Author: admin

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಧರ್ಮಸ್ಥಳ ಗ್ರಾಮದ ಸಂಘ ಸಂಸ್ಥೆಯ ಮುಖಂಡರು, ದೇವಸ್ಥಾನ ಚರ್ಚ್, ಮಸೀದಿ ಮುಖಂಡರುಗಳು, ಊರಿನ ಹಿರಿಯ ಪ್ರಮುಖರು, ನಿವೃತ್ತ ನೌಕರರು, ಅಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘದ ಒಟ್ಟು ಸೇರಿ ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಸಮಾಲೋಚನ ಸಭೆ ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ನಿರ್ದೇಶನದಂತೆ ಕರ್ನಾಟಕದ ಪ್ರಮುಖ 5 ನಗರಗಳನ್ನು ಆಯ್ಕೆ ಮಾಡಿ, ಕಲಬುರ್ಗಿ, ಬೀದರ್, ಮೈಸೂರು, ಮಂಗಳೂರು, ಧರ್ಮಸ್ಥಳ ಸೇರಿದಂತೆಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯದಲ್ಲಿ ಆಯ್ಕೆ ಮಾಡಿ ಸೂಚನೆ ನೀಡಿರುವುದರಿಂದ ಸದರಿ ಸರಕಾರದ ಸುತ್ತೋಲೆಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನ ಅಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ಗಳು, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟುಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನುಗಳು, ಅಂಟಿಕೊಳ್ಳುವ ಫಿಲ್ಮಗಳು, ಎಲ್ಲಾ ದಪ್ಪದ ಡೈನಿಂಗ್…

Read More

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ನೀಡಿದೆ. 2023-24ನೇ ಸಾಲಿನಿಂದಲೇ ಬೋರ್ಡ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.

Read More

ಬೆಂಗಳೂರಿನ ಗಾಣಕಲ್ ರಸ್ತೆಯಲ್ಲಿ ನೆನ್ನೆ ಬೆಳಗ್ಗೆ ಹಿಟ್ ಆಂಡ್ ರನ್ ಗೆ ಓರ್ವ ಬೈಕ್ ಸವಾರ ಬಲಿಯಾಗಿದ್ದಾರೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್‌ ನಿಂದ ಬೈಕ್‌ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ. ಕಾರು ಡಿಕ್ಕಿ ಪರಿಣಾಮ ಬೈಕ್ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ

Read More

19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪದಕ ಬೇಟೆ ಆರಂಭಿಸಿದೆ. ರೋಯಿಂಗ್ ಮತ್ತು ಶೂಟಿಂಗ್‌ ನಲ್ಲಿ ಭಾರತ ಪದಕ ಗೆದ್ದಿದೆ. ರೋಯಿಂಗ್‌ ನಲ್ಲಿ ಅರ್ಜುನ್ ಲಾಲ್ ಮತ್ತು ಅರವಿಂದ್ ಸಿಂಗ್ ಬೆಳ್ಳಿ ಗೆದ್ದರು. ಎರಡನೇ ಪದಕ ಮಹಿಳೆಯರ ಶೂಟಿಂಗ್‌ನಲ್ಲಿ. 10 ಮೀಟರ್ ರೈಫಲ್‌ನಲ್ಲಿ ಮೆಹುಲಿ ಘೋಷ್ ತಂಡ ಬೆಳ್ಳಿ ಪದಕ ಜಯಿಸಿದೆ. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕಿ ಮೈತ್ರಿಯಲ್ಲಿದ್ದಾರೆ. ಈ ವಿಭಾಗದಲ್ಲಿ ಚೀನಾ ಚಿನ್ನವನ್ನು ತನ್ನದಾಗಿಸಿಕೊಂಡಿತು. ಮಂಗೋಲಿಯಾ ಕೂಡ ಕಂಚು ಗೆದ್ದಿತ್ತು. ಅಕ್ಟೋಬರ್ 8ರವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ ನಲ್ಲಿ 45 ದೇಶಗಳ ಸುಮಾರು 12,000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 40 ಕ್ರೀಡೆಗಳಲ್ಲಿ 481 ಪದಕಗಳಿವೆ. ಈ ಪೈಕಿ 39ರಲ್ಲಿ ಭಾರತ ಸ್ಪರ್ಧಿಸುತ್ತಿದೆ. 2018 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 16 ಚಿನ್ನ ಮತ್ತು 23 ಬೆಳ್ಳಿ ಸೇರಿದಂತೆ 70 ಪದಕಗಳನ್ನು ಗೆದ್ದಿದೆ. ಭಾರತ ತಂಡದಲ್ಲಿ 655 ಸದಸ್ಯರಿದ್ದಾರೆ. ಏಷ್ಯಾನ್  ಇತಿಹಾಸದಲ್ಲಿ ಇದು ಭಾರತದ ಅತಿದೊಡ್ಡ ತುಕಡಿಯಾಗಿದೆ. ಉದ್ಘಾಟನಾ ಸಮಾರಂಭದಲ್ಲಿ…

Read More

ತಿರುಚಿರಾಪಳ್ಳಿ-ಶ್ರೀ ಗಂಗಾನಗರ ಹಮ್ಸಫರ್ ಎಕ್ಸ್‌’ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಗುಜರಾತ್‌ ನ ವಲ್ಸಾದ್ ರೈಲು ನಿಲ್ದಾಣದಿಂದ ಹೊರಡುವ ಸ್ವಲ್ಪ ಸಮಯದಲ್ಲೇ ಈ ಅವಘಡ ಸಂಭವಿಸಿದೆ. ನೆನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸೂರತ್‌ ನಿಂದ ತಿರುಚಿರಾಪಳ್ಳಿ-ಶ್ರೀ ಗಂಗಾನಗರ ಹಮ್‌’ಸಫರ್ ಎಕ್ಸ್‌’ಪ್ರೆಸ್‌ ನ ಎರಡು ಎಸಿ ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಪವರ್ ಕೋಚ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಪಕ್ಕದ ಬಿ1 ಕೋಚ್‌ ಗೂ ವ್ಯಾಪಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕರಂರಾಜ್ ವಘೇಲಾ ಹೇಳುತ್ತಾರೆ. ಬೋಗಿಯಿಂದ ಹೊಗೆ ಏರುತ್ತಿರುವುದನ್ನು ಕಂಡ ತಕ್ಷಣ ರೈಲು ನಿಲ್ಲಿಸಿ ಪ್ರಯಾಣಿಕರೆಲ್ಲರೂ ಇಳಿದರು. ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಅಪಘಾತದ ಹಿಂದೆ ಶಾರ್ಟ್ ಸರ್ಕ್ಯೂಟ್ ಇರಬಹುದೆಂದು ಶಂಕಿಸಲಾಗಿದೆ. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಜೂಜಾಡುತ್ತಿದ್ದ ಅಡ್ಡೆ ಮೇಲೆ ಬ್ಯಾಟರಾಯನ ಪುರ ಠಾಣೆ ಪೊಲೀಸರು ದಾಳಿ ಮಾಡಿ 52 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1. 65 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಅಸೋಸಿ ಯೇಷನ್ ಕ್ಲಬ್ಬಲ್ಲಿ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತಿತರರು ಜೂಜಾಟ ಆಡುವ ಪಂಟರುಗಳನ್ನು ಸೇರಿಸಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಜೂಜಾಟವಾಡುತ್ತಿದ್ದರು.

Read More

ರಾಮರಾಜ್ಯಕ್ಕೆ ಉಚಿತ ಶಿಕ್ಷಣ ಮತ್ತು ಆರೋಗ್ಯದ ಅಗತ್ಯವಿದೆ. ಎಎಪಿ ನೇತೃತ್ವದ ದೆಹಲಿ ಸರ್ಕಾರ ಇದಕ್ಕಾಗಿ ಪ್ರಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಸರ್ಕಾರದ ಅಡಿಯಲ್ಲಿ ಅರುಣಾ ಅಸಫ್ ಅಲಿ ಆಸ್ಪತ್ರೆಯ ಹೊಸ ಒಪಿಡಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಆರೋಗ್ಯ ಮತ್ತು ಶಿಕ್ಷಣವು ದೆಹಲಿ ಸರ್ಕಾರದ ಕೇಂದ್ರಬಿಂದುವಾಗಿದೆ. ಇವುಗಳನ್ನು ವಿಸ್ತರಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು. ಆಸ್ಪತ್ರೆಗಳ ಸುಧಾರಿತ ಮೂಲಸೌಕರ್ಯ. ಹನ್ನೊಂದು ಹೊಸ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಇಂದು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 10 ಸಾವಿರ ಹಾಸಿಗೆಗಳಿವೆ ಎಂದು ಹೇಳಿದರು. ಬಡವರು ಅಥವಾ ಶ್ರೀಮಂತರು ಎಂಬ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಮತ್ತು ಆರೋಗ್ಯದ ಅಗತ್ಯವಿದೆ ಎಂದು ಅವರು ಹೇಳಿದರು ಮತ್ತು ಸರ್ಕಾರವು ಆ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಯತ್ನಿಸುತ್ತಿದೆ.

Read More

ನವದೆಹಲಿ: ಚಂದ್ರನಲ್ಲಿ ರಾತ್ರಿ ಅಂತ್ಯವಾಗಿದ್ದು (ಚಂದ್ರನ ಒಂದು ದಿನ ಭೂಮಿಯ 14 ದಿನಕ್ಕೆ ಸಮ), ಸೂರ್ಯೋದಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿದ್ರೆಯಲ್ಲಿರುವ ಚಂದ್ರಯಾನ-3 ಲ್ಯಾಂಡರ್‌ ಮತ್ತು ರೋವರ್‌ ಎಚ್ಚರಗೊಳಿಸಲು ಇಸ್ರೋ ಪ್ರಯತ್ನ ನಡೆಸುತ್ತಿದೆ. ಆದರೆ ಲ್ಯಾಂಡರ್‌ ಮತ್ತು ರೋವರ್‌ನಿಂದ ಇದುವರೆಗೂ ಯಾವುದೇ ಸಿಗ್ನಲ್‌ ಸಿಕ್ಕಿಲ್ಲ. ಎರಡು ವಾರಗಳ ಚಂದ್ರನ ರಾತ್ರಿಯಿಂದಾಗಿ ಲ್ಯಾಂಡರ್ ಮತ್ತು ರೋವರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿತ್ತು. ಈಗ ಚಂದ್ರನ ದಕ್ಷಿಣ ಧ್ರುವದಲ್ಲಿ ಬೆಳಕಾಗಿದ್ದು, ಸಂಪರ್ಕ ಸ್ಥಾಪಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಇಸ್ರೋ ಹೇಳಿದೆ. ಇಸ್ರೋ ಚೇರಮನ್ ಎಸ್.ಸೋಮನಾಥ ಈ ಕುರಿತು ಮಾಹಿತಿ ನೀಡಿದ್ದು ಇದು ಯಾವಾಗ ಎದ್ದೇಳುತ್ತದೆ ಎನ್ನುವುದು ತಿಳಿಯದು. ಅದು ನಾಳೆಯೂ ಆಗಿರಬಹುದು ಅಥವಾ ಚಂದ್ರದಿನದ ಕೊನೆಯ ದಿನವೂ ಆಗಿರಬಹುದು. ಆದರೆ ನಮ್ಮ ಪ್ರಯತ್ನ ನಡೆಯುತ್ತಿದೆ. ಇವೆರಡೂ ಪುನಶ್ಚೇತನಗೊಂಡರೆ ಅದು ಮಹತ್ವದ ಸಾಧನೆಯಾಗಲಿದೆ” ಎಂದು ಹೇಳಿದ್ದಾರೆ. ಹದಿನಾಲ್ಕು ದಿನಗಳ ಕಾಲ ಅಂದರೆ ಒಂದು ಚಂದ್ರದಿನದ ವೇಳೆ ಸಂಪೂರ್ಣ ಕತ್ತಲು ಮತ್ತು ಮೈನಸ್ 200 ರಿಂದ 25ಡಿಗ್ರಿ…

Read More

ಚಾಮರಾಜನಗರ: ಕಾವೇರಿ ನೀರಿನ ಸಂಬಂಧ ಹಳೇ ಮೈಸೂರು ಭಾಗದಲ್ಲಿ ಹೋರಾಟದ ಕಿಚ್ಚು ಜೋರಾಗಿದ್ದು ರೈತರು, ಕನ್ನಡಪರ ಸಂಘಟನೆಗಳು ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆ ನಡೆಸುತ್ತಿವೆ. ಶನಿವಾರ ಮಧ್ಯಾಹ್ನ ಚಾಮರಾಜನಗರ-ಕೊಳ್ಳೆಗಾಲ ಹೆದ್ದಾರಿ ತಡೆದ ರೈತ ಸಂಘಟನೆಯ ಕಾರ್ಯಕರ್ತರು ತಮಿಳುನಾಡು, ಕರ್ನಾಟಕ ಹಾಗೂ ಕಾವೇರಿ ನ್ಯಾಯಾಧೀಕರಣದ ವಿರುದ್ಧ ಆಕ್ರೋಶ ಹೊರಹಾಕಿದರು. ಕಾವೇರಿ ನೀರಿನ ಸಂಬಂಧ ಮಂಡ್ಯ ಬಂದ್ ಮಾಡಲಾಗಿದ್ದು ಅದರಂತೆ ಚಾಮರಾಜನಗರವನ್ನು ಕೂಡ ಬಂದ್ ಮಾಡುತ್ತೇವೆ. ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸದೇ ಇದ್ದರೇ ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಜೊತೆ ಸಭೆ ಸೇರಿ ಚಾಮರಾಜನಗರ ಬಂದ್ ಮಾಡಲಾಗುತ್ತದೆ ಎಂದು ರೈತ ಮುಖಂಡ ಹೆಬ್ಬಸೂರು ಬಸವಣ್ಣ ಎಚ್ಚರಿಕೆ ಕೊಟ್ಟಿದ್ದಾರೆ.

Read More

ಬೆಂಗಳೂರು: ಸರ್ವರಿಗೂ ಆಶ್ರಯ, ಅನ್ನ, ಅಕ್ಷರ ಕೊಟ್ಟ ಮಠಗಳ ಕಾರ್ಯ ಮಹತ್ವದ್ದು. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಬಸವಾದಿ ಪ್ರಮಥರ ಸತ್ಸಂಪ್ರದಾಯವನ್ನು ಅನೂಚಾನವಾಗಿ ಪಾಲಿಸುತ್ತಾ, ಸರ್ವರ ಏಳಿಗೆಗೆ ಶ್ರಮಿಸುತ್ತಿರುವ ವೀರಶೈವ, ಲಿಂಗಾಯಿತ ಧರ್ಮ ಶ್ರೇಷ್ಠವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ 3ನೇ ವಾರ್ಷಿಕೋತ್ಸವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ನಾಗರಿಕ ಸೇವೆಗಳಿಗೆ ನೇಮಕಗೊಂಡ, ಪದೋನ್ನತಿ ಹೊಂದಿದ ಅಧಿಕಾರಿಗಳು, ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳಾಗಿ ನೇಮಕಗೊಂಡಿರುವ ಸಮುದಾಯದ ಗಣ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಎಲ್ಲ, ಜಾತಿ, ಮತ, ಧರ್ಮದವರಿಗೆ ಅಕ್ಷರ, ಅನ್ನ, ಆಶ್ರಯ ನೀಡಿ ಜ್ಞಾನವಂತರನ್ನಾಗಿ ಮಾಡುತ್ತಿರುವ ಸಮಾಜದ ಮಠ ಮಾನ್ಯಗಳ ಕೊಡುಗೆ ಅಪಾರವಾದ್ದು ಎಂದು ಹೇಳಿದರು. ಸಮಾಜ ನಮಗೇನು ಕೊಟ್ಟಿದೆ ಎಂದು ಪ್ರಶ್ನಿಸುವ ಬದಲು, ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಪ್ರಶ್ನಿಸಿಕೊಳ್ಳಿ, ಭವ್ಯ ಪರಂಪರೆಯ ಸಮಾಜದಿಂದ ಬಂದಿರುವ ನೀವು ನಿಮಗೆ ದೊರೆತಿರುವ…

Read More