Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಅಭಿವೃದ್ಧಿಯ ಹೊಸ ಯುಗದತ್ತ ಸಾಗುತ್ತಿದೆ. ಸಾಮಾಜಿಕ ಸಮಾನತೆ ಮತ್ತು ಸಾಮರಸ್ಯದ ಜೊತೆಗೆ, ರಾಜ್ಯವು ಕ್ರಿಯಾತ್ಮಕ ಮೂಲಸೌಕರ್ಯ, ಪರಿಣಾಮಕಾರಿ ಪರಿಸರ ವ್ಯವಸ್ಥೆ ಮತ್ತು ಒಟ್ಟಾರೆ ಧನಾತ್ಮಕ ಆರ್ಥಿಕ ವಾತಾವರಣವನ್ನು ಹೊಂದಿಂದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಆಯೋಜಿಸಿದ್ದ “ವಿಷನ್ 2030 ಕರ್ನಾಟಕ” ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವು ಭಾರತದ ಪ್ರಗತಿಪರ ರಾಜ್ಯವಾಗಿದೆ ಮತ್ತು ದೇಶದ ಜಿಡಿಪಿಗೆ ಗಣನೀಯವಾಗಿ ಕೊಡುಗೆ ನೀಡುತ್ತಿದೆ. ಕರ್ನಾಟಕ ರಾಜ್ಯವು ಜ್ಞಾನ ಮತ್ತು ವಿಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗಳ ಕೇಂದ್ರವಾಗಿದೆ ಮತ್ತು ಸಾಫ್ಟ್ವೇರ್ನ ಅತಿದೊಡ್ಡ ರಫ್ತುದಾರ. ದೇಶದಲ್ಲಿ ಬಂಡವಾಳ ಹೂಡಿಕೆಯನ್ನು ಪಡೆಯುವ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಕರ್ನಾಟಕ ರಾಜ್ಯವು ಕಳೆದ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ 6 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯನ್ನು ಸ್ವೀಕರಿಸಿದೆ ಎಂದು…
ಬೆಂಗಳೂರು: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ ಎಂದಿದ್ದಾರೆ. ಯಾರೂ ಬೇಕಾದರೂ ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ , ಜನ ಸಮುದಾಯಕ್ಕೆ ತೊಂದರೆ ಮಾಡಬಾರದು. ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದಲ್ಲಿ ಅದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದರು.
ಬೆಂಗಳೂರು: ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ರಚಿಸಿದ ನಂತರ ಕೇಂದ್ರ ಅಥವಾ ಸಿ.ಡಬ್ಲ್ಯೂ ಎಂ ಎ. ಬರ ಪರಿಸ್ಥಿತಿಯಲ್ಲಿ, ಜಲಾಶಯಗಳಲ್ಲಿ ನೀರಿನ ಲಭ್ಯತೆ ಕೊರತೆ ಇರುವ ಸಂದರ್ಭದಲ್ಲಿ ಯಾವ ಮಾನ ದಂಡಗಳನ್ನು ಅನುಸರಿಸಬೇಕು ಎಂಬ ಸೂತ್ರವೇ ಸಿದ್ದಪಡಿಸಿಲ್ಲ ಹಾಗಾಗಿ ಕರ್ನಾಟಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.. ರಾಜ್ಯದಲ್ಲಿ ಬರ ಆವರಿಸಿದೆ . 195 ಜಿಲೆಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು ಪರಿಹಾrಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತಿದೆ . ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ ಎಂದರು.
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಬಿಜೆಪಿಯ ಮುಂದಿನ ಹೋರಾಟದ ಕುರಿತು ಪಕ್ಷದ ಕಚೇರಿಯಲ್ಲಿ ತಮ್ಮ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನಿರು ಬಿಡುವ ಪರಿಸ್ಥಿತಿಗೆ ತಂದಿದೆ.ಇಷ್ಟೆಲ್ಲಾ ಆದರೂ ರಾಜ್ಯಸ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಅಂತ ಹೇಳಿಲ್ಲ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಒಂದು ಜಿರಾಫೆ ಮಾತ್ರ ಇದ್ದು, ಪಶ್ಚಿಮ ಬಂಗಾಳದ ಅಲಿಪುರದಿಂದ ಮತ್ತೊಂದು ಜಿರಾಫೆ ತರಿಸುವ ಪ್ರಯತ್ನ ನಡೆದಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನಕ್ಕೆ ಭೇಟಿ ನೀಡಿದ ಅವರು, ಚಿರತೆ ಮತ್ತು ಜಿಂಕೆಗಳ ಸಾವಿನ ಖುದ್ದು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಬನ್ನೇರುಘಟ್ಟದಲ್ಲಿರುವ ಜಿರಾಫೆಯನ್ನು ಮೈಸೂರು ಮೃಗಾಲಯದಿಂದ ತರಿಸಲಾಗಿದ್ದು, ಏಕ ಪ್ರಾಣಿ ಇರುವ ಮೃಗಾಲಯಗಳಲ್ಲಿ ಮತ್ತೊಂದು ಅದೇ ಜಾತಿಯ ಪ್ರಾಣಿ ತರಿಸಲು ಸರ್ಕಾರ ಎಲ್ಲ ಬೆಂಬಲ ನೀಡಲಿದೆ ಎಂದು ತಿಳಿಸಿದರು. ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಉತ್ತಮ ಮೃಗಾಲಯ ಇದೆ, ಸಫಾರಿ ಇದೆ. ಇಲ್ಲಿ ಆನೆ, ಚಿರತೆ, ಹುಲಿ, ಸಿಂಹ, ಕರಡಿ, ಜಿಂಕೆಗಳು ಸ್ವೇಚ್ಛೆಯಾಗಿ ವಿಹರಿಸುವುದನ್ನು ನೋಡಬಹುದಾಗಿದೆ. ಬೆಂಗಳೂರಿಗೆ ಸಮೀಪದಲ್ಲೇ ಇದ್ದು, ಹೆಚ್ಚಿನ ಜನರು ಆಗಮಿಸುವ ಕಾರಣ, ಮುಖ್ಯರಸ್ತೆಯಿಂದ ಪರ್ಯಾಯವಾಗಿ ಮತ್ತೊಂದು ಸಂಪರ್ಕ ರಸ್ತೆ ಕಲ್ಪಿಸುವ ಅಗತ್ಯವಿದೆ ಎಂದು…
ತುರುವೇಕೆರೆ: ಬೆಂಗಳೂರಿನ ಸೆಂಟರ್ ಫಾರ್ ಕೌಂಟರ್ ಟೆರರಿಸಂ ಇಂಟರ್ನಲ್ ಸೆಕ್ಯೂರಿಟಿ ಡಿವಿಜಿನ್ ನಲ್ಲಿ ನಡೆದ ಡಿ-ಸ್ವಾಟ್ ತರಬೇತಿಯಲ್ಲಿ ಕೇಂದ್ರ ವಲಯದ ಜಿಲ್ಲೆಗಳಲ್ಲಿಯೇ ತುಮಕೂರಿನ ತಂಡವು ಅತ್ಯುತ್ತಮ ತಂಡವಾಗಿ ಆಗಿ ಹೊರಹೊಮ್ಮಿದೆ. ಈ ತಂಡವನ್ನು ತುಮಕೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದಾರೆ. ಈ ತಂಡದಲ್ಲಿ ನಮ್ಮ ತುರುವೇಕೆರೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಮಂಜುನಾಥ್ ಕೂಡ ಇದ್ದು, ತುರುವೇಕೆರೆ ಪೊಲೀಸ್ ಠಾಣೆಗೆ ಹಾಗೂ ತಾಲ್ಲೂಕಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಮಂಜುನಾಥ್ ರವರನ್ನು ಕುಣಿಗಲ್ ಉಪ ವಿಭಾಗದ ಡಿವೈಎಸ್ಪಿ ಲಕ್ಷ್ಮಿಕಾಂತ್, ತುರುವೇಕೆರೆ ವೃತ್ತ ನಿರೀಕ್ಷಕರು ,ತುರುವೇಕೆರೆ ಠಾಣೆ ಪಿಎಸ್ ಐಗಳಾದ ಕೆ ಗಣೇಶ್ ಮತ್ತು ರಾಮಚಂದ್ರಪ್ಪನವರು ಹಾಗೂ ತುರುವೇಕೆರೆ ಠಾಣೆಯ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ಸ್ಯಾನ್ ಫ್ರಾನ್ಸಿಸ್ಕೋ ಇಂಡಿಯನ್ ಕಾನ್ಸುಲೇಟ್ ದಾಳಿ ಪ್ರಕರಣದ ಆರೋಪಿಗಳ ವಿವರಗಳನ್ನು NIA ಬಿಡುಗಡೆ ಮಾಡಿದೆ ರಾಷ್ಟ್ರೀಯ ತನಿಖಾ ಸಂಸ್ಥೆ 10 ಆರೋಪಿಗಳ ಭಾವಚಿತ್ರಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್ನಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ಖಲಿಸ್ತಾನ್ ಕಾರ್ಯಕರ್ತರು ದಾಳಿ ನಡೆಸಿದ್ದರು. ಆರೋಪಿಗಳ ಬಗ್ಗೆ ತಿಳಿದವರು ಮಾಹಿತಿ ಹಂಚಿಕೊಳ್ಳಬೇಕು ಎಂದು ಎನ್ ಐಎ ಮಾಹಿತಿ ನೀಡಿದೆ. ಇದಕ್ಕಾಗಿ ಮೂರು ಪ್ರತ್ಯೇಕ ನೋಟಿಸ್ ಗಳನ್ನು ನೀಡಲಾಗಿದೆ. ಖಲಿಸ್ತಾನವಾದಿಗಳ ದಾಳಿಯ ವಿರುದ್ಧ ಕ್ರಮಗಳನ್ನು ಬಲಪಡಿಸುವ ಭಾಗವಾಗಿ ಆರೋಪಿಗಳ ಚಿತ್ರಗಳು ಮತ್ತು ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 19 ರಂದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಒಂದು ಗುಂಪು ನುಗ್ಗಿತು ಮತ್ತು ಕಾನ್ಸುಲೇಟ್ ನಲ್ಲಿ ಖಲಿಸ್ತಾನ್ ಧ್ವಜವನ್ನು ಹಾರಿಸಿತು.
ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮಾಧ್ಯಮಗಳಿಗೆ ಮಾರ್ಗಸೂಚಿಗಳನ್ನು ನೀಡುತ್ತದೆ. ನಿಷೇಧಿತ ಸಂಘಟನೆಗಳಿಗೆ ಸೇರಿದವರಿಗೆ ವೇದಿಕೆ ನೀಡಬಾರದು ಎಂಬುದು ಕೇಂದ್ರ ಸರ್ಕಾರದ ಹೊಸ ನಿರ್ದೇಶನ. ಚಾನೆಲ್ ಚರ್ಚೆಯಲ್ಲಿ ನಿಷೇಧಿತ ಸಂಘಟನೆಯ ಪ್ರತಿನಿಧಿ ಭಾಗವಹಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೆನಡಾದ ನಾಗರಿಕರಿಗೆ ವೀಸಾವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಭಾರತ ಘೋಷಿಸಿದ ಕೆಲವೇ ಗಂಟೆಗಳ ನಂತರ ಮಾಧ್ಯಮಗಳಿಗೆ ಮಾರ್ಗಸೂಚಿಗಳು ಸಹ ಹೊರಬಂದಿವೆ. ಉಗ್ರರಿಗೆ ವೇದಿಕೆ ನೀಡದಂತೆ ಮಾಧ್ಯಮಗಳಿಗೆ ಕೇಂದ್ರದ ನಿರ್ದೇಶನ. ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಂತ್ರಣ ಕಾಯಿದೆಯ ಸೆಕ್ಷನ್ 20 ಅನ್ನು ಉಲ್ಲೇಖಿಸಿ, ದೂರದರ್ಶನ ಚಾನೆಲ್ ಗಳು ತಮ್ಮ ವಿಷಯದಲ್ಲಿ ಕಾಯಿದೆಯ ನಿಬಂಧನೆಗಳನ್ನು ಅನುಸರಿಸುವ ಅಗತ್ಯವನ್ನು ಕೇಂದ್ರವು ಒತ್ತಿ ಹೇಳಿತು. ಈ ಮಧ್ಯೆ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಖಲಿಸ್ತಾನ್ ಕಾರ್ಯಕರ್ತರ ಹತ್ಯೆಯ ಹಿಂದೆ ಭಾರತೀಯ ಏಜೆಂಟ್ಗಳ ಕೈವಾಡವಿದೆ ಎಂಬ ತಮ್ಮ ಹಿಂದಿನ ನಿಲುವಿಗೆ ಅಂಟಿಕೊಂಡಿದ್ದಾರೆ. ಹತ್ಯೆಯ ಹಿಂದೆ ಭಾರತೀಯ ಏಜೆಂಟ್ ಗಳ ಕೈವಾಡವಿದೆ ಎಂದು ನಂಬಲು ನಂಬಲರ್ಹವಾದ ಕಾರಣವಿದೆ…
ಭಾರತದಲ್ಲಿ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ಬರಲಿದೆ. ವಾರಣಾಸಿಯ ಗಂಜಾರಿಯಲ್ಲಿ ಅತ್ಯಾಧುನಿಕ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 450 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ವಾರಣಾಸಿಯಲ್ಲಿ ಸುಮಾರು 30,000 ಜನರು ಪಂದ್ಯ ವೀಕ್ಷಿಸುವ ಸಾಮರ್ಥ್ಯದ ಕ್ರೀಡಾಂಗಣವನ್ನು ಸಿದ್ಧಪಡಿಸಲಾಗುವುದು. ಮೋದಿಯವರ ಸಂಸದೀಯ ಕ್ಷೇತ್ರವೂ ಕ್ರೀಡಾಂಗಣದ ವೈಶಿಷ್ಟ್ಯ ಹೊಂದಿದೆ. ಕ್ರೀಡಾಂಗಣದ ವಿನ್ಯಾಸದ ಬಗ್ಗೆ ವಿಭಾಗೀಯ ಆಯುಕ್ತ ಕೌಶಲ್ ರಾಜ್ ಶರ್ಮಾ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು, ಉದ್ದೇಶಿತ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಮುಂಭಾಗವು ಕಾಶಿ ಮತ್ತು ಪರಮಶಿವವನ್ನು ನೆನಪಿಸುತ್ತದೆ. ಮೇಲ್ಛಾವಣಿಯು ಶಿವನ ಅರ್ಧಚಂದ್ರಾಕಾರವನ್ನು ಹೋಲುತ್ತದೆ. ಫ್ಲಡ್ ಲೈಟ್ ಗಳ ಕಾಲುಗಳಿಗೆ ತ್ರಿಶೂಲ ಮಾದರಿಯನ್ನು ನೀಡಲಾಗುವುದು. ಕಾಶಿಯ ಘಟ್ಟಗಳ ಮಾದರಿಯಲ್ಲಿ ಗ್ಯಾಲರಿ ನಿರ್ಮಿಸಲಾಗುವುದು. ಪೆವಿಲಿಯನ್ ಮತ್ತು ವಿಐಪಿ ಲಾಂಜ್ ಅನ್ನು ಶಿವನ ಕೈಯಲ್ಲಿ ವಾದ್ಯವಾಗಿ ಡಮರು ರೂಪದಲ್ಲಿ ವಿನ್ಯಾಸಗೊಳಿಸಲಾಗಿದೆ. ಬಿಲ್ವ ಪತ್ರದ ಬೃಹತ್ ಆಕೃತಿಗಳನ್ನು ಲೋಹದ ಚೌಕಟ್ಟುಗಳಲ್ಲಿ ಸ್ಥಾಪಿಸಲಾಗುವುದು ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದರು. 450 ಕೋಟಿ…
ಹರಿಯಾಣದಲ್ಲಿ ಕುಟುಂಬದವರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪಾಣಿಪತ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ನಾಲ್ವರು ಮುಸುಕುಧಾರಿ ಶಸ್ತ್ರಧಾರಿ ಪುರುಷರ ಅಪರಿಚಿತ ತಂಡವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದೆ. ನಾಲ್ವರ ತಂಡ ಮನೆಗೆ ನುಗ್ಗಿ ಮಹಿಳೆಯರನ್ನು ಹಗ್ಗದಿಂದ ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದೆ. ಸಾಮೂಹಿಕ ಅತ್ಯಾಚಾರಕ್ಕೆ ಚಾಕು ಮತ್ತು ಇತರ ಹರಿತವಾದ ಆಯುಧಗಳಿಂದ ಬೆದರಿಸಲಾಯಿತು. ದುಷ್ಕರ್ಮಿಗಳು ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ, ಸಾಮೂಹಿಕ ಅತ್ಯಾಚಾರ ನಡೆದ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ಮತ್ತೊಬ್ಬ ಮಹಿಳೆಯನ್ನು ಅಪರಿಚಿತ ವ್ಯಕ್ತಿಗಳು ಕೊಂದಿದ್ದಾರೆ. ಅಸ್ವಸ್ಥ ಮಹಿಳೆ ಮೇಲೆ ಗುಂಪೊಂದು ದಾಳಿ ಮಾಡಿದೆ. ಗ್ಯಾಂಗ್ ಆಕೆಯ ಪತಿಯನ್ನು ದರೋಡೆ ಮಾಡಿದೆ. ನಗದು ಹಾಗೂ ಮೊಬೈಲ್ ಕಳ್ಳತನವಾಗಿದೆ. ಅದೇ ತಂಡ ಇದರ ಹಿಂದೆ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಕುರಿತು ಮಡ್ಲೌಡಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯಕ್ಕೆ…