Author: admin

ಬೆಂಗಳೂರು: ಕರ್ತವ್ಯ ಲೋಪ ಆರೋಪದಡಿ ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತ್ತುಗೊಳಿಸಲಾಗಿದೆ. ಹಲಸೂರು ಠಾಣೆ ಇನ್ಸ್ ಪೆಕ್ಟರ್ ಎಂ. ಮಂಜುನಾಥ್ ಅಮಾನತ್ತು ಆಗಿದ್ದು ಕಳೆದ ಆಗಸ್ಟ್ 11 ರಂದು ಠಾಣೆಗೆ ಭೇಟಿ ಕೊಟ್ಟಿದ್ದ ನಗರ ಪೊಲೀಸ್ ಆಯುಕ್ತರು, ಈ ವೇಳೆ ಠಾಣೆಯ ದಾಖಲಾತಿ ನಿರ್ವಹಣೆಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ನಂತರ ಈ ಕುರಿತು ವರದಿ ನೀಡುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು.

Read More

ಸಿಎಂ ಸಿದ್ದರಾಮಯ್ಯ ಅವರು ಜನ ಸಂಪರ್ಕಕ್ಕಾಗಿ ಎಂಬ ವಾಟ್ಸ್ ಆಪ್ ಚಾನಲ್ ಆರಂಭಿಸಿದ್ದಾರೆ. ವಾಟ್ಸ್ ಆಪ್ ಇತ್ತೀಚೆಗೆ ವಾಟ್ಸ್ ಆಪ್ ಚಾನಲ್ ಫೀಚರ್ ಸೇರ್ಪಡೆಗೊಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಫ್ ಕರ್ನಾಟಕ ಹೆಸರಿನ ವಾಟ್ಸ್ ಆಯಪ್ ಚಾನಲ್ ಆರಂಭಿಸಿದ್ದಾರೆ. ಕಳೆದ ವಾರ ವಾಟ್ಸ್ಆಯಪ್ ಚಾನಲ್ ಎಂಬ ಹೊಸ ಆವಿಷ್ಕಾರವನ್ನು ವಾಟ್ಸ್ ಆಪ್ ಪರಿಚಯಿಸಿತ್ತು. ಸೆಪ್ಟೆಂಬರ್ 12 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾನಲ್ ಆರಂಭಿಸಿದ್ದಾರೆ.

Read More

ರಾಜಧಾನಿ ಬೆಂಗಳೂರು ನಗರದಲ್ಲಿ ನಾಯಿಕೊಡೆಗಳಂತೆ ಅನಧಿಕೃತ ಚುನಾವಣಾ ಹೋರ್ಡಿಂಗ್‌ ಗಳು ತಲೆ ಎತ್ತುತ್ತಿರುವುದರಿಂದ ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ನಗರದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Read More

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಕಾರ್ಯಾರಂಭ ಮಾಡಿರುವ 2ನೇ ಟರ್ಮಿನಲ್ ನಲ್ಲಿರುವ ಮೂಲ ಸೌಕರ್ಯಕ್ಕೆ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ಲೇಖಕ ಆರ್. ಮಾಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ವಿಡಿಯೋ ಸಂದೇಶವನ್ನು ಬಿತ್ತರಿಸಿದ್ದಾರೆ. ಇದಕ್ಕೆ ಲಕ್ಷಾಂತರ ಲೈಕ್ ಗಳು ಬಂದಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

Read More

ಹೆಚ್.ಡಿ.ಕೋಟೆ: ಗೌರಿ ಗಣೇಶ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ಹುಣಸೂರು ವಿಭಾಗೀಯಪೊಲೀಸ್ ಮತ್ತು ಹೆಚ್.ಡಿ.ಕೋಟೆ ಪೊಲೀಸರಿಂದ ಪಥ ಸಂಚಲನ ನಡೆಸಲಾಯಿತು. ಹುಣಸೂರು ವಿಭಾಗೀಯ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮತ್ತು ಹೆಚ್.ಡಿ.ಕೋಟೆ ವೃತ್ತನಿರೀಕ್ಷಕ ಶಬ್ಬೀರ್ ಹುಸೇನ್ ನೇತೃತ್ವದಲ್ಲಿ ಹೆಚ್.ಡಿ.ಕೋಟೆ ಪಟ್ಟಣದ ವರದರಾಜ ಸ್ವಾಮಿ ದೇವಾಲಯ ರಸ್ತೆ,ನಾಯಕರ ಬೀದಿ, ಸಿದ್ದಪ್ಪಾಜಿ ರಸ್ತೆ,ಹೌಸಿಂಗ್ ಬೋರ್ಡ್, ವಿದ್ಯಾನಗರ,ಆಸ್ಪತ್ರೆ ಬಡಾವಣೆ , ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಬಳಿಕ ಡಿವೈಎಸ್ಪಿ ಮಹೇಶ್ ಮಾತನಾಡಿ, ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಅಂಗವಾಗಿ ಹೆಚ್ ಡಿ ಕೋಟೆಯಲ್ಲಿ ಪಥ ಸಂಚಲನ ನಡೆಸಲಾಯಿತು. ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 150ಕ್ಕೂ ಹೆಚ್ಚು ಪೊಲೀಸರು, ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳೊಂದಿಗೆ ಪಥ ಸಂಚಲನ ನಡೆಸಿ, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಘಟನೆ ನಡೆದರು ಕೂಡಲೇ…

Read More

ತುಮಕೂರು: ತುಮಕೂರು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನ ಡ್ರಾಮ ಕೇರ್ ಸೆಂಟರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಕಾರ್ಯ ಚಟುವಟಿಕೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರಾಮಾ ಕೇರ್ ಸೆಂಟರ್, ಸಾಕಷ್ಟು ರೋಗಿಗಳಿಗೆ ಅನುಕೂಲವಾಗಲಿದೆ ಬಹುತೇಕ ತುರ್ತು ಚಿಕಿತ್ಸೆಗಾಗಿ ಬೆಂಗಳೂರು ಕಡೆಗೆ ಹೋಗುತ್ತಿದ್ದಂತಹ ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡುವ ಸಲುವಾಗಿ ಈ ಸೆಂಟರ್ ಅನ್ನು ತೆರೆಯಲಾಗಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಅಡಿ ಈ ಟ್ರಾಮಾ ಕೇರ್ ಸೆಂಟರ್ ಅನ್ನು ತೆರೆಯಲಾಗಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಉನ್ನತ ಮಟ್ಟದ ಆರೋಗ್ಯ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಇದನ್ನು ತೆರೆಯಲಾಗಿದೆ.ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಲ್ಲಾ ಎಸ್ ಪಿ ಅಶೋಕ್ ಹಾಜರಿದ್ದರು.

Read More

ಬೆಂಗಳೂರು: ಕಾವೇರಿ ನೀರು ಸಂಕಷ್ಟ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಬುಧವಾರ ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಡಿ ವಿ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ಶ್ರೀ ವೀರೇಂದ್ರ ಹೆಗ್ಗಡೆ, ಡಿ ಕೆ ಸುರೇಶ್, ಪ್ರತಾಪ್ ಸಿಂಹ, ಪ್ರಜ್ವಲ್ ರೇವಣ್ಣ, ಸುಮಲತಾ ಅಂಬರೀಶ್, ತೇಜಸ್ವಿ ಸೂರ್ಯ, ಜಿ ಸಿ ಚಂದ್ರಶೇಖರ್, ರಾಜ್ಯದ ಸಚಿವರಾದ ಚಲುವರಾಯಸ್ವಾಮಿ, ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ದೆಹಲಿಯಲ್ಲಿ ಕರ್ನಾಟಕ ಸರಕಾರದ ಪ್ರತಿನಿಧಿ ಟಿ ಬಿ ಜಯಚಂದ್ರ ಸೇರಿದಂತೆ ಬಹುತೇಕ ಸಂಸದರು, ರಾಜ್ಯಸಭೆ ಸದಸ್ಯರು…

Read More

ನಟ ಪ್ರಕಾಶ್ ರಾಜ್(58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವೀಡಿಯೊಗಳನ್ನು ಹರಿಬಿಟ್ಟಿರುವ ಯೂಟ್ಯೂಬ್‌ ನ ‘ವಿಕ್ರಮ್ ಟಿ. ವಿ’ ಚಾನೆಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ. ನಟ ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ವಿಕ್ರಮ್ ಟಿ. ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ನವದೆಹಲಿ: ಸುಂದರ ನೆನಪುಗಳೊಂದಿಗೆ ಹಳೆ ಸಂಸತ್‌ ಭವನಕ್ಕೆ ಸಂಸದರು ಇಂದು (ಮಂಗಳವಾರ) ವಿದಾಯ ಹೇಳಿದರು. ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಒಟ್ಟಾಗಿ ಸೇರಿ ಮೆಗಾ ಫೋಟೋಶೂಟ್‌ ಮಾಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್‌, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಇತರ ಸಂಸದರು ಇಂದಿನ ಸಂಸತ್ತಿನ ಅಧಿವೇಶನದ ಮೊದಲು ಜಂಟಿ ಫೋಟೋ ಸೆಷನ್‌ಗಾಗಿ ಪಾಲ್ಗೊಂಡಿದ್ದರು. ಬಿಜೆಪಿ ಸಂಸದ ನರಹರಿ ಅಮೀನ್ ಅವರು ಸಂಸದರ ಗ್ರೂಪ್ ಫೋಟೋಶೂಟ್‌ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಸ್ವಲ್ಪ ಹೊತ್ತು ಸುಧಾರಿಸಿಕೊಂಡು ನಂತರ ಮತ್ತೆ ಫೋಟೋಶೂಟ್‌ ನಲ್ಲಿ ಸೇರಿದರು. ಕಾಂಗ್ರೆಸ್‌ ನ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಸಂಸತ್‌ ಸದಸ್ಯರೂ ಆಗಿರುವ ವಿಪಕ್ಷಗಳ ನಾಯಕರು ಸಹ ಫೋಟೋಶೂಟ್‌ ನಲ್ಲಿ ಪಾಲ್ಗೊಂಡರು. ಇಂದಿನಿಂದ ನೂತನ ಸಂಸತ್ ಭವನದಲ್ಲಿ ಸದನದ ಕಲಾಪ ನಡೆಯಲಿದೆ.

Read More

ದೆಹಲಿ: 2010ರಲ್ಲಿಯೇ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು, ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಖರ್ಗೆ ಹೇಳಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರ ಜೊತೆಗೆ ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಒಳ ಮೀಸಲಾತಿಗೆ ಮನವಿ ನೀಡುವಂತೆ ಖರ್ಗೆ ಆಗ್ರಹಿಸಿದರು.

Read More