Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಕೇಸರಿ ಬಾವುಟ ಹಿಡಿದ ಯುವಕನೊಬ್ಬ ರೈಲನ್ನು ನಿಲ್ಲಿಸಿದ ಘಟನೆ ಫಾರೂಕ್ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಹಿನ್ನಲೆ ರಾಜ್ಯೇತರ ಕಾರ್ಮಿಕರ ಬಂಧನ ಮಾಡಲಾಗಿದೆ. ಬಿಹಾರ ಮೂಲದ ಮನದೀಪ್ ಭಾರ್ತಿ ಬಂಧಿತ ಆರೋಪಿ. ಪರಶುರಾಮ್ ಎಕ್ಸ್ ಪ್ರೆಸ್ ಅನ್ನು ನಿಲ್ಲಿಸಲಾಯಿತು. ನಿನ್ನೆ ಬೆಳಗ್ಗೆ ಫಾರೂಕ್ ರೈಲು ನಿಲ್ದಾಣದ ಮೊದಲ ಪ್ಲಾಟ್ ಫಾರ್ಮ್ ನಲ್ಲಿ ಈ ಘಟನೆ ನಡೆದಿದ್ದು, ಅವರು ಮಂಗಳೂರು-ನಾಗರ ಕೋವಿಲ್ ಪರಶುರಾಮ್ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಿದ್ದಾರೆ. ಆರೋಪಿಗಳು ಸ್ಟಂಪ್ ಮೇಲೆ ಮರಗೆಲಸ ಕೆಲಸ ಮಾಡುತ್ತಿದ್ದರು. ಈ ಸಂಬಂಧ 16,500 ರೂ.ಗಳನ್ನು ಪಡೆಯದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೈಯಲ್ಲಿದ್ದ ಕೋಲಿಗೆ ಕೇಸರಿ ಬಾವುಟ ಸುತ್ತಿ ರೈಲಿನ ಮುಂದೆ ನಿಂತು ರೈಲು ನಿಲ್ಲಿಸಿದ. ಇದರಿಂದಾಗಿ ರೈಲು ಹತ್ತು ನಿಮಿಷ ತಡವಾಯಿತು. ಆರ್ ಪಿಎಫ್ ತನಿಖೆ ಆರಂಭಿಸಿದೆ.
ತುಮಕೂರುನಿಂದ ಗೌರಿಬಿದನೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ವೊಂದದರಲ್ಲಿ ಬಸ್ಸಿನ ಟಾಪ್ ನಲ್ಲಿ ಕೂಡ ಜನರು ಪ್ರಯಾಣಿಸುತ್ತಿರುವುದನ್ನು ಕಂಡು ಕೊರಟಗೆರೆ ಸಬ್ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಬಸ್ಸನ್ನು ನಿಲ್ಲಿಸಿ, ಬಸ್ ನ ಮೇಲೆ ಇದ್ದ ಪ್ರಯಾಣಿಕರನ್ನು ಇಳಿಸಿದ ಘಟನೆ ನಡೆದಿದೆ. ಬಸ್ಸಿನ ಒಳಗೆ ಹಾಗೂ ಟಾಪ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಅಪಾಯಕಾರಿಯಾಗಿ ಪ್ರಯಾಣಿಸುತ್ತಿದ್ದರು. ಬಸ್ಸನ್ನು ಹಿಂಬಾಲಿಸಿಕೊಂಡು ಬಂದ ಚೇತನ್ ಕುಮಾರ್ ಅವರು ಬಸ್ ನ್ನು ನಿಲ್ಲಿಸಿದರಲ್ಲದೇ ಚಾಲಕ ಹಾಗೂ ಮಾಲಿಕನ ಮೇಲೆ ಕೇಸ್ ದಾಖಲಿಸಿದ್ದಾರೆ. ಬಸ್ಸಿನ ಮೇಲೆಯೂ ಜನರನ್ನು ಕೂರಿಸಿಕೊಂಡಿದ್ದರೂ, ಓವರ್ ಸ್ಫೀಡ್ ಆಗಿ ಬಸ್ ಸಂಚರಿಸುತ್ತಿತ್ತು. ಬಸ್ಸಿನ ಮೇಲೆ ಇದ್ದವರನ್ನು ಇಳಿಸಿದ ಬಳಿಕ ಬೇರೆ ಬಸ್ಸಿನಲ್ಲಿ ಹೋಗುವಂತೆ ಅವರಿಗೆ ಸೂಚಿಸಲಾಗಿದೆ. ಇನ್ನೊಂದೆಡೆ ಹಬ್ಬಗಳಿಗೆ ಜನರು ಊರಿಗೆ ಹೋಗುತ್ತಿದ್ದ ಕಾರಣ, ಜನರನ್ನು ಸುರಕ್ಷಿತವಾಗಿ ತಲುಪಿಸಿದ ಬಳಿಕ ಬಸ್ ನ್ನು ಸ್ಟೇಷನ್ ಗಳಿ ಹಾಕುವಂತೆ ಚಾಲಕನಿಗೆ ಸಬ್ ಇನ್ ಸ್ಪೆಕ್ಟರ್ ಚೇತನ್ ಕುಮಾರ್ ಸೂಚನೆ ನೀಡಿದರು. ಖಾಸಗಿ ಬಸ್ ಚಾಲಕರು…
ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಮುಂಜಾಗ್ರತಾ ಕ್ರಮವಾಗಿ, ಇಂದಿನಿಂದ ಸೆ. 30ರವರೆಗೆ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ, ಪೊಲೀಸ್ ಇಲಾಖೆ ಆದೇಶಿಸಿದೆ. ಇನ್ನೂ ಸೆ. 24ರಂದು ಬೆಳಗ್ಗೆ 6ರಿಂದ ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಗೇಟ್ ವ್ಯಾಪ್ಟಿ ಪೊಲೀಸ್ ಠಾಣೆಯಲ್ಲಿ ಸೆ. 25ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮಧುಗಿರಿ: ಕುಂಚಿಟಿಗರ ಕುಲಶಾಸ್ರ ಅಧ್ಯಯನವನ್ನು ಯಥಾವತ್ ಜಾರಿ ಮಾಡಿ ಓಬಿಸಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಪಟ್ಟಣದ ತಾಲೂಕು ಆಡಳಿತದ ಸೌಧ ಮುಂಭಾಗ ತಾಲೂಕು ಕುಂಚಿಟಿಗ ಸಮುದಾಯದ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷ ಗಾಂಧಿವಾದಿ ಕಸುವನಹಳ್ಳಿ ರಮೇಶ್ ಮಾತನಾಡಿ, ರಾಜ್ಯದ 18 ಜಿಲ್ಲೆ ಹಾಗೂ 46 ತಾಲೂಕುಗಳಲ್ಲಿ ಕೃಷಿ ಮತ್ತು ಬುಡಕಟ್ಟು ಸಂಪ್ರದಾಯವನ್ನು ಹೊಂದಿರುವ ಕುಂಚಿಟಿಗರನ್ನು ದೇಶಕ್ಕೆ ಸ್ವತಂತ್ರ ಬಂದು 77 ವರ್ಷಗಳು ಕಳೆದರು ಸಹ ಇನ್ನೂ ನಮ್ಮ ಸಮುದಾಯವನ್ನು ಮೀಸಲಾತಿಯಿಂದ ವಂಚಿಸಲಾಗಿದೆ ಎಂದರು. ಇಂದೂ ನಾವುಗಳು ಕೂಲಿ ಮಾಡುವಂತಹ ಪರಿಸ್ಥಿತಿ ತಲುಪಿದ್ದು. ನಮ್ಮ ಸಮುದಾಯದ ಜನರು ವಾಸ ವಿರುವ ಪ್ರದೇಶಗಳು ನಗರ ಪ್ರದೇಶಗಳಿಂದ ದೂರವಿದ್ದು ಈ ಪ್ರದೇಶಗಳು ಬಯಲು ಸೀಮೆ , ಗುಡ್ಡಗಾಡು ಹಾಗೂ ಮಳೆಯಾಶ್ರಿತ ಪ್ರದೇಶಗಳಾಗಿಂದ ಕೂಡಿದ್ದು ನೀರಾವರಿ ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ಹೇಳಿದರು. ರಾಜ್ಯ ಸರಕಾರದ ಪ್ರವರ್ಗ 3 ರಲ್ಲಿ 101 ಜಾತಿಗಳನ್ನು ಕೇಂದ್ರ ಸರಕಾರವು ಓಬಿಸಿಯಲ್ಲಿ ಮೀಸಲಾತಿ ಪಟ್ಟಿಯಲ್ಲಿ…
ಕ್ರೈಂ ವಿಶೇಷ ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ ಕೊರಟಗೆರೆ: ಪಾರಿವಾಳದ ಹಣದ ವಿಚಾರಕ್ಕೆ ಜಗಳವಾಗಿ ತಲ್ವಾರ್ ಗ್ಯಾಂಗ್ ನಿಂದ ಯುವಕನ ಮೇಲೆ ಮಂಗಳವಾರ ಸಂಜೆ ಮಾರಣಾಂತಿಕ ಹಲ್ಲೆ ನಡೆದಿದೆ. ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆ ಹಿಂಭಾಗ ಸಿನಿಮಾ ಶೈಲಿಯಲ್ಲಿ ಲಾಂಗ್ ಹಿಡಿದು ಗಲಾಟೆ ಮಾಡಿದ್ದ ಯುವಕರನ್ನು ಪಿಎಸೈ ಚೇತನಗೌಡ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬೆಂಗಳೂರು ಮೂಲದ ಅಜಯ್ ಎಂಬಾತನಿಂದ ಸಂಜಯ್ 2ಸಾವಿರಕ್ಕೆ ಪಾರಿವಾಳ ಖರೀದಿಸಿ 800ರೂ ಅಡ್ವಾನ್ಸ್ ನೀಡಿದ್ದಾರೆ. ಉಳಿದ ಹಣ ಕೇಳಿದಾಗ ಗಲಾಟೆ ನಡೆದಿದೆ. ಉಳಿದ ಹಣ 1200 ರೂ ಕೊಡುವಂತೆ ಅಜಯ್ ಒತ್ತಡಕ್ಕೆ ಆಕ್ರೋಶಗೊಂಡ ಸಂಜಯ್ ಬಾಕಿ ಹಣ ಕೊಡೋದಾಗಿ ಕರೆಯಿಸಿ ಲಾಂಗ್ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆಯತ್ನದ ಆರೋಪಿ ಸಂಜಯ್, ಗಣೇಶ, ನಂದಾಕುಮಾರ್, ತೇಜಾ ಸೇರಿದಂತೆ ಅಪ್ರಾಪ್ತ ವಯಸ್ಕರಾದ 6ಜನ ಯುವಕ ಪೋಲು ಗ್ಯಾಂಗ್ ಪೊಲೀಸರ ಅತಿಥಿ ಆಗಿದ್ದಾರೆ. ಮಕ್ಕಳ ಬಗ್ಗೆ ಪೋಷಕರ ಜಾಗೃತಿ ಅಗತ್ಯ: ವ್ಯಾಸಂಗ ಮಾಡುತ್ತಿರುವ ಹದಿಹರಿಯದ ತಮ್ಮ…
ಹೆಚ್.ಡಿ.ಕೋಟೆ: ಪಟ್ಟಣದ ಬಿ ಜಿ ಎಸ್ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪೋಷಣ್ ಅಭಿಯಾನದ ಅಂಗವಾಗಿ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಟಿ. ರವಿಕುಮಾರ್ ಪೋಷಣ್ ಅಭಿಯಾನದ ಅಡಿಯಲ್ಲಿ ಗರ್ಭೀಣಿಯರಿಗೆ ಪೌಷ್ಟಿಕಾಂಶ ಉಳ್ಳಂತಹ ಆಹಾರ ಪದಾರ್ಥಗಳನ್ನು ಅಂಗನವಾಡಿ ಮತ್ತು ಆಶಾಕಾರ್ಯಕರ್ತರ ಸಮ್ಮುಖದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆಶಾ ಮಾತನಾಡಿ, ಮಕ್ಕಳಿಗೆ ಮಹಿಳೆಯರಿಗೆ ಕಾಲ ಕಾಲಕ್ಕೆ ಪೌಷ್ಠಿಕ ಆಹಾರ ಒದಗಿಸುವುದರಿಂದ ಅಪೌಷ್ಠಿಕತೆಯನ್ನು ತೊಲಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಪ್ರಾಮಾಣಿಕ ಕೆಲಸ ಮಾಡುತಿದೆ ಗರ್ಭೀಣಿಯರಿಗೆ ಪ್ರತೀ ತಿಂಗಳು ಪೌಷ್ಠಿಕ ಆಹಾರ ವಿತರಣೆ ಮಾಡುತಿದ್ದು ಇದರಲ್ಲಿ ನಮ್ಮ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ…
ಪಡೆದ ಹಣವನ್ನು ಮರುಪಾವತಿ ಮಾಡದ ಕಾರಣ ಬೆಳ್ಳುಳ್ಳಿ ವ್ಯಾಪಾರಿಯನ್ನು ಮಾರುಕಟ್ಟೆಯ ಮೂಲಕ ವಿವಸ್ತ್ರಗೊಳಿಸಲಾಯಿತು. ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಉದ್ಯಮಿಯನ್ನು ಥಳಿಸಿ ವಿವಸ್ತ್ರಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 18ರ ಸೋಮವಾರ ಮಧ್ಯಾಹ್ನ ನೋಯ್ಡಾದ ಫೇಸ್-2 ಮಂಡಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬೆಳ್ಳುಳ್ಳಿ ವ್ಯಾಪಾರಿ ಒಂದು ತಿಂಗಳ ಹಿಂದೆ ಸುಂದರ್ ಎಂಬ ಕಮಿಷನ್ ಏಜೆಂಟ್ ಬಳಿ 5,600 ರೂ. ‘ಅಡಿಯಾಸ್’ ಎಂದು ಕರೆಯಲ್ಪಡುವ ಈ ಏಜೆಂಟರು ರೈತರು ಮತ್ತು ವ್ಯಾಪಾರಿಗಳ ನಡುವೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಾರೆ. ಸೋಮವಾರ ಮಧ್ಯಾಹ್ನ, ಕಮಿಷನ್ ಏಜೆಂಟ್ ಎರವಲು ಪಡೆದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿ ವ್ಯಾಪಾರಿಯನ್ನು ಸಂಪರ್ಕಿಸಿದರು. 2500 ಪಾವತಿಸಿದ ವ್ಯಾಪಾರಿ ಬಾಕಿ ಪಾವತಿಸಲು ಸ್ವಲ್ಪ ಕಾಲಾವಕಾಶ ಕೇಳಿದ್ದಾನೆ. ಇದರಿಂದ ಕೋಪಗೊಂಡ ಸುಂದರ್ ತನ್ನ ಜನರನ್ನು ಕರೆಸಿದನು. ಉದ್ಯಮಿಯನ್ನು ಇಬ್ಬರು ವ್ಯಕ್ತಿಗಳು ಥಳಿಸಿ, ಅವರ ಬಟ್ಟೆಗಳನ್ನು ಬಲವಂತವಾಗಿ ಹರಿದು ಹಾಕಿದ್ದಾರೆ. ನಂತರ ಆತನನ್ನು ಬೆತ್ತಲೆಯಾಗಿ ಮಾರುಕಟ್ಟೆಯ…
ಬೆಂಗಳೂರು: ಕೆಟ್ಟದಾಗಿ ಮಾತಾಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ. ಫಾರುಕ್ ಮೃತಪಟ್ಟವನು. ಮುಬಾರಕ್, ಸುಹೇಲ್, ಆಲಿ ಅಕ್ರಮ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮತ್ತು ಕೊಲೆಯಾದವರು ಎಲ್ಲರೂ ಪರಿಚಿತರೇ ಆಗಿದ್ದಾರೆ. ಕೊಲೆಯಾದ ಫಾರುಕ್ ಸುಖಾಸುಮ್ಮನೆ ಸೋಹೆಲ್ ಎಂಬಾತನಿಗೆ ಬೆದರಿಕೆ ಹಾಕುತ್ತಿದ್ದ. ಸೋಹೆಲ್ ಗಾಂಜಾ ಮಾರಾಟ ಮಾಡದೆ ಇದ್ದರೂ, ಫಾರೂಕ್ ಗಾಂಜಾ ಮಾರಾಟ ಮಾಡುತ್ತಾನೆ ಎಂದು ಪೊಲೀಸರಿಗೆ ಹೇಳುತ್ತಿನಿ ಎಂದು ಹೆದರಿಸುತ್ತಿದ್ದ.
ಹಿರಿಯ ಪತ್ರಕರ್ತ ಸುಧೀರ್ ಚೌಧರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ನಗರ ಪೊಲೀಸರಿಗೆ ಮೌಖಿಕವಾಗಿ ಸೂಚಿಸಿದೆ. ಆಜ್ ತಕ್ ನ್ಯೂಸ್ ಚಾನೆಲ್ ಮತ್ತು ಟಿವಿ ಟುಡೇ ನೆಟ್ ವರ್ಕ್ ಲಿಮಿಟೆಡ್ ಆಯಂಕರ್ ಸುಧೀರ್ ಚೌಧರಿ ವಿರುದ್ಧ ಸೆಪ್ಟೆಂಬರ್ 12 ರಂದು, ದ್ವೇಷವನ್ನು ಉತ್ತೇಜಿಸುವ ಮಾತುಗಳು ಮತ್ತು ತಪ್ಪು ಮಾಹಿತಿ ರವಾನೆ ಎಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಎಲ್ಲಾ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು. ನಿಗಧಿಪಡಿಸಿದಂತೆ ಕುಡಿವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.