Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಚಿಂದಿ ಆಯುವವರ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನುಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನಕ್ಕೆ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಸಾಯಿ ಕರ್ಮಚಾರಿ ಮಕ್ಕಳಿಗೆ ನಿಗದಿ ಮಾಡಿರುವ ಶೇ.5 ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳಿಗೆ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಕಾವೇರಿ ಜಲಸಂಕಷ್ಟ, ಜನರ ಆತಂಕ ನಿವಾರಿಸಲು ಕೂಡಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸೂಚಿಸಲು ರಾಜ್ಯಪಾಲರಿಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಿಯೋಗ ಮನವಿ ಮಾಡಿದೆ. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಕುರಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ, ಮನವಿಯನ್ನು ಸಲ್ಲಿಸಿದೆ. ಕುಡಿಯುವ ನೀರಿನ ಆತಂಕವಿರುವ ಕಾರಣ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸಲಾಗುತ್ತದೆ ಎಂಬ ನಿರ್ಣಯ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದೆ.
ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೊಂದು ಬೇಟೆಯಾಡಿದ್ದಾರೆ. ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಪತ್ತೆಯಾದ ಎರಡೇ ದಿನಗಳಲ್ಲಿ ಬಿಲ್ಡರ್ ಸಂತೋಷ್ ನಿವಾಸದಲ್ಲಿ 40 ಕೋಟಿ ಕ್ಯಾಶ್ ಸಿಕ್ಕಿದೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್ಮೆಂಟ್ ನಲ್ಲಿರುವ ಫ್ಲಾಟ್ ನಲ್ಲಿ ಈ ದುಡ್ಡು ಪತ್ತೆಯಾಗಿದೆ. ಇದೀಗ ಸಂತೋಷ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇದು ಮಾಜಿ MLC ಯೊಬ್ಬರಿಗೆ ಸೇರಿದ ಹಣ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಲಗ್ಗರೆ ಬಳಿಯಿರುವ ಆಸರೆ ವೃದ್ಧಾಶ್ರಮ ಸಮೀಪದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಮ್ಮೆಲೆ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿದ್ದು ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ಬೆಂಕಿ ತಗುಲಿದೆ. ಮುಜಾಹಿಲ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದೆ. ಊಟಕ್ಕೆ ಕೆಲಸಗಾರರು ಹೊರ ಹೋಗಿದ್ದ ಹಿನ್ನೆಲೆಯಲ್ಲಿ ಅವಘಡ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ಗೆ ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಎದುರಾಗುವ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿ ಕರ್ತವ್ಯ ನಿರ್ವಹಸಲಿವೆ ಎಂದು ಪ್ರಕಟಣೆ ತಿಳಿಸಿದೆ. ನ್ಯಾಯಿಕ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅವರು ಈ ವಿಷಯವನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದರ ಜತೆಗೆ ರಜಾಕಾಲೀನ ಪೀಠಗಳ ವಿವರವನ್ನೂ ಒದಗಿಸಿದ್ದಾರೆ.
ತಮಿಳುನಾಡಿನಲ್ಲಿ ಡಿಎಂಕೆ ಮಹಿಳಾ ಘಟಕದ ನೇತೃತ್ವದಲ್ಲಿ ನಡೆದ ಮಹಿಳಾ ಹಕ್ಕುಗಳ ಸಮಾವೇಶ ಮಹಿಳಾ ಸಮುದಾಯದ ಶಕ್ತಿ ಪ್ರದರ್ಶನವಾಗಿತ್ತು. ಮಹಿಳಾ ಮಸೂದೆ ಪ್ರಮುಖ ಚರ್ಚೆಯಾಗಿದ್ದ ಅಧಿವೇಶನದಲ್ಲಿ ಬಿಜೆಪಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಸಮಾವೇಶದಲ್ಲಿ ಇಂಡಿಯಾ ಫ್ರಂಟ್ ಅನ್ನು ಅಧಿಕಾರಕ್ಕೆ ತರಲು ಕರೆ ನೀಡಲಾಯಿತು. ಸೋನಿಯಾ ಗಾಂಧಿ ಸೇರಿದಂತೆ ಭಾರತೀಯ ರಂಗದ ಎಲ್ಲಾ ಪ್ರಮುಖ ಮಹಿಳಾ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದ್ದಾರೆ. 75 ವರ್ಷಗಳಲ್ಲಿ ದೇಶ ಸಾಧಿಸಿದ್ದೆಲ್ಲವನ್ನೂ ಮೋದಿ ಸರಕಾರ ನಾಶಪಡಿಸಿ ಮಹಿಳೆಯರನ್ನು ಯಾವುದೋ ಒಂದು ಸಂಕೇತವನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯು ಚುನಾವಣೆಯಲ್ಲಿ ಮಹಿಳೆಯರಿಗೆ ವಂಚನೆ ಮಾಡಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದರು. ಮಹಿಳಾ ಮೀಸಲಾತಿ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಇನ್ನು ಸಮಯ ವ್ಯರ್ಥ ಮಾಡಬಾರದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಸಂಸದರಾದ ಕನಿಮೋಳಿ, ಸುಪ್ರಿಯಾ ಸುಳೆ, ಜಮ್ಮು…
ತುಮಕೂರು: ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್ ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಆಕೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತುಮಕೂರು ನಗರದ ಜಯನಗರ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತೆ ಶೇರ್ ಮಾಡಿರುವ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಎನ್ನುವ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ನವರಿಗೆ? BoyCott Lulu Mall ಎಂಬ ಹ್ಯಾಷ್ ಟ್ಯಾಗ್ ಬಳಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು…
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನೀರು, ಹೂ ಬಿಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 31 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದು ಪಿತೃಪಕ್ಷದ ನಿಮಿತ್ತ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ಚೆನ್ನಾಗಿರಲಿ ಎಂದರು. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನುನಿಲ್ಲಿಸಬೇಕು…
ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ಬಾಂಬ್ ದಾಳಿಯನ್ನು ಖಂಡಿಸಿ ಸಾವಿರಾರು ಪ್ರತಿಭಟನಾಕಾರರು ಅಮೆರಿಕದ ನ್ಯೂಯಾರ್ಕ್ ನಲ್ಲಿ ಬೀದಿಗಿಳಿದಿದ್ದಾರೆ. ಅಮೆರಿಕ ಸರ್ಕಾರ ಇಸ್ರೇಲ್ ಪರ ಬ್ಯಾಟ್ ಬೀಸಿದ ಸಂದರ್ಭದಲ್ಲೇ ಈ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ಯಾಲೆಸ್ತೀನ್ ಸ್ವತಂತ್ರವಾಗಲಿ ಎಂದು ಘೋಷಣೆ ಕೂಗಿದ್ದಾರೆ. ‘ಇಸ್ರೇಲಿ ಆಕ್ರಮಣ ಗಾಜಾದ ಮೇಲೆ ಅಕ್ರಮಣ ಮಾಡುತ್ತಿದೆ. ಪ್ಯಾಲೆಸ್ತೀನ ಪ್ರದೇಶಗಳು ವಿಮೋಚನೆಯಾಗಬೇಕಿದೆ’ ಎಂದು ಪ್ರತಿಭಟನಾಕಾರರು ಘೋಷಣೆಯನ್ನು ಕೂಗಿದ್ದಾರೆ. ಬ್ಯಾರಿಕೇಡ್ ಗಳನ್ನು ಪಕ್ಕಕ್ಕೆ ತಳ್ಳಿರುವ ಯುವ ಪ್ರತಿಭಟನಾಕಾರರು ಇಸ್ರೇಲ್ ಗೆ ಬೆಂಬಲ ನೀಡಿರುವ ಅಮೆರಿಕ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ. ಇಸ್ರೇಲ್ ಜನಾಂಗೀಯ ಹತ್ಯೆಯಲ್ಲಿ ತೊಡಗಿದೆ. ಪ್ಯಾಲೆಸ್ತೀನ್ ಜನರ ಮೇಲೆ ಬಲತ್ಕಾರ ನಡೆಸಿದೆ. ಬೈಡನ್ ಸರ್ಕಾರ ಇಸ್ರೇಲ್ ಗೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ‘ಇಸ್ರೇಲ್ ನ ವಸಾಹತುಶಾಹಿ ನಡೆಯು ಈಗ ಕೊನೆಗೊಳ್ಳಬೇಕಿದೆ. ಇಲ್ಲದಿದ್ದರೆ, ಹಿಂಸಾಚಾರದ ಹೆಚ್ಚುತ್ತಲೇ ಇರುತ್ತದೆ. ಪ್ಯಾಲೆಸ್ತೀನ್ ಮೇಲೆ ದಬ್ಬಾಳಿಕೆ ಮುಂದುವರಿಯುತ್ತದೆ’ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ‘ನದಿಯಿಂದ ಸಮುದ್ರದ ವರೆಗೆ, ಪ್ಯಾಲೆಸ್ತೀನ್ ಮುಕ್ತವಾಗಬೇಕು’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಇದೇ…
ಭಗವಾನ್ ಕೃಷ್ಣ ಮಂತ್ರದ ಪ್ರಯೋಜನಗಳು: ಭಗವಾನ್ ಕೃಷ್ಣ ಪಠಣವು ನಮ್ಮ ಪ್ರಜ್ಞೆಯನ್ನು ಹೆಚ್ಚಿಸಲು ಮತ್ತು ಧನಾತ್ಮಕ ಶಕ್ತಿಯನ್ನು ಸಹಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಹರೇ ಕೃಷ್ಣ ಮಹಾಮಂತ್ರವನ್ನು ಹದಿನಾರನೇ ಶತಮಾನದಲ್ಲಿ ಚೈತನ್ಯ ಮಹಾಪ್ರಭುಗಳು ಜನಪ್ರಿಯಗೊಳಿಸಿದರು ಮತ್ತು ಇಪ್ಪತ್ತನೇ ಶತಮಾನದ ಕೊನೆಯಲ್ಲಿ ಶ್ರೀಲ ಪ್ರಭುಪಾದರು ಮತ್ತು ಅವರ ಅನುಯಾಯಿಗಳು ಕೃಷ್ಣ ಪ್ರಜ್ಞೆಗಾಗಿ ಇಂಟರ್ನ್ಯಾಷನಲ್ ಸೊಸೈಟಿಯಲ್ಲಿ ಪ್ರಪಂಚದಾದ್ಯಂತ ಹರಡಿದರು. ಈ ಪ್ರಬಲ ಮಂತ್ರವನ್ನು ಪಠಿಸುವುದರಿಂದ ಶ್ರೀಕೃಷ್ಣನ ಆಶೀರ್ವಾದವು ನಿಮ್ಮ ಮೇಲೆ ಬೀಳುತ್ತದೆ ಎಂಬುದು ಆಧ್ಯಾತ್ಮಿಕ ನಂಬಿಕೆ. ಈ ಪ್ರಬಲ ಮಂತ್ರವು ಶ್ರೀಕೃಷ್ಣನನ್ನು ಮೆಚ್ಚಿಸುತ್ತದೆ ಮತ್ತು ನೀವು ಮುಂದೆ ಆರೋಗ್ಯಕರ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಡೆಸುತ್ತೀರಿ. ಹರೇ ಕೃಷ್ಣ ಮಹಾಮಂತ್ರ ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ, ಹರೇ ಹರೇ ಹರೇ ರಾಮ, ಹರೇ ರಾಮ, ರಾಮ ರಾಮ, ಹರೇ ಹರೇ ಅನುವಾದ: “ಓ ಕರ್ತನೇ, ಓ ಭಗವಂತನ ಶಕ್ತಿಯೇ, ದಯವಿಟ್ಟು ನಿನ್ನ ಸೇವೆಯಲ್ಲಿ ನನ್ನನ್ನು ತೊಡಗಿಸಿಕೊಳ್ಳಿ.” ಭಗವಾನ್ ಕೃಷ್ಣ ಮಹಾಮಂತ್ರವನ್ನು ಪಠಿಸುವ 5…