಲಿ ಸೋಮವಾರ ದಂದು 140ನೇ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನದ ಅಂಗವಾಗಿ ರಾಜ್ಯ ಹಾಗೂ ಜಿಲ್ಲಾ  ಅಧ್ಯಕ್ಷರ ಆದೇಶ ಮೇರೆಗೆ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ಹಾಗೂ ಸರಗೂರು ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ರವರ ನೇತೃತ್ವದಲ್ಲಿ ಹಿರಿಯರಿಗೆ ಸನ್ಮಾನಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ರಾಷ್ಟ್ರನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದರು. ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ…

Read More

ಸರಗೂರು:  ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ’ ಎಂದು ಮಾಜಿ ರಾಜ್ಯ ನಿರ್ದೇಶಕ ಹಾಗೂ ಯುವ ಸಬಲೀಕರಣ ಇಲಾಖೆ ಎಂ.ಎಂ.ನಟರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ದಂದು ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಹದೊಂದಿಗೆ ಹಮ್ಮಿಕೊಂಡಿದ್ದ ವಿಶ್ವ ಮಾನವ ಕುವೆಂಪು ರವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಾತಿ–ಮತಗಳನ್ನು ಬಹಿಷ್ಕರಿಸುವ ಬಸವ, ಬುದ್ಧ, ಅಂಬೇಡ್ಕರ್ ಅವರ ವಿಚಾರಗಳನ್ನು ಹೊಸ ರೂಪದಲ್ಲಿ ಕುವೆಂಪು ಅವರು ನಾಡಿಗೆ ಪರಿಚಯಿಸಿದ್ದಾರೆ’ ಎಂದು ನುಡಿದರು. ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ…

Read More

ಬೆಂಗಳೂರು: ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಾಮಗಾರಿಗಳ ವಿಳಂಬವನ್ನು ತಪ್ಪಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹಣ ಬಿಡುಗಡೆ ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಅಂಕಿಅಂಶಗಳು ಮತ್ತು ಮಾಹಿತಿಗಳು ಇಲ್ಲಿವೆ: 2023-24ನೇ ಸಾಲು: ಈ ಅವಧಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ. 25 ಕೋಟಿಯಂತೆ ಒಟ್ಟು ರೂ. 3,510 ಕೋಟಿ ಅನುಮೋದಿಸಲಾಗಿತ್ತು. ಇದರಲ್ಲಿ ಶೇ. 58 ರಷ್ಟು (ರೂ. 2,040 ಕೋಟಿ ಮೌಲ್ಯದ) ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಬಾಕಿ ಅನುದಾನ: ಬೆಳಗಾವಿ ಅಧಿವೇಶನದ ವೇಳೆ ರೂ. 1,205 ಕೋಟಿ ಬಿಡುಗಡೆಗೆ ಆದೇಶ ನೀಡಲಾಗಿದ್ದು, ಮುಗಿದಿರುವ ಕೆಲಸಗಳ ಬಿಲ್ಲುಗಳನ್ನು ಕೂಡಲೇ ಪಾವತಿಸಲು ಸೂಚಿಸಲಾಗಿದೆ. 2024-25ನೇ ಸಾಲು: ಮಳೆ ಹಾನಿ ರಸ್ತೆಗಳ ದುರಸ್ತಿಗಾಗಿ ರೂ. 1,890 ಕೋಟಿ ಅನುಮೋದಿಸಲಾಗಿದ್ದು, ಈಗಾಗಲೇ ರೂ. 250…

Read More

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ದೊಡ್ಡ ತಿರುವು ಕಂಡುಬಂದಿದೆ. ದೊಡ್ಮನೆಯಿಂದ ಹೊರಬಂದಿರುವ ಸ್ಪರ್ಧಿ ಮಾಳು ನಿಪನಾಳ್ ಅವರು ತಮ್ಮ ಸಹ-ಸ್ಪರ್ಧಿ ಸ್ಪಂದನಾ ಸೋಮಣ್ಣ ಅವರ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಪಂದನಾ ಸೋಮಣ್ಣ ಅವರು ಮನೆಯಲ್ಲಿ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ವೀಕ್ಷಕರಲ್ಲಿ ಮತ್ತು ಹೊರಬಂದ ಸ್ಪರ್ಧಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಾಳು ನಿಪನಾಳ್ ಅವರು ಸಂದರ್ಶನವೊಂದರಲ್ಲಿ ಮಾತನಾಡಿ, “ಸ್ಪಂದನಾ ಸೋಮಣ್ಣ ಅವರು ಮನೆಯಲ್ಲಿ ಏನೇನೂ ಮಾಡುತ್ತಿಲ್ಲ. ಅವರು ಕೇವಲ ಕುಳಿತುಕೊಳ್ಳುತ್ತಾರೆ ಮತ್ತು ಮಲಗುತ್ತಾರೆ. ಅಂತಹವರು ಇನ್ನೂ ಮನೆಯ ಒಳಗಿದ್ದಾರೆ ಎನ್ನುವುದೇ ಆಶ್ಚರ್ಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಪಂದನಾ ಅವರು ಟಾಸ್ಕ್‌ ಗಳಲ್ಲಿ ಸರಿಯಾಗಿ ಭಾಗವಹಿಸುತ್ತಿಲ್ಲ ಮತ್ತು ಮನೆಯ ಕೆಲಸಗಳಲ್ಲೂ ಆಲಸ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. “ಅವರಿಗಿಂತ ಚೆನ್ನಾಗಿ ಆಡುವವರು ಮನೆಯಿಂದ ಹೊರಬರುತ್ತಿದ್ದಾರೆ, ಆದರೆ ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ?” ಎಂದು ಮಾಳು ಪ್ರಶ್ನಿಸಿದ್ದಾರೆ. ದೊಡ್ಮನೆಯಲ್ಲಿ ಸ್ಪಂದನಾ ಅವರ ‘ಸೈಲೆಂಟ್’…

Read More

ಜಮೈಕಾದಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 158 ಮಿಲಿಯನ್ ಡಾಲರ್ (ಸುಮಾರು 14,190 ಕೋಟಿ ರೂಪಾಯಿ) ಲಾಟರಿ ಗೆದ್ದಿದ್ದು, ಈ ಹಣವನ್ನು ಸ್ವೀಕರಿಸಲು ಆತ ಅನುಸರಿಸಿದ ಮಾರ್ಗ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ. ತಾನು ಇಷ್ಟು ದೊಡ್ಡ ಮೊತ್ತದ ಹಣ ಗೆದ್ದಿರುವ ವಿಚಾರ ತನ್ನ ಕುಟುಂಬಸ್ಥರಿಗಾಗಲಿ ಅಥವಾ ಸ್ನೇಹಿತರಿಗಾಗಲಿ ತಿಳಿಯಬಾರದು ಎಂಬ ಕಾರಣಕ್ಕೆ ಆತ ‘ಸ್ಕ್ರೀಮ್’ (Scream) ಸಿನೆಮಾದ ಭೀಕರ ಮುಖವಾಡ ಧರಿಸಿ ಹಣವನ್ನು ಪಡೆದಿದ್ದಾನೆ. ಕ್ಯಾಂಪೆಬೆಲ್ ಎಂಬ ಹೆಸರಿನ ಈ ವ್ಯಕ್ತಿ, ಜಮೈಕಾದ ಸ್ಪ್ಯಾನಿಷ್ ಕೋರ್ಟ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಆಯೋಜಕರಿಂದ ಚೆಕ್ ಪಡೆದರು. ಲಾಟರಿ ಗೆದ್ದ ನಂತರದ 54 ವಾರಗಳ ಕಾಲ ತಾನು ತೀವ್ರ ಭಯ ಮತ್ತು ಒತ್ತಡದಲ್ಲಿ ಬದುಕಿದ್ದಾಗಿ ಅವರು ತಿಳಿಸಿದ್ದಾರೆ. “ನನಗೆ ಹಣ ಸಿಕ್ಕಿದೆ ಎಂದು ಗೊತ್ತಾದರೆ ಎಲ್ಲರೂ ಸಹಾಯ ಕೇಳಲು ಬರುತ್ತಾರೆ ಅಥವಾ ಹಣಕ್ಕಾಗಿ ನನ್ನ ಜೀವಕ್ಕೆ ಅಪಾಯವಾಗಬಹುದು ಎಂಬ ಭಯವಿತ್ತು. ಹೀಗಾಗಿ ನನ್ನ ಗುರುತನ್ನು ಗೌಪ್ಯವಾಗಿಡಲು ಈ ನಿರ್ಧಾರ ಮಾಡಿದೆ” ಎಂದು ಅವರು ಹೇಳಿದ್ದಾರೆ. ಸಾಮಾನ್ಯವಾಗಿ ಲಾಟರಿ…

Read More

ತುಮಕೂರು: ಗೆಲುವು ಹವ್ಯಾಸವಾಗಬೇಕು, ಗೆಲ್ಲುವುದನ್ನೇ ಅಭ್ಯಾಸ ಮಾಡಿಕೊಳ್ಳಬೇಕು. ಆತ್ಮವಿಶ್ವಾಸ, ಛಲ, ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್‌ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು. ಶನಿವಾರ ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು, ಒಂದು ಕೆಲಸವನ್ನು ಹೇಗೆ ಬೇಕಾದರೂ ಮಾಡಿ ಮುಗಿಸಬಹುದು. ಆದರೆ ಅದನ್ನು ಹೀಗೆ ಮಾಡಿ ಮುಗಿಸಬೇಕು ಎಂದು ತಿಳಿದು ಮುಗಿಸುವುದು ಮುಖ್ಯ. ಅಂತಹ ಚಾಣಾಕ್ಷತನ, ಬುದ್ಧಿವಂತಿಕೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಅವಕಾಶಗಳಿಗಾಗಿ ಕಾಯಬಾರದು ಸಿಗುವ ಸಣ್ಣ ಅವಕಾಶವನ್ನೂ ಬಿಡದೆ ಬಳಸಿಕೊಂಡು ಯಶಸ್ವಿಯಾದರೆ ದೊಡ್ಡ ಅವಕಾಶಗಳಿಗೆ ನಾಂದಿಯಾಗುತ್ತದೆ. ಈಗ ನಿಮ್ಮ ಮುಂದಿನ ಗುರಿ ಚೆನ್ನಾಗಿ ಓದಿ ಉತ್ತಮ ಅಂಕ ಪಡೆಯುವುದು. ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನೂರಕ್ಕೆ ನೂರು ಅಂಕ ಪಡೆಯಬೇಕು. ಅಂತಹ ಫಲಿತಾಂಶ ಪಡೆದರೆ ಶಾಲೆಯಲ್ಲಿ ಮತ್ತೊಂದು ಕಾರ್ಯಕ್ರಮ ಮಾಡೋಣ ಎಂದರು. ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು…

Read More