Author: admin

ಮಗಳು ಮೀರಾ ಅವರ ಅನಿರೀಕ್ಷಿತ ನಿಧನದ ನಂತರ ನಟ ಮತ್ತು ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ತಮ್ಮ ಫೇಸ್ ಬುಕ್ ಮೂಲಕ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.ಮಗಳ ಜೊತೆಯಲ್ಲಿಯೇ ನಾನು ಸಾವನ್ನಪ್ಪಿದ್ದೇನೆ. ಮೀರಾ ಇನ್ನೂ ನನ್ನೊಂದಿಗೆ ಮಾತನಾಡುತ್ತಿರುವಂತೆ ತೋರುತ್ತಿದೆ ಮತ್ತು ಇನ್ನು ಮುಂದೆ ನಾನು ಮಾಡುವ ಯಾವುದೇ ಒಳ್ಳೆಯ ಕಾರ್ಯಗಳು ಅವಳ ಹೆಸರಿನಲ್ಲಿರುತ್ತವೆ ಎಂದು ವಿಜಯ್ ಹೇಳಿದರು. ಮೀರಾ ಧೈರ್ಯಶಾಲಿ ಮತ್ತು ಕರುಣಾಮಯಿ ಮತ್ತು  ಮಗಳು ಧರ್ಮ, ಜಾತಿ, ಮತ, ಹಣ, ಅಸೂಯೆ, ನೋವು, ಬಡತನ ಅಥವಾ ದುಷ್ಟತನವಿಲ್ಲದ ಶಾಂತಿಯುತ ಸ್ಥಳಕ್ಕೆ ಹೋಗಿದ್ದಾಳೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Read More

ಬೆಂಗಳೂರು: ‘ವೈಯಾಲಿಕಾವಲ್ ಠಾಣೆಯ ಪೊಲೀಸರು ಹಾಗೂ ಇತರರು ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ಮರಣಪತ್ರ ಬರೆದಿಟ್ಟು ನಾಗರಾಜ್ (47) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ನಾಗರಾಜ್, ಉದ್ಯಮಿ ಸನಾವುಲ್ಲ ಒಡೆತನದ ಇಪಿಪಿ (ಎನ್ವಿರಾನ್‌ ಮೆಂಟ್ ಪೊಲ್ಯೂಷನ್ ಪ್ರಾಜೆಕ್ಟ್) ಕಂಪನಿ ಉದ್ಯೋಗಿ, ಬುಧವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದರು.

Read More

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ವಿಚಾರ, ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ ಎಂದು ವಿಧಾನಸೌಧದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್‌ ವುಡ್‌ ನಟರು ಬರಲಿ ಎಂದರು.

Read More

ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು. ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು.

Read More

ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ವಿಷ್ಣು (24) ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ. ಬಾಗಲಗುಂಟೆ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶೆ ರೂಪಾ ಕೆ.ಎನ್ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದಿಸಿದ್ದರು.

Read More

ದೂರವಾಗಿದ್ದ ಪತ್ನಿ ವಾಪಸ್ ಬಾರದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ  ನಡೆದಿದೆ. 32 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿ ಪತಿಯೊಂದಿಗೆ ಜಗಳ ಮಾಡಿಕೊಂಡು ಮಹಿಳೆ ತವರು ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪತಿಯ ಅತಿಯಾದ ಕುಡಿತದಿಂದ ಮನನೊಂದ ಮಹಿಳೆ ತನ್ನ ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿ ತೊರೆದ ಬಳಿಕ ರಾಜೇಶ್ ಮಕ್ಕಳೊಂದಿಗೆ ವಾಸವಾಗಿದ್ದ. ಪತ್ನಿಯನ್ನು ಮನೆಗೆ ಕರೆತರಲು ಪತಿ ಎಷ್ಟು ಸಾಧ್ಯವೋ ಅಷ್ಟು ಸಮಾಧಾನ ಮಾಡಿದರೂ ಪತ್ನಿ ಮಣಿಯದ ಕಾರಣದ ಪತಿ ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲವು ತಿಳಿಸಿದೆ.

Read More

ಮೆಟಾ ಅವರ ಇತ್ತೀಚಿನ ವೈಶಿಷ್ಟ್ಯವಾದ ವಾಟ್ಸಾಪ್ ಚಾನೆಲ್‌ ನಲ್ಲಿ 17 ಲಕ್ಷ ಅನುಯಾಯಿಗಳೊಂದಿಗೆ ಮೋದಿ. ನಿಮ್ಮ ಅನುಯಾಯಿಗಳೊಂದಿಗೆ ಪಠ್ಯ, ಚಿತ್ರಗಳು, ವೀಡಿಯೊಗಳು, ಸ್ಟಿಕ್ಕರ್ ‌ಗಳು ಮತ್ತು ಹೆಚ್ಚಿನದನ್ನು ಹಂಚಿಕೊಳ್ಳಬಹುದಾದ ಅಂತಹ ಚಾನಲ್‌ ಗಳನ್ನು ಪ್ರಾರಂಭಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲಿಗರು. ಮೊದಲ 24 ಗಂಟೆಗಳಲ್ಲಿ 1 ಮಿಲಿಯನ್ ಜನರು ವಾಟ್ಸಾಪ್ ‌ನಲ್ಲಿ ಮೋದಿಯನ್ನು ಫಾಲೋ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ವಾಟ್ಸಾಪ್ ಚಾನೆಲ್‌ ಗಳನ್ನು ಆರಂಭಿಸಿದ್ದಾರೆ. ಪ್ರಸ್ತುತ 51 ಲಕ್ಷ ಜನರು ಭಾರತೀಯ ಕ್ರಿಕೆಟ್ ತಂಡವನ್ನು ತಮ್ಮ ವಾಟ್ಸಾಪ್ ಚಾನೆಲ್ ‌ನಲ್ಲಿ ಅನುಸರಿಸುತ್ತಿದ್ದಾರೆ. ಅದೇ ರೀತಿ ಅಕ್ಷಯ್ ಕುಮಾರ್ 41 ಲಕ್ಷ ಹಾಗೂ ಕತ್ರಿನಾ ಕೈಫ್ 84 ಲಕ್ಷ ಅಭಿಮಾನಿಗಳನ್ನು ಹೊಂದಿದ್ದಾರೆ. ಮಲಯಾಳಂನಲ್ಲಿ ಮೋಹನ್‌ ಲಾಲ್, ಮಮ್ಮುಟ್ಟಿ ಮುಂತಾದ ಅನೇಕ ಸೆಲೆಬ್ರಿಟಿಗಳು ವಾಟ್ಸಾಪ್ ಚಾನೆಲ್‌ ಗಳನ್ನು ಪ್ರಾರಂಭಿಸಿದ್ದಾರೆ. WhatsApp ಚಾನಲ್‌ ಗೆ ಸೇರಲು WhatsApp ಗೆ ಹೋಗಿ ಮತ್ತು ‘ಅಪ್‌ ಡೇಟ್‌ ಗಳು’ ಟ್ಯಾಬ್‌ ಗೆ ನ್ಯಾವಿಗೇಟ್ ಮಾಡಿ. ಪರದೆಯ ಕೆಳಭಾಗದಲ್ಲಿರುವ…

Read More

ಎರಡು ವರ್ಷದ ಬಾಲಕನನ್ನು ಕೊಂದು ಶವವನ್ನು ಸ್ಪೀಕರ್ ಬಾಕ್ಸ್ ನಲ್ಲಿ ಬಚ್ಚಿಟ್ಟ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ.  ಪೊಲೀಸರು ಬಾಲಕನ ಚಿಕ್ಕಪ್ಪನನ್ನು ಬಂಧಿಸಿದ್ದಾರೆ. ಸಹೋದರನ ಜತೆಗಿನ ಆಸ್ತಿ ವಿವಾದವೇ ಕೊಲೆಗೆ ಕಾರಣ. ಕಳೆದ 17ರಿಂದ ಮಗು ನಾಪತ್ತೆಯಾಗಿತ್ತು. ಜಿಲ್ಲೆಯ ತಿರುಪ್ಪಲಪಂಥಾಲ್ ಗ್ರಾಮದ ಮಾರಿಯಮ್ಮನ್ ಕೋವಿಲ್ ಬೀದಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಾಗಿದ್ದ ಗುರುಮೂರ್ತಿ ಮತ್ತು ಅವರ ಪತ್ನಿ ಜಗತೀಶ್ವರಿ ದಂಪತಿಯ ಎರಡು ವರ್ಷದ ಮಗ ಮೃತಪಟ್ಟಿದ್ದಾನೆ. 17ರಂದು ಮಗು ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿತ್ತು. ರಾತ್ರಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪ್ಪಲಪಂಟಾಲ್ ಪೊಲೀಸರು ನಾಲ್ಕು ದಿನಗಳ ಕಾಲ ತನಿಖೆ ನಡೆಸುತ್ತಿದ್ದರು. ಇದೇ ವೇಳೆ ನಿನ್ನೆ ಗುರುಮೂರ್ತಿ ಅವರ ಮನೆಯಲ್ಲಿದ್ದ ಸ್ಪೀಕರ್ ಬಾಕ್ಸ್ ಒಂದರಿಂದ ದುರ್ವಾಸನೆ ಬರಲಾರಂಭಿಸಿದೆ. ಅನುಮಾನಗೊಂಡ ಕುಟುಂಬಸ್ಥರು ಸ್ಪೀಕರ್ ಬಾಕ್ಸ್ ತೆರೆದು ನೋಡಿದಾಗ ನಾಪತ್ತೆಯಾಗಿದ್ದ ಎರಡು ವರ್ಷದ ತಿರುಮೂರ್ತಿ ಶವ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಮಗುವಿನ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…

Read More

ಹುಬ್ಬಳ್ಳಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ರಾಜ್ಯದ ರೈತರನ್ನು ಬಲಿಕೊಟ್ಟು ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ‘ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಸರ್ಜನೆ ‌ಮಾಡಬೇಕು. ನಮಗೆ ಕುಡಿಯೋಕೆ ನೀರಿಲ್ಲ. ಆದ್ರೆ, ಕಾಂಗ್ರೆಸ್ ಸರ್ಕಾರ ನೀರು ಬಿಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ‌ಪರಿಸ್ಥಿತಿಯನ್ನು ಕಾಂಗ್ರೆಸ್ ತಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.

Read More

ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪಿಗೆ  ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಂಡಿದೆ. ಬೆಂಗಳೂರು ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ  ಡಿಸಿಪಿಗಳಿಗೆ ನಗರ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಪಶ್ಚಿಮ, ಪೂರ್ವ, ಉತ್ತರ, ದಕ್ಷಿಣ ವಲಯ ಹಾಗೂ ವೈಟ್ ಫೀಲ್ಡ್ ಸೇರಿ ಎಲ್ಲೆಡೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

Read More